Homeಮುಖಪುಟಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಮನಸಾರೆ ಒಪ್ಪಿಕೊಳ್ಳದಿದ್ದರೆ ಆತ ಮುಸ್ಲಿಂ ಆಗಲು ಸಾಧ್ಯವೇ ಇಲ್ಲ ಎಂಬ ವಿಚಾರ ಇಸ್ಲಾಮಿನ ಬಗ್ಗೆ ಪ್ರಾಥಮಿಕ ಜ್ಞಾನವಿರುವರಿಗೆ ನಿಲುಕುವ ಸರಳ ತರ್ಕ. ಇದು ಟಿಪ್ಪು ಸುಲ್ತಾನ್‌ಗೆ ತಿಳಿದಿರಲಿಲ್ಲವೇ?

- Advertisement -
- Advertisement -

ಟಿಪ್ಪು ಸುಲ್ತಾನರ ಮೇಲೆ ಬಲವಂತದ ಮತಾಂತರದ ಆರೋಪ ಇಂದು ನಿನ್ನೆಯದಲ್ಲ. ಅಂತೆಯೇ ಅದನ್ನು ನಿರಾಕರಿಸುವ ಎಡಪಂಥೀಯ ಒಲವಿನ ಮತ್ತು ಯಾವುದೇ ಪಂಥಗಳ ಸಂಕೋಲೆಯೊಳಗೆ ಬಂಧಿಯಾಗದ ಇತಿಹಾಸಕಾರರ ಪ್ರತಿಪಾದನೆಯೂ ಇಂದು ನಿನ್ನೆಯದಲ್ಲ. ವಸಾಹತುಶಾಹಿ ಪರ ಇತಿಹಾಸಕಾರರ ಸುಳ್ಳಾರೋಪಗಳಿಗೆ ಅವರದ್ದೇ ವಸಾಹತು ಪ್ರಭುಗಳ ಜನಗಣತಿಯ ಆಧಾರಗಳನ್ನನ್ನುಸರಿಸಿ ಹಲವು ಇತಿಹಾಸಕಾರರು ದಾಖಲೆಗಳನ್ನು ನೀಡಿದ್ದಾರೆ. ಅವುಗಳೆಲ್ಲವೂ ಜನಸಾಮಾನ್ಯರ ಆಲೋಚನೆಗಳಿಗೆ ಸರಳವಾಗಿ ನಿಲುಕುವಂತಹವುಗಳು. ಅಲ್ಲೆಲ್ಲೂ ಇತಿಹಾಸ ಮಂಡನೆಯ ನಿರ್ದಿಷ್ಟ ಸಿದ್ಧಾಂತದ ಭಾರವೂ ಇಲ್ಲ. ಅವುಗಳ ಮೇಲೊಂದು ಪಕ್ಷಿ ನೋಟ ಬೀರುವ ಪ್ರಯತ್ನ ಮಾಡುತ್ತೇನೆ.

ಮಾರ್ಕ್ ವಿಲ್ಕ್ಸ್ ಎಂಬ ವಸಾಹತುಶಾಹಿಗಳ ಇತಿಹಾಸಕಾರ ತನ್ನ “Sketches of South Indian history” ಎಂಬ ಗ್ರಂಥದಲ್ಲಿ ‘ಟಿಪ್ಪು ಸುಲ್ತಾನ್ ಕೊಡಗಿನಲ್ಲಿ 70,000 ಹಿಂದೂಗಳನ್ನು ಇಸ್ಲಾಮಿಗೆ ಮತಾಂತರಿಸಿದ” ಎಂದು ಆಪಾದಿಸಿದ್ದಾನೆ. ಬಿ.ಎಲ್.ರೈಸ್ ಎಂಬ ಇನ್ನೋರ್ವ ವಸಾಹತುಶಾಹಿ ಪರ ಇತಿಹಾಸಕಾರ Mysore Gazzetiar ಒಂದರಲ್ಲಿ ಟಿಪ್ಪು ಸುಲ್ತಾನ್ ಕೊಡಗಿನಲ್ಲಿ‌85,000 ಜನರನ್ನು ಇಸ್ಲಾಂಗೆ ಮತಾಂತರಿಸಿದ” ಎಂದು ಆರೋಪಿಸಿದ್ದಾನೆ. ಇಲ್ಲೇ ಒಂದು ವ್ಯತ್ಯಾಸ ಗಮನಿಸಿ. ಇವರೀರ್ವರು ನೀಡುವ ಸಂಖ್ಯೆಗಳಲ್ಲಿ ‌15,000ದಷ್ಟು ಬೃಹತ್ ಅಂತರವಿದೆ. ಟಿಪ್ಪು ಹುತಾತ್ಮರಾಗಿದ್ದು 1799ರಲ್ಲಿ. 1836ರಲ್ಲಿ ಅಂದರೆ ಟಿಪ್ಪು ಹುತಾತ್ಮರಾಗಿ 37ವರ್ಷಗಳ ಬಳಿಕ ಬ್ರಿಟಿಷ್ ವಸಾಹತುಶಾಹಿ ಪ್ರಭುಗಳೇ ನಡೆಸಿದ ಜನಗಣತಿಯ ಪ್ರಕಾರ ಕೊಡಗಿನ ಒಟ್ಟು ಜನಸಂಖ್ಯೆ 65,437 ಮಾತ್ರ. 37‌ ವರ್ಷಗಳ ಹಿಂದೆ ಸಹಜವಾಗಿಯೇ ಜನಸಂಖ್ಯೆ ಕಡಿಮೆಯಿರುತ್ತದೆಯೇ ಹೊರತು ಹೆಚ್ಚಿರುವುದಿಲ್ಲ. ಇರುವ ಒಟ್ಟು ಜನಸಂಖ್ಯೆಗಿಂತ ಹೆಚ್ಚು ಜನರನ್ನು ಹೇಗೆ ಮತಾಂತರಿಸಲು ಸಾಧ್ಯ..? ವಾದಕ್ಕೆ ಅಷ್ಟೂ ಸಂಖ್ಯೆಯ ಜನರನ್ನು ಟಿಪ್ಪು ಮತಾಂತರಿಸಿದ್ದರೆಂದೇ ಇಟ್ಟುಕೊಳ್ಳೋಣ. ಟಿಪ್ಪುವಿನ ಆಡಳಿತ 1799 ಮೇ ನಾಲ್ಕರಂದು ಟಿಪ್ಪು ಹುತಾತ್ಮರಾಗುವುದರೊಂದಿಗೆ ಮುಗಿಯುತ್ತದೆ. ಬಲಾತ್ಕಾರದಿಂದ ಮತಾಂತರಕ್ಕೊಳಪಟ್ಟವರು ಆ ಬಳಿಕ ಅಂದರೆ ಓರ್ವ ಹಿಂದೂ ಅರಸನ ಕಾಲದಲ್ಲಿ ಮರು ಮತಾಂತರವಾಗಬಹುದಿತ್ತಲ್ವಾ..? ಹಾಗೆ ಸಾಮೂಹಿಕವಾಗಿ ಮರು ಮತಾಂತರಗೊಂಡ ಏಕೈಕ ನಿದರ್ಶನವನ್ನಾದರೂ ಇಂದು ಟಿಪ್ಪುವಿನ ಮೇಲೆ ಮತಾಂತರದ ಆರೋಪ ಹೊರಿಸುವವರು ತೋರಿಸಲಿ.

ಇನ್ನು ಮಂಗಳೂರು ಕ್ರೈಸ್ತರ ಮತಾಂತರದ ಕುರಿತಂತೆ ನೋಡೋಣ. ಫಾದರ್ ಮಿರಾಂಡ ಎಂಬವರು “ಟಿಪ್ಪು 60,000 ಕ್ರೈಸ್ತರನ್ನು ಬಲವಂತವಾಗಿ ಇಸ್ಲಾಮಿಗೆ ಮತಾಂತರಿಸಿದ” ಎಂದು ಆಪಾದಿಸುತ್ತಾರೆ. ಇನ್ನೊಂದೆಡೆ ಆತ ಹೀಗೆ ಆಪಾದಿಸುತ್ತಾರೆ. “ಟಿಪ್ಪು 40,000 ಕ್ರೈಸ್ತರನ್ನು ಮಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಮತಾಂತರಿಸಿದ್ದಾನೆ. ಅವರಲ್ಲಿ 15,000 ಕ್ರೈಸ್ತರು ಮಂಗಳೂರಿಗೆ ವಾಪಾಸು ಬಂದಿದ್ದಾರೆ.”
1894 ರಲ್ಲಿ ಬ್ರಿಟಿಷ್ ವಸಾಹತುಶಾಹಿಗಳೇ ರಚಿಸಿದ Madras Manual ಎಂಬ ಗ್ರಂಥದ South Canada gazattier ಎಂಬ ಉಪಶೀರ್ಷಿಕೆಯಡಿ 1890ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಜನಸಂಖ್ಯೆ 70,000 ಎಂದು ದಾಖಲಿಸಲಾಗಿದೆ. ಹಾಗಿದ್ದರೆ ಸುಮಾರು ನೂರು ವರ್ಷಗಳ ಹಿಂದೆ ಮಂಗಳೂರಿನ ಒಟ್ಟು ಜನಸಂಖ್ಯೆ ಎಷ್ಟಿದ್ದಿರಬಹುದು..? ಅದರಲ್ಲಿ ಕ್ರೈಸ್ತರು ಎಷ್ಟಿದ್ದಿರಬಹುದು ಎಂದು ಊಹಿಸಿ ನೋಡಿ. ಟಿಪ್ಪುವಿನ ಕಾಲಾನಂತರ ಮಂಗಳೂರಿನಲ್ಲೂ ಕೂಡಾ ಕ್ರೈಸ್ತ ಧರ್ಮಕ್ಕೆ ಮರು ಮತಾಂತರಗೊಂಡ ಏಕೈಕ ನಿದರ್ಶನವಿಲ್ಲ.

ಇನ್ನೊಂದು ಸರಳ ತರ್ಕ ನೋಡೋಣ. ಓರ್ವ ಮುಸ್ಲಿಮೇತರ ಇಸ್ಲಾಮ್‌ಗೆ ಮತಾಂತರವಾಗಬೇಕೆಂದರೆ ಆತ ವಾಚಾ ಮತ್ತು ಮನಸಾ “ಅಶ್‌ಹದು ಅಲ್ಲಾಇ‌ಲಾಹ ಇಲ್ಲಲ್ಲಾಹ್,ವ‌ಅಶ್‌ಹದು ಅನ್ನ ಮುಹಮ್ಮದರ್ರಸೂಲುಲ್ಲಾಹ್” (ಅಲ್ಲಾಹನಲ್ಲದೇ ಅನ್ಯ ಆರಾಧ್ಯರಿಲ್ಲ, ಮುಹಮ್ಮದ್ (ಸ)ರು ಅಲ್ಲಾಹನ ಸಂದೇಶವಾಹಕರು) ಎಂದು ಮನಸಾರೆ ಒಪ್ಪಿ ಪ್ರತಿಜ್ಞೆ‌ಗೈಯಬೇಕು. ಒಬ್ಬ ವ್ಯಕ್ತಿ ಜೀವಭಯದಿಂದ ಬಾಯಲ್ಲಿ ಉಚ್ಚರಿಸಬಹುದೇ ಹೊರತು ಮನಸಾರೆ ಒಪ್ಪಿಕೊಳ್ಳಲಾರ. ಮನಸಾರೆ ಒಪ್ಪಿಕೊಳ್ಳದಿದ್ದರೆ ಆತ ಮುಸ್ಲಿಂ ಆಗಲು ಸಾಧ್ಯವೇ ಇಲ್ಲ ಎಂಬ ವಿಚಾರ ಇಸ್ಲಾಮಿನ ಬಗ್ಗೆ ಪ್ರಾಥಮಿಕ ಜ್ಞಾನವಿರುವರಿಗೆ ನಿಲುಕುವ ಸರಳ ತರ್ಕ. ಇಂತಹ ಸರಳ ತರ್ಕವನ್ನು ಅರಿಯದಷ್ಟು ಹುಂಬರೇ ಟಿಪ್ಪು ಸುಲ್ತಾನ್…?

ಟಿಪ್ಪು ಸುಲ್ತಾನರ ಮೇಲೆ ಚಿದಾನಂದಮೂರ್ತಿಯಾದಿಯಾಗಿ ಕೆಲವು ಮರಿ ಸಂಶೋಧಕರು 7,900 ದೇವಸ್ಥಾನಗಳ ಧ್ವಂಸದ ಆರೋಪವನ್ನು ಹೊರಿಸುತ್ತಾ ಬಂದಿದ್ದಾರೆ. ಸುಮ್ಮನೆ ಒಂದು ಸರಳ ತರ್ಕ ನೋಡೋಣ. ಟಿಪ್ಪುವಿನ ಒಟ್ಟು ಆಡಳಿತಾವಧಿ 17 ವರ್ಷಗಳು. ಅಂದರೆ 365×17= 6205 ದಿನಗಳು. ದಿನಕ್ಕೊಂದು ದೇವಸ್ಥಾನ ಧ್ವಂಸಗೈದರೂ‌ 6205 ದೇವಸ್ಥಾನಗಳಾಗುತ್ತವೆ. ಹಾಗಾದರೆ ಉಳಿದ 1695 ದೇವಾಲಯಗಳನ್ನು ಯಾರು ನಾಶಪಡಿಸಿದರು..? ಟಿಪ್ಪುವಿಗೆ ದೇವಾಲಯ ನಾಶಪಡಿಸುವುದೊಂದೇ ಕೆಲಸವಿದ್ದುದೇ..? ಬೇರೇನೂ ಕೆಲಸವೇ ಇರಲಿಲ್ಲವೇ..? ಟಿಪ್ಪು ಬ್ರಿಟಿಷರ ವಿರುದ್ಧ ನಾಲ್ಕು ಯುದ್ಧ ಮಾಡಿದ್ದು., ಮರಾಠಾ, ನಿಝಾಮ ಮುಂತಾದವರೊಂದಿಗೆ ಯುದ್ಧ,ದಂಗೆ ಎದ್ದ ರಾಜದ್ರೋಹಿಗಳನ್ನು ನಿಯಂತ್ರಣಕ್ಕೆ ತಂದದ್ದು, ಅಸಂಖ್ಯ ಅಭಿವೃದ್ದಿ, ಜನಕಲ್ಯಾಣ , ಕೈಗಾರಿಕೆ, ಕೃಷಿ ಯೋಜನೆ ಇತ್ಯಾದಿಗಳನ್ನು ಮಾಡಿದ್ದು, ಕುಟುಂಬದೊಂದಿಗೆ ಕಳೆದಿದ್ದು, ಆಡಳಿತ ನಡೆಸಿದ್ದೆಲ್ಲಾ ಯಾವಾಗ..? ಬಲ್ಲವರು ತಿಳಿಸುವರೇ…?

  • ಇಸ್ಮತ್ ಪಜೀರ್

ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...