Homeಕರ್ನಾಟಕಮೀಡಿಯಾಗಳು 'ಆಪರೇಷನ್ ಕಮಲ' ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

ಮೀಡಿಯಾಗಳು ‘ಆಪರೇಷನ್ ಕಮಲ’ ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

- Advertisement -
- Advertisement -

ಆಸೆಗೆ, ಅಹಂಗೆ ಮಾರಿಕೊಂಡವರ ನೆಪಗಳು!

ಕರ್ನಾಟಕದ ಸದ್ಯದ ಬೆಳವಣಿಗೆಗಳಿಗೆ ಯಾರು ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಶಾಸಕರು ಅಸಮಾಧಾನಗೊಂಡು ಮುಂಬೈ ತಲುಪಿದ್ದಾರೆ. ಅವರ ಕೆಲ ಮಾತುಗಳನ್ನು ಆಧಾರವಾಗಿಟ್ಟುಕೊಂಡು ರಾಜಕೀಯ ವಿಶ್ಲೇಷಕರು ಈ ಎಲ್ಲಾ ಘಟನೆಗಳ ಹಿಂದೆ ಯಾರು ಇರಬಹುದು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ.

ಘಟನೆಗಳಿಗೆ, ಟಿವಿ ಚರ್ಚೆ, ಪತ್ರಿಕಾ ವರದಿಗಳಲ್ಲಿ ಪ್ರಮುಖವಾಗಿ ಕಾಣುವವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಮನ್ವಯ ಸಮಿತಿ ಮುಖ್ಯಸ್ಥರಾಗಿ ಅವರು ವಿಫಲರಾಗಿದ್ದಾರೆ. ತಮ್ಮದೇ ಬೆಂಬಲಿಗರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಮೇಲಾಗಿ ಅವರದೇ ಬೆಂಬಲಿಗರು ಮುಂಬೈ ಹೋಗಿರುವ ಕಾರಣ ಇಡೀ ಪ್ರಕರಣ ಹಿಂದೆ ಅವರ ಪಾತ್ರವೂ ದೊಡ್ಡದಿರಬಹುದು ಎಂಬ ಮಾತುಗಳಿವೆ.
ಹಾಗೆ ಮಾತನಾಡುವಾಗ ಕೆಲ ಶಾಸಕರನ್ನು ನೇರವಾಗಿ ಸಿದ್ದು ಶಿಷ್ಯರೆಂದು, ಅವರು ಹೇಳಿದರೆ ಖಂಡಿತಾ ಹಿಂತಿರುಗುತ್ತಾರೆ. ಅವರು ಮನಸ್ಸು ಮಾಡುತ್ತಿಲ್ಲ‌. ಮೇಲಾಗಿ ಸಿದ್ದರಾಮಯ್ಯನಿಗೂ ಸರಕಾರ ಉಳಿದು ಆಗಬೇಕಾದ್ದು ಏನೂ ಇಲ್ಲ – ಎಂಬೆಲ್ಲಾ ಮಾತುಗಳಿವೆ‌.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಿಕ್ಕಟ್ಟನ್ನು ಬಿಡಿಸಲು ಎಷ್ಟೇ ಪ್ರಯತ್ನಪಟ್ಟವರಂತೆ ಕಂಡರೂ ಅವರ ಬಗ್ಗೆ ಅನುಮಾನಗಳು ಇದ್ದೇ ಇವೆ. ಜೆಡಿಎಸ್ ಪಕ್ಷದ ಬೆಂಬಲಿಗರು ಅವರನ್ನೇ ವಿಲನ್ ಎಂಬಂತೆ ನೋಡುತ್ತಿದ್ದಾರೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವ ಒಬ್ಬ ಪತ್ರಕರ್ತರಂತೂ ಇಡೀ ಸಿನಿಮಾಕ್ಕೆ ಸಿದ್ದರಾಮಯ್ಯನವರದೇ ಚಿತ್ರಕತೆ, ನಿರ್ದೇಶನ ಎಂದು ಪದೇ ಪದೇ ಹೇಳುತ್ತಿದ್ದಾರೆ.

ಅದೇ ಹೊತ್ತಲ್ಲಿ ಶಾಸಕರ ಅತೃಪ್ತಿಗೆ ಕಾರಣವಾಗಿ ಹೊಮ್ಮಿರುವ ಇನ್ನೊಬ್ಬ ಇನ್ನೊಬ್ಬರು ಲೋಕೋಪಯೋಗಿ ಸಚಿವರಾದ ಹೆಚ್. ಡಿ. ರೇವಣ್ಣ. ಬೆಂಗಳೂರಿನ ಶಾಸಕರು ಮುಂಬೈ ವಿಮಾನ ಹತ್ತುವ ಮುನ್ನ, ಎಲ್ಲಾ ಇಲಾಖೆಗಳಿಗೆ ಮೂಗು ತೂರಿಸುವ ರೇವಣ್ಣನೇ  ಅಸಮಾಧಾನಕ್ಕೆ ಕಾರಣ ಎಂದು ಆರೋಪಿಸಿ ಹೊರಟಿದ್ದಾರೆ. ಹೀಗೆ ಆರೋಪ ಮಾಡುವವರಿಗೆ ಅವರದೇ ಆದ ಕಾರಣಗಳಿರಬಹುದು.

ಆದರೆ ಈ ಎಲ್ಲಾ ಕಾರಣಗಳ ಆಚೆ ದೊಡ್ಡ ದೊಡ್ಡ ವ್ಯಕ್ತಿಗಳಿದ್ದಾರೆ, ಆಮಿಷಗಳಿವೆ, ದುರಾಸೆ ಇದೆ ಎಂಬುದನ್ನು ನಮ್ಮ ಮಾಧ್ಯಮ ವ್ಯವಸ್ಥಿತವಾಗಿ ಮರೆ ಮಾಚಿದೆ. ಆ ಕಾರಣಕ್ಕೇನೆ ಈ ಬಾರಿ ‘ಆಪರೇಷನ್ ಕಮಲ’ ಎಂಬ ಪದ ಹೆಚ್ಚಾಗಿ ಕಿವಿಗೆ ಬೀಳಲೇ ಇಲ್ಲ‌. ಬದಲಾಗಿ ಕೇಳಿಸಿದ್ದು – ದೋಸ್ತಿ ಖತಮ್.

ಒಬ್ಬ ಶಾಸಕ ರಾಜೀನಾಮೆ ಕೊಟ್ಟ ತಕ್ಷಣ ಆತನನ್ನು ಮುಂಬೈಗೆ ಕರೆದುಕೊಂಡು ಹೋಗಲು ಒಂದು ವಿಮಾನ ರೆಡಿ ಇರುತ್ತದೆ. ಮುಂಬೈಗೆ ಹೋದ ನಂತರ ಅವರ ಭದ್ರತೆಗೆ ಮುಂಬೈ ಪೊಲೀಸರು ಬಂದು ನಿಲ್ಲುತ್ತಾರೆ. ಅವರು ಸುಪ್ರೀಂ ಕೋರ್ಟಿ ಅರ್ಜಿ ಸಲ್ಲಿಸಿದರೆ ಅವರ ಪರ ವಾದ ಮಂಡಿಸಲು ಬರುವ ವಕೀಲರಾದರೂ ಯಾರು?

ಈ ಎಲ್ಲಾ ಪ್ರಶ್ನೆಗಳನ್ನು ಗಾಳಿಗೆ ತೂರಿ, ಸಿದ್ದರಾಮಯ್ಯ ಮತ್ತು ರೇವಣ್ಣ ಎಂಬ ನೆಪ‌ ಹುಡುಕುತ್ತಿದ್ದಾರೆ. ಎಲ್ಲದಕ್ಕೂ ಸಿದ್ದರಾಮಯ್ಯ, ರೇವಣ್ಣನಂತಹವರೇ ಕಾರಣ ಆಗೋದಾದ್ರೆ, ಸದ್ಯ ಬೇರೆ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವುದೇನು? ಪಕ್ಕದ ಗೋವಾ ದಂತಹ ಸಣ್ಣ ರಾಜ್ಯದಲ್ಲಿ 15 ಕಾಂಗ್ರೆಸ್ ಶಾಸಕರ ಪೈಕಿ ಹತ್ತು ಜನ ಬಿಜೆಪಿ ಸೇರಿದ್ದಾರೆ. ಅಲ್ಲಿ ಯಾವ ಸಿದ್ದರಾಮಯ್ಯ ಯಾವ ರೇವಣ್ಣ ಇದ್ರು?

ಅಷ್ಟೇ ಏಕೆ, ಈಗ ಪಶ್ಚಿಮ ಬಂಗಾಳದ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಪಾರ್ಟಿಗಳನ್ನು ತೊರೆದು ಬಿಜೆಪಿ ಸೇರಲು ಸಿದ್ಧ ಇರುವ ನೂರಕ್ಕೂ ಹೆಚ್ಚು ಶಾಸಕರ ಪಟ್ಟಿ ನನ್ನ ಜೇಬಿನಲ್ಲಿ ಇದೆ ಎಂದು ಹೇಳುತ್ತಾರಲ್ಲ ಅಲ್ಲಿ ಯಾವ ರೇವಣ್ಣ ಯಾವ ಸಿದ್ದರಾಮಯ್ಯ ಇದ್ದಾರೆ? 2014 ರ ನಂತರ ಹಲವು ರಾಜ್ಯಗಳಲ್ಲಿ ಚುನಾವಣೆಗಳು‌ ನಡೆದಿವೆ. ಅಲ್ಲೆಲ್ಲಾ ನಡೆದಿದ್ದೇನು?

ಟಿವಿ ಚರ್ಚೆಗಳಲ್ಲಿ ಕುಳಿತು ಮಾತನಾಡುವವರು ಬೇಕೆಂದೇ ತಮ್ಮ ದೃಷ್ಟಿಕೋನವನ್ನು ಕರ್ನಾಟಕಕ್ಕೆ ಸೀಮಿತಗೊಳಿಸಿ ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಿಸುತ್ತಿದ್ದಾರೆ. ಅವರಿಗೆ ಅದು ಸರಿ ಕಾಣಬಹುದು. ಅವರೆಲ್ಲಾ ಈ ಬೆಳವಣಿಗೆಗಳ ಹಿಂದೆ ಇರುವ ಅಮಿತ್ ಶಾ, ನರೇಂದ್ರ ಮೋದಿ ಕಾಣುವುದಿಲ್ಲ.

ಹೋಗಲಿ, ವಿಮಾನ ಹತ್ತಿಸುವ ಯಡಿಯೂರಪ್ಪ ಸಹಾಯಕ ಸಂತೋಷ್, ಜೊತೆಗೆ ಪ್ರಯಾಣಿಸುವ ಅಶೋಕ್ ಕೂಡಾ ಕಾಣುವುದಿಲ್ಲವೆ? ಅಷ್ಟರ ಮಟ್ಟಿಗೆ ಕಣ್ಣಿಗೆ ಪೊರೆ ಬೆಳೆಸಿಕೊಂಡರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...