Homeಎಕಾನಮಿನಿಜವಾದ ಜಿಡಿಪಿ 1.5% ಮಾತ್ರವೇ ಇದೆ: ಪಿ ಚಿದಂಬರಂ

ನಿಜವಾದ ಜಿಡಿಪಿ 1.5% ಮಾತ್ರವೇ ಇದೆ: ಪಿ ಚಿದಂಬರಂ

- Advertisement -
- Advertisement -

ದೇಶದ ಆರ್ಥಿಕತೆಗೆ ನಡೆಸಿರುವ ಶಸ್ತ್ರಚಿಕಿತ್ಸೆ ಸರಿಯಾಗಿ ನಡೆಸಿಲ್ಲ. ಶಸ್ತ್ರಚಿಕಿತ್ಸೆ ತಪ್ಪಾಗಿದ್ದರೆ ಅದಕ್ಕೆ ಪ್ರಿಸ್ಕ್ರಿಪ್ಷನ್ ಬರೆದುಕೊಟ್ಟರೆ ಉಪಯೋಗಕ್ಕೆ ಬರುವುದಿಲ್ಲ ಎಂದು ಮಾಜಿ ಹಣಕಾಸುವ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರ್ ತಿಳಿಸಿದ್ದಾರೆ.

ತಿಹಾರ್ ಜೈಲಿನಲ್ಲಿ 106 ದಿನಗಳು ಕಳೆದು ನಿನ್ನೆ ಬಿಡುಗಡೆಯಾದ ಮರುದಿನವೇ ಪತ್ರಿಕಾಗೋಷ್ಟಿ ನಡೆಸಿದ ಚಿದಂಬರಂ ಸರ್ಕಾರದ ಆರ್ಥಿಕ ಸ್ಥಿತಿಯ ಬಗ್ಗೆ ಕುಟುಕಿದ್ದಾರೆ. ಬಿಜೆಪಿ ಆರ್ಥಿಕತೆಯ ವಿಷಯವಾಗಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರೂ ಅದು ಭಂಡತನದ ಸಮರ್ಥನೆಗೆ ಇಳಿದಿದೆ ಎಂದಿದ್ದಾರೆ.

ಜಿಎಸ್‌ಟಿ ಅವೈಜ್ಞಾನಿಕ ಜಾರಿ ಮತ್ತು ನೋಟು ರದ್ದು ಕ್ರಮಗಳು ತೆರಿಗೆ ಭಯೋತ್ಪಾದನೆಯಾಗಿದ್ದು ಇದೆಲ್ಲವನ್ನೂ ಪ್ರಧಾನಮಂತ್ರಿ ಕಚೇರಿ ಏಕಮುಖವಾಗಿ ತೆಗೆದುಕೊಂಡ ನಿರ್ಧಾರಗಳನ್ನು ಭಂಡತನದಿಂದ ಸಮರ್ಥಿಸುವ ಕೆಲಸ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.

2019-20ರ ಮೂರನೇ ಮತ್ತು ನಾಲ್ಕನೇ  ತ್ರೈಮಾಸಿಕದಲ್ಲಿ ಜಿಡಿಪಿ ಉತ್ತಮ ಸ್ಥಿತಿಗೆ ಬರುವ ಸಾಧ್ಯತೆ ಇಲ್ಲ. ಈ ವರ್ಷಾಂತ್ಯದಲ್ಲಿ ಜಿಡಿಪಿ ದರ ಶೇಕಡ 5ಕ್ಕೆ ಏರಿದರೆ ನಾವು ಪುಣ್ಯವಂತರು. ಇದರ ನಡುವೆ ಅರ್ಥಶಾಸ್ತ್ರಜ್ಞ ಡಾ. ಅರವಿಂದ ಸುಬ್ರಮಣ್ಯನ್ ನೀಡಿರುವ ಎಚ್ಚರಿಕೆಯನ್ನು ಸರ್ಕಾರ ಪರಿಗಣಿಸಬೇಕು. ಈ ಸರ್ಕಾರದಡಿ ಜಿಡಿಪಿ ಶೇಕಡ 5ಕ್ಕೆ ತಲುಪುದು ಸಂಶಯವಾಗಿದೆ. ಈಗ ಶೇಕಡ 1.5 ಮೇಲಿದೆ ಎಂದು ಹೇಳಬಹುದು ಎಂದಿದ್ದಾರೆ.

ದೇಶದ ಆರ್ಥಿಕ ಸ್ಥಿತಿಗತಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಇದುವರೆಗೂ ಚಕಾರ ಎತ್ತಿಲ್ಲ. ಈ ಬಗ್ಗೆ ಮೌನ ವಹಿಸಿದ್ದಾರೆ. ಸಚಿವರನ್ನು ಗದರುವ ಕೆಲಸ ಬಿಡಬೇಕು ಎಂದು ಚಿದಂಬರಂ ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಕುರಿತು ಪ್ರತಿಕ್ರಿಯಿಸಿರುವ ಚಿದಂಬರಂ, ಕಣಿವೆ ರಾಜ್ಯದ 75 ಲಕ್ಷ ಜನರಿಗೆ ಮೂಲ ಸ್ವಾತಂತ್ರ್ಯವನ್ನು ನಿರಾಕರಿಸಲಾಗಿದೆ. 106 ದಿನಗಳ ಕಾಲ ಜೈಲಿನಲ್ಲಿದ್ದ ಕಾರಣ ನಾನು ಕಣಿವೆ ರಾಜ್ಯದ ಜನರ ಕುರಿತು ಮಾತನಾಡಿಲ್ಲ. ಅಲ್ಲಿನ ರಾಜಕೀಯ ನಾಯಕರೊಂದಿಗೆ ಚರ್ಚಿಸಲೂ ಆಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಯಾವುದೇ ದೋಷಾರೋಪ ಇಲ್ಲದೆಯೂ ಅಲ್ಲಿನ ನಾಯಕರನ್ನು ಬಂಧನ ಮಾಡಲಾಗಿದೆ. ಅವರ ವೈಯಕ್ತಿಕ ಸ್ವಾತಂತ್ರ್ಯವನ್ನು ಹರಣ ಮಾಡಲಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿದೆ. ಅವರ ಪರವಾಗಿ ನ್ಯಾಯಯುತ ಹೋರಾಟ ಮಾಡುತ್ತೇನೆ ಎಂದು ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...