Homeಕರ್ನಾಟಕಮೀಡಿಯಾಗಳು 'ಆಪರೇಷನ್ ಕಮಲ' ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

ಮೀಡಿಯಾಗಳು ‘ಆಪರೇಷನ್ ಕಮಲ’ ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

- Advertisement -
- Advertisement -

ಆಸೆಗೆ, ಅಹಂಗೆ ಮಾರಿಕೊಂಡವರ ನೆಪಗಳು!

ಕರ್ನಾಟಕದ ಸದ್ಯದ ಬೆಳವಣಿಗೆಗಳಿಗೆ ಯಾರು ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಶಾಸಕರು ಅಸಮಾಧಾನಗೊಂಡು ಮುಂಬೈ ತಲುಪಿದ್ದಾರೆ. ಅವರ ಕೆಲ ಮಾತುಗಳನ್ನು ಆಧಾರವಾಗಿಟ್ಟುಕೊಂಡು ರಾಜಕೀಯ ವಿಶ್ಲೇಷಕರು ಈ ಎಲ್ಲಾ ಘಟನೆಗಳ ಹಿಂದೆ ಯಾರು ಇರಬಹುದು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ.

ಘಟನೆಗಳಿಗೆ, ಟಿವಿ ಚರ್ಚೆ, ಪತ್ರಿಕಾ ವರದಿಗಳಲ್ಲಿ ಪ್ರಮುಖವಾಗಿ ಕಾಣುವವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಮನ್ವಯ ಸಮಿತಿ ಮುಖ್ಯಸ್ಥರಾಗಿ ಅವರು ವಿಫಲರಾಗಿದ್ದಾರೆ. ತಮ್ಮದೇ ಬೆಂಬಲಿಗರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಮೇಲಾಗಿ ಅವರದೇ ಬೆಂಬಲಿಗರು ಮುಂಬೈ ಹೋಗಿರುವ ಕಾರಣ ಇಡೀ ಪ್ರಕರಣ ಹಿಂದೆ ಅವರ ಪಾತ್ರವೂ ದೊಡ್ಡದಿರಬಹುದು ಎಂಬ ಮಾತುಗಳಿವೆ.
ಹಾಗೆ ಮಾತನಾಡುವಾಗ ಕೆಲ ಶಾಸಕರನ್ನು ನೇರವಾಗಿ ಸಿದ್ದು ಶಿಷ್ಯರೆಂದು, ಅವರು ಹೇಳಿದರೆ ಖಂಡಿತಾ ಹಿಂತಿರುಗುತ್ತಾರೆ. ಅವರು ಮನಸ್ಸು ಮಾಡುತ್ತಿಲ್ಲ‌. ಮೇಲಾಗಿ ಸಿದ್ದರಾಮಯ್ಯನಿಗೂ ಸರಕಾರ ಉಳಿದು ಆಗಬೇಕಾದ್ದು ಏನೂ ಇಲ್ಲ – ಎಂಬೆಲ್ಲಾ ಮಾತುಗಳಿವೆ‌.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಿಕ್ಕಟ್ಟನ್ನು ಬಿಡಿಸಲು ಎಷ್ಟೇ ಪ್ರಯತ್ನಪಟ್ಟವರಂತೆ ಕಂಡರೂ ಅವರ ಬಗ್ಗೆ ಅನುಮಾನಗಳು ಇದ್ದೇ ಇವೆ. ಜೆಡಿಎಸ್ ಪಕ್ಷದ ಬೆಂಬಲಿಗರು ಅವರನ್ನೇ ವಿಲನ್ ಎಂಬಂತೆ ನೋಡುತ್ತಿದ್ದಾರೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವ ಒಬ್ಬ ಪತ್ರಕರ್ತರಂತೂ ಇಡೀ ಸಿನಿಮಾಕ್ಕೆ ಸಿದ್ದರಾಮಯ್ಯನವರದೇ ಚಿತ್ರಕತೆ, ನಿರ್ದೇಶನ ಎಂದು ಪದೇ ಪದೇ ಹೇಳುತ್ತಿದ್ದಾರೆ.

ಅದೇ ಹೊತ್ತಲ್ಲಿ ಶಾಸಕರ ಅತೃಪ್ತಿಗೆ ಕಾರಣವಾಗಿ ಹೊಮ್ಮಿರುವ ಇನ್ನೊಬ್ಬ ಇನ್ನೊಬ್ಬರು ಲೋಕೋಪಯೋಗಿ ಸಚಿವರಾದ ಹೆಚ್. ಡಿ. ರೇವಣ್ಣ. ಬೆಂಗಳೂರಿನ ಶಾಸಕರು ಮುಂಬೈ ವಿಮಾನ ಹತ್ತುವ ಮುನ್ನ, ಎಲ್ಲಾ ಇಲಾಖೆಗಳಿಗೆ ಮೂಗು ತೂರಿಸುವ ರೇವಣ್ಣನೇ  ಅಸಮಾಧಾನಕ್ಕೆ ಕಾರಣ ಎಂದು ಆರೋಪಿಸಿ ಹೊರಟಿದ್ದಾರೆ. ಹೀಗೆ ಆರೋಪ ಮಾಡುವವರಿಗೆ ಅವರದೇ ಆದ ಕಾರಣಗಳಿರಬಹುದು.

ಆದರೆ ಈ ಎಲ್ಲಾ ಕಾರಣಗಳ ಆಚೆ ದೊಡ್ಡ ದೊಡ್ಡ ವ್ಯಕ್ತಿಗಳಿದ್ದಾರೆ, ಆಮಿಷಗಳಿವೆ, ದುರಾಸೆ ಇದೆ ಎಂಬುದನ್ನು ನಮ್ಮ ಮಾಧ್ಯಮ ವ್ಯವಸ್ಥಿತವಾಗಿ ಮರೆ ಮಾಚಿದೆ. ಆ ಕಾರಣಕ್ಕೇನೆ ಈ ಬಾರಿ ‘ಆಪರೇಷನ್ ಕಮಲ’ ಎಂಬ ಪದ ಹೆಚ್ಚಾಗಿ ಕಿವಿಗೆ ಬೀಳಲೇ ಇಲ್ಲ‌. ಬದಲಾಗಿ ಕೇಳಿಸಿದ್ದು – ದೋಸ್ತಿ ಖತಮ್.

ಒಬ್ಬ ಶಾಸಕ ರಾಜೀನಾಮೆ ಕೊಟ್ಟ ತಕ್ಷಣ ಆತನನ್ನು ಮುಂಬೈಗೆ ಕರೆದುಕೊಂಡು ಹೋಗಲು ಒಂದು ವಿಮಾನ ರೆಡಿ ಇರುತ್ತದೆ. ಮುಂಬೈಗೆ ಹೋದ ನಂತರ ಅವರ ಭದ್ರತೆಗೆ ಮುಂಬೈ ಪೊಲೀಸರು ಬಂದು ನಿಲ್ಲುತ್ತಾರೆ. ಅವರು ಸುಪ್ರೀಂ ಕೋರ್ಟಿ ಅರ್ಜಿ ಸಲ್ಲಿಸಿದರೆ ಅವರ ಪರ ವಾದ ಮಂಡಿಸಲು ಬರುವ ವಕೀಲರಾದರೂ ಯಾರು?

ಈ ಎಲ್ಲಾ ಪ್ರಶ್ನೆಗಳನ್ನು ಗಾಳಿಗೆ ತೂರಿ, ಸಿದ್ದರಾಮಯ್ಯ ಮತ್ತು ರೇವಣ್ಣ ಎಂಬ ನೆಪ‌ ಹುಡುಕುತ್ತಿದ್ದಾರೆ. ಎಲ್ಲದಕ್ಕೂ ಸಿದ್ದರಾಮಯ್ಯ, ರೇವಣ್ಣನಂತಹವರೇ ಕಾರಣ ಆಗೋದಾದ್ರೆ, ಸದ್ಯ ಬೇರೆ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವುದೇನು? ಪಕ್ಕದ ಗೋವಾ ದಂತಹ ಸಣ್ಣ ರಾಜ್ಯದಲ್ಲಿ 15 ಕಾಂಗ್ರೆಸ್ ಶಾಸಕರ ಪೈಕಿ ಹತ್ತು ಜನ ಬಿಜೆಪಿ ಸೇರಿದ್ದಾರೆ. ಅಲ್ಲಿ ಯಾವ ಸಿದ್ದರಾಮಯ್ಯ ಯಾವ ರೇವಣ್ಣ ಇದ್ರು?

ಅಷ್ಟೇ ಏಕೆ, ಈಗ ಪಶ್ಚಿಮ ಬಂಗಾಳದ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಪಾರ್ಟಿಗಳನ್ನು ತೊರೆದು ಬಿಜೆಪಿ ಸೇರಲು ಸಿದ್ಧ ಇರುವ ನೂರಕ್ಕೂ ಹೆಚ್ಚು ಶಾಸಕರ ಪಟ್ಟಿ ನನ್ನ ಜೇಬಿನಲ್ಲಿ ಇದೆ ಎಂದು ಹೇಳುತ್ತಾರಲ್ಲ ಅಲ್ಲಿ ಯಾವ ರೇವಣ್ಣ ಯಾವ ಸಿದ್ದರಾಮಯ್ಯ ಇದ್ದಾರೆ? 2014 ರ ನಂತರ ಹಲವು ರಾಜ್ಯಗಳಲ್ಲಿ ಚುನಾವಣೆಗಳು‌ ನಡೆದಿವೆ. ಅಲ್ಲೆಲ್ಲಾ ನಡೆದಿದ್ದೇನು?

ಟಿವಿ ಚರ್ಚೆಗಳಲ್ಲಿ ಕುಳಿತು ಮಾತನಾಡುವವರು ಬೇಕೆಂದೇ ತಮ್ಮ ದೃಷ್ಟಿಕೋನವನ್ನು ಕರ್ನಾಟಕಕ್ಕೆ ಸೀಮಿತಗೊಳಿಸಿ ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಿಸುತ್ತಿದ್ದಾರೆ. ಅವರಿಗೆ ಅದು ಸರಿ ಕಾಣಬಹುದು. ಅವರೆಲ್ಲಾ ಈ ಬೆಳವಣಿಗೆಗಳ ಹಿಂದೆ ಇರುವ ಅಮಿತ್ ಶಾ, ನರೇಂದ್ರ ಮೋದಿ ಕಾಣುವುದಿಲ್ಲ.

ಹೋಗಲಿ, ವಿಮಾನ ಹತ್ತಿಸುವ ಯಡಿಯೂರಪ್ಪ ಸಹಾಯಕ ಸಂತೋಷ್, ಜೊತೆಗೆ ಪ್ರಯಾಣಿಸುವ ಅಶೋಕ್ ಕೂಡಾ ಕಾಣುವುದಿಲ್ಲವೆ? ಅಷ್ಟರ ಮಟ್ಟಿಗೆ ಕಣ್ಣಿಗೆ ಪೊರೆ ಬೆಳೆಸಿಕೊಂಡರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...