Homeಮುಖಪುಟಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು.

- Advertisement -
- Advertisement -

ಮೂಲ: ದಿ ವಲ್ಡ್ ಸಿಖ್ ನ್ಯೂಸ್ 

ಕನ್ನಡಕ್ಕೆ: ಸೋಮಶೇಖರ್ ಚಲ್ಯ

ತಮ್ಮ ಜೀವ ಮತ್ತು ತಮ್ಮ ಕುಟುಂಬಗಳಿಗೆ ಬೆದರಿಕೆಗಳಿದ್ದರೂ ಎನ್‍ಡಿಟಿವಿಯ ರವೀಶ್ ಕುಮಾರ್, ಎಬಿಪಿಯ ಪುಣ್ಯ ಪ್ರಸುನ್ ಬಾಜ್ಪೈ ಮತ್ತು ಅಭಿಶಾರ್ ಶರ್ಮಾರವರು ದೇಶದ ಚುನಾವಣೆಯ ಸಂದರ್ಭದಲ್ಲಿ ದೇಶದ ಆತ್ಮಸಾಕ್ಷಿಯ ಕೀಪರ್‍ಗಳಾಗಿ ನಿಂತಿದ್ದರು. ಭಾರತದ ಪ್ರಧಾನಿ ಮೋದಿರವರ ಅಭಿಪ್ರಾಯ ಉತ್ಪಾದನಾ ಯಂತ್ರದ ಮುಖವಾಡ ಕಳಚುವ ಅವರ ಪ್ರಾಮಾಣಿಕ ಮತ್ತು ನಿರ್ಣಾಯಕ ಕೆಲಸಕ್ಕಾಗಿ ದಿ ವಲ್ಡ್ ಸಿಖ್ ನ್ಯೂಸ್ (ಡಬ್ಲ್ಯೂಎಸ್‍ಎನ್) ಅವರನ್ನು ಗೌರವಿಸಿದೆ.

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಅವರ ಪ್ರಕಾರ ನೈಜ ಪತ್ರಿಕೋದ್ಯಮವನ್ನು ಅನುಸರಿಸಲು ಪ್ರಯತ್ನಸುವ ಕೆಲವು ಯೂಟ್ಯೂಬ್ ಚಾನಲ್‍ಗಳು, ಹವ್ಯಾಸಿ ಮತ್ತು ವೃತ್ತಿಪರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಪೂರ್ತಿಗೊಳಿಸುವುದರಿಂದ ಅವರನ್ನು ಪತ್ರಿಕೋದ್ಯಮದ ಭಾಗವಾಗಿಸಬಹುದು.

ಪ್ರಧಾನಿ ಮತ್ತು ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು. ಇತ್ತೀಚೆಗೆ ಈ ಚಾನೆಲ್ ಒಂದು ಪಕ್ಷದ ಪರವಾಗಿ ಕೆಲಸ ಮಾಡಿದ ಕಾರಣ ಎಬಿಪಿ ನ್ಯೂಸ್ ಪ್ರಾಮಾಣೀಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಪುಣ್ಯ ಪ್ರಸಾನ್ ಎಬಿಪಿಗೆ ರಾಜಿನಾಮೆ ನೀಡಿದರು. ಸುದ್ದಿವಾಹಿನಿಗಳು ಮತ್ತು ಪತ್ರಿಕೆಗಳ ಮೇಲ್ವಿಚಾರಣೆ ಮಾಡಿರುವ ಅವರು ಮೋದಿ ಸರ್ಕಾರ ಸಂಪೂರ್ಣ ಗೊಬೆಲಿಯನ್ ತಂತ್ರಗಳ ಸುತ್ತ ಕೆಲಸ ಮಾಡುತ್ತಿದೆ ಎಂದು ಅವರು ನಿರೂಪಿಸಿದ್ದರು. ಅವರ ಯೂಟ್ಯೂಬ್ ನ್ಯೂಸ್ ಚಾನೆಲ್ ಪ್ರಖ್ಯಾತವಾಗಿದ್ದು ಪರ್ಯಾಯ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ.

ಎಬಿಪಿಗೆ ರಾಜಿನಾಮೆ ನೀಡಿ ಹೊರಬಂದ ಇನ್ನೊರ್ವ ಪತ್ರಕರ್ತ ಅಭಿಶಾರ್ ಶರ್ಮಾ ಸಹ ಯೂಟ್ಯೂಬ್ ಚಾಲನ್‍ ಶುರುಮಾಡಿದ್ದಾರೆ. ಚುನಾವಣಾ ಆಯೋಗದ ಎಲ್ಲಾ ರೀತಿಯ ಗಿಮಿಕ್ ಮತ್ತು ಲೋಪಗಳನ್ನು ಪದೇ ಪದೇ ಪಟ್ಟು ಬಿಡದೆ ಎತ್ತಿಹಿಡಿದ ಕಾರ್ಯವೈಖರಿ ಅವರ ಪತ್ರಿಕೊದ್ಯಮದ ಬದ್ದತೆಯನ್ನು ತೋರಿಸಿದೆ. ಅವರ ಹಸನ್ಮುಖ ಮಾತುಗಳು ಮತ್ತು ಕಟು ಸತ್ಯಗಳು ವೀಕ್ಷಕರಿಗೆ ಸುಲಭ ರೀತಿಯಲ್ಲಿ ತಲುಪುತ್ತಿವೆ.

ಈ ಮೂವರು ಆತ್ಮಸಾಕ್ಷಿಯುಳ ಪತ್ರಕರ್ತರು ಚುನಾವಣೆಯ ಮುಂಚೆ ಮತ್ತು ನಂತರದಲ್ಲಿ ನಿಸಂದೇಹವಾಗಿ ಹೀರೋಗಳಾಗಿದ್ದಾರೆ. ಆದರೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಮಾಧ್ಯಮ ಸಂಸ್ಥೆಗಳ ಕಪಟ ಮೌನದಿಂದ ಹಲವು ಸಂಸ್ಥೆಗಳಿಗೆ ಇವರು ಖಳನಾಯಕರಾಗಿ ಕಾಣಿಸುತ್ತಾರೆ.

ಚುನಾವಣೆಯ ನಂತರ ಭಾರತ ಯಾವ ಹಾದಿಯಲ್ಲಿ ಹೋಗುತ್ತದೆಯೋ ತಿಳಿದಿಲ್ಲ. ಆದರೆ ದಿ ವಲ್ಡ್ ಸಿಖ್ ನ್ಯೂಸ್ ಫ್ಯಾಸಿಸಂ ವಿರುದ್ದದ ಹೋರಾಟದಲ್ಲಿ ಮತ್ತು ಪತ್ರಿಕೋದ್ಯಮದ ನೈತಿಕತೆಯನ್ನು ಉಳಿಸಲು ಬದ್ದವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಡಬ್ಲ್ಯೂಎಸ್‍ಎನ್ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...