Homeಕರ್ನಾಟಕಮೀಡಿಯಾಗಳು 'ಆಪರೇಷನ್ ಕಮಲ' ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

ಮೀಡಿಯಾಗಳು ‘ಆಪರೇಷನ್ ಕಮಲ’ ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

- Advertisement -
- Advertisement -

ಆಸೆಗೆ, ಅಹಂಗೆ ಮಾರಿಕೊಂಡವರ ನೆಪಗಳು!

ಕರ್ನಾಟಕದ ಸದ್ಯದ ಬೆಳವಣಿಗೆಗಳಿಗೆ ಯಾರು ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಶಾಸಕರು ಅಸಮಾಧಾನಗೊಂಡು ಮುಂಬೈ ತಲುಪಿದ್ದಾರೆ. ಅವರ ಕೆಲ ಮಾತುಗಳನ್ನು ಆಧಾರವಾಗಿಟ್ಟುಕೊಂಡು ರಾಜಕೀಯ ವಿಶ್ಲೇಷಕರು ಈ ಎಲ್ಲಾ ಘಟನೆಗಳ ಹಿಂದೆ ಯಾರು ಇರಬಹುದು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ.

ಘಟನೆಗಳಿಗೆ, ಟಿವಿ ಚರ್ಚೆ, ಪತ್ರಿಕಾ ವರದಿಗಳಲ್ಲಿ ಪ್ರಮುಖವಾಗಿ ಕಾಣುವವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಮನ್ವಯ ಸಮಿತಿ ಮುಖ್ಯಸ್ಥರಾಗಿ ಅವರು ವಿಫಲರಾಗಿದ್ದಾರೆ. ತಮ್ಮದೇ ಬೆಂಬಲಿಗರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಮೇಲಾಗಿ ಅವರದೇ ಬೆಂಬಲಿಗರು ಮುಂಬೈ ಹೋಗಿರುವ ಕಾರಣ ಇಡೀ ಪ್ರಕರಣ ಹಿಂದೆ ಅವರ ಪಾತ್ರವೂ ದೊಡ್ಡದಿರಬಹುದು ಎಂಬ ಮಾತುಗಳಿವೆ.
ಹಾಗೆ ಮಾತನಾಡುವಾಗ ಕೆಲ ಶಾಸಕರನ್ನು ನೇರವಾಗಿ ಸಿದ್ದು ಶಿಷ್ಯರೆಂದು, ಅವರು ಹೇಳಿದರೆ ಖಂಡಿತಾ ಹಿಂತಿರುಗುತ್ತಾರೆ. ಅವರು ಮನಸ್ಸು ಮಾಡುತ್ತಿಲ್ಲ‌. ಮೇಲಾಗಿ ಸಿದ್ದರಾಮಯ್ಯನಿಗೂ ಸರಕಾರ ಉಳಿದು ಆಗಬೇಕಾದ್ದು ಏನೂ ಇಲ್ಲ – ಎಂಬೆಲ್ಲಾ ಮಾತುಗಳಿವೆ‌.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಿಕ್ಕಟ್ಟನ್ನು ಬಿಡಿಸಲು ಎಷ್ಟೇ ಪ್ರಯತ್ನಪಟ್ಟವರಂತೆ ಕಂಡರೂ ಅವರ ಬಗ್ಗೆ ಅನುಮಾನಗಳು ಇದ್ದೇ ಇವೆ. ಜೆಡಿಎಸ್ ಪಕ್ಷದ ಬೆಂಬಲಿಗರು ಅವರನ್ನೇ ವಿಲನ್ ಎಂಬಂತೆ ನೋಡುತ್ತಿದ್ದಾರೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವ ಒಬ್ಬ ಪತ್ರಕರ್ತರಂತೂ ಇಡೀ ಸಿನಿಮಾಕ್ಕೆ ಸಿದ್ದರಾಮಯ್ಯನವರದೇ ಚಿತ್ರಕತೆ, ನಿರ್ದೇಶನ ಎಂದು ಪದೇ ಪದೇ ಹೇಳುತ್ತಿದ್ದಾರೆ.

ಅದೇ ಹೊತ್ತಲ್ಲಿ ಶಾಸಕರ ಅತೃಪ್ತಿಗೆ ಕಾರಣವಾಗಿ ಹೊಮ್ಮಿರುವ ಇನ್ನೊಬ್ಬ ಇನ್ನೊಬ್ಬರು ಲೋಕೋಪಯೋಗಿ ಸಚಿವರಾದ ಹೆಚ್. ಡಿ. ರೇವಣ್ಣ. ಬೆಂಗಳೂರಿನ ಶಾಸಕರು ಮುಂಬೈ ವಿಮಾನ ಹತ್ತುವ ಮುನ್ನ, ಎಲ್ಲಾ ಇಲಾಖೆಗಳಿಗೆ ಮೂಗು ತೂರಿಸುವ ರೇವಣ್ಣನೇ  ಅಸಮಾಧಾನಕ್ಕೆ ಕಾರಣ ಎಂದು ಆರೋಪಿಸಿ ಹೊರಟಿದ್ದಾರೆ. ಹೀಗೆ ಆರೋಪ ಮಾಡುವವರಿಗೆ ಅವರದೇ ಆದ ಕಾರಣಗಳಿರಬಹುದು.

ಆದರೆ ಈ ಎಲ್ಲಾ ಕಾರಣಗಳ ಆಚೆ ದೊಡ್ಡ ದೊಡ್ಡ ವ್ಯಕ್ತಿಗಳಿದ್ದಾರೆ, ಆಮಿಷಗಳಿವೆ, ದುರಾಸೆ ಇದೆ ಎಂಬುದನ್ನು ನಮ್ಮ ಮಾಧ್ಯಮ ವ್ಯವಸ್ಥಿತವಾಗಿ ಮರೆ ಮಾಚಿದೆ. ಆ ಕಾರಣಕ್ಕೇನೆ ಈ ಬಾರಿ ‘ಆಪರೇಷನ್ ಕಮಲ’ ಎಂಬ ಪದ ಹೆಚ್ಚಾಗಿ ಕಿವಿಗೆ ಬೀಳಲೇ ಇಲ್ಲ‌. ಬದಲಾಗಿ ಕೇಳಿಸಿದ್ದು – ದೋಸ್ತಿ ಖತಮ್.

ಒಬ್ಬ ಶಾಸಕ ರಾಜೀನಾಮೆ ಕೊಟ್ಟ ತಕ್ಷಣ ಆತನನ್ನು ಮುಂಬೈಗೆ ಕರೆದುಕೊಂಡು ಹೋಗಲು ಒಂದು ವಿಮಾನ ರೆಡಿ ಇರುತ್ತದೆ. ಮುಂಬೈಗೆ ಹೋದ ನಂತರ ಅವರ ಭದ್ರತೆಗೆ ಮುಂಬೈ ಪೊಲೀಸರು ಬಂದು ನಿಲ್ಲುತ್ತಾರೆ. ಅವರು ಸುಪ್ರೀಂ ಕೋರ್ಟಿ ಅರ್ಜಿ ಸಲ್ಲಿಸಿದರೆ ಅವರ ಪರ ವಾದ ಮಂಡಿಸಲು ಬರುವ ವಕೀಲರಾದರೂ ಯಾರು?

ಈ ಎಲ್ಲಾ ಪ್ರಶ್ನೆಗಳನ್ನು ಗಾಳಿಗೆ ತೂರಿ, ಸಿದ್ದರಾಮಯ್ಯ ಮತ್ತು ರೇವಣ್ಣ ಎಂಬ ನೆಪ‌ ಹುಡುಕುತ್ತಿದ್ದಾರೆ. ಎಲ್ಲದಕ್ಕೂ ಸಿದ್ದರಾಮಯ್ಯ, ರೇವಣ್ಣನಂತಹವರೇ ಕಾರಣ ಆಗೋದಾದ್ರೆ, ಸದ್ಯ ಬೇರೆ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವುದೇನು? ಪಕ್ಕದ ಗೋವಾ ದಂತಹ ಸಣ್ಣ ರಾಜ್ಯದಲ್ಲಿ 15 ಕಾಂಗ್ರೆಸ್ ಶಾಸಕರ ಪೈಕಿ ಹತ್ತು ಜನ ಬಿಜೆಪಿ ಸೇರಿದ್ದಾರೆ. ಅಲ್ಲಿ ಯಾವ ಸಿದ್ದರಾಮಯ್ಯ ಯಾವ ರೇವಣ್ಣ ಇದ್ರು?

ಅಷ್ಟೇ ಏಕೆ, ಈಗ ಪಶ್ಚಿಮ ಬಂಗಾಳದ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಪಾರ್ಟಿಗಳನ್ನು ತೊರೆದು ಬಿಜೆಪಿ ಸೇರಲು ಸಿದ್ಧ ಇರುವ ನೂರಕ್ಕೂ ಹೆಚ್ಚು ಶಾಸಕರ ಪಟ್ಟಿ ನನ್ನ ಜೇಬಿನಲ್ಲಿ ಇದೆ ಎಂದು ಹೇಳುತ್ತಾರಲ್ಲ ಅಲ್ಲಿ ಯಾವ ರೇವಣ್ಣ ಯಾವ ಸಿದ್ದರಾಮಯ್ಯ ಇದ್ದಾರೆ? 2014 ರ ನಂತರ ಹಲವು ರಾಜ್ಯಗಳಲ್ಲಿ ಚುನಾವಣೆಗಳು‌ ನಡೆದಿವೆ. ಅಲ್ಲೆಲ್ಲಾ ನಡೆದಿದ್ದೇನು?

ಟಿವಿ ಚರ್ಚೆಗಳಲ್ಲಿ ಕುಳಿತು ಮಾತನಾಡುವವರು ಬೇಕೆಂದೇ ತಮ್ಮ ದೃಷ್ಟಿಕೋನವನ್ನು ಕರ್ನಾಟಕಕ್ಕೆ ಸೀಮಿತಗೊಳಿಸಿ ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಿಸುತ್ತಿದ್ದಾರೆ. ಅವರಿಗೆ ಅದು ಸರಿ ಕಾಣಬಹುದು. ಅವರೆಲ್ಲಾ ಈ ಬೆಳವಣಿಗೆಗಳ ಹಿಂದೆ ಇರುವ ಅಮಿತ್ ಶಾ, ನರೇಂದ್ರ ಮೋದಿ ಕಾಣುವುದಿಲ್ಲ.

ಹೋಗಲಿ, ವಿಮಾನ ಹತ್ತಿಸುವ ಯಡಿಯೂರಪ್ಪ ಸಹಾಯಕ ಸಂತೋಷ್, ಜೊತೆಗೆ ಪ್ರಯಾಣಿಸುವ ಅಶೋಕ್ ಕೂಡಾ ಕಾಣುವುದಿಲ್ಲವೆ? ಅಷ್ಟರ ಮಟ್ಟಿಗೆ ಕಣ್ಣಿಗೆ ಪೊರೆ ಬೆಳೆಸಿಕೊಂಡರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...