Homeಅಂತರಾಷ್ಟ್ರೀಯಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

- Advertisement -
- Advertisement -

‘ನಾವು ಕಣಿವೆಯಲ್ಲಿನ ವಸ್ತುಸ್ಥಿತಿ ಮತ್ತು ನೈಜ ಸಂಗತಿಗಳನ್ನು ತಿಳಿದುಕೊಳ್ಳಲು ಬಂದಿದ್ದೇವೆಯೇ ಹೊರತು, ಭಾರತದ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಲು ಅಲ್ಲ’ ಎಂದು ಯೂರೋಪಿಯನ್ ಒಕ್ಕೂಟ ನಿಯೋಗ ಸ್ಪಷ್ಟನೆ ನೀಡಿದೆ. 23 ಮಂದಿಯನ್ನೊಳಗೊಂಡ ನಿಯೋಗ ಕಾಶ್ಮೀರ ಭೇಟಿಗೆ ಬಂದಿದೆ. ಯೂರೋಪಿಯನ್ ಒಕ್ಕೂಟ ನಿಯೋಗಕ್ಕೆ ಅನುಮತಿ ನೀಡಿರುವ ಕ್ರಮಕ್ಕೆ ವಿಪಕ್ಷಗಳು ಕೆಂಡಕಾರುತ್ತಿವೆ. ಹೀಗಾಗಿ ಕಾಶ್ಮೀರ ಭೇಟಿಗೆ ಬಂದಿರುವ ನಿಯೋಗ ತಮ್ಮ ನಿಲುವು ಹಾಗೂ ತಮ್ಮ ಉದ್ದೇಶವನ್ನು ಸ್ಪಷ್ಟಪಡಿಸಿದೆ.

ಕಾಶ್ಮೀರದ ಕುಲ್ಗಾಂ ನಲ್ಲಿ 6ಮಂದಿ ಕಾರ್ಮಿಕರನ್ನು ಹತ್ಯೆಗೈದಿರುವ ಕ್ರಮವನ್ನು ನಿಯೋಗ ಖಂಡಿಸಿದೆ. ಅಲ್ಲದೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನಾವು ನಿಮ್ಮ ಸ್ನೇಹಿತರು. ಇಲ್ಲಿನ ಸತ್ಯಾಸತ್ಯತೆ ತಿಳಿದು ವರದಿ ನೀಡಲು ಬಂದಿದ್ದೇವೆ ಎಂದು ಹೇಳಿದೆ. ಸಾರ್ವಜನಿಕರನ್ನು ಭೇಟಿ ಮಾಡಿ, ಶಾಲೆ-ಕಾಲೇಜುಗಳು ಆರಂಭಗೊಳ್ಳುವುದು, ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆ ನಡೆಸುವುದಾಗಿ ತಿಳಿಸಿತು.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಿಯೋಗ, ಭಯೋತ್ಪಾದನೆ ಎನ್ನುವುದು ಫ್ರಾನ್ಸ್, ಯೂರೋಪ್ ನಲ್ಲೂ ಇದೆ. ಕಾಶ್ಮೀರ ಮತ್ತೊಂದು ಅಫ್ಘಾನಿಸ್ತಾನ ಆಗುವುದು ಬೇಡ. ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೇವಲ ಭಾರತದ ಸಮಸ್ಯೆ ಅಲ್ಲ. ಇದು ಅಂತಾರಾಷ್ಟ್ರೀಯ ಸಮುದಾಯದ ಸಮಸ್ಯೆ. ಉಗ್ರರ ವಿರುದ್ಧ ಭಾರತ ತೆಗೆದುಕೊಳ್ಳುವ ಪರಿಹಾರ ಕ್ರಮಗಳಿಗೆ ನಿಯೋಗ ಬೆಂಬಲ ಸೂಚಿಸಲಿದೆ ಎಂದು ಹೇಳಿದರು. ಕಾಶ್ಮೀರದ ಸ್ಥಿತಿ ಉತ್ತಮವಾಗಿದೆ. ಮುಂದಿನ ಬಾರಿ ಇನ್ನಷ್ಟು ನಾಗರಿಕರನ್ನು ಭೇಟಿ ಮಾಡುತ್ತೇವೆ ಎಂದರು.

ಇನ್ನು ಕಾಶ್ಮೀರಕ್ಕೆ ಭೇಟಿ ನೀಡಿರುವ ಯೂರೋಪಿಯನ್ ಒಕ್ಕೂಟ ನಿಯೋಗದ ಕಾರ್ಯಕ್ರಮಗಳು ಲೈವ್ ಅಲ್ಲ. ರೆಕಾರ್ಡ್ ಮಾಡಿರುವ ಕಾರ್ಯಕ್ರಮವನ್ನು ಬಿತ್ತರಿಸಲಾಗುತ್ತಿದೆ. ಕೆಲ ಮಾಧ್ಯಮಗಳಿಗೆ ಮಾತ್ರ ವರದಿಗೆ ಅವಕಾಶ ನೀಡಲಾಗಿದೆ. ಸ್ಥಳೀಯ ಕಾಶ್ಮೀರ ಮಾಧ್ಯಮದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ವರದಿಗೆ ಅವಕಾಶ ನೀಡಿಲ್ಲ ಎಂದು ಖ್ಯಾತ ಪತ್ರಕರ್ತೆ ನಿಧಿ ರಾಜದನ್ ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 5ರಂದು 370 ಆರ್ಟಿಕಲ್ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ. ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ನಂತರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಶಾಲೆ, ಕಾಲೇಜು, ವ್ಯಾಪಾರ-ವಹಿವಾಟು, ಇಂಟರ್ನೆಟ್ ಬಂದ್ ಮಾಡಲಾಗಿತ್ತು. ಮತ್ತು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಬಂಧ ಹೇರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...