Homeಮುಖಪುಟಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಮನಸಾರೆ ಒಪ್ಪಿಕೊಳ್ಳದಿದ್ದರೆ ಆತ ಮುಸ್ಲಿಂ ಆಗಲು ಸಾಧ್ಯವೇ ಇಲ್ಲ ಎಂಬ ವಿಚಾರ ಇಸ್ಲಾಮಿನ ಬಗ್ಗೆ ಪ್ರಾಥಮಿಕ ಜ್ಞಾನವಿರುವರಿಗೆ ನಿಲುಕುವ ಸರಳ ತರ್ಕ. ಇದು ಟಿಪ್ಪು ಸುಲ್ತಾನ್‌ಗೆ ತಿಳಿದಿರಲಿಲ್ಲವೇ?

- Advertisement -
- Advertisement -

ಟಿಪ್ಪು ಸುಲ್ತಾನರ ಮೇಲೆ ಬಲವಂತದ ಮತಾಂತರದ ಆರೋಪ ಇಂದು ನಿನ್ನೆಯದಲ್ಲ. ಅಂತೆಯೇ ಅದನ್ನು ನಿರಾಕರಿಸುವ ಎಡಪಂಥೀಯ ಒಲವಿನ ಮತ್ತು ಯಾವುದೇ ಪಂಥಗಳ ಸಂಕೋಲೆಯೊಳಗೆ ಬಂಧಿಯಾಗದ ಇತಿಹಾಸಕಾರರ ಪ್ರತಿಪಾದನೆಯೂ ಇಂದು ನಿನ್ನೆಯದಲ್ಲ. ವಸಾಹತುಶಾಹಿ ಪರ ಇತಿಹಾಸಕಾರರ ಸುಳ್ಳಾರೋಪಗಳಿಗೆ ಅವರದ್ದೇ ವಸಾಹತು ಪ್ರಭುಗಳ ಜನಗಣತಿಯ ಆಧಾರಗಳನ್ನನ್ನುಸರಿಸಿ ಹಲವು ಇತಿಹಾಸಕಾರರು ದಾಖಲೆಗಳನ್ನು ನೀಡಿದ್ದಾರೆ. ಅವುಗಳೆಲ್ಲವೂ ಜನಸಾಮಾನ್ಯರ ಆಲೋಚನೆಗಳಿಗೆ ಸರಳವಾಗಿ ನಿಲುಕುವಂತಹವುಗಳು. ಅಲ್ಲೆಲ್ಲೂ ಇತಿಹಾಸ ಮಂಡನೆಯ ನಿರ್ದಿಷ್ಟ ಸಿದ್ಧಾಂತದ ಭಾರವೂ ಇಲ್ಲ. ಅವುಗಳ ಮೇಲೊಂದು ಪಕ್ಷಿ ನೋಟ ಬೀರುವ ಪ್ರಯತ್ನ ಮಾಡುತ್ತೇನೆ.

ಮಾರ್ಕ್ ವಿಲ್ಕ್ಸ್ ಎಂಬ ವಸಾಹತುಶಾಹಿಗಳ ಇತಿಹಾಸಕಾರ ತನ್ನ “Sketches of South Indian history” ಎಂಬ ಗ್ರಂಥದಲ್ಲಿ ‘ಟಿಪ್ಪು ಸುಲ್ತಾನ್ ಕೊಡಗಿನಲ್ಲಿ 70,000 ಹಿಂದೂಗಳನ್ನು ಇಸ್ಲಾಮಿಗೆ ಮತಾಂತರಿಸಿದ” ಎಂದು ಆಪಾದಿಸಿದ್ದಾನೆ. ಬಿ.ಎಲ್.ರೈಸ್ ಎಂಬ ಇನ್ನೋರ್ವ ವಸಾಹತುಶಾಹಿ ಪರ ಇತಿಹಾಸಕಾರ Mysore Gazzetiar ಒಂದರಲ್ಲಿ ಟಿಪ್ಪು ಸುಲ್ತಾನ್ ಕೊಡಗಿನಲ್ಲಿ‌85,000 ಜನರನ್ನು ಇಸ್ಲಾಂಗೆ ಮತಾಂತರಿಸಿದ” ಎಂದು ಆರೋಪಿಸಿದ್ದಾನೆ. ಇಲ್ಲೇ ಒಂದು ವ್ಯತ್ಯಾಸ ಗಮನಿಸಿ. ಇವರೀರ್ವರು ನೀಡುವ ಸಂಖ್ಯೆಗಳಲ್ಲಿ ‌15,000ದಷ್ಟು ಬೃಹತ್ ಅಂತರವಿದೆ. ಟಿಪ್ಪು ಹುತಾತ್ಮರಾಗಿದ್ದು 1799ರಲ್ಲಿ. 1836ರಲ್ಲಿ ಅಂದರೆ ಟಿಪ್ಪು ಹುತಾತ್ಮರಾಗಿ 37ವರ್ಷಗಳ ಬಳಿಕ ಬ್ರಿಟಿಷ್ ವಸಾಹತುಶಾಹಿ ಪ್ರಭುಗಳೇ ನಡೆಸಿದ ಜನಗಣತಿಯ ಪ್ರಕಾರ ಕೊಡಗಿನ ಒಟ್ಟು ಜನಸಂಖ್ಯೆ 65,437 ಮಾತ್ರ. 37‌ ವರ್ಷಗಳ ಹಿಂದೆ ಸಹಜವಾಗಿಯೇ ಜನಸಂಖ್ಯೆ ಕಡಿಮೆಯಿರುತ್ತದೆಯೇ ಹೊರತು ಹೆಚ್ಚಿರುವುದಿಲ್ಲ. ಇರುವ ಒಟ್ಟು ಜನಸಂಖ್ಯೆಗಿಂತ ಹೆಚ್ಚು ಜನರನ್ನು ಹೇಗೆ ಮತಾಂತರಿಸಲು ಸಾಧ್ಯ..? ವಾದಕ್ಕೆ ಅಷ್ಟೂ ಸಂಖ್ಯೆಯ ಜನರನ್ನು ಟಿಪ್ಪು ಮತಾಂತರಿಸಿದ್ದರೆಂದೇ ಇಟ್ಟುಕೊಳ್ಳೋಣ. ಟಿಪ್ಪುವಿನ ಆಡಳಿತ 1799 ಮೇ ನಾಲ್ಕರಂದು ಟಿಪ್ಪು ಹುತಾತ್ಮರಾಗುವುದರೊಂದಿಗೆ ಮುಗಿಯುತ್ತದೆ. ಬಲಾತ್ಕಾರದಿಂದ ಮತಾಂತರಕ್ಕೊಳಪಟ್ಟವರು ಆ ಬಳಿಕ ಅಂದರೆ ಓರ್ವ ಹಿಂದೂ ಅರಸನ ಕಾಲದಲ್ಲಿ ಮರು ಮತಾಂತರವಾಗಬಹುದಿತ್ತಲ್ವಾ..? ಹಾಗೆ ಸಾಮೂಹಿಕವಾಗಿ ಮರು ಮತಾಂತರಗೊಂಡ ಏಕೈಕ ನಿದರ್ಶನವನ್ನಾದರೂ ಇಂದು ಟಿಪ್ಪುವಿನ ಮೇಲೆ ಮತಾಂತರದ ಆರೋಪ ಹೊರಿಸುವವರು ತೋರಿಸಲಿ.

ಇನ್ನು ಮಂಗಳೂರು ಕ್ರೈಸ್ತರ ಮತಾಂತರದ ಕುರಿತಂತೆ ನೋಡೋಣ. ಫಾದರ್ ಮಿರಾಂಡ ಎಂಬವರು “ಟಿಪ್ಪು 60,000 ಕ್ರೈಸ್ತರನ್ನು ಬಲವಂತವಾಗಿ ಇಸ್ಲಾಮಿಗೆ ಮತಾಂತರಿಸಿದ” ಎಂದು ಆಪಾದಿಸುತ್ತಾರೆ. ಇನ್ನೊಂದೆಡೆ ಆತ ಹೀಗೆ ಆಪಾದಿಸುತ್ತಾರೆ. “ಟಿಪ್ಪು 40,000 ಕ್ರೈಸ್ತರನ್ನು ಮಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಮತಾಂತರಿಸಿದ್ದಾನೆ. ಅವರಲ್ಲಿ 15,000 ಕ್ರೈಸ್ತರು ಮಂಗಳೂರಿಗೆ ವಾಪಾಸು ಬಂದಿದ್ದಾರೆ.”
1894 ರಲ್ಲಿ ಬ್ರಿಟಿಷ್ ವಸಾಹತುಶಾಹಿಗಳೇ ರಚಿಸಿದ Madras Manual ಎಂಬ ಗ್ರಂಥದ South Canada gazattier ಎಂಬ ಉಪಶೀರ್ಷಿಕೆಯಡಿ 1890ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಜನಸಂಖ್ಯೆ 70,000 ಎಂದು ದಾಖಲಿಸಲಾಗಿದೆ. ಹಾಗಿದ್ದರೆ ಸುಮಾರು ನೂರು ವರ್ಷಗಳ ಹಿಂದೆ ಮಂಗಳೂರಿನ ಒಟ್ಟು ಜನಸಂಖ್ಯೆ ಎಷ್ಟಿದ್ದಿರಬಹುದು..? ಅದರಲ್ಲಿ ಕ್ರೈಸ್ತರು ಎಷ್ಟಿದ್ದಿರಬಹುದು ಎಂದು ಊಹಿಸಿ ನೋಡಿ. ಟಿಪ್ಪುವಿನ ಕಾಲಾನಂತರ ಮಂಗಳೂರಿನಲ್ಲೂ ಕೂಡಾ ಕ್ರೈಸ್ತ ಧರ್ಮಕ್ಕೆ ಮರು ಮತಾಂತರಗೊಂಡ ಏಕೈಕ ನಿದರ್ಶನವಿಲ್ಲ.

ಇನ್ನೊಂದು ಸರಳ ತರ್ಕ ನೋಡೋಣ. ಓರ್ವ ಮುಸ್ಲಿಮೇತರ ಇಸ್ಲಾಮ್‌ಗೆ ಮತಾಂತರವಾಗಬೇಕೆಂದರೆ ಆತ ವಾಚಾ ಮತ್ತು ಮನಸಾ “ಅಶ್‌ಹದು ಅಲ್ಲಾಇ‌ಲಾಹ ಇಲ್ಲಲ್ಲಾಹ್,ವ‌ಅಶ್‌ಹದು ಅನ್ನ ಮುಹಮ್ಮದರ್ರಸೂಲುಲ್ಲಾಹ್” (ಅಲ್ಲಾಹನಲ್ಲದೇ ಅನ್ಯ ಆರಾಧ್ಯರಿಲ್ಲ, ಮುಹಮ್ಮದ್ (ಸ)ರು ಅಲ್ಲಾಹನ ಸಂದೇಶವಾಹಕರು) ಎಂದು ಮನಸಾರೆ ಒಪ್ಪಿ ಪ್ರತಿಜ್ಞೆ‌ಗೈಯಬೇಕು. ಒಬ್ಬ ವ್ಯಕ್ತಿ ಜೀವಭಯದಿಂದ ಬಾಯಲ್ಲಿ ಉಚ್ಚರಿಸಬಹುದೇ ಹೊರತು ಮನಸಾರೆ ಒಪ್ಪಿಕೊಳ್ಳಲಾರ. ಮನಸಾರೆ ಒಪ್ಪಿಕೊಳ್ಳದಿದ್ದರೆ ಆತ ಮುಸ್ಲಿಂ ಆಗಲು ಸಾಧ್ಯವೇ ಇಲ್ಲ ಎಂಬ ವಿಚಾರ ಇಸ್ಲಾಮಿನ ಬಗ್ಗೆ ಪ್ರಾಥಮಿಕ ಜ್ಞಾನವಿರುವರಿಗೆ ನಿಲುಕುವ ಸರಳ ತರ್ಕ. ಇಂತಹ ಸರಳ ತರ್ಕವನ್ನು ಅರಿಯದಷ್ಟು ಹುಂಬರೇ ಟಿಪ್ಪು ಸುಲ್ತಾನ್…?

ಟಿಪ್ಪು ಸುಲ್ತಾನರ ಮೇಲೆ ಚಿದಾನಂದಮೂರ್ತಿಯಾದಿಯಾಗಿ ಕೆಲವು ಮರಿ ಸಂಶೋಧಕರು 7,900 ದೇವಸ್ಥಾನಗಳ ಧ್ವಂಸದ ಆರೋಪವನ್ನು ಹೊರಿಸುತ್ತಾ ಬಂದಿದ್ದಾರೆ. ಸುಮ್ಮನೆ ಒಂದು ಸರಳ ತರ್ಕ ನೋಡೋಣ. ಟಿಪ್ಪುವಿನ ಒಟ್ಟು ಆಡಳಿತಾವಧಿ 17 ವರ್ಷಗಳು. ಅಂದರೆ 365×17= 6205 ದಿನಗಳು. ದಿನಕ್ಕೊಂದು ದೇವಸ್ಥಾನ ಧ್ವಂಸಗೈದರೂ‌ 6205 ದೇವಸ್ಥಾನಗಳಾಗುತ್ತವೆ. ಹಾಗಾದರೆ ಉಳಿದ 1695 ದೇವಾಲಯಗಳನ್ನು ಯಾರು ನಾಶಪಡಿಸಿದರು..? ಟಿಪ್ಪುವಿಗೆ ದೇವಾಲಯ ನಾಶಪಡಿಸುವುದೊಂದೇ ಕೆಲಸವಿದ್ದುದೇ..? ಬೇರೇನೂ ಕೆಲಸವೇ ಇರಲಿಲ್ಲವೇ..? ಟಿಪ್ಪು ಬ್ರಿಟಿಷರ ವಿರುದ್ಧ ನಾಲ್ಕು ಯುದ್ಧ ಮಾಡಿದ್ದು., ಮರಾಠಾ, ನಿಝಾಮ ಮುಂತಾದವರೊಂದಿಗೆ ಯುದ್ಧ,ದಂಗೆ ಎದ್ದ ರಾಜದ್ರೋಹಿಗಳನ್ನು ನಿಯಂತ್ರಣಕ್ಕೆ ತಂದದ್ದು, ಅಸಂಖ್ಯ ಅಭಿವೃದ್ದಿ, ಜನಕಲ್ಯಾಣ , ಕೈಗಾರಿಕೆ, ಕೃಷಿ ಯೋಜನೆ ಇತ್ಯಾದಿಗಳನ್ನು ಮಾಡಿದ್ದು, ಕುಟುಂಬದೊಂದಿಗೆ ಕಳೆದಿದ್ದು, ಆಡಳಿತ ನಡೆಸಿದ್ದೆಲ್ಲಾ ಯಾವಾಗ..? ಬಲ್ಲವರು ತಿಳಿಸುವರೇ…?

  • ಇಸ್ಮತ್ ಪಜೀರ್

ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...