Homeಮುಖಪುಟಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು.

- Advertisement -
- Advertisement -

ಮೂಲ: ದಿ ವಲ್ಡ್ ಸಿಖ್ ನ್ಯೂಸ್ 

ಕನ್ನಡಕ್ಕೆ: ಸೋಮಶೇಖರ್ ಚಲ್ಯ

ತಮ್ಮ ಜೀವ ಮತ್ತು ತಮ್ಮ ಕುಟುಂಬಗಳಿಗೆ ಬೆದರಿಕೆಗಳಿದ್ದರೂ ಎನ್‍ಡಿಟಿವಿಯ ರವೀಶ್ ಕುಮಾರ್, ಎಬಿಪಿಯ ಪುಣ್ಯ ಪ್ರಸುನ್ ಬಾಜ್ಪೈ ಮತ್ತು ಅಭಿಶಾರ್ ಶರ್ಮಾರವರು ದೇಶದ ಚುನಾವಣೆಯ ಸಂದರ್ಭದಲ್ಲಿ ದೇಶದ ಆತ್ಮಸಾಕ್ಷಿಯ ಕೀಪರ್‍ಗಳಾಗಿ ನಿಂತಿದ್ದರು. ಭಾರತದ ಪ್ರಧಾನಿ ಮೋದಿರವರ ಅಭಿಪ್ರಾಯ ಉತ್ಪಾದನಾ ಯಂತ್ರದ ಮುಖವಾಡ ಕಳಚುವ ಅವರ ಪ್ರಾಮಾಣಿಕ ಮತ್ತು ನಿರ್ಣಾಯಕ ಕೆಲಸಕ್ಕಾಗಿ ದಿ ವಲ್ಡ್ ಸಿಖ್ ನ್ಯೂಸ್ (ಡಬ್ಲ್ಯೂಎಸ್‍ಎನ್) ಅವರನ್ನು ಗೌರವಿಸಿದೆ.

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಅವರ ಪ್ರಕಾರ ನೈಜ ಪತ್ರಿಕೋದ್ಯಮವನ್ನು ಅನುಸರಿಸಲು ಪ್ರಯತ್ನಸುವ ಕೆಲವು ಯೂಟ್ಯೂಬ್ ಚಾನಲ್‍ಗಳು, ಹವ್ಯಾಸಿ ಮತ್ತು ವೃತ್ತಿಪರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಪೂರ್ತಿಗೊಳಿಸುವುದರಿಂದ ಅವರನ್ನು ಪತ್ರಿಕೋದ್ಯಮದ ಭಾಗವಾಗಿಸಬಹುದು.

ಪ್ರಧಾನಿ ಮತ್ತು ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು. ಇತ್ತೀಚೆಗೆ ಈ ಚಾನೆಲ್ ಒಂದು ಪಕ್ಷದ ಪರವಾಗಿ ಕೆಲಸ ಮಾಡಿದ ಕಾರಣ ಎಬಿಪಿ ನ್ಯೂಸ್ ಪ್ರಾಮಾಣೀಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಪುಣ್ಯ ಪ್ರಸಾನ್ ಎಬಿಪಿಗೆ ರಾಜಿನಾಮೆ ನೀಡಿದರು. ಸುದ್ದಿವಾಹಿನಿಗಳು ಮತ್ತು ಪತ್ರಿಕೆಗಳ ಮೇಲ್ವಿಚಾರಣೆ ಮಾಡಿರುವ ಅವರು ಮೋದಿ ಸರ್ಕಾರ ಸಂಪೂರ್ಣ ಗೊಬೆಲಿಯನ್ ತಂತ್ರಗಳ ಸುತ್ತ ಕೆಲಸ ಮಾಡುತ್ತಿದೆ ಎಂದು ಅವರು ನಿರೂಪಿಸಿದ್ದರು. ಅವರ ಯೂಟ್ಯೂಬ್ ನ್ಯೂಸ್ ಚಾನೆಲ್ ಪ್ರಖ್ಯಾತವಾಗಿದ್ದು ಪರ್ಯಾಯ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ.

ಎಬಿಪಿಗೆ ರಾಜಿನಾಮೆ ನೀಡಿ ಹೊರಬಂದ ಇನ್ನೊರ್ವ ಪತ್ರಕರ್ತ ಅಭಿಶಾರ್ ಶರ್ಮಾ ಸಹ ಯೂಟ್ಯೂಬ್ ಚಾಲನ್‍ ಶುರುಮಾಡಿದ್ದಾರೆ. ಚುನಾವಣಾ ಆಯೋಗದ ಎಲ್ಲಾ ರೀತಿಯ ಗಿಮಿಕ್ ಮತ್ತು ಲೋಪಗಳನ್ನು ಪದೇ ಪದೇ ಪಟ್ಟು ಬಿಡದೆ ಎತ್ತಿಹಿಡಿದ ಕಾರ್ಯವೈಖರಿ ಅವರ ಪತ್ರಿಕೊದ್ಯಮದ ಬದ್ದತೆಯನ್ನು ತೋರಿಸಿದೆ. ಅವರ ಹಸನ್ಮುಖ ಮಾತುಗಳು ಮತ್ತು ಕಟು ಸತ್ಯಗಳು ವೀಕ್ಷಕರಿಗೆ ಸುಲಭ ರೀತಿಯಲ್ಲಿ ತಲುಪುತ್ತಿವೆ.

ಈ ಮೂವರು ಆತ್ಮಸಾಕ್ಷಿಯುಳ ಪತ್ರಕರ್ತರು ಚುನಾವಣೆಯ ಮುಂಚೆ ಮತ್ತು ನಂತರದಲ್ಲಿ ನಿಸಂದೇಹವಾಗಿ ಹೀರೋಗಳಾಗಿದ್ದಾರೆ. ಆದರೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಮಾಧ್ಯಮ ಸಂಸ್ಥೆಗಳ ಕಪಟ ಮೌನದಿಂದ ಹಲವು ಸಂಸ್ಥೆಗಳಿಗೆ ಇವರು ಖಳನಾಯಕರಾಗಿ ಕಾಣಿಸುತ್ತಾರೆ.

ಚುನಾವಣೆಯ ನಂತರ ಭಾರತ ಯಾವ ಹಾದಿಯಲ್ಲಿ ಹೋಗುತ್ತದೆಯೋ ತಿಳಿದಿಲ್ಲ. ಆದರೆ ದಿ ವಲ್ಡ್ ಸಿಖ್ ನ್ಯೂಸ್ ಫ್ಯಾಸಿಸಂ ವಿರುದ್ದದ ಹೋರಾಟದಲ್ಲಿ ಮತ್ತು ಪತ್ರಿಕೋದ್ಯಮದ ನೈತಿಕತೆಯನ್ನು ಉಳಿಸಲು ಬದ್ದವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಡಬ್ಲ್ಯೂಎಸ್‍ಎನ್ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....