Homeಕರ್ನಾಟಕಮೀಡಿಯಾಗಳು 'ಆಪರೇಷನ್ ಕಮಲ' ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

ಮೀಡಿಯಾಗಳು ‘ಆಪರೇಷನ್ ಕಮಲ’ ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

- Advertisement -
- Advertisement -

ಆಸೆಗೆ, ಅಹಂಗೆ ಮಾರಿಕೊಂಡವರ ನೆಪಗಳು!

ಕರ್ನಾಟಕದ ಸದ್ಯದ ಬೆಳವಣಿಗೆಗಳಿಗೆ ಯಾರು ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಶಾಸಕರು ಅಸಮಾಧಾನಗೊಂಡು ಮುಂಬೈ ತಲುಪಿದ್ದಾರೆ. ಅವರ ಕೆಲ ಮಾತುಗಳನ್ನು ಆಧಾರವಾಗಿಟ್ಟುಕೊಂಡು ರಾಜಕೀಯ ವಿಶ್ಲೇಷಕರು ಈ ಎಲ್ಲಾ ಘಟನೆಗಳ ಹಿಂದೆ ಯಾರು ಇರಬಹುದು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ.

ಘಟನೆಗಳಿಗೆ, ಟಿವಿ ಚರ್ಚೆ, ಪತ್ರಿಕಾ ವರದಿಗಳಲ್ಲಿ ಪ್ರಮುಖವಾಗಿ ಕಾಣುವವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಮನ್ವಯ ಸಮಿತಿ ಮುಖ್ಯಸ್ಥರಾಗಿ ಅವರು ವಿಫಲರಾಗಿದ್ದಾರೆ. ತಮ್ಮದೇ ಬೆಂಬಲಿಗರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಮೇಲಾಗಿ ಅವರದೇ ಬೆಂಬಲಿಗರು ಮುಂಬೈ ಹೋಗಿರುವ ಕಾರಣ ಇಡೀ ಪ್ರಕರಣ ಹಿಂದೆ ಅವರ ಪಾತ್ರವೂ ದೊಡ್ಡದಿರಬಹುದು ಎಂಬ ಮಾತುಗಳಿವೆ.
ಹಾಗೆ ಮಾತನಾಡುವಾಗ ಕೆಲ ಶಾಸಕರನ್ನು ನೇರವಾಗಿ ಸಿದ್ದು ಶಿಷ್ಯರೆಂದು, ಅವರು ಹೇಳಿದರೆ ಖಂಡಿತಾ ಹಿಂತಿರುಗುತ್ತಾರೆ. ಅವರು ಮನಸ್ಸು ಮಾಡುತ್ತಿಲ್ಲ‌. ಮೇಲಾಗಿ ಸಿದ್ದರಾಮಯ್ಯನಿಗೂ ಸರಕಾರ ಉಳಿದು ಆಗಬೇಕಾದ್ದು ಏನೂ ಇಲ್ಲ – ಎಂಬೆಲ್ಲಾ ಮಾತುಗಳಿವೆ‌.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಿಕ್ಕಟ್ಟನ್ನು ಬಿಡಿಸಲು ಎಷ್ಟೇ ಪ್ರಯತ್ನಪಟ್ಟವರಂತೆ ಕಂಡರೂ ಅವರ ಬಗ್ಗೆ ಅನುಮಾನಗಳು ಇದ್ದೇ ಇವೆ. ಜೆಡಿಎಸ್ ಪಕ್ಷದ ಬೆಂಬಲಿಗರು ಅವರನ್ನೇ ವಿಲನ್ ಎಂಬಂತೆ ನೋಡುತ್ತಿದ್ದಾರೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವ ಒಬ್ಬ ಪತ್ರಕರ್ತರಂತೂ ಇಡೀ ಸಿನಿಮಾಕ್ಕೆ ಸಿದ್ದರಾಮಯ್ಯನವರದೇ ಚಿತ್ರಕತೆ, ನಿರ್ದೇಶನ ಎಂದು ಪದೇ ಪದೇ ಹೇಳುತ್ತಿದ್ದಾರೆ.

ಅದೇ ಹೊತ್ತಲ್ಲಿ ಶಾಸಕರ ಅತೃಪ್ತಿಗೆ ಕಾರಣವಾಗಿ ಹೊಮ್ಮಿರುವ ಇನ್ನೊಬ್ಬ ಇನ್ನೊಬ್ಬರು ಲೋಕೋಪಯೋಗಿ ಸಚಿವರಾದ ಹೆಚ್. ಡಿ. ರೇವಣ್ಣ. ಬೆಂಗಳೂರಿನ ಶಾಸಕರು ಮುಂಬೈ ವಿಮಾನ ಹತ್ತುವ ಮುನ್ನ, ಎಲ್ಲಾ ಇಲಾಖೆಗಳಿಗೆ ಮೂಗು ತೂರಿಸುವ ರೇವಣ್ಣನೇ  ಅಸಮಾಧಾನಕ್ಕೆ ಕಾರಣ ಎಂದು ಆರೋಪಿಸಿ ಹೊರಟಿದ್ದಾರೆ. ಹೀಗೆ ಆರೋಪ ಮಾಡುವವರಿಗೆ ಅವರದೇ ಆದ ಕಾರಣಗಳಿರಬಹುದು.

ಆದರೆ ಈ ಎಲ್ಲಾ ಕಾರಣಗಳ ಆಚೆ ದೊಡ್ಡ ದೊಡ್ಡ ವ್ಯಕ್ತಿಗಳಿದ್ದಾರೆ, ಆಮಿಷಗಳಿವೆ, ದುರಾಸೆ ಇದೆ ಎಂಬುದನ್ನು ನಮ್ಮ ಮಾಧ್ಯಮ ವ್ಯವಸ್ಥಿತವಾಗಿ ಮರೆ ಮಾಚಿದೆ. ಆ ಕಾರಣಕ್ಕೇನೆ ಈ ಬಾರಿ ‘ಆಪರೇಷನ್ ಕಮಲ’ ಎಂಬ ಪದ ಹೆಚ್ಚಾಗಿ ಕಿವಿಗೆ ಬೀಳಲೇ ಇಲ್ಲ‌. ಬದಲಾಗಿ ಕೇಳಿಸಿದ್ದು – ದೋಸ್ತಿ ಖತಮ್.

ಒಬ್ಬ ಶಾಸಕ ರಾಜೀನಾಮೆ ಕೊಟ್ಟ ತಕ್ಷಣ ಆತನನ್ನು ಮುಂಬೈಗೆ ಕರೆದುಕೊಂಡು ಹೋಗಲು ಒಂದು ವಿಮಾನ ರೆಡಿ ಇರುತ್ತದೆ. ಮುಂಬೈಗೆ ಹೋದ ನಂತರ ಅವರ ಭದ್ರತೆಗೆ ಮುಂಬೈ ಪೊಲೀಸರು ಬಂದು ನಿಲ್ಲುತ್ತಾರೆ. ಅವರು ಸುಪ್ರೀಂ ಕೋರ್ಟಿ ಅರ್ಜಿ ಸಲ್ಲಿಸಿದರೆ ಅವರ ಪರ ವಾದ ಮಂಡಿಸಲು ಬರುವ ವಕೀಲರಾದರೂ ಯಾರು?

ಈ ಎಲ್ಲಾ ಪ್ರಶ್ನೆಗಳನ್ನು ಗಾಳಿಗೆ ತೂರಿ, ಸಿದ್ದರಾಮಯ್ಯ ಮತ್ತು ರೇವಣ್ಣ ಎಂಬ ನೆಪ‌ ಹುಡುಕುತ್ತಿದ್ದಾರೆ. ಎಲ್ಲದಕ್ಕೂ ಸಿದ್ದರಾಮಯ್ಯ, ರೇವಣ್ಣನಂತಹವರೇ ಕಾರಣ ಆಗೋದಾದ್ರೆ, ಸದ್ಯ ಬೇರೆ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವುದೇನು? ಪಕ್ಕದ ಗೋವಾ ದಂತಹ ಸಣ್ಣ ರಾಜ್ಯದಲ್ಲಿ 15 ಕಾಂಗ್ರೆಸ್ ಶಾಸಕರ ಪೈಕಿ ಹತ್ತು ಜನ ಬಿಜೆಪಿ ಸೇರಿದ್ದಾರೆ. ಅಲ್ಲಿ ಯಾವ ಸಿದ್ದರಾಮಯ್ಯ ಯಾವ ರೇವಣ್ಣ ಇದ್ರು?

ಅಷ್ಟೇ ಏಕೆ, ಈಗ ಪಶ್ಚಿಮ ಬಂಗಾಳದ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಪಾರ್ಟಿಗಳನ್ನು ತೊರೆದು ಬಿಜೆಪಿ ಸೇರಲು ಸಿದ್ಧ ಇರುವ ನೂರಕ್ಕೂ ಹೆಚ್ಚು ಶಾಸಕರ ಪಟ್ಟಿ ನನ್ನ ಜೇಬಿನಲ್ಲಿ ಇದೆ ಎಂದು ಹೇಳುತ್ತಾರಲ್ಲ ಅಲ್ಲಿ ಯಾವ ರೇವಣ್ಣ ಯಾವ ಸಿದ್ದರಾಮಯ್ಯ ಇದ್ದಾರೆ? 2014 ರ ನಂತರ ಹಲವು ರಾಜ್ಯಗಳಲ್ಲಿ ಚುನಾವಣೆಗಳು‌ ನಡೆದಿವೆ. ಅಲ್ಲೆಲ್ಲಾ ನಡೆದಿದ್ದೇನು?

ಟಿವಿ ಚರ್ಚೆಗಳಲ್ಲಿ ಕುಳಿತು ಮಾತನಾಡುವವರು ಬೇಕೆಂದೇ ತಮ್ಮ ದೃಷ್ಟಿಕೋನವನ್ನು ಕರ್ನಾಟಕಕ್ಕೆ ಸೀಮಿತಗೊಳಿಸಿ ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಿಸುತ್ತಿದ್ದಾರೆ. ಅವರಿಗೆ ಅದು ಸರಿ ಕಾಣಬಹುದು. ಅವರೆಲ್ಲಾ ಈ ಬೆಳವಣಿಗೆಗಳ ಹಿಂದೆ ಇರುವ ಅಮಿತ್ ಶಾ, ನರೇಂದ್ರ ಮೋದಿ ಕಾಣುವುದಿಲ್ಲ.

ಹೋಗಲಿ, ವಿಮಾನ ಹತ್ತಿಸುವ ಯಡಿಯೂರಪ್ಪ ಸಹಾಯಕ ಸಂತೋಷ್, ಜೊತೆಗೆ ಪ್ರಯಾಣಿಸುವ ಅಶೋಕ್ ಕೂಡಾ ಕಾಣುವುದಿಲ್ಲವೆ? ಅಷ್ಟರ ಮಟ್ಟಿಗೆ ಕಣ್ಣಿಗೆ ಪೊರೆ ಬೆಳೆಸಿಕೊಂಡರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...