Homeಕರ್ನಾಟಕಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

- Advertisement -
- Advertisement -

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ಮತ್ತು ಅವರ ರಕ್ಷಕರು ಧರ್ಮಸ್ಥಳದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಆಗ್ರಹಿಸಿದರು.

ಸೌಜನ್ಯ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ದಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ ಶಾಪ ತಟ್ಟುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿಯೆಂದು ಬಂಧಿಸಿದ್ದ ಅಮಾಯಕನನ್ನು ನಿರಪರಾಧಿಯೆಂದು ಘೋಷಿಸಿ, ಖುಲಾಸೆಗೊಳಿಸಿದೆ. ಅಲ್ಲದೆ, ‘ಪ್ರಕರಣದ ತನಿಖೆಯು ಲೋಪಗಳಿಂದ ಕೂಡಿದ್ದು, ಮರು ತನಿಖೆಗೆ ಅರ್ಹವಾಗಿದೆ’ ಎಂದೂ ಹೇಳಿದೆ. ನ್ಯಾಯಾಲಯವೇ ಹೇಳುವಂತೆ ಪ್ರಕರಣವನ್ನು ಸಿಬಿಐ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿಲ್ಲ. ಹೀಗಾಗಿ, ಪ್ರಕರಣವನ್ನು ನ್ಯಾಯಾಂಗದ ನೇರ ತಪಾಸಣೆಯ ಅಡಿಯಲ್ಲಿ ಎಸ್‌ಐಟಿ ಮೂಲಕ ಮರುತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಎಂತಹ ಸಮಾಜವನ್ನು ಬಿಟ್ಟು ಹೋಗುತ್ತಿದ್ದೇವೆ ಎಂದು ಯೋಚಿಸದರೆ ದುಗುಡವಾಗುತ್ತದೆ. ಜನತೆ ಈ ರಾಜ್ಯ ಸರ್ಕಾರದ ಬಗ್ಗೆ ಅಪಾರವಾದ ಭರವಸೆ ಇಟ್ಟುಕೊಂಡಿದ್ದಾರೆ. ಅದನ್ನು ಉಳಿಸಿಕೊಳ್ಳುವಂತೆ ಸೌಜನ್ಯ ಪ್ರಕರಣದ ಅಪರಾಧಿಗಳನ್ನು ಹಿಡಿದು ಶಿಕ್ಷಿಸಬೇಕು. ಮನುಷ್ಯತ್ವದ ನೆಲೆಯಲ್ಲಿ ಸರ್ಕಾರ ಆಲೋಚಿಸಬೇಕು ಎಂದು ಹಿರಿಯ ಚಿಂತಕರಾದ ಎಸ್.ಜಿ ಸಿದ್ಧರಾಮಯ್ಯ ಒತ್ತಾಯಿಸಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರವಾದ, ಅಮಾನುಷವಾದ ಹಿಂಸೆ, ದೌರ್ಜನ್ಯ ಗಳ ಈ ಕಾಲದಲ್ಲಿ ಸರ್ಕಾರಗಳು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುವ ಮೂಲಕ ಮಹಿಳೆಯರಲ್ಲಿ ಬದುಕಿನ ಬಗ್ಗೆ, ಈ ರಾಜ್ಯದ ಸರ್ಕಾರದ ಬಗ್ಗೆ ಭರವಸೆ ಮೂಡಿಸಬೇಕು. ಇಲ್ಲವಾದರೆ ಇಡೀ ಮಹಿಳಾ ಸಮೂಹ ಭರವಸೆಯೇ ಇಲ್ಲದೆ ತತ್ತರಿಸಿಹೋಗುತ್ತದೆ ಎಂದು ಎನ್.ಎಫ್.ಐ.ಡಬ್ಲ್ಯು ಸಂಘಟನೆಯ ಎ. ಜ್ಯೋತಿ ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಐಟಿಯು ಮುಖಂಡ ಪ್ರಕಾಶ್, “ನಮ್ಮ ಅಳತೆಗೂ ಮೀರಿದ ಸಮಸ್ಯೆಗಳು ಸೌಜನ್ಯ ಪ್ರಕರಣವನ್ನು ಸುತ್ತುವರಿದಿವೆ. ಸರ್ಕಾರದ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಿಂದ ಧರ್ಮಸ್ಥಳದ ಆದಾಯ ಹೆಚ್ಚಿದೆ. ಅದನ್ನು ಸಂಭ್ರಮಿಸಿ ಧರ್ಮಸ್ಥಳದ ಹೆಗ್ಗಡೆ ಮುಖ್ಯ ಮಂತ್ರಿಗಳಿಗೆ ದೀರ್ಘ ಪತ್ರ ಬರೆದಿದ್ದಾರೆ. ಬಿಜೆಪಿಯು ಅವರನ್ನು ರಾಜ್ಯ ಸಭೆ ಸದಸ್ಯ ಮಾಡಿದೆ.  ಇದರ ಜೊತೆಗೆ ಧರ್ಮಸ್ಥಳದ ಮೈಕ್ರೊ ಫೈನಾನ್ಸ್ ಯೋಜನೆ ರಾಜ್ಯಾದ್ಯಂತ ಮಹಿಳೆಯರನ್ನು ಸಾಲದ ಬಲೆಯೊಳಗೆ ಸಿಲುಕಿಸಿದೆ. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ನಾವು ಸೌಜನ್ಯಳ ದಾರುಣ ಸಾವಿಗೆ ಹೊಣೆಗಾರರನ್ನು ಹುಡುಕುತ್ತಿದ್ದೇವೆ” ಎಂದರು.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  • ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು. ಎಸ್‌ಐಟಿ ರಚಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು.
  • ಶಂಕಿತ ಆರೋಪಿಗಳಾದ ಉದಯ್ ಜೈನ್, ಮಲಿಕ್ ಜೈನ್ ಹಾಗೂ ಧೀರಜ್‌ ಜೈನ್‌ನನ್ನು ಬಂಧಿಸಿ, ವಿಚಾರಣೆ ನಡೆಸಬೇಕು.
  • ಸೌಜನ್ಯಳ ಮೃತದೇಹವನ್ನು ಪರೀಕ್ಷಿಸಿ, ಸರಿಯಾದ ಮರಣೋತ್ತರ ಪರೀಕ್ಷಾ ವರದಿ ನೀಡದ ಬೆಳ್ತಂಗಡಿ ವೈದ್ಯಕೀಯ ಆಸ್ಪತ್ರೆಯ ಸ್ತ್ರೀರೋಗತಜ್ಞ ಡಾ ರಶ್ಮಿ ಎನ್, ಡಾ. ಆಡಂ ವಿರುದ್ಧ ಕ್ರಮ ಕೈಗೊಳ್ಳಬೇಕು.
    ಮೊದಲಿಗೆ ಪ್ರಕರಣದ ತನಿಖೆ ನಡೆಸಿದ್ದ ತನಿಖಾಧಿಕಾರಿ ಯೋಗೀಶ್ ಕುಮಾರ್, ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.
  • ಸಂತೋಷ್ ರಾವ್ ಅವರನ್ನು ಪರೀಕ್ಷಿಸಿದ ಫೋರೆನ್ಸಿಕ್ ಮೆಡಿಸಿನ್ ಪ್ರಾಧ್ಯಾಪಕ ಡಾ. ಮಹಾಬಲ ಶೆಟ್ಟಿ ಅವರನ್ನೂ ತನಿಖೆಗೆ ಒಳಪಡಿಸಿ, ಕ್ರಮ ಕೈಗೊಳ್ಳಬೇಕು.
  • ನಿರಪರಾಧಿಯಾಗಿದ್ದರೂ ಪೊಲೀಸ್ ದೌರ್ಜನ್ಯಕ್ಕೆ ತುತ್ತಾದ ಸಂತೋಷ್ ರಾವ್‌ ಮತ್ತು ಕುಟುಂಬಕ್ಕೆ ಪರಿಹಾರ ನೀಡಬೇಕು.
  • ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಕಾಮುಕರನ್ನು ಬಂಧಿಸಿಬೇಕು.
  • ರಾಜಸ್ಥಾನದಲ್ಲಿ ಹೆಣ್ಣು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...