Homeಕರ್ನಾಟಕಮೀಡಿಯಾಗಳು 'ಆಪರೇಷನ್ ಕಮಲ' ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

ಮೀಡಿಯಾಗಳು ‘ಆಪರೇಷನ್ ಕಮಲ’ ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

- Advertisement -
- Advertisement -

ಆಸೆಗೆ, ಅಹಂಗೆ ಮಾರಿಕೊಂಡವರ ನೆಪಗಳು!

ಕರ್ನಾಟಕದ ಸದ್ಯದ ಬೆಳವಣಿಗೆಗಳಿಗೆ ಯಾರು ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಶಾಸಕರು ಅಸಮಾಧಾನಗೊಂಡು ಮುಂಬೈ ತಲುಪಿದ್ದಾರೆ. ಅವರ ಕೆಲ ಮಾತುಗಳನ್ನು ಆಧಾರವಾಗಿಟ್ಟುಕೊಂಡು ರಾಜಕೀಯ ವಿಶ್ಲೇಷಕರು ಈ ಎಲ್ಲಾ ಘಟನೆಗಳ ಹಿಂದೆ ಯಾರು ಇರಬಹುದು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ.

ಘಟನೆಗಳಿಗೆ, ಟಿವಿ ಚರ್ಚೆ, ಪತ್ರಿಕಾ ವರದಿಗಳಲ್ಲಿ ಪ್ರಮುಖವಾಗಿ ಕಾಣುವವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಮನ್ವಯ ಸಮಿತಿ ಮುಖ್ಯಸ್ಥರಾಗಿ ಅವರು ವಿಫಲರಾಗಿದ್ದಾರೆ. ತಮ್ಮದೇ ಬೆಂಬಲಿಗರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಮೇಲಾಗಿ ಅವರದೇ ಬೆಂಬಲಿಗರು ಮುಂಬೈ ಹೋಗಿರುವ ಕಾರಣ ಇಡೀ ಪ್ರಕರಣ ಹಿಂದೆ ಅವರ ಪಾತ್ರವೂ ದೊಡ್ಡದಿರಬಹುದು ಎಂಬ ಮಾತುಗಳಿವೆ.
ಹಾಗೆ ಮಾತನಾಡುವಾಗ ಕೆಲ ಶಾಸಕರನ್ನು ನೇರವಾಗಿ ಸಿದ್ದು ಶಿಷ್ಯರೆಂದು, ಅವರು ಹೇಳಿದರೆ ಖಂಡಿತಾ ಹಿಂತಿರುಗುತ್ತಾರೆ. ಅವರು ಮನಸ್ಸು ಮಾಡುತ್ತಿಲ್ಲ‌. ಮೇಲಾಗಿ ಸಿದ್ದರಾಮಯ್ಯನಿಗೂ ಸರಕಾರ ಉಳಿದು ಆಗಬೇಕಾದ್ದು ಏನೂ ಇಲ್ಲ – ಎಂಬೆಲ್ಲಾ ಮಾತುಗಳಿವೆ‌.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಿಕ್ಕಟ್ಟನ್ನು ಬಿಡಿಸಲು ಎಷ್ಟೇ ಪ್ರಯತ್ನಪಟ್ಟವರಂತೆ ಕಂಡರೂ ಅವರ ಬಗ್ಗೆ ಅನುಮಾನಗಳು ಇದ್ದೇ ಇವೆ. ಜೆಡಿಎಸ್ ಪಕ್ಷದ ಬೆಂಬಲಿಗರು ಅವರನ್ನೇ ವಿಲನ್ ಎಂಬಂತೆ ನೋಡುತ್ತಿದ್ದಾರೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವ ಒಬ್ಬ ಪತ್ರಕರ್ತರಂತೂ ಇಡೀ ಸಿನಿಮಾಕ್ಕೆ ಸಿದ್ದರಾಮಯ್ಯನವರದೇ ಚಿತ್ರಕತೆ, ನಿರ್ದೇಶನ ಎಂದು ಪದೇ ಪದೇ ಹೇಳುತ್ತಿದ್ದಾರೆ.

ಅದೇ ಹೊತ್ತಲ್ಲಿ ಶಾಸಕರ ಅತೃಪ್ತಿಗೆ ಕಾರಣವಾಗಿ ಹೊಮ್ಮಿರುವ ಇನ್ನೊಬ್ಬ ಇನ್ನೊಬ್ಬರು ಲೋಕೋಪಯೋಗಿ ಸಚಿವರಾದ ಹೆಚ್. ಡಿ. ರೇವಣ್ಣ. ಬೆಂಗಳೂರಿನ ಶಾಸಕರು ಮುಂಬೈ ವಿಮಾನ ಹತ್ತುವ ಮುನ್ನ, ಎಲ್ಲಾ ಇಲಾಖೆಗಳಿಗೆ ಮೂಗು ತೂರಿಸುವ ರೇವಣ್ಣನೇ  ಅಸಮಾಧಾನಕ್ಕೆ ಕಾರಣ ಎಂದು ಆರೋಪಿಸಿ ಹೊರಟಿದ್ದಾರೆ. ಹೀಗೆ ಆರೋಪ ಮಾಡುವವರಿಗೆ ಅವರದೇ ಆದ ಕಾರಣಗಳಿರಬಹುದು.

ಆದರೆ ಈ ಎಲ್ಲಾ ಕಾರಣಗಳ ಆಚೆ ದೊಡ್ಡ ದೊಡ್ಡ ವ್ಯಕ್ತಿಗಳಿದ್ದಾರೆ, ಆಮಿಷಗಳಿವೆ, ದುರಾಸೆ ಇದೆ ಎಂಬುದನ್ನು ನಮ್ಮ ಮಾಧ್ಯಮ ವ್ಯವಸ್ಥಿತವಾಗಿ ಮರೆ ಮಾಚಿದೆ. ಆ ಕಾರಣಕ್ಕೇನೆ ಈ ಬಾರಿ ‘ಆಪರೇಷನ್ ಕಮಲ’ ಎಂಬ ಪದ ಹೆಚ್ಚಾಗಿ ಕಿವಿಗೆ ಬೀಳಲೇ ಇಲ್ಲ‌. ಬದಲಾಗಿ ಕೇಳಿಸಿದ್ದು – ದೋಸ್ತಿ ಖತಮ್.

ಒಬ್ಬ ಶಾಸಕ ರಾಜೀನಾಮೆ ಕೊಟ್ಟ ತಕ್ಷಣ ಆತನನ್ನು ಮುಂಬೈಗೆ ಕರೆದುಕೊಂಡು ಹೋಗಲು ಒಂದು ವಿಮಾನ ರೆಡಿ ಇರುತ್ತದೆ. ಮುಂಬೈಗೆ ಹೋದ ನಂತರ ಅವರ ಭದ್ರತೆಗೆ ಮುಂಬೈ ಪೊಲೀಸರು ಬಂದು ನಿಲ್ಲುತ್ತಾರೆ. ಅವರು ಸುಪ್ರೀಂ ಕೋರ್ಟಿ ಅರ್ಜಿ ಸಲ್ಲಿಸಿದರೆ ಅವರ ಪರ ವಾದ ಮಂಡಿಸಲು ಬರುವ ವಕೀಲರಾದರೂ ಯಾರು?

ಈ ಎಲ್ಲಾ ಪ್ರಶ್ನೆಗಳನ್ನು ಗಾಳಿಗೆ ತೂರಿ, ಸಿದ್ದರಾಮಯ್ಯ ಮತ್ತು ರೇವಣ್ಣ ಎಂಬ ನೆಪ‌ ಹುಡುಕುತ್ತಿದ್ದಾರೆ. ಎಲ್ಲದಕ್ಕೂ ಸಿದ್ದರಾಮಯ್ಯ, ರೇವಣ್ಣನಂತಹವರೇ ಕಾರಣ ಆಗೋದಾದ್ರೆ, ಸದ್ಯ ಬೇರೆ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವುದೇನು? ಪಕ್ಕದ ಗೋವಾ ದಂತಹ ಸಣ್ಣ ರಾಜ್ಯದಲ್ಲಿ 15 ಕಾಂಗ್ರೆಸ್ ಶಾಸಕರ ಪೈಕಿ ಹತ್ತು ಜನ ಬಿಜೆಪಿ ಸೇರಿದ್ದಾರೆ. ಅಲ್ಲಿ ಯಾವ ಸಿದ್ದರಾಮಯ್ಯ ಯಾವ ರೇವಣ್ಣ ಇದ್ರು?

ಅಷ್ಟೇ ಏಕೆ, ಈಗ ಪಶ್ಚಿಮ ಬಂಗಾಳದ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಪಾರ್ಟಿಗಳನ್ನು ತೊರೆದು ಬಿಜೆಪಿ ಸೇರಲು ಸಿದ್ಧ ಇರುವ ನೂರಕ್ಕೂ ಹೆಚ್ಚು ಶಾಸಕರ ಪಟ್ಟಿ ನನ್ನ ಜೇಬಿನಲ್ಲಿ ಇದೆ ಎಂದು ಹೇಳುತ್ತಾರಲ್ಲ ಅಲ್ಲಿ ಯಾವ ರೇವಣ್ಣ ಯಾವ ಸಿದ್ದರಾಮಯ್ಯ ಇದ್ದಾರೆ? 2014 ರ ನಂತರ ಹಲವು ರಾಜ್ಯಗಳಲ್ಲಿ ಚುನಾವಣೆಗಳು‌ ನಡೆದಿವೆ. ಅಲ್ಲೆಲ್ಲಾ ನಡೆದಿದ್ದೇನು?

ಟಿವಿ ಚರ್ಚೆಗಳಲ್ಲಿ ಕುಳಿತು ಮಾತನಾಡುವವರು ಬೇಕೆಂದೇ ತಮ್ಮ ದೃಷ್ಟಿಕೋನವನ್ನು ಕರ್ನಾಟಕಕ್ಕೆ ಸೀಮಿತಗೊಳಿಸಿ ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಿಸುತ್ತಿದ್ದಾರೆ. ಅವರಿಗೆ ಅದು ಸರಿ ಕಾಣಬಹುದು. ಅವರೆಲ್ಲಾ ಈ ಬೆಳವಣಿಗೆಗಳ ಹಿಂದೆ ಇರುವ ಅಮಿತ್ ಶಾ, ನರೇಂದ್ರ ಮೋದಿ ಕಾಣುವುದಿಲ್ಲ.

ಹೋಗಲಿ, ವಿಮಾನ ಹತ್ತಿಸುವ ಯಡಿಯೂರಪ್ಪ ಸಹಾಯಕ ಸಂತೋಷ್, ಜೊತೆಗೆ ಪ್ರಯಾಣಿಸುವ ಅಶೋಕ್ ಕೂಡಾ ಕಾಣುವುದಿಲ್ಲವೆ? ಅಷ್ಟರ ಮಟ್ಟಿಗೆ ಕಣ್ಣಿಗೆ ಪೊರೆ ಬೆಳೆಸಿಕೊಂಡರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...