Homeಅಂತರಾಷ್ಟ್ರೀಯಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

- Advertisement -
- Advertisement -

‘ನಾವು ಕಣಿವೆಯಲ್ಲಿನ ವಸ್ತುಸ್ಥಿತಿ ಮತ್ತು ನೈಜ ಸಂಗತಿಗಳನ್ನು ತಿಳಿದುಕೊಳ್ಳಲು ಬಂದಿದ್ದೇವೆಯೇ ಹೊರತು, ಭಾರತದ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಲು ಅಲ್ಲ’ ಎಂದು ಯೂರೋಪಿಯನ್ ಒಕ್ಕೂಟ ನಿಯೋಗ ಸ್ಪಷ್ಟನೆ ನೀಡಿದೆ. 23 ಮಂದಿಯನ್ನೊಳಗೊಂಡ ನಿಯೋಗ ಕಾಶ್ಮೀರ ಭೇಟಿಗೆ ಬಂದಿದೆ. ಯೂರೋಪಿಯನ್ ಒಕ್ಕೂಟ ನಿಯೋಗಕ್ಕೆ ಅನುಮತಿ ನೀಡಿರುವ ಕ್ರಮಕ್ಕೆ ವಿಪಕ್ಷಗಳು ಕೆಂಡಕಾರುತ್ತಿವೆ. ಹೀಗಾಗಿ ಕಾಶ್ಮೀರ ಭೇಟಿಗೆ ಬಂದಿರುವ ನಿಯೋಗ ತಮ್ಮ ನಿಲುವು ಹಾಗೂ ತಮ್ಮ ಉದ್ದೇಶವನ್ನು ಸ್ಪಷ್ಟಪಡಿಸಿದೆ.

ಕಾಶ್ಮೀರದ ಕುಲ್ಗಾಂ ನಲ್ಲಿ 6ಮಂದಿ ಕಾರ್ಮಿಕರನ್ನು ಹತ್ಯೆಗೈದಿರುವ ಕ್ರಮವನ್ನು ನಿಯೋಗ ಖಂಡಿಸಿದೆ. ಅಲ್ಲದೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನಾವು ನಿಮ್ಮ ಸ್ನೇಹಿತರು. ಇಲ್ಲಿನ ಸತ್ಯಾಸತ್ಯತೆ ತಿಳಿದು ವರದಿ ನೀಡಲು ಬಂದಿದ್ದೇವೆ ಎಂದು ಹೇಳಿದೆ. ಸಾರ್ವಜನಿಕರನ್ನು ಭೇಟಿ ಮಾಡಿ, ಶಾಲೆ-ಕಾಲೇಜುಗಳು ಆರಂಭಗೊಳ್ಳುವುದು, ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆ ನಡೆಸುವುದಾಗಿ ತಿಳಿಸಿತು.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಿಯೋಗ, ಭಯೋತ್ಪಾದನೆ ಎನ್ನುವುದು ಫ್ರಾನ್ಸ್, ಯೂರೋಪ್ ನಲ್ಲೂ ಇದೆ. ಕಾಶ್ಮೀರ ಮತ್ತೊಂದು ಅಫ್ಘಾನಿಸ್ತಾನ ಆಗುವುದು ಬೇಡ. ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೇವಲ ಭಾರತದ ಸಮಸ್ಯೆ ಅಲ್ಲ. ಇದು ಅಂತಾರಾಷ್ಟ್ರೀಯ ಸಮುದಾಯದ ಸಮಸ್ಯೆ. ಉಗ್ರರ ವಿರುದ್ಧ ಭಾರತ ತೆಗೆದುಕೊಳ್ಳುವ ಪರಿಹಾರ ಕ್ರಮಗಳಿಗೆ ನಿಯೋಗ ಬೆಂಬಲ ಸೂಚಿಸಲಿದೆ ಎಂದು ಹೇಳಿದರು. ಕಾಶ್ಮೀರದ ಸ್ಥಿತಿ ಉತ್ತಮವಾಗಿದೆ. ಮುಂದಿನ ಬಾರಿ ಇನ್ನಷ್ಟು ನಾಗರಿಕರನ್ನು ಭೇಟಿ ಮಾಡುತ್ತೇವೆ ಎಂದರು.

ಇನ್ನು ಕಾಶ್ಮೀರಕ್ಕೆ ಭೇಟಿ ನೀಡಿರುವ ಯೂರೋಪಿಯನ್ ಒಕ್ಕೂಟ ನಿಯೋಗದ ಕಾರ್ಯಕ್ರಮಗಳು ಲೈವ್ ಅಲ್ಲ. ರೆಕಾರ್ಡ್ ಮಾಡಿರುವ ಕಾರ್ಯಕ್ರಮವನ್ನು ಬಿತ್ತರಿಸಲಾಗುತ್ತಿದೆ. ಕೆಲ ಮಾಧ್ಯಮಗಳಿಗೆ ಮಾತ್ರ ವರದಿಗೆ ಅವಕಾಶ ನೀಡಲಾಗಿದೆ. ಸ್ಥಳೀಯ ಕಾಶ್ಮೀರ ಮಾಧ್ಯಮದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ವರದಿಗೆ ಅವಕಾಶ ನೀಡಿಲ್ಲ ಎಂದು ಖ್ಯಾತ ಪತ್ರಕರ್ತೆ ನಿಧಿ ರಾಜದನ್ ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 5ರಂದು 370 ಆರ್ಟಿಕಲ್ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ. ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ನಂತರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಶಾಲೆ, ಕಾಲೇಜು, ವ್ಯಾಪಾರ-ವಹಿವಾಟು, ಇಂಟರ್ನೆಟ್ ಬಂದ್ ಮಾಡಲಾಗಿತ್ತು. ಮತ್ತು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಬಂಧ ಹೇರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...