Homeಮುಖಪುಟಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಮನಸಾರೆ ಒಪ್ಪಿಕೊಳ್ಳದಿದ್ದರೆ ಆತ ಮುಸ್ಲಿಂ ಆಗಲು ಸಾಧ್ಯವೇ ಇಲ್ಲ ಎಂಬ ವಿಚಾರ ಇಸ್ಲಾಮಿನ ಬಗ್ಗೆ ಪ್ರಾಥಮಿಕ ಜ್ಞಾನವಿರುವರಿಗೆ ನಿಲುಕುವ ಸರಳ ತರ್ಕ. ಇದು ಟಿಪ್ಪು ಸುಲ್ತಾನ್‌ಗೆ ತಿಳಿದಿರಲಿಲ್ಲವೇ?

- Advertisement -
- Advertisement -

ಟಿಪ್ಪು ಸುಲ್ತಾನರ ಮೇಲೆ ಬಲವಂತದ ಮತಾಂತರದ ಆರೋಪ ಇಂದು ನಿನ್ನೆಯದಲ್ಲ. ಅಂತೆಯೇ ಅದನ್ನು ನಿರಾಕರಿಸುವ ಎಡಪಂಥೀಯ ಒಲವಿನ ಮತ್ತು ಯಾವುದೇ ಪಂಥಗಳ ಸಂಕೋಲೆಯೊಳಗೆ ಬಂಧಿಯಾಗದ ಇತಿಹಾಸಕಾರರ ಪ್ರತಿಪಾದನೆಯೂ ಇಂದು ನಿನ್ನೆಯದಲ್ಲ. ವಸಾಹತುಶಾಹಿ ಪರ ಇತಿಹಾಸಕಾರರ ಸುಳ್ಳಾರೋಪಗಳಿಗೆ ಅವರದ್ದೇ ವಸಾಹತು ಪ್ರಭುಗಳ ಜನಗಣತಿಯ ಆಧಾರಗಳನ್ನನ್ನುಸರಿಸಿ ಹಲವು ಇತಿಹಾಸಕಾರರು ದಾಖಲೆಗಳನ್ನು ನೀಡಿದ್ದಾರೆ. ಅವುಗಳೆಲ್ಲವೂ ಜನಸಾಮಾನ್ಯರ ಆಲೋಚನೆಗಳಿಗೆ ಸರಳವಾಗಿ ನಿಲುಕುವಂತಹವುಗಳು. ಅಲ್ಲೆಲ್ಲೂ ಇತಿಹಾಸ ಮಂಡನೆಯ ನಿರ್ದಿಷ್ಟ ಸಿದ್ಧಾಂತದ ಭಾರವೂ ಇಲ್ಲ. ಅವುಗಳ ಮೇಲೊಂದು ಪಕ್ಷಿ ನೋಟ ಬೀರುವ ಪ್ರಯತ್ನ ಮಾಡುತ್ತೇನೆ.

ಮಾರ್ಕ್ ವಿಲ್ಕ್ಸ್ ಎಂಬ ವಸಾಹತುಶಾಹಿಗಳ ಇತಿಹಾಸಕಾರ ತನ್ನ “Sketches of South Indian history” ಎಂಬ ಗ್ರಂಥದಲ್ಲಿ ‘ಟಿಪ್ಪು ಸುಲ್ತಾನ್ ಕೊಡಗಿನಲ್ಲಿ 70,000 ಹಿಂದೂಗಳನ್ನು ಇಸ್ಲಾಮಿಗೆ ಮತಾಂತರಿಸಿದ” ಎಂದು ಆಪಾದಿಸಿದ್ದಾನೆ. ಬಿ.ಎಲ್.ರೈಸ್ ಎಂಬ ಇನ್ನೋರ್ವ ವಸಾಹತುಶಾಹಿ ಪರ ಇತಿಹಾಸಕಾರ Mysore Gazzetiar ಒಂದರಲ್ಲಿ ಟಿಪ್ಪು ಸುಲ್ತಾನ್ ಕೊಡಗಿನಲ್ಲಿ‌85,000 ಜನರನ್ನು ಇಸ್ಲಾಂಗೆ ಮತಾಂತರಿಸಿದ” ಎಂದು ಆರೋಪಿಸಿದ್ದಾನೆ. ಇಲ್ಲೇ ಒಂದು ವ್ಯತ್ಯಾಸ ಗಮನಿಸಿ. ಇವರೀರ್ವರು ನೀಡುವ ಸಂಖ್ಯೆಗಳಲ್ಲಿ ‌15,000ದಷ್ಟು ಬೃಹತ್ ಅಂತರವಿದೆ. ಟಿಪ್ಪು ಹುತಾತ್ಮರಾಗಿದ್ದು 1799ರಲ್ಲಿ. 1836ರಲ್ಲಿ ಅಂದರೆ ಟಿಪ್ಪು ಹುತಾತ್ಮರಾಗಿ 37ವರ್ಷಗಳ ಬಳಿಕ ಬ್ರಿಟಿಷ್ ವಸಾಹತುಶಾಹಿ ಪ್ರಭುಗಳೇ ನಡೆಸಿದ ಜನಗಣತಿಯ ಪ್ರಕಾರ ಕೊಡಗಿನ ಒಟ್ಟು ಜನಸಂಖ್ಯೆ 65,437 ಮಾತ್ರ. 37‌ ವರ್ಷಗಳ ಹಿಂದೆ ಸಹಜವಾಗಿಯೇ ಜನಸಂಖ್ಯೆ ಕಡಿಮೆಯಿರುತ್ತದೆಯೇ ಹೊರತು ಹೆಚ್ಚಿರುವುದಿಲ್ಲ. ಇರುವ ಒಟ್ಟು ಜನಸಂಖ್ಯೆಗಿಂತ ಹೆಚ್ಚು ಜನರನ್ನು ಹೇಗೆ ಮತಾಂತರಿಸಲು ಸಾಧ್ಯ..? ವಾದಕ್ಕೆ ಅಷ್ಟೂ ಸಂಖ್ಯೆಯ ಜನರನ್ನು ಟಿಪ್ಪು ಮತಾಂತರಿಸಿದ್ದರೆಂದೇ ಇಟ್ಟುಕೊಳ್ಳೋಣ. ಟಿಪ್ಪುವಿನ ಆಡಳಿತ 1799 ಮೇ ನಾಲ್ಕರಂದು ಟಿಪ್ಪು ಹುತಾತ್ಮರಾಗುವುದರೊಂದಿಗೆ ಮುಗಿಯುತ್ತದೆ. ಬಲಾತ್ಕಾರದಿಂದ ಮತಾಂತರಕ್ಕೊಳಪಟ್ಟವರು ಆ ಬಳಿಕ ಅಂದರೆ ಓರ್ವ ಹಿಂದೂ ಅರಸನ ಕಾಲದಲ್ಲಿ ಮರು ಮತಾಂತರವಾಗಬಹುದಿತ್ತಲ್ವಾ..? ಹಾಗೆ ಸಾಮೂಹಿಕವಾಗಿ ಮರು ಮತಾಂತರಗೊಂಡ ಏಕೈಕ ನಿದರ್ಶನವನ್ನಾದರೂ ಇಂದು ಟಿಪ್ಪುವಿನ ಮೇಲೆ ಮತಾಂತರದ ಆರೋಪ ಹೊರಿಸುವವರು ತೋರಿಸಲಿ.

ಇನ್ನು ಮಂಗಳೂರು ಕ್ರೈಸ್ತರ ಮತಾಂತರದ ಕುರಿತಂತೆ ನೋಡೋಣ. ಫಾದರ್ ಮಿರಾಂಡ ಎಂಬವರು “ಟಿಪ್ಪು 60,000 ಕ್ರೈಸ್ತರನ್ನು ಬಲವಂತವಾಗಿ ಇಸ್ಲಾಮಿಗೆ ಮತಾಂತರಿಸಿದ” ಎಂದು ಆಪಾದಿಸುತ್ತಾರೆ. ಇನ್ನೊಂದೆಡೆ ಆತ ಹೀಗೆ ಆಪಾದಿಸುತ್ತಾರೆ. “ಟಿಪ್ಪು 40,000 ಕ್ರೈಸ್ತರನ್ನು ಮಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಮತಾಂತರಿಸಿದ್ದಾನೆ. ಅವರಲ್ಲಿ 15,000 ಕ್ರೈಸ್ತರು ಮಂಗಳೂರಿಗೆ ವಾಪಾಸು ಬಂದಿದ್ದಾರೆ.”
1894 ರಲ್ಲಿ ಬ್ರಿಟಿಷ್ ವಸಾಹತುಶಾಹಿಗಳೇ ರಚಿಸಿದ Madras Manual ಎಂಬ ಗ್ರಂಥದ South Canada gazattier ಎಂಬ ಉಪಶೀರ್ಷಿಕೆಯಡಿ 1890ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಜನಸಂಖ್ಯೆ 70,000 ಎಂದು ದಾಖಲಿಸಲಾಗಿದೆ. ಹಾಗಿದ್ದರೆ ಸುಮಾರು ನೂರು ವರ್ಷಗಳ ಹಿಂದೆ ಮಂಗಳೂರಿನ ಒಟ್ಟು ಜನಸಂಖ್ಯೆ ಎಷ್ಟಿದ್ದಿರಬಹುದು..? ಅದರಲ್ಲಿ ಕ್ರೈಸ್ತರು ಎಷ್ಟಿದ್ದಿರಬಹುದು ಎಂದು ಊಹಿಸಿ ನೋಡಿ. ಟಿಪ್ಪುವಿನ ಕಾಲಾನಂತರ ಮಂಗಳೂರಿನಲ್ಲೂ ಕೂಡಾ ಕ್ರೈಸ್ತ ಧರ್ಮಕ್ಕೆ ಮರು ಮತಾಂತರಗೊಂಡ ಏಕೈಕ ನಿದರ್ಶನವಿಲ್ಲ.

ಇನ್ನೊಂದು ಸರಳ ತರ್ಕ ನೋಡೋಣ. ಓರ್ವ ಮುಸ್ಲಿಮೇತರ ಇಸ್ಲಾಮ್‌ಗೆ ಮತಾಂತರವಾಗಬೇಕೆಂದರೆ ಆತ ವಾಚಾ ಮತ್ತು ಮನಸಾ “ಅಶ್‌ಹದು ಅಲ್ಲಾಇ‌ಲಾಹ ಇಲ್ಲಲ್ಲಾಹ್,ವ‌ಅಶ್‌ಹದು ಅನ್ನ ಮುಹಮ್ಮದರ್ರಸೂಲುಲ್ಲಾಹ್” (ಅಲ್ಲಾಹನಲ್ಲದೇ ಅನ್ಯ ಆರಾಧ್ಯರಿಲ್ಲ, ಮುಹಮ್ಮದ್ (ಸ)ರು ಅಲ್ಲಾಹನ ಸಂದೇಶವಾಹಕರು) ಎಂದು ಮನಸಾರೆ ಒಪ್ಪಿ ಪ್ರತಿಜ್ಞೆ‌ಗೈಯಬೇಕು. ಒಬ್ಬ ವ್ಯಕ್ತಿ ಜೀವಭಯದಿಂದ ಬಾಯಲ್ಲಿ ಉಚ್ಚರಿಸಬಹುದೇ ಹೊರತು ಮನಸಾರೆ ಒಪ್ಪಿಕೊಳ್ಳಲಾರ. ಮನಸಾರೆ ಒಪ್ಪಿಕೊಳ್ಳದಿದ್ದರೆ ಆತ ಮುಸ್ಲಿಂ ಆಗಲು ಸಾಧ್ಯವೇ ಇಲ್ಲ ಎಂಬ ವಿಚಾರ ಇಸ್ಲಾಮಿನ ಬಗ್ಗೆ ಪ್ರಾಥಮಿಕ ಜ್ಞಾನವಿರುವರಿಗೆ ನಿಲುಕುವ ಸರಳ ತರ್ಕ. ಇಂತಹ ಸರಳ ತರ್ಕವನ್ನು ಅರಿಯದಷ್ಟು ಹುಂಬರೇ ಟಿಪ್ಪು ಸುಲ್ತಾನ್…?

ಟಿಪ್ಪು ಸುಲ್ತಾನರ ಮೇಲೆ ಚಿದಾನಂದಮೂರ್ತಿಯಾದಿಯಾಗಿ ಕೆಲವು ಮರಿ ಸಂಶೋಧಕರು 7,900 ದೇವಸ್ಥಾನಗಳ ಧ್ವಂಸದ ಆರೋಪವನ್ನು ಹೊರಿಸುತ್ತಾ ಬಂದಿದ್ದಾರೆ. ಸುಮ್ಮನೆ ಒಂದು ಸರಳ ತರ್ಕ ನೋಡೋಣ. ಟಿಪ್ಪುವಿನ ಒಟ್ಟು ಆಡಳಿತಾವಧಿ 17 ವರ್ಷಗಳು. ಅಂದರೆ 365×17= 6205 ದಿನಗಳು. ದಿನಕ್ಕೊಂದು ದೇವಸ್ಥಾನ ಧ್ವಂಸಗೈದರೂ‌ 6205 ದೇವಸ್ಥಾನಗಳಾಗುತ್ತವೆ. ಹಾಗಾದರೆ ಉಳಿದ 1695 ದೇವಾಲಯಗಳನ್ನು ಯಾರು ನಾಶಪಡಿಸಿದರು..? ಟಿಪ್ಪುವಿಗೆ ದೇವಾಲಯ ನಾಶಪಡಿಸುವುದೊಂದೇ ಕೆಲಸವಿದ್ದುದೇ..? ಬೇರೇನೂ ಕೆಲಸವೇ ಇರಲಿಲ್ಲವೇ..? ಟಿಪ್ಪು ಬ್ರಿಟಿಷರ ವಿರುದ್ಧ ನಾಲ್ಕು ಯುದ್ಧ ಮಾಡಿದ್ದು., ಮರಾಠಾ, ನಿಝಾಮ ಮುಂತಾದವರೊಂದಿಗೆ ಯುದ್ಧ,ದಂಗೆ ಎದ್ದ ರಾಜದ್ರೋಹಿಗಳನ್ನು ನಿಯಂತ್ರಣಕ್ಕೆ ತಂದದ್ದು, ಅಸಂಖ್ಯ ಅಭಿವೃದ್ದಿ, ಜನಕಲ್ಯಾಣ , ಕೈಗಾರಿಕೆ, ಕೃಷಿ ಯೋಜನೆ ಇತ್ಯಾದಿಗಳನ್ನು ಮಾಡಿದ್ದು, ಕುಟುಂಬದೊಂದಿಗೆ ಕಳೆದಿದ್ದು, ಆಡಳಿತ ನಡೆಸಿದ್ದೆಲ್ಲಾ ಯಾವಾಗ..? ಬಲ್ಲವರು ತಿಳಿಸುವರೇ…?

  • ಇಸ್ಮತ್ ಪಜೀರ್

ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...