Homeಮುಖಪುಟಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು.

- Advertisement -
- Advertisement -

ಮೂಲ: ದಿ ವಲ್ಡ್ ಸಿಖ್ ನ್ಯೂಸ್ 

ಕನ್ನಡಕ್ಕೆ: ಸೋಮಶೇಖರ್ ಚಲ್ಯ

ತಮ್ಮ ಜೀವ ಮತ್ತು ತಮ್ಮ ಕುಟುಂಬಗಳಿಗೆ ಬೆದರಿಕೆಗಳಿದ್ದರೂ ಎನ್‍ಡಿಟಿವಿಯ ರವೀಶ್ ಕುಮಾರ್, ಎಬಿಪಿಯ ಪುಣ್ಯ ಪ್ರಸುನ್ ಬಾಜ್ಪೈ ಮತ್ತು ಅಭಿಶಾರ್ ಶರ್ಮಾರವರು ದೇಶದ ಚುನಾವಣೆಯ ಸಂದರ್ಭದಲ್ಲಿ ದೇಶದ ಆತ್ಮಸಾಕ್ಷಿಯ ಕೀಪರ್‍ಗಳಾಗಿ ನಿಂತಿದ್ದರು. ಭಾರತದ ಪ್ರಧಾನಿ ಮೋದಿರವರ ಅಭಿಪ್ರಾಯ ಉತ್ಪಾದನಾ ಯಂತ್ರದ ಮುಖವಾಡ ಕಳಚುವ ಅವರ ಪ್ರಾಮಾಣಿಕ ಮತ್ತು ನಿರ್ಣಾಯಕ ಕೆಲಸಕ್ಕಾಗಿ ದಿ ವಲ್ಡ್ ಸಿಖ್ ನ್ಯೂಸ್ (ಡಬ್ಲ್ಯೂಎಸ್‍ಎನ್) ಅವರನ್ನು ಗೌರವಿಸಿದೆ.

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಅವರ ಪ್ರಕಾರ ನೈಜ ಪತ್ರಿಕೋದ್ಯಮವನ್ನು ಅನುಸರಿಸಲು ಪ್ರಯತ್ನಸುವ ಕೆಲವು ಯೂಟ್ಯೂಬ್ ಚಾನಲ್‍ಗಳು, ಹವ್ಯಾಸಿ ಮತ್ತು ವೃತ್ತಿಪರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಪೂರ್ತಿಗೊಳಿಸುವುದರಿಂದ ಅವರನ್ನು ಪತ್ರಿಕೋದ್ಯಮದ ಭಾಗವಾಗಿಸಬಹುದು.

ಪ್ರಧಾನಿ ಮತ್ತು ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು. ಇತ್ತೀಚೆಗೆ ಈ ಚಾನೆಲ್ ಒಂದು ಪಕ್ಷದ ಪರವಾಗಿ ಕೆಲಸ ಮಾಡಿದ ಕಾರಣ ಎಬಿಪಿ ನ್ಯೂಸ್ ಪ್ರಾಮಾಣೀಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಪುಣ್ಯ ಪ್ರಸಾನ್ ಎಬಿಪಿಗೆ ರಾಜಿನಾಮೆ ನೀಡಿದರು. ಸುದ್ದಿವಾಹಿನಿಗಳು ಮತ್ತು ಪತ್ರಿಕೆಗಳ ಮೇಲ್ವಿಚಾರಣೆ ಮಾಡಿರುವ ಅವರು ಮೋದಿ ಸರ್ಕಾರ ಸಂಪೂರ್ಣ ಗೊಬೆಲಿಯನ್ ತಂತ್ರಗಳ ಸುತ್ತ ಕೆಲಸ ಮಾಡುತ್ತಿದೆ ಎಂದು ಅವರು ನಿರೂಪಿಸಿದ್ದರು. ಅವರ ಯೂಟ್ಯೂಬ್ ನ್ಯೂಸ್ ಚಾನೆಲ್ ಪ್ರಖ್ಯಾತವಾಗಿದ್ದು ಪರ್ಯಾಯ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ.

ಎಬಿಪಿಗೆ ರಾಜಿನಾಮೆ ನೀಡಿ ಹೊರಬಂದ ಇನ್ನೊರ್ವ ಪತ್ರಕರ್ತ ಅಭಿಶಾರ್ ಶರ್ಮಾ ಸಹ ಯೂಟ್ಯೂಬ್ ಚಾಲನ್‍ ಶುರುಮಾಡಿದ್ದಾರೆ. ಚುನಾವಣಾ ಆಯೋಗದ ಎಲ್ಲಾ ರೀತಿಯ ಗಿಮಿಕ್ ಮತ್ತು ಲೋಪಗಳನ್ನು ಪದೇ ಪದೇ ಪಟ್ಟು ಬಿಡದೆ ಎತ್ತಿಹಿಡಿದ ಕಾರ್ಯವೈಖರಿ ಅವರ ಪತ್ರಿಕೊದ್ಯಮದ ಬದ್ದತೆಯನ್ನು ತೋರಿಸಿದೆ. ಅವರ ಹಸನ್ಮುಖ ಮಾತುಗಳು ಮತ್ತು ಕಟು ಸತ್ಯಗಳು ವೀಕ್ಷಕರಿಗೆ ಸುಲಭ ರೀತಿಯಲ್ಲಿ ತಲುಪುತ್ತಿವೆ.

ಈ ಮೂವರು ಆತ್ಮಸಾಕ್ಷಿಯುಳ ಪತ್ರಕರ್ತರು ಚುನಾವಣೆಯ ಮುಂಚೆ ಮತ್ತು ನಂತರದಲ್ಲಿ ನಿಸಂದೇಹವಾಗಿ ಹೀರೋಗಳಾಗಿದ್ದಾರೆ. ಆದರೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಮಾಧ್ಯಮ ಸಂಸ್ಥೆಗಳ ಕಪಟ ಮೌನದಿಂದ ಹಲವು ಸಂಸ್ಥೆಗಳಿಗೆ ಇವರು ಖಳನಾಯಕರಾಗಿ ಕಾಣಿಸುತ್ತಾರೆ.

ಚುನಾವಣೆಯ ನಂತರ ಭಾರತ ಯಾವ ಹಾದಿಯಲ್ಲಿ ಹೋಗುತ್ತದೆಯೋ ತಿಳಿದಿಲ್ಲ. ಆದರೆ ದಿ ವಲ್ಡ್ ಸಿಖ್ ನ್ಯೂಸ್ ಫ್ಯಾಸಿಸಂ ವಿರುದ್ದದ ಹೋರಾಟದಲ್ಲಿ ಮತ್ತು ಪತ್ರಿಕೋದ್ಯಮದ ನೈತಿಕತೆಯನ್ನು ಉಳಿಸಲು ಬದ್ದವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಡಬ್ಲ್ಯೂಎಸ್‍ಎನ್ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...