Homeಮುಖಪುಟಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು.

- Advertisement -
- Advertisement -

ಮೂಲ: ದಿ ವಲ್ಡ್ ಸಿಖ್ ನ್ಯೂಸ್ 

ಕನ್ನಡಕ್ಕೆ: ಸೋಮಶೇಖರ್ ಚಲ್ಯ

ತಮ್ಮ ಜೀವ ಮತ್ತು ತಮ್ಮ ಕುಟುಂಬಗಳಿಗೆ ಬೆದರಿಕೆಗಳಿದ್ದರೂ ಎನ್‍ಡಿಟಿವಿಯ ರವೀಶ್ ಕುಮಾರ್, ಎಬಿಪಿಯ ಪುಣ್ಯ ಪ್ರಸುನ್ ಬಾಜ್ಪೈ ಮತ್ತು ಅಭಿಶಾರ್ ಶರ್ಮಾರವರು ದೇಶದ ಚುನಾವಣೆಯ ಸಂದರ್ಭದಲ್ಲಿ ದೇಶದ ಆತ್ಮಸಾಕ್ಷಿಯ ಕೀಪರ್‍ಗಳಾಗಿ ನಿಂತಿದ್ದರು. ಭಾರತದ ಪ್ರಧಾನಿ ಮೋದಿರವರ ಅಭಿಪ್ರಾಯ ಉತ್ಪಾದನಾ ಯಂತ್ರದ ಮುಖವಾಡ ಕಳಚುವ ಅವರ ಪ್ರಾಮಾಣಿಕ ಮತ್ತು ನಿರ್ಣಾಯಕ ಕೆಲಸಕ್ಕಾಗಿ ದಿ ವಲ್ಡ್ ಸಿಖ್ ನ್ಯೂಸ್ (ಡಬ್ಲ್ಯೂಎಸ್‍ಎನ್) ಅವರನ್ನು ಗೌರವಿಸಿದೆ.

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಅವರ ಪ್ರಕಾರ ನೈಜ ಪತ್ರಿಕೋದ್ಯಮವನ್ನು ಅನುಸರಿಸಲು ಪ್ರಯತ್ನಸುವ ಕೆಲವು ಯೂಟ್ಯೂಬ್ ಚಾನಲ್‍ಗಳು, ಹವ್ಯಾಸಿ ಮತ್ತು ವೃತ್ತಿಪರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಪೂರ್ತಿಗೊಳಿಸುವುದರಿಂದ ಅವರನ್ನು ಪತ್ರಿಕೋದ್ಯಮದ ಭಾಗವಾಗಿಸಬಹುದು.

ಪ್ರಧಾನಿ ಮತ್ತು ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು. ಇತ್ತೀಚೆಗೆ ಈ ಚಾನೆಲ್ ಒಂದು ಪಕ್ಷದ ಪರವಾಗಿ ಕೆಲಸ ಮಾಡಿದ ಕಾರಣ ಎಬಿಪಿ ನ್ಯೂಸ್ ಪ್ರಾಮಾಣೀಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಪುಣ್ಯ ಪ್ರಸಾನ್ ಎಬಿಪಿಗೆ ರಾಜಿನಾಮೆ ನೀಡಿದರು. ಸುದ್ದಿವಾಹಿನಿಗಳು ಮತ್ತು ಪತ್ರಿಕೆಗಳ ಮೇಲ್ವಿಚಾರಣೆ ಮಾಡಿರುವ ಅವರು ಮೋದಿ ಸರ್ಕಾರ ಸಂಪೂರ್ಣ ಗೊಬೆಲಿಯನ್ ತಂತ್ರಗಳ ಸುತ್ತ ಕೆಲಸ ಮಾಡುತ್ತಿದೆ ಎಂದು ಅವರು ನಿರೂಪಿಸಿದ್ದರು. ಅವರ ಯೂಟ್ಯೂಬ್ ನ್ಯೂಸ್ ಚಾನೆಲ್ ಪ್ರಖ್ಯಾತವಾಗಿದ್ದು ಪರ್ಯಾಯ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ.

ಎಬಿಪಿಗೆ ರಾಜಿನಾಮೆ ನೀಡಿ ಹೊರಬಂದ ಇನ್ನೊರ್ವ ಪತ್ರಕರ್ತ ಅಭಿಶಾರ್ ಶರ್ಮಾ ಸಹ ಯೂಟ್ಯೂಬ್ ಚಾಲನ್‍ ಶುರುಮಾಡಿದ್ದಾರೆ. ಚುನಾವಣಾ ಆಯೋಗದ ಎಲ್ಲಾ ರೀತಿಯ ಗಿಮಿಕ್ ಮತ್ತು ಲೋಪಗಳನ್ನು ಪದೇ ಪದೇ ಪಟ್ಟು ಬಿಡದೆ ಎತ್ತಿಹಿಡಿದ ಕಾರ್ಯವೈಖರಿ ಅವರ ಪತ್ರಿಕೊದ್ಯಮದ ಬದ್ದತೆಯನ್ನು ತೋರಿಸಿದೆ. ಅವರ ಹಸನ್ಮುಖ ಮಾತುಗಳು ಮತ್ತು ಕಟು ಸತ್ಯಗಳು ವೀಕ್ಷಕರಿಗೆ ಸುಲಭ ರೀತಿಯಲ್ಲಿ ತಲುಪುತ್ತಿವೆ.

ಈ ಮೂವರು ಆತ್ಮಸಾಕ್ಷಿಯುಳ ಪತ್ರಕರ್ತರು ಚುನಾವಣೆಯ ಮುಂಚೆ ಮತ್ತು ನಂತರದಲ್ಲಿ ನಿಸಂದೇಹವಾಗಿ ಹೀರೋಗಳಾಗಿದ್ದಾರೆ. ಆದರೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಮಾಧ್ಯಮ ಸಂಸ್ಥೆಗಳ ಕಪಟ ಮೌನದಿಂದ ಹಲವು ಸಂಸ್ಥೆಗಳಿಗೆ ಇವರು ಖಳನಾಯಕರಾಗಿ ಕಾಣಿಸುತ್ತಾರೆ.

ಚುನಾವಣೆಯ ನಂತರ ಭಾರತ ಯಾವ ಹಾದಿಯಲ್ಲಿ ಹೋಗುತ್ತದೆಯೋ ತಿಳಿದಿಲ್ಲ. ಆದರೆ ದಿ ವಲ್ಡ್ ಸಿಖ್ ನ್ಯೂಸ್ ಫ್ಯಾಸಿಸಂ ವಿರುದ್ದದ ಹೋರಾಟದಲ್ಲಿ ಮತ್ತು ಪತ್ರಿಕೋದ್ಯಮದ ನೈತಿಕತೆಯನ್ನು ಉಳಿಸಲು ಬದ್ದವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಡಬ್ಲ್ಯೂಎಸ್‍ಎನ್ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...