Homeಮುಖಪುಟಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಭಾರತದ ನೈಜ ಪತ್ರಿಕೋದ್ಯಮದ ಆತ್ಮಸಾಕ್ಷಿಯ ಮೂವರು ಕೀಪರ್‍ಗಳು

ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು.

- Advertisement -
- Advertisement -

ಮೂಲ: ದಿ ವಲ್ಡ್ ಸಿಖ್ ನ್ಯೂಸ್ 

ಕನ್ನಡಕ್ಕೆ: ಸೋಮಶೇಖರ್ ಚಲ್ಯ

ತಮ್ಮ ಜೀವ ಮತ್ತು ತಮ್ಮ ಕುಟುಂಬಗಳಿಗೆ ಬೆದರಿಕೆಗಳಿದ್ದರೂ ಎನ್‍ಡಿಟಿವಿಯ ರವೀಶ್ ಕುಮಾರ್, ಎಬಿಪಿಯ ಪುಣ್ಯ ಪ್ರಸುನ್ ಬಾಜ್ಪೈ ಮತ್ತು ಅಭಿಶಾರ್ ಶರ್ಮಾರವರು ದೇಶದ ಚುನಾವಣೆಯ ಸಂದರ್ಭದಲ್ಲಿ ದೇಶದ ಆತ್ಮಸಾಕ್ಷಿಯ ಕೀಪರ್‍ಗಳಾಗಿ ನಿಂತಿದ್ದರು. ಭಾರತದ ಪ್ರಧಾನಿ ಮೋದಿರವರ ಅಭಿಪ್ರಾಯ ಉತ್ಪಾದನಾ ಯಂತ್ರದ ಮುಖವಾಡ ಕಳಚುವ ಅವರ ಪ್ರಾಮಾಣಿಕ ಮತ್ತು ನಿರ್ಣಾಯಕ ಕೆಲಸಕ್ಕಾಗಿ ದಿ ವಲ್ಡ್ ಸಿಖ್ ನ್ಯೂಸ್ (ಡಬ್ಲ್ಯೂಎಸ್‍ಎನ್) ಅವರನ್ನು ಗೌರವಿಸಿದೆ.

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಅವರ ಪ್ರಕಾರ ನೈಜ ಪತ್ರಿಕೋದ್ಯಮವನ್ನು ಅನುಸರಿಸಲು ಪ್ರಯತ್ನಸುವ ಕೆಲವು ಯೂಟ್ಯೂಬ್ ಚಾನಲ್‍ಗಳು, ಹವ್ಯಾಸಿ ಮತ್ತು ವೃತ್ತಿಪರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಪೂರ್ತಿಗೊಳಿಸುವುದರಿಂದ ಅವರನ್ನು ಪತ್ರಿಕೋದ್ಯಮದ ಭಾಗವಾಗಿಸಬಹುದು.

ಪ್ರಧಾನಿ ಮತ್ತು ಪ್ರಧಾನಿ ಕಛೇರಿಯಿಂದ ಹಬ್ಬಿಸಲಾಗುವ ಸುಳ್ಳುಗಳನ್ನು ಬಹಿರಂಗಪಡಿಸುವ ಮೂಲಕ ಪುಣ್ಯ ಪ್ರಸೂನ್ ಬಾಜ್‍ಪಾಯಿ ಎಬಿಪಿ ನ್ಯೂಸ್‍ನಲ್ಲಿ ಅವರ ಮಾಸ್ಟರ್‍ಸ್ಟ್ರೋಕ್ ಕಾರ್ಯಕ್ರಮದಲ್ಲಿ ಪ್ರಖ್ಯಾತರಾದವರು. ಇತ್ತೀಚೆಗೆ ಈ ಚಾನೆಲ್ ಒಂದು ಪಕ್ಷದ ಪರವಾಗಿ ಕೆಲಸ ಮಾಡಿದ ಕಾರಣ ಎಬಿಪಿ ನ್ಯೂಸ್ ಪ್ರಾಮಾಣೀಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಪುಣ್ಯ ಪ್ರಸಾನ್ ಎಬಿಪಿಗೆ ರಾಜಿನಾಮೆ ನೀಡಿದರು. ಸುದ್ದಿವಾಹಿನಿಗಳು ಮತ್ತು ಪತ್ರಿಕೆಗಳ ಮೇಲ್ವಿಚಾರಣೆ ಮಾಡಿರುವ ಅವರು ಮೋದಿ ಸರ್ಕಾರ ಸಂಪೂರ್ಣ ಗೊಬೆಲಿಯನ್ ತಂತ್ರಗಳ ಸುತ್ತ ಕೆಲಸ ಮಾಡುತ್ತಿದೆ ಎಂದು ಅವರು ನಿರೂಪಿಸಿದ್ದರು. ಅವರ ಯೂಟ್ಯೂಬ್ ನ್ಯೂಸ್ ಚಾನೆಲ್ ಪ್ರಖ್ಯಾತವಾಗಿದ್ದು ಪರ್ಯಾಯ ಮಾಧ್ಯಮವಾಗಿ ಕೆಲಸ ಮಾಡುತ್ತಿದೆ.

ಎಬಿಪಿಗೆ ರಾಜಿನಾಮೆ ನೀಡಿ ಹೊರಬಂದ ಇನ್ನೊರ್ವ ಪತ್ರಕರ್ತ ಅಭಿಶಾರ್ ಶರ್ಮಾ ಸಹ ಯೂಟ್ಯೂಬ್ ಚಾಲನ್‍ ಶುರುಮಾಡಿದ್ದಾರೆ. ಚುನಾವಣಾ ಆಯೋಗದ ಎಲ್ಲಾ ರೀತಿಯ ಗಿಮಿಕ್ ಮತ್ತು ಲೋಪಗಳನ್ನು ಪದೇ ಪದೇ ಪಟ್ಟು ಬಿಡದೆ ಎತ್ತಿಹಿಡಿದ ಕಾರ್ಯವೈಖರಿ ಅವರ ಪತ್ರಿಕೊದ್ಯಮದ ಬದ್ದತೆಯನ್ನು ತೋರಿಸಿದೆ. ಅವರ ಹಸನ್ಮುಖ ಮಾತುಗಳು ಮತ್ತು ಕಟು ಸತ್ಯಗಳು ವೀಕ್ಷಕರಿಗೆ ಸುಲಭ ರೀತಿಯಲ್ಲಿ ತಲುಪುತ್ತಿವೆ.

ಈ ಮೂವರು ಆತ್ಮಸಾಕ್ಷಿಯುಳ ಪತ್ರಕರ್ತರು ಚುನಾವಣೆಯ ಮುಂಚೆ ಮತ್ತು ನಂತರದಲ್ಲಿ ನಿಸಂದೇಹವಾಗಿ ಹೀರೋಗಳಾಗಿದ್ದಾರೆ. ಆದರೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಮಾಧ್ಯಮ ಸಂಸ್ಥೆಗಳ ಕಪಟ ಮೌನದಿಂದ ಹಲವು ಸಂಸ್ಥೆಗಳಿಗೆ ಇವರು ಖಳನಾಯಕರಾಗಿ ಕಾಣಿಸುತ್ತಾರೆ.

ಚುನಾವಣೆಯ ನಂತರ ಭಾರತ ಯಾವ ಹಾದಿಯಲ್ಲಿ ಹೋಗುತ್ತದೆಯೋ ತಿಳಿದಿಲ್ಲ. ಆದರೆ ದಿ ವಲ್ಡ್ ಸಿಖ್ ನ್ಯೂಸ್ ಫ್ಯಾಸಿಸಂ ವಿರುದ್ದದ ಹೋರಾಟದಲ್ಲಿ ಮತ್ತು ಪತ್ರಿಕೋದ್ಯಮದ ನೈತಿಕತೆಯನ್ನು ಉಳಿಸಲು ಬದ್ದವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಡಬ್ಲ್ಯೂಎಸ್‍ಎನ್ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...