Homeಮುಖಪುಟಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು.

- Advertisement -
- Advertisement -

ಮೂಲ: ದಿ ವಲ್ಡ್ ಸಿಖ್ ನ್ಯೂಸ್ 

ಕನ್ನಡಕ್ಕೆ: ಸೋಮಶೇಖರ್ ಚಲ್ಯ

ತಮ್ಮ ಜೀವ ಮತ್ತು ತಮ್ಮ ಕುಟುಂಬಗಳಿಗೆ ಬೆದರಿಕೆಗಳಿದ್ದರೂ ಎನ್‍ಡಿಟಿವಿಯ ರವೀಶ್ ಕುಮಾರ್, ಎಬಿಪಿಯ ಪುಣ್ಯ ಪ್ರಸುನ್ ಬಾಜ್ಪೈ ಮತ್ತು ಅಭಿಶಾರ್ ಶರ್ಮಾರವರು ದೇಶದ ಚುನಾವಣೆಯ ಸಂದರ್ಭದಲ್ಲಿ ದೇಶದ ಆತ್ಮಸಾಕ್ಷಿಯ ಕೀಪರ್‍ಗಳಾಗಿ ನಿಂತಿದ್ದರು. ಭಾರತದ ಪ್ರಧಾನಿ ಮೋದಿರವರ ಅಭಿಪ್ರಾಯ ಉತ್ಪಾದನಾ ಯಂತ್ರದ ಮುಖವಾಡ ಕಳಚುವ ಅವರ ಪ್ರಾಮಾಣಿಕ ಮತ್ತು ನಿರ್ಣಾಯಕ ಕೆಲಸಕ್ಕಾಗಿ ದಿ ವಲ್ಡ್ ಸಿಖ್ ನ್ಯೂಸ್ (ಡಬ್ಲ್ಯೂಎಸ್‍ಎನ್) ಅವರನ್ನು ಗೌರವಿಸಿದೆ.

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಅವರ ಪ್ರಕಾರ ನೈಜ ಪತ್ರಿಕೋದ್ಯಮವನ್ನು ಅನುಸರಿಸಲು ಪ್ರಯತ್ನಸುವ ಕೆಲವು ಯೂಟ್ಯೂಬ್ ಚಾನಲ್‍ಗಳು, ಹವ್ಯಾಸಿ ಮತ್ತು ವೃತ್ತಿಪರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಪೂರ್ತಿಗೊಳಿಸುವುದರಿಂದ ಅವರನ್ನು ಪತ್ರಿಕೋದ್ಯಮದ ಭಾಗವಾಗಿಸಬಹುದು.

ಪ್ರಧಾನಿ ಮತ್ತು ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು. ಇತ್ತೀಚೆಗೆ ಈ ಚಾನೆಲ್ ಒಂದು ಪಕ್ಷದ ಪರವಾಗಿ ಕೆಲಸ ಮಾಡಿದ ಕಾರಣ ಎಬಿಪಿ ನ್ಯೂಸ್ ಪ್ರಾಮಾಣೀಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಪುಣ್ಯ ಪ್ರಸಾನ್ ಎಬಿಪಿಗೆ ರಾಜಿನಾಮೆ ನೀಡಿದರು. ಸುದ್ದಿವಾಹಿನಿಗಳು ಮತ್ತು ಪತ್ರಿಕೆಗಳ ಮೇಲ್ವಿಚಾರಣೆ ಮಾಡಿರುವ ಅವರು ಮೋದಿ ಸರ್ಕಾರ ಸಂಪೂರ್ಣ ಗೊಬೆಲಿಯನ್ ತಂತ್ರಗಳ ಸುತ್ತ ಕೆಲಸ ಮಾಡುತ್ತಿದೆ ಎಂದು ಅವರು ನಿರೂಪಿಸಿದ್ದರು. ಅವರ ಯೂಟ್ಯೂಬ್ ನ್ಯೂಸ್ ಚಾನೆಲ್ ಪ್ರಖ್ಯಾತವಾಗಿದ್ದು ಪರ್ಯಾಯ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ.

ಎಬಿಪಿಗೆ ರಾಜಿನಾಮೆ ನೀಡಿ ಹೊರಬಂದ ಇನ್ನೊರ್ವ ಪತ್ರಕರ್ತ ಅಭಿಶಾರ್ ಶರ್ಮಾ ಸಹ ಯೂಟ್ಯೂಬ್ ಚಾಲನ್‍ ಶುರುಮಾಡಿದ್ದಾರೆ. ಚುನಾವಣಾ ಆಯೋಗದ ಎಲ್ಲಾ ರೀತಿಯ ಗಿಮಿಕ್ ಮತ್ತು ಲೋಪಗಳನ್ನು ಪದೇ ಪದೇ ಪಟ್ಟು ಬಿಡದೆ ಎತ್ತಿಹಿಡಿದ ಕಾರ್ಯವೈಖರಿ ಅವರ ಪತ್ರಿಕೊದ್ಯಮದ ಬದ್ದತೆಯನ್ನು ತೋರಿಸಿದೆ. ಅವರ ಹಸನ್ಮುಖ ಮಾತುಗಳು ಮತ್ತು ಕಟು ಸತ್ಯಗಳು ವೀಕ್ಷಕರಿಗೆ ಸುಲಭ ರೀತಿಯಲ್ಲಿ ತಲುಪುತ್ತಿವೆ.

ಈ ಮೂವರು ಆತ್ಮಸಾಕ್ಷಿಯುಳ ಪತ್ರಕರ್ತರು ಚುನಾವಣೆಯ ಮುಂಚೆ ಮತ್ತು ನಂತರದಲ್ಲಿ ನಿಸಂದೇಹವಾಗಿ ಹೀರೋಗಳಾಗಿದ್ದಾರೆ. ಆದರೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಮಾಧ್ಯಮ ಸಂಸ್ಥೆಗಳ ಕಪಟ ಮೌನದಿಂದ ಹಲವು ಸಂಸ್ಥೆಗಳಿಗೆ ಇವರು ಖಳನಾಯಕರಾಗಿ ಕಾಣಿಸುತ್ತಾರೆ.

ಚುನಾವಣೆಯ ನಂತರ ಭಾರತ ಯಾವ ಹಾದಿಯಲ್ಲಿ ಹೋಗುತ್ತದೆಯೋ ತಿಳಿದಿಲ್ಲ. ಆದರೆ ದಿ ವಲ್ಡ್ ಸಿಖ್ ನ್ಯೂಸ್ ಫ್ಯಾಸಿಸಂ ವಿರುದ್ದದ ಹೋರಾಟದಲ್ಲಿ ಮತ್ತು ಪತ್ರಿಕೋದ್ಯಮದ ನೈತಿಕತೆಯನ್ನು ಉಳಿಸಲು ಬದ್ದವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಡಬ್ಲ್ಯೂಎಸ್‍ಎನ್ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...