Homeಕರ್ನಾಟಕಮೀಡಿಯಾಗಳು 'ಆಪರೇಷನ್ ಕಮಲ' ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

ಮೀಡಿಯಾಗಳು ‘ಆಪರೇಷನ್ ಕಮಲ’ ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

- Advertisement -
- Advertisement -

ಆಸೆಗೆ, ಅಹಂಗೆ ಮಾರಿಕೊಂಡವರ ನೆಪಗಳು!

ಕರ್ನಾಟಕದ ಸದ್ಯದ ಬೆಳವಣಿಗೆಗಳಿಗೆ ಯಾರು ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಶಾಸಕರು ಅಸಮಾಧಾನಗೊಂಡು ಮುಂಬೈ ತಲುಪಿದ್ದಾರೆ. ಅವರ ಕೆಲ ಮಾತುಗಳನ್ನು ಆಧಾರವಾಗಿಟ್ಟುಕೊಂಡು ರಾಜಕೀಯ ವಿಶ್ಲೇಷಕರು ಈ ಎಲ್ಲಾ ಘಟನೆಗಳ ಹಿಂದೆ ಯಾರು ಇರಬಹುದು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ.

ಘಟನೆಗಳಿಗೆ, ಟಿವಿ ಚರ್ಚೆ, ಪತ್ರಿಕಾ ವರದಿಗಳಲ್ಲಿ ಪ್ರಮುಖವಾಗಿ ಕಾಣುವವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಮನ್ವಯ ಸಮಿತಿ ಮುಖ್ಯಸ್ಥರಾಗಿ ಅವರು ವಿಫಲರಾಗಿದ್ದಾರೆ. ತಮ್ಮದೇ ಬೆಂಬಲಿಗರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಮೇಲಾಗಿ ಅವರದೇ ಬೆಂಬಲಿಗರು ಮುಂಬೈ ಹೋಗಿರುವ ಕಾರಣ ಇಡೀ ಪ್ರಕರಣ ಹಿಂದೆ ಅವರ ಪಾತ್ರವೂ ದೊಡ್ಡದಿರಬಹುದು ಎಂಬ ಮಾತುಗಳಿವೆ.
ಹಾಗೆ ಮಾತನಾಡುವಾಗ ಕೆಲ ಶಾಸಕರನ್ನು ನೇರವಾಗಿ ಸಿದ್ದು ಶಿಷ್ಯರೆಂದು, ಅವರು ಹೇಳಿದರೆ ಖಂಡಿತಾ ಹಿಂತಿರುಗುತ್ತಾರೆ. ಅವರು ಮನಸ್ಸು ಮಾಡುತ್ತಿಲ್ಲ‌. ಮೇಲಾಗಿ ಸಿದ್ದರಾಮಯ್ಯನಿಗೂ ಸರಕಾರ ಉಳಿದು ಆಗಬೇಕಾದ್ದು ಏನೂ ಇಲ್ಲ – ಎಂಬೆಲ್ಲಾ ಮಾತುಗಳಿವೆ‌.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಿಕ್ಕಟ್ಟನ್ನು ಬಿಡಿಸಲು ಎಷ್ಟೇ ಪ್ರಯತ್ನಪಟ್ಟವರಂತೆ ಕಂಡರೂ ಅವರ ಬಗ್ಗೆ ಅನುಮಾನಗಳು ಇದ್ದೇ ಇವೆ. ಜೆಡಿಎಸ್ ಪಕ್ಷದ ಬೆಂಬಲಿಗರು ಅವರನ್ನೇ ವಿಲನ್ ಎಂಬಂತೆ ನೋಡುತ್ತಿದ್ದಾರೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವ ಒಬ್ಬ ಪತ್ರಕರ್ತರಂತೂ ಇಡೀ ಸಿನಿಮಾಕ್ಕೆ ಸಿದ್ದರಾಮಯ್ಯನವರದೇ ಚಿತ್ರಕತೆ, ನಿರ್ದೇಶನ ಎಂದು ಪದೇ ಪದೇ ಹೇಳುತ್ತಿದ್ದಾರೆ.

ಅದೇ ಹೊತ್ತಲ್ಲಿ ಶಾಸಕರ ಅತೃಪ್ತಿಗೆ ಕಾರಣವಾಗಿ ಹೊಮ್ಮಿರುವ ಇನ್ನೊಬ್ಬ ಇನ್ನೊಬ್ಬರು ಲೋಕೋಪಯೋಗಿ ಸಚಿವರಾದ ಹೆಚ್. ಡಿ. ರೇವಣ್ಣ. ಬೆಂಗಳೂರಿನ ಶಾಸಕರು ಮುಂಬೈ ವಿಮಾನ ಹತ್ತುವ ಮುನ್ನ, ಎಲ್ಲಾ ಇಲಾಖೆಗಳಿಗೆ ಮೂಗು ತೂರಿಸುವ ರೇವಣ್ಣನೇ  ಅಸಮಾಧಾನಕ್ಕೆ ಕಾರಣ ಎಂದು ಆರೋಪಿಸಿ ಹೊರಟಿದ್ದಾರೆ. ಹೀಗೆ ಆರೋಪ ಮಾಡುವವರಿಗೆ ಅವರದೇ ಆದ ಕಾರಣಗಳಿರಬಹುದು.

ಆದರೆ ಈ ಎಲ್ಲಾ ಕಾರಣಗಳ ಆಚೆ ದೊಡ್ಡ ದೊಡ್ಡ ವ್ಯಕ್ತಿಗಳಿದ್ದಾರೆ, ಆಮಿಷಗಳಿವೆ, ದುರಾಸೆ ಇದೆ ಎಂಬುದನ್ನು ನಮ್ಮ ಮಾಧ್ಯಮ ವ್ಯವಸ್ಥಿತವಾಗಿ ಮರೆ ಮಾಚಿದೆ. ಆ ಕಾರಣಕ್ಕೇನೆ ಈ ಬಾರಿ ‘ಆಪರೇಷನ್ ಕಮಲ’ ಎಂಬ ಪದ ಹೆಚ್ಚಾಗಿ ಕಿವಿಗೆ ಬೀಳಲೇ ಇಲ್ಲ‌. ಬದಲಾಗಿ ಕೇಳಿಸಿದ್ದು – ದೋಸ್ತಿ ಖತಮ್.

ಒಬ್ಬ ಶಾಸಕ ರಾಜೀನಾಮೆ ಕೊಟ್ಟ ತಕ್ಷಣ ಆತನನ್ನು ಮುಂಬೈಗೆ ಕರೆದುಕೊಂಡು ಹೋಗಲು ಒಂದು ವಿಮಾನ ರೆಡಿ ಇರುತ್ತದೆ. ಮುಂಬೈಗೆ ಹೋದ ನಂತರ ಅವರ ಭದ್ರತೆಗೆ ಮುಂಬೈ ಪೊಲೀಸರು ಬಂದು ನಿಲ್ಲುತ್ತಾರೆ. ಅವರು ಸುಪ್ರೀಂ ಕೋರ್ಟಿ ಅರ್ಜಿ ಸಲ್ಲಿಸಿದರೆ ಅವರ ಪರ ವಾದ ಮಂಡಿಸಲು ಬರುವ ವಕೀಲರಾದರೂ ಯಾರು?

ಈ ಎಲ್ಲಾ ಪ್ರಶ್ನೆಗಳನ್ನು ಗಾಳಿಗೆ ತೂರಿ, ಸಿದ್ದರಾಮಯ್ಯ ಮತ್ತು ರೇವಣ್ಣ ಎಂಬ ನೆಪ‌ ಹುಡುಕುತ್ತಿದ್ದಾರೆ. ಎಲ್ಲದಕ್ಕೂ ಸಿದ್ದರಾಮಯ್ಯ, ರೇವಣ್ಣನಂತಹವರೇ ಕಾರಣ ಆಗೋದಾದ್ರೆ, ಸದ್ಯ ಬೇರೆ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವುದೇನು? ಪಕ್ಕದ ಗೋವಾ ದಂತಹ ಸಣ್ಣ ರಾಜ್ಯದಲ್ಲಿ 15 ಕಾಂಗ್ರೆಸ್ ಶಾಸಕರ ಪೈಕಿ ಹತ್ತು ಜನ ಬಿಜೆಪಿ ಸೇರಿದ್ದಾರೆ. ಅಲ್ಲಿ ಯಾವ ಸಿದ್ದರಾಮಯ್ಯ ಯಾವ ರೇವಣ್ಣ ಇದ್ರು?

ಅಷ್ಟೇ ಏಕೆ, ಈಗ ಪಶ್ಚಿಮ ಬಂಗಾಳದ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಪಾರ್ಟಿಗಳನ್ನು ತೊರೆದು ಬಿಜೆಪಿ ಸೇರಲು ಸಿದ್ಧ ಇರುವ ನೂರಕ್ಕೂ ಹೆಚ್ಚು ಶಾಸಕರ ಪಟ್ಟಿ ನನ್ನ ಜೇಬಿನಲ್ಲಿ ಇದೆ ಎಂದು ಹೇಳುತ್ತಾರಲ್ಲ ಅಲ್ಲಿ ಯಾವ ರೇವಣ್ಣ ಯಾವ ಸಿದ್ದರಾಮಯ್ಯ ಇದ್ದಾರೆ? 2014 ರ ನಂತರ ಹಲವು ರಾಜ್ಯಗಳಲ್ಲಿ ಚುನಾವಣೆಗಳು‌ ನಡೆದಿವೆ. ಅಲ್ಲೆಲ್ಲಾ ನಡೆದಿದ್ದೇನು?

ಟಿವಿ ಚರ್ಚೆಗಳಲ್ಲಿ ಕುಳಿತು ಮಾತನಾಡುವವರು ಬೇಕೆಂದೇ ತಮ್ಮ ದೃಷ್ಟಿಕೋನವನ್ನು ಕರ್ನಾಟಕಕ್ಕೆ ಸೀಮಿತಗೊಳಿಸಿ ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಿಸುತ್ತಿದ್ದಾರೆ. ಅವರಿಗೆ ಅದು ಸರಿ ಕಾಣಬಹುದು. ಅವರೆಲ್ಲಾ ಈ ಬೆಳವಣಿಗೆಗಳ ಹಿಂದೆ ಇರುವ ಅಮಿತ್ ಶಾ, ನರೇಂದ್ರ ಮೋದಿ ಕಾಣುವುದಿಲ್ಲ.

ಹೋಗಲಿ, ವಿಮಾನ ಹತ್ತಿಸುವ ಯಡಿಯೂರಪ್ಪ ಸಹಾಯಕ ಸಂತೋಷ್, ಜೊತೆಗೆ ಪ್ರಯಾಣಿಸುವ ಅಶೋಕ್ ಕೂಡಾ ಕಾಣುವುದಿಲ್ಲವೆ? ಅಷ್ಟರ ಮಟ್ಟಿಗೆ ಕಣ್ಣಿಗೆ ಪೊರೆ ಬೆಳೆಸಿಕೊಂಡರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...