Homeಕರ್ನಾಟಕಮೀಡಿಯಾಗಳು 'ಆಪರೇಷನ್ ಕಮಲ' ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

ಮೀಡಿಯಾಗಳು ‘ಆಪರೇಷನ್ ಕಮಲ’ ಎಂದು ಹೇಳುವ ಬದಲು ದೋಸ್ತಿ ಖತಮ್ ಎಂದೇಕೇ ಹೇಳುತ್ತಿವೆ?

- Advertisement -
- Advertisement -

ಆಸೆಗೆ, ಅಹಂಗೆ ಮಾರಿಕೊಂಡವರ ನೆಪಗಳು!

ಕರ್ನಾಟಕದ ಸದ್ಯದ ಬೆಳವಣಿಗೆಗಳಿಗೆ ಯಾರು ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಶಾಸಕರು ಅಸಮಾಧಾನಗೊಂಡು ಮುಂಬೈ ತಲುಪಿದ್ದಾರೆ. ಅವರ ಕೆಲ ಮಾತುಗಳನ್ನು ಆಧಾರವಾಗಿಟ್ಟುಕೊಂಡು ರಾಜಕೀಯ ವಿಶ್ಲೇಷಕರು ಈ ಎಲ್ಲಾ ಘಟನೆಗಳ ಹಿಂದೆ ಯಾರು ಇರಬಹುದು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಿದ್ದಾರೆ.

ಘಟನೆಗಳಿಗೆ, ಟಿವಿ ಚರ್ಚೆ, ಪತ್ರಿಕಾ ವರದಿಗಳಲ್ಲಿ ಪ್ರಮುಖವಾಗಿ ಕಾಣುವವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಮನ್ವಯ ಸಮಿತಿ ಮುಖ್ಯಸ್ಥರಾಗಿ ಅವರು ವಿಫಲರಾಗಿದ್ದಾರೆ. ತಮ್ಮದೇ ಬೆಂಬಲಿಗರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಮೇಲಾಗಿ ಅವರದೇ ಬೆಂಬಲಿಗರು ಮುಂಬೈ ಹೋಗಿರುವ ಕಾರಣ ಇಡೀ ಪ್ರಕರಣ ಹಿಂದೆ ಅವರ ಪಾತ್ರವೂ ದೊಡ್ಡದಿರಬಹುದು ಎಂಬ ಮಾತುಗಳಿವೆ.
ಹಾಗೆ ಮಾತನಾಡುವಾಗ ಕೆಲ ಶಾಸಕರನ್ನು ನೇರವಾಗಿ ಸಿದ್ದು ಶಿಷ್ಯರೆಂದು, ಅವರು ಹೇಳಿದರೆ ಖಂಡಿತಾ ಹಿಂತಿರುಗುತ್ತಾರೆ. ಅವರು ಮನಸ್ಸು ಮಾಡುತ್ತಿಲ್ಲ‌. ಮೇಲಾಗಿ ಸಿದ್ದರಾಮಯ್ಯನಿಗೂ ಸರಕಾರ ಉಳಿದು ಆಗಬೇಕಾದ್ದು ಏನೂ ಇಲ್ಲ – ಎಂಬೆಲ್ಲಾ ಮಾತುಗಳಿವೆ‌.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಿಕ್ಕಟ್ಟನ್ನು ಬಿಡಿಸಲು ಎಷ್ಟೇ ಪ್ರಯತ್ನಪಟ್ಟವರಂತೆ ಕಂಡರೂ ಅವರ ಬಗ್ಗೆ ಅನುಮಾನಗಳು ಇದ್ದೇ ಇವೆ. ಜೆಡಿಎಸ್ ಪಕ್ಷದ ಬೆಂಬಲಿಗರು ಅವರನ್ನೇ ವಿಲನ್ ಎಂಬಂತೆ ನೋಡುತ್ತಿದ್ದಾರೆ. ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವ ಒಬ್ಬ ಪತ್ರಕರ್ತರಂತೂ ಇಡೀ ಸಿನಿಮಾಕ್ಕೆ ಸಿದ್ದರಾಮಯ್ಯನವರದೇ ಚಿತ್ರಕತೆ, ನಿರ್ದೇಶನ ಎಂದು ಪದೇ ಪದೇ ಹೇಳುತ್ತಿದ್ದಾರೆ.

ಅದೇ ಹೊತ್ತಲ್ಲಿ ಶಾಸಕರ ಅತೃಪ್ತಿಗೆ ಕಾರಣವಾಗಿ ಹೊಮ್ಮಿರುವ ಇನ್ನೊಬ್ಬ ಇನ್ನೊಬ್ಬರು ಲೋಕೋಪಯೋಗಿ ಸಚಿವರಾದ ಹೆಚ್. ಡಿ. ರೇವಣ್ಣ. ಬೆಂಗಳೂರಿನ ಶಾಸಕರು ಮುಂಬೈ ವಿಮಾನ ಹತ್ತುವ ಮುನ್ನ, ಎಲ್ಲಾ ಇಲಾಖೆಗಳಿಗೆ ಮೂಗು ತೂರಿಸುವ ರೇವಣ್ಣನೇ  ಅಸಮಾಧಾನಕ್ಕೆ ಕಾರಣ ಎಂದು ಆರೋಪಿಸಿ ಹೊರಟಿದ್ದಾರೆ. ಹೀಗೆ ಆರೋಪ ಮಾಡುವವರಿಗೆ ಅವರದೇ ಆದ ಕಾರಣಗಳಿರಬಹುದು.

ಆದರೆ ಈ ಎಲ್ಲಾ ಕಾರಣಗಳ ಆಚೆ ದೊಡ್ಡ ದೊಡ್ಡ ವ್ಯಕ್ತಿಗಳಿದ್ದಾರೆ, ಆಮಿಷಗಳಿವೆ, ದುರಾಸೆ ಇದೆ ಎಂಬುದನ್ನು ನಮ್ಮ ಮಾಧ್ಯಮ ವ್ಯವಸ್ಥಿತವಾಗಿ ಮರೆ ಮಾಚಿದೆ. ಆ ಕಾರಣಕ್ಕೇನೆ ಈ ಬಾರಿ ‘ಆಪರೇಷನ್ ಕಮಲ’ ಎಂಬ ಪದ ಹೆಚ್ಚಾಗಿ ಕಿವಿಗೆ ಬೀಳಲೇ ಇಲ್ಲ‌. ಬದಲಾಗಿ ಕೇಳಿಸಿದ್ದು – ದೋಸ್ತಿ ಖತಮ್.

ಒಬ್ಬ ಶಾಸಕ ರಾಜೀನಾಮೆ ಕೊಟ್ಟ ತಕ್ಷಣ ಆತನನ್ನು ಮುಂಬೈಗೆ ಕರೆದುಕೊಂಡು ಹೋಗಲು ಒಂದು ವಿಮಾನ ರೆಡಿ ಇರುತ್ತದೆ. ಮುಂಬೈಗೆ ಹೋದ ನಂತರ ಅವರ ಭದ್ರತೆಗೆ ಮುಂಬೈ ಪೊಲೀಸರು ಬಂದು ನಿಲ್ಲುತ್ತಾರೆ. ಅವರು ಸುಪ್ರೀಂ ಕೋರ್ಟಿ ಅರ್ಜಿ ಸಲ್ಲಿಸಿದರೆ ಅವರ ಪರ ವಾದ ಮಂಡಿಸಲು ಬರುವ ವಕೀಲರಾದರೂ ಯಾರು?

ಈ ಎಲ್ಲಾ ಪ್ರಶ್ನೆಗಳನ್ನು ಗಾಳಿಗೆ ತೂರಿ, ಸಿದ್ದರಾಮಯ್ಯ ಮತ್ತು ರೇವಣ್ಣ ಎಂಬ ನೆಪ‌ ಹುಡುಕುತ್ತಿದ್ದಾರೆ. ಎಲ್ಲದಕ್ಕೂ ಸಿದ್ದರಾಮಯ್ಯ, ರೇವಣ್ಣನಂತಹವರೇ ಕಾರಣ ಆಗೋದಾದ್ರೆ, ಸದ್ಯ ಬೇರೆ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವುದೇನು? ಪಕ್ಕದ ಗೋವಾ ದಂತಹ ಸಣ್ಣ ರಾಜ್ಯದಲ್ಲಿ 15 ಕಾಂಗ್ರೆಸ್ ಶಾಸಕರ ಪೈಕಿ ಹತ್ತು ಜನ ಬಿಜೆಪಿ ಸೇರಿದ್ದಾರೆ. ಅಲ್ಲಿ ಯಾವ ಸಿದ್ದರಾಮಯ್ಯ ಯಾವ ರೇವಣ್ಣ ಇದ್ರು?

ಅಷ್ಟೇ ಏಕೆ, ಈಗ ಪಶ್ಚಿಮ ಬಂಗಾಳದ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಪಾರ್ಟಿಗಳನ್ನು ತೊರೆದು ಬಿಜೆಪಿ ಸೇರಲು ಸಿದ್ಧ ಇರುವ ನೂರಕ್ಕೂ ಹೆಚ್ಚು ಶಾಸಕರ ಪಟ್ಟಿ ನನ್ನ ಜೇಬಿನಲ್ಲಿ ಇದೆ ಎಂದು ಹೇಳುತ್ತಾರಲ್ಲ ಅಲ್ಲಿ ಯಾವ ರೇವಣ್ಣ ಯಾವ ಸಿದ್ದರಾಮಯ್ಯ ಇದ್ದಾರೆ? 2014 ರ ನಂತರ ಹಲವು ರಾಜ್ಯಗಳಲ್ಲಿ ಚುನಾವಣೆಗಳು‌ ನಡೆದಿವೆ. ಅಲ್ಲೆಲ್ಲಾ ನಡೆದಿದ್ದೇನು?

ಟಿವಿ ಚರ್ಚೆಗಳಲ್ಲಿ ಕುಳಿತು ಮಾತನಾಡುವವರು ಬೇಕೆಂದೇ ತಮ್ಮ ದೃಷ್ಟಿಕೋನವನ್ನು ಕರ್ನಾಟಕಕ್ಕೆ ಸೀಮಿತಗೊಳಿಸಿ ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಿಸುತ್ತಿದ್ದಾರೆ. ಅವರಿಗೆ ಅದು ಸರಿ ಕಾಣಬಹುದು. ಅವರೆಲ್ಲಾ ಈ ಬೆಳವಣಿಗೆಗಳ ಹಿಂದೆ ಇರುವ ಅಮಿತ್ ಶಾ, ನರೇಂದ್ರ ಮೋದಿ ಕಾಣುವುದಿಲ್ಲ.

ಹೋಗಲಿ, ವಿಮಾನ ಹತ್ತಿಸುವ ಯಡಿಯೂರಪ್ಪ ಸಹಾಯಕ ಸಂತೋಷ್, ಜೊತೆಗೆ ಪ್ರಯಾಣಿಸುವ ಅಶೋಕ್ ಕೂಡಾ ಕಾಣುವುದಿಲ್ಲವೆ? ಅಷ್ಟರ ಮಟ್ಟಿಗೆ ಕಣ್ಣಿಗೆ ಪೊರೆ ಬೆಳೆಸಿಕೊಂಡರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...