Homeಕರ್ನಾಟಕಮೀಡಿಯಾಗಳು 'ಆಪರೇಷನ್ ಕಮಲ' ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

ಮೀಡಿಯಾಗಳು ‘ಆಪರೇಷನ್ ಕಮಲ’ ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

- Advertisement -
- Advertisement -

ಆಸೆಗೆ, ಅಹಂಗೆ ಮಾರಿಕೊಂಡವರ ನೆಪಗಳು!

ಕರ್ನಾಟಕದ ಸದ್ಯದ ಬೆಳವಣಿಗೆಗಳಿಗೆ ಯಾರು ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಶಾಸಕರು ಅಸಮಾಧಾನಗೊಂಡು ಮುಂಬೈ ತಲುಪಿದ್ದಾರೆ. ಅವರ ಕೆಲ ಮಾತುಗಳನ್ನು ಆಧಾರವಾಗಿಟ್ಟುಕೊಂಡು ರಾಜಕೀಯ ವಿಶ್ಲೇಷಕರು ಈ ಎಲ್ಲಾ ಘಟನೆಗಳ ಹಿಂದೆ ಯಾರು ಇರಬಹುದು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ.

ಘಟನೆಗಳಿಗೆ, ಟಿವಿ ಚರ್ಚೆ, ಪತ್ರಿಕಾ ವರದಿಗಳಲ್ಲಿ ಪ್ರಮುಖವಾಗಿ ಕಾಣುವವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಮನ್ವಯ ಸಮಿತಿ ಮುಖ್ಯಸ್ಥರಾಗಿ ಅವರು ವಿಫಲರಾಗಿದ್ದಾರೆ. ತಮ್ಮದೇ ಬೆಂಬಲಿಗರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಮೇಲಾಗಿ ಅವರದೇ ಬೆಂಬಲಿಗರು ಮುಂಬೈ ಹೋಗಿರುವ ಕಾರಣ ಇಡೀ ಪ್ರಕರಣ ಹಿಂದೆ ಅವರ ಪಾತ್ರವೂ ದೊಡ್ಡದಿರಬಹುದು ಎಂಬ ಮಾತುಗಳಿವೆ.
ಹಾಗೆ ಮಾತನಾಡುವಾಗ ಕೆಲ ಶಾಸಕರನ್ನು ನೇರವಾಗಿ ಸಿದ್ದು ಶಿಷ್ಯರೆಂದು, ಅವರು ಹೇಳಿದರೆ ಖಂಡಿತಾ ಹಿಂತಿರುಗುತ್ತಾರೆ. ಅವರು ಮನಸ್ಸು ಮಾಡುತ್ತಿಲ್ಲ‌. ಮೇಲಾಗಿ ಸಿದ್ದರಾಮಯ್ಯನಿಗೂ ಸರಕಾರ ಉಳಿದು ಆಗಬೇಕಾದ್ದು ಏನೂ ಇಲ್ಲ – ಎಂಬೆಲ್ಲಾ ಮಾತುಗಳಿವೆ‌.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಿಕ್ಕಟ್ಟನ್ನು ಬಿಡಿಸಲು ಎಷ್ಟೇ ಪ್ರಯತ್ನಪಟ್ಟವರಂತೆ ಕಂಡರೂ ಅವರ ಬಗ್ಗೆ ಅನುಮಾನಗಳು ಇದ್ದೇ ಇವೆ. ಜೆಡಿಎಸ್ ಪಕ್ಷದ ಬೆಂಬಲಿಗರು ಅವರನ್ನೇ ವಿಲನ್ ಎಂಬಂತೆ ನೋಡುತ್ತಿದ್ದಾರೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವ ಒಬ್ಬ ಪತ್ರಕರ್ತರಂತೂ ಇಡೀ ಸಿನಿಮಾಕ್ಕೆ ಸಿದ್ದರಾಮಯ್ಯನವರದೇ ಚಿತ್ರಕತೆ, ನಿರ್ದೇಶನ ಎಂದು ಪದೇ ಪದೇ ಹೇಳುತ್ತಿದ್ದಾರೆ.

ಅದೇ ಹೊತ್ತಲ್ಲಿ ಶಾಸಕರ ಅತೃಪ್ತಿಗೆ ಕಾರಣವಾಗಿ ಹೊಮ್ಮಿರುವ ಇನ್ನೊಬ್ಬ ಇನ್ನೊಬ್ಬರು ಲೋಕೋಪಯೋಗಿ ಸಚಿವರಾದ ಹೆಚ್. ಡಿ. ರೇವಣ್ಣ. ಬೆಂಗಳೂರಿನ ಶಾಸಕರು ಮುಂಬೈ ವಿಮಾನ ಹತ್ತುವ ಮುನ್ನ, ಎಲ್ಲಾ ಇಲಾಖೆಗಳಿಗೆ ಮೂಗು ತೂರಿಸುವ ರೇವಣ್ಣನೇ  ಅಸಮಾಧಾನಕ್ಕೆ ಕಾರಣ ಎಂದು ಆರೋಪಿಸಿ ಹೊರಟಿದ್ದಾರೆ. ಹೀಗೆ ಆರೋಪ ಮಾಡುವವರಿಗೆ ಅವರದೇ ಆದ ಕಾರಣಗಳಿರಬಹುದು.

ಆದರೆ ಈ ಎಲ್ಲಾ ಕಾರಣಗಳ ಆಚೆ ದೊಡ್ಡ ದೊಡ್ಡ ವ್ಯಕ್ತಿಗಳಿದ್ದಾರೆ, ಆಮಿಷಗಳಿವೆ, ದುರಾಸೆ ಇದೆ ಎಂಬುದನ್ನು ನಮ್ಮ ಮಾಧ್ಯಮ ವ್ಯವಸ್ಥಿತವಾಗಿ ಮರೆ ಮಾಚಿದೆ. ಆ ಕಾರಣಕ್ಕೇನೆ ಈ ಬಾರಿ ‘ಆಪರೇಷನ್ ಕಮಲ’ ಎಂಬ ಪದ ಹೆಚ್ಚಾಗಿ ಕಿವಿಗೆ ಬೀಳಲೇ ಇಲ್ಲ‌. ಬದಲಾಗಿ ಕೇಳಿಸಿದ್ದು – ದೋಸ್ತಿ ಖತಮ್.

ಒಬ್ಬ ಶಾಸಕ ರಾಜೀನಾಮೆ ಕೊಟ್ಟ ತಕ್ಷಣ ಆತನನ್ನು ಮುಂಬೈಗೆ ಕರೆದುಕೊಂಡು ಹೋಗಲು ಒಂದು ವಿಮಾನ ರೆಡಿ ಇರುತ್ತದೆ. ಮುಂಬೈಗೆ ಹೋದ ನಂತರ ಅವರ ಭದ್ರತೆಗೆ ಮುಂಬೈ ಪೊಲೀಸರು ಬಂದು ನಿಲ್ಲುತ್ತಾರೆ. ಅವರು ಸುಪ್ರೀಂ ಕೋರ್ಟಿ ಅರ್ಜಿ ಸಲ್ಲಿಸಿದರೆ ಅವರ ಪರ ವಾದ ಮಂಡಿಸಲು ಬರುವ ವಕೀಲರಾದರೂ ಯಾರು?

ಈ ಎಲ್ಲಾ ಪ್ರಶ್ನೆಗಳನ್ನು ಗಾಳಿಗೆ ತೂರಿ, ಸಿದ್ದರಾಮಯ್ಯ ಮತ್ತು ರೇವಣ್ಣ ಎಂಬ ನೆಪ‌ ಹುಡುಕುತ್ತಿದ್ದಾರೆ. ಎಲ್ಲದಕ್ಕೂ ಸಿದ್ದರಾಮಯ್ಯ, ರೇವಣ್ಣನಂತಹವರೇ ಕಾರಣ ಆಗೋದಾದ್ರೆ, ಸದ್ಯ ಬೇರೆ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವುದೇನು? ಪಕ್ಕದ ಗೋವಾ ದಂತಹ ಸಣ್ಣ ರಾಜ್ಯದಲ್ಲಿ 15 ಕಾಂಗ್ರೆಸ್ ಶಾಸಕರ ಪೈಕಿ ಹತ್ತು ಜನ ಬಿಜೆಪಿ ಸೇರಿದ್ದಾರೆ. ಅಲ್ಲಿ ಯಾವ ಸಿದ್ದರಾಮಯ್ಯ ಯಾವ ರೇವಣ್ಣ ಇದ್ರು?

ಅಷ್ಟೇ ಏಕೆ, ಈಗ ಪಶ್ಚಿಮ ಬಂಗಾಳದ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಪಾರ್ಟಿಗಳನ್ನು ತೊರೆದು ಬಿಜೆಪಿ ಸೇರಲು ಸಿದ್ಧ ಇರುವ ನೂರಕ್ಕೂ ಹೆಚ್ಚು ಶಾಸಕರ ಪಟ್ಟಿ ನನ್ನ ಜೇಬಿನಲ್ಲಿ ಇದೆ ಎಂದು ಹೇಳುತ್ತಾರಲ್ಲ ಅಲ್ಲಿ ಯಾವ ರೇವಣ್ಣ ಯಾವ ಸಿದ್ದರಾಮಯ್ಯ ಇದ್ದಾರೆ? 2014 ರ ನಂತರ ಹಲವು ರಾಜ್ಯಗಳಲ್ಲಿ ಚುನಾವಣೆಗಳು‌ ನಡೆದಿವೆ. ಅಲ್ಲೆಲ್ಲಾ ನಡೆದಿದ್ದೇನು?

ಟಿವಿ ಚರ್ಚೆಗಳಲ್ಲಿ ಕುಳಿತು ಮಾತನಾಡುವವರು ಬೇಕೆಂದೇ ತಮ್ಮ ದೃಷ್ಟಿಕೋನವನ್ನು ಕರ್ನಾಟಕಕ್ಕೆ ಸೀಮಿತಗೊಳಿಸಿ ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಿಸುತ್ತಿದ್ದಾರೆ. ಅವರಿಗೆ ಅದು ಸರಿ ಕಾಣಬಹುದು. ಅವರೆಲ್ಲಾ ಈ ಬೆಳವಣಿಗೆಗಳ ಹಿಂದೆ ಇರುವ ಅಮಿತ್ ಶಾ, ನರೇಂದ್ರ ಮೋದಿ ಕಾಣುವುದಿಲ್ಲ.

ಹೋಗಲಿ, ವಿಮಾನ ಹತ್ತಿಸುವ ಯಡಿಯೂರಪ್ಪ ಸಹಾಯಕ ಸಂತೋಷ್, ಜೊತೆಗೆ ಪ್ರಯಾಣಿಸುವ ಅಶೋಕ್ ಕೂಡಾ ಕಾಣುವುದಿಲ್ಲವೆ? ಅಷ್ಟರ ಮಟ್ಟಿಗೆ ಕಣ್ಣಿಗೆ ಪೊರೆ ಬೆಳೆಸಿಕೊಂಡರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...