Homeಮುಖಪುಟಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಮನಸಾರೆ ಒಪ್ಪಿಕೊಳ್ಳದಿದ್ದರೆ ಆತ ಮುಸ್ಲಿಂ ಆಗಲು ಸಾಧ್ಯವೇ ಇಲ್ಲ ಎಂಬ ವಿಚಾರ ಇಸ್ಲಾಮಿನ ಬಗ್ಗೆ ಪ್ರಾಥಮಿಕ ಜ್ಞಾನವಿರುವರಿಗೆ ನಿಲುಕುವ ಸರಳ ತರ್ಕ. ಇದು ಟಿಪ್ಪು ಸುಲ್ತಾನ್‌ಗೆ ತಿಳಿದಿರಲಿಲ್ಲವೇ?

- Advertisement -
- Advertisement -

ಟಿಪ್ಪು ಸುಲ್ತಾನರ ಮೇಲೆ ಬಲವಂತದ ಮತಾಂತರದ ಆರೋಪ ಇಂದು ನಿನ್ನೆಯದಲ್ಲ. ಅಂತೆಯೇ ಅದನ್ನು ನಿರಾಕರಿಸುವ ಎಡಪಂಥೀಯ ಒಲವಿನ ಮತ್ತು ಯಾವುದೇ ಪಂಥಗಳ ಸಂಕೋಲೆಯೊಳಗೆ ಬಂಧಿಯಾಗದ ಇತಿಹಾಸಕಾರರ ಪ್ರತಿಪಾದನೆಯೂ ಇಂದು ನಿನ್ನೆಯದಲ್ಲ. ವಸಾಹತುಶಾಹಿ ಪರ ಇತಿಹಾಸಕಾರರ ಸುಳ್ಳಾರೋಪಗಳಿಗೆ ಅವರದ್ದೇ ವಸಾಹತು ಪ್ರಭುಗಳ ಜನಗಣತಿಯ ಆಧಾರಗಳನ್ನನ್ನುಸರಿಸಿ ಹಲವು ಇತಿಹಾಸಕಾರರು ದಾಖಲೆಗಳನ್ನು ನೀಡಿದ್ದಾರೆ. ಅವುಗಳೆಲ್ಲವೂ ಜನಸಾಮಾನ್ಯರ ಆಲೋಚನೆಗಳಿಗೆ ಸರಳವಾಗಿ ನಿಲುಕುವಂತಹವುಗಳು. ಅಲ್ಲೆಲ್ಲೂ ಇತಿಹಾಸ ಮಂಡನೆಯ ನಿರ್ದಿಷ್ಟ ಸಿದ್ಧಾಂತದ ಭಾರವೂ ಇಲ್ಲ. ಅವುಗಳ ಮೇಲೊಂದು ಪಕ್ಷಿ ನೋಟ ಬೀರುವ ಪ್ರಯತ್ನ ಮಾಡುತ್ತೇನೆ.

ಮಾರ್ಕ್ ವಿಲ್ಕ್ಸ್ ಎಂಬ ವಸಾಹತುಶಾಹಿಗಳ ಇತಿಹಾಸಕಾರ ತನ್ನ “Sketches of South Indian history” ಎಂಬ ಗ್ರಂಥದಲ್ಲಿ ‘ಟಿಪ್ಪು ಸುಲ್ತಾನ್ ಕೊಡಗಿನಲ್ಲಿ 70,000 ಹಿಂದೂಗಳನ್ನು ಇಸ್ಲಾಮಿಗೆ ಮತಾಂತರಿಸಿದ” ಎಂದು ಆಪಾದಿಸಿದ್ದಾನೆ. ಬಿ.ಎಲ್.ರೈಸ್ ಎಂಬ ಇನ್ನೋರ್ವ ವಸಾಹತುಶಾಹಿ ಪರ ಇತಿಹಾಸಕಾರ Mysore Gazzetiar ಒಂದರಲ್ಲಿ ಟಿಪ್ಪು ಸುಲ್ತಾನ್ ಕೊಡಗಿನಲ್ಲಿ‌85,000 ಜನರನ್ನು ಇಸ್ಲಾಂಗೆ ಮತಾಂತರಿಸಿದ” ಎಂದು ಆರೋಪಿಸಿದ್ದಾನೆ. ಇಲ್ಲೇ ಒಂದು ವ್ಯತ್ಯಾಸ ಗಮನಿಸಿ. ಇವರೀರ್ವರು ನೀಡುವ ಸಂಖ್ಯೆಗಳಲ್ಲಿ ‌15,000ದಷ್ಟು ಬೃಹತ್ ಅಂತರವಿದೆ. ಟಿಪ್ಪು ಹುತಾತ್ಮರಾಗಿದ್ದು 1799ರಲ್ಲಿ. 1836ರಲ್ಲಿ ಅಂದರೆ ಟಿಪ್ಪು ಹುತಾತ್ಮರಾಗಿ 37ವರ್ಷಗಳ ಬಳಿಕ ಬ್ರಿಟಿಷ್ ವಸಾಹತುಶಾಹಿ ಪ್ರಭುಗಳೇ ನಡೆಸಿದ ಜನಗಣತಿಯ ಪ್ರಕಾರ ಕೊಡಗಿನ ಒಟ್ಟು ಜನಸಂಖ್ಯೆ 65,437 ಮಾತ್ರ. 37‌ ವರ್ಷಗಳ ಹಿಂದೆ ಸಹಜವಾಗಿಯೇ ಜನಸಂಖ್ಯೆ ಕಡಿಮೆಯಿರುತ್ತದೆಯೇ ಹೊರತು ಹೆಚ್ಚಿರುವುದಿಲ್ಲ. ಇರುವ ಒಟ್ಟು ಜನಸಂಖ್ಯೆಗಿಂತ ಹೆಚ್ಚು ಜನರನ್ನು ಹೇಗೆ ಮತಾಂತರಿಸಲು ಸಾಧ್ಯ..? ವಾದಕ್ಕೆ ಅಷ್ಟೂ ಸಂಖ್ಯೆಯ ಜನರನ್ನು ಟಿಪ್ಪು ಮತಾಂತರಿಸಿದ್ದರೆಂದೇ ಇಟ್ಟುಕೊಳ್ಳೋಣ. ಟಿಪ್ಪುವಿನ ಆಡಳಿತ 1799 ಮೇ ನಾಲ್ಕರಂದು ಟಿಪ್ಪು ಹುತಾತ್ಮರಾಗುವುದರೊಂದಿಗೆ ಮುಗಿಯುತ್ತದೆ. ಬಲಾತ್ಕಾರದಿಂದ ಮತಾಂತರಕ್ಕೊಳಪಟ್ಟವರು ಆ ಬಳಿಕ ಅಂದರೆ ಓರ್ವ ಹಿಂದೂ ಅರಸನ ಕಾಲದಲ್ಲಿ ಮರು ಮತಾಂತರವಾಗಬಹುದಿತ್ತಲ್ವಾ..? ಹಾಗೆ ಸಾಮೂಹಿಕವಾಗಿ ಮರು ಮತಾಂತರಗೊಂಡ ಏಕೈಕ ನಿದರ್ಶನವನ್ನಾದರೂ ಇಂದು ಟಿಪ್ಪುವಿನ ಮೇಲೆ ಮತಾಂತರದ ಆರೋಪ ಹೊರಿಸುವವರು ತೋರಿಸಲಿ.

ಇನ್ನು ಮಂಗಳೂರು ಕ್ರೈಸ್ತರ ಮತಾಂತರದ ಕುರಿತಂತೆ ನೋಡೋಣ. ಫಾದರ್ ಮಿರಾಂಡ ಎಂಬವರು “ಟಿಪ್ಪು 60,000 ಕ್ರೈಸ್ತರನ್ನು ಬಲವಂತವಾಗಿ ಇಸ್ಲಾಮಿಗೆ ಮತಾಂತರಿಸಿದ” ಎಂದು ಆಪಾದಿಸುತ್ತಾರೆ. ಇನ್ನೊಂದೆಡೆ ಆತ ಹೀಗೆ ಆಪಾದಿಸುತ್ತಾರೆ. “ಟಿಪ್ಪು 40,000 ಕ್ರೈಸ್ತರನ್ನು ಮಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಮತಾಂತರಿಸಿದ್ದಾನೆ. ಅವರಲ್ಲಿ 15,000 ಕ್ರೈಸ್ತರು ಮಂಗಳೂರಿಗೆ ವಾಪಾಸು ಬಂದಿದ್ದಾರೆ.”
1894 ರಲ್ಲಿ ಬ್ರಿಟಿಷ್ ವಸಾಹತುಶಾಹಿಗಳೇ ರಚಿಸಿದ Madras Manual ಎಂಬ ಗ್ರಂಥದ South Canada gazattier ಎಂಬ ಉಪಶೀರ್ಷಿಕೆಯಡಿ 1890ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಜನಸಂಖ್ಯೆ 70,000 ಎಂದು ದಾಖಲಿಸಲಾಗಿದೆ. ಹಾಗಿದ್ದರೆ ಸುಮಾರು ನೂರು ವರ್ಷಗಳ ಹಿಂದೆ ಮಂಗಳೂರಿನ ಒಟ್ಟು ಜನಸಂಖ್ಯೆ ಎಷ್ಟಿದ್ದಿರಬಹುದು..? ಅದರಲ್ಲಿ ಕ್ರೈಸ್ತರು ಎಷ್ಟಿದ್ದಿರಬಹುದು ಎಂದು ಊಹಿಸಿ ನೋಡಿ. ಟಿಪ್ಪುವಿನ ಕಾಲಾನಂತರ ಮಂಗಳೂರಿನಲ್ಲೂ ಕೂಡಾ ಕ್ರೈಸ್ತ ಧರ್ಮಕ್ಕೆ ಮರು ಮತಾಂತರಗೊಂಡ ಏಕೈಕ ನಿದರ್ಶನವಿಲ್ಲ.

ಇನ್ನೊಂದು ಸರಳ ತರ್ಕ ನೋಡೋಣ. ಓರ್ವ ಮುಸ್ಲಿಮೇತರ ಇಸ್ಲಾಮ್‌ಗೆ ಮತಾಂತರವಾಗಬೇಕೆಂದರೆ ಆತ ವಾಚಾ ಮತ್ತು ಮನಸಾ “ಅಶ್‌ಹದು ಅಲ್ಲಾಇ‌ಲಾಹ ಇಲ್ಲಲ್ಲಾಹ್,ವ‌ಅಶ್‌ಹದು ಅನ್ನ ಮುಹಮ್ಮದರ್ರಸೂಲುಲ್ಲಾಹ್” (ಅಲ್ಲಾಹನಲ್ಲದೇ ಅನ್ಯ ಆರಾಧ್ಯರಿಲ್ಲ, ಮುಹಮ್ಮದ್ (ಸ)ರು ಅಲ್ಲಾಹನ ಸಂದೇಶವಾಹಕರು) ಎಂದು ಮನಸಾರೆ ಒಪ್ಪಿ ಪ್ರತಿಜ್ಞೆ‌ಗೈಯಬೇಕು. ಒಬ್ಬ ವ್ಯಕ್ತಿ ಜೀವಭಯದಿಂದ ಬಾಯಲ್ಲಿ ಉಚ್ಚರಿಸಬಹುದೇ ಹೊರತು ಮನಸಾರೆ ಒಪ್ಪಿಕೊಳ್ಳಲಾರ. ಮನಸಾರೆ ಒಪ್ಪಿಕೊಳ್ಳದಿದ್ದರೆ ಆತ ಮುಸ್ಲಿಂ ಆಗಲು ಸಾಧ್ಯವೇ ಇಲ್ಲ ಎಂಬ ವಿಚಾರ ಇಸ್ಲಾಮಿನ ಬಗ್ಗೆ ಪ್ರಾಥಮಿಕ ಜ್ಞಾನವಿರುವರಿಗೆ ನಿಲುಕುವ ಸರಳ ತರ್ಕ. ಇಂತಹ ಸರಳ ತರ್ಕವನ್ನು ಅರಿಯದಷ್ಟು ಹುಂಬರೇ ಟಿಪ್ಪು ಸುಲ್ತಾನ್…?

ಟಿಪ್ಪು ಸುಲ್ತಾನರ ಮೇಲೆ ಚಿದಾನಂದಮೂರ್ತಿಯಾದಿಯಾಗಿ ಕೆಲವು ಮರಿ ಸಂಶೋಧಕರು 7,900 ದೇವಸ್ಥಾನಗಳ ಧ್ವಂಸದ ಆರೋಪವನ್ನು ಹೊರಿಸುತ್ತಾ ಬಂದಿದ್ದಾರೆ. ಸುಮ್ಮನೆ ಒಂದು ಸರಳ ತರ್ಕ ನೋಡೋಣ. ಟಿಪ್ಪುವಿನ ಒಟ್ಟು ಆಡಳಿತಾವಧಿ 17 ವರ್ಷಗಳು. ಅಂದರೆ 365×17= 6205 ದಿನಗಳು. ದಿನಕ್ಕೊಂದು ದೇವಸ್ಥಾನ ಧ್ವಂಸಗೈದರೂ‌ 6205 ದೇವಸ್ಥಾನಗಳಾಗುತ್ತವೆ. ಹಾಗಾದರೆ ಉಳಿದ 1695 ದೇವಾಲಯಗಳನ್ನು ಯಾರು ನಾಶಪಡಿಸಿದರು..? ಟಿಪ್ಪುವಿಗೆ ದೇವಾಲಯ ನಾಶಪಡಿಸುವುದೊಂದೇ ಕೆಲಸವಿದ್ದುದೇ..? ಬೇರೇನೂ ಕೆಲಸವೇ ಇರಲಿಲ್ಲವೇ..? ಟಿಪ್ಪು ಬ್ರಿಟಿಷರ ವಿರುದ್ಧ ನಾಲ್ಕು ಯುದ್ಧ ಮಾಡಿದ್ದು., ಮರಾಠಾ, ನಿಝಾಮ ಮುಂತಾದವರೊಂದಿಗೆ ಯುದ್ಧ,ದಂಗೆ ಎದ್ದ ರಾಜದ್ರೋಹಿಗಳನ್ನು ನಿಯಂತ್ರಣಕ್ಕೆ ತಂದದ್ದು, ಅಸಂಖ್ಯ ಅಭಿವೃದ್ದಿ, ಜನಕಲ್ಯಾಣ , ಕೈಗಾರಿಕೆ, ಕೃಷಿ ಯೋಜನೆ ಇತ್ಯಾದಿಗಳನ್ನು ಮಾಡಿದ್ದು, ಕುಟುಂಬದೊಂದಿಗೆ ಕಳೆದಿದ್ದು, ಆಡಳಿತ ನಡೆಸಿದ್ದೆಲ್ಲಾ ಯಾವಾಗ..? ಬಲ್ಲವರು ತಿಳಿಸುವರೇ…?

  • ಇಸ್ಮತ್ ಪಜೀರ್

ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...