Homeಮುಖಪುಟಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು.

- Advertisement -
- Advertisement -

ಮೂಲ: ದಿ ವಲ್ಡ್ ಸಿಖ್ ನ್ಯೂಸ್ 

ಕನ್ನಡಕ್ಕೆ: ಸೋಮಶೇಖರ್ ಚಲ್ಯ

ತಮ್ಮ ಜೀವ ಮತ್ತು ತಮ್ಮ ಕುಟುಂಬಗಳಿಗೆ ಬೆದರಿಕೆಗಳಿದ್ದರೂ ಎನ್‍ಡಿಟಿವಿಯ ರವೀಶ್ ಕುಮಾರ್, ಎಬಿಪಿಯ ಪುಣ್ಯ ಪ್ರಸುನ್ ಬಾಜ್ಪೈ ಮತ್ತು ಅಭಿಶಾರ್ ಶರ್ಮಾರವರು ದೇಶದ ಚುನಾವಣೆಯ ಸಂದರ್ಭದಲ್ಲಿ ದೇಶದ ಆತ್ಮಸಾಕ್ಷಿಯ ಕೀಪರ್‍ಗಳಾಗಿ ನಿಂತಿದ್ದರು. ಭಾರತದ ಪ್ರಧಾನಿ ಮೋದಿರವರ ಅಭಿಪ್ರಾಯ ಉತ್ಪಾದನಾ ಯಂತ್ರದ ಮುಖವಾಡ ಕಳಚುವ ಅವರ ಪ್ರಾಮಾಣಿಕ ಮತ್ತು ನಿರ್ಣಾಯಕ ಕೆಲಸಕ್ಕಾಗಿ ದಿ ವಲ್ಡ್ ಸಿಖ್ ನ್ಯೂಸ್ (ಡಬ್ಲ್ಯೂಎಸ್‍ಎನ್) ಅವರನ್ನು ಗೌರವಿಸಿದೆ.

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಅವರ ಪ್ರಕಾರ ನೈಜ ಪತ್ರಿಕೋದ್ಯಮವನ್ನು ಅನುಸರಿಸಲು ಪ್ರಯತ್ನಸುವ ಕೆಲವು ಯೂಟ್ಯೂಬ್ ಚಾನಲ್‍ಗಳು, ಹವ್ಯಾಸಿ ಮತ್ತು ವೃತ್ತಿಪರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಪೂರ್ತಿಗೊಳಿಸುವುದರಿಂದ ಅವರನ್ನು ಪತ್ರಿಕೋದ್ಯಮದ ಭಾಗವಾಗಿಸಬಹುದು.

ಪ್ರಧಾನಿ ಮತ್ತು ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು. ಇತ್ತೀಚೆಗೆ ಈ ಚಾನೆಲ್ ಒಂದು ಪಕ್ಷದ ಪರವಾಗಿ ಕೆಲಸ ಮಾಡಿದ ಕಾರಣ ಎಬಿಪಿ ನ್ಯೂಸ್ ಪ್ರಾಮಾಣೀಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಪುಣ್ಯ ಪ್ರಸಾನ್ ಎಬಿಪಿಗೆ ರಾಜಿನಾಮೆ ನೀಡಿದರು. ಸುದ್ದಿವಾಹಿನಿಗಳು ಮತ್ತು ಪತ್ರಿಕೆಗಳ ಮೇಲ್ವಿಚಾರಣೆ ಮಾಡಿರುವ ಅವರು ಮೋದಿ ಸರ್ಕಾರ ಸಂಪೂರ್ಣ ಗೊಬೆಲಿಯನ್ ತಂತ್ರಗಳ ಸುತ್ತ ಕೆಲಸ ಮಾಡುತ್ತಿದೆ ಎಂದು ಅವರು ನಿರೂಪಿಸಿದ್ದರು. ಅವರ ಯೂಟ್ಯೂಬ್ ನ್ಯೂಸ್ ಚಾನೆಲ್ ಪ್ರಖ್ಯಾತವಾಗಿದ್ದು ಪರ್ಯಾಯ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ.

ಎಬಿಪಿಗೆ ರಾಜಿನಾಮೆ ನೀಡಿ ಹೊರಬಂದ ಇನ್ನೊರ್ವ ಪತ್ರಕರ್ತ ಅಭಿಶಾರ್ ಶರ್ಮಾ ಸಹ ಯೂಟ್ಯೂಬ್ ಚಾಲನ್‍ ಶುರುಮಾಡಿದ್ದಾರೆ. ಚುನಾವಣಾ ಆಯೋಗದ ಎಲ್ಲಾ ರೀತಿಯ ಗಿಮಿಕ್ ಮತ್ತು ಲೋಪಗಳನ್ನು ಪದೇ ಪದೇ ಪಟ್ಟು ಬಿಡದೆ ಎತ್ತಿಹಿಡಿದ ಕಾರ್ಯವೈಖರಿ ಅವರ ಪತ್ರಿಕೊದ್ಯಮದ ಬದ್ದತೆಯನ್ನು ತೋರಿಸಿದೆ. ಅವರ ಹಸನ್ಮುಖ ಮಾತುಗಳು ಮತ್ತು ಕಟು ಸತ್ಯಗಳು ವೀಕ್ಷಕರಿಗೆ ಸುಲಭ ರೀತಿಯಲ್ಲಿ ತಲುಪುತ್ತಿವೆ.

ಈ ಮೂವರು ಆತ್ಮಸಾಕ್ಷಿಯುಳ ಪತ್ರಕರ್ತರು ಚುನಾವಣೆಯ ಮುಂಚೆ ಮತ್ತು ನಂತರದಲ್ಲಿ ನಿಸಂದೇಹವಾಗಿ ಹೀರೋಗಳಾಗಿದ್ದಾರೆ. ಆದರೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಮಾಧ್ಯಮ ಸಂಸ್ಥೆಗಳ ಕಪಟ ಮೌನದಿಂದ ಹಲವು ಸಂಸ್ಥೆಗಳಿಗೆ ಇವರು ಖಳನಾಯಕರಾಗಿ ಕಾಣಿಸುತ್ತಾರೆ.

ಚುನಾವಣೆಯ ನಂತರ ಭಾರತ ಯಾವ ಹಾದಿಯಲ್ಲಿ ಹೋಗುತ್ತದೆಯೋ ತಿಳಿದಿಲ್ಲ. ಆದರೆ ದಿ ವಲ್ಡ್ ಸಿಖ್ ನ್ಯೂಸ್ ಫ್ಯಾಸಿಸಂ ವಿರುದ್ದದ ಹೋರಾಟದಲ್ಲಿ ಮತ್ತು ಪತ್ರಿಕೋದ್ಯಮದ ನೈತಿಕತೆಯನ್ನು ಉಳಿಸಲು ಬದ್ದವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಡಬ್ಲ್ಯೂಎಸ್‍ಎನ್ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...