Homeಅಂತರಾಷ್ಟ್ರೀಯಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

- Advertisement -
- Advertisement -

‘ನಾವು ಕಣಿವೆಯಲ್ಲಿನ ವಸ್ತುಸ್ಥಿತಿ ಮತ್ತು ನೈಜ ಸಂಗತಿಗಳನ್ನು ತಿಳಿದುಕೊಳ್ಳಲು ಬಂದಿದ್ದೇವೆಯೇ ಹೊರತು, ಭಾರತದ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಲು ಅಲ್ಲ’ ಎಂದು ಯೂರೋಪಿಯನ್ ಒಕ್ಕೂಟ ನಿಯೋಗ ಸ್ಪಷ್ಟನೆ ನೀಡಿದೆ. 23 ಮಂದಿಯನ್ನೊಳಗೊಂಡ ನಿಯೋಗ ಕಾಶ್ಮೀರ ಭೇಟಿಗೆ ಬಂದಿದೆ. ಯೂರೋಪಿಯನ್ ಒಕ್ಕೂಟ ನಿಯೋಗಕ್ಕೆ ಅನುಮತಿ ನೀಡಿರುವ ಕ್ರಮಕ್ಕೆ ವಿಪಕ್ಷಗಳು ಕೆಂಡಕಾರುತ್ತಿವೆ. ಹೀಗಾಗಿ ಕಾಶ್ಮೀರ ಭೇಟಿಗೆ ಬಂದಿರುವ ನಿಯೋಗ ತಮ್ಮ ನಿಲುವು ಹಾಗೂ ತಮ್ಮ ಉದ್ದೇಶವನ್ನು ಸ್ಪಷ್ಟಪಡಿಸಿದೆ.

ಕಾಶ್ಮೀರದ ಕುಲ್ಗಾಂ ನಲ್ಲಿ 6ಮಂದಿ ಕಾರ್ಮಿಕರನ್ನು ಹತ್ಯೆಗೈದಿರುವ ಕ್ರಮವನ್ನು ನಿಯೋಗ ಖಂಡಿಸಿದೆ. ಅಲ್ಲದೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನಾವು ನಿಮ್ಮ ಸ್ನೇಹಿತರು. ಇಲ್ಲಿನ ಸತ್ಯಾಸತ್ಯತೆ ತಿಳಿದು ವರದಿ ನೀಡಲು ಬಂದಿದ್ದೇವೆ ಎಂದು ಹೇಳಿದೆ. ಸಾರ್ವಜನಿಕರನ್ನು ಭೇಟಿ ಮಾಡಿ, ಶಾಲೆ-ಕಾಲೇಜುಗಳು ಆರಂಭಗೊಳ್ಳುವುದು, ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆ ನಡೆಸುವುದಾಗಿ ತಿಳಿಸಿತು.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಿಯೋಗ, ಭಯೋತ್ಪಾದನೆ ಎನ್ನುವುದು ಫ್ರಾನ್ಸ್, ಯೂರೋಪ್ ನಲ್ಲೂ ಇದೆ. ಕಾಶ್ಮೀರ ಮತ್ತೊಂದು ಅಫ್ಘಾನಿಸ್ತಾನ ಆಗುವುದು ಬೇಡ. ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೇವಲ ಭಾರತದ ಸಮಸ್ಯೆ ಅಲ್ಲ. ಇದು ಅಂತಾರಾಷ್ಟ್ರೀಯ ಸಮುದಾಯದ ಸಮಸ್ಯೆ. ಉಗ್ರರ ವಿರುದ್ಧ ಭಾರತ ತೆಗೆದುಕೊಳ್ಳುವ ಪರಿಹಾರ ಕ್ರಮಗಳಿಗೆ ನಿಯೋಗ ಬೆಂಬಲ ಸೂಚಿಸಲಿದೆ ಎಂದು ಹೇಳಿದರು. ಕಾಶ್ಮೀರದ ಸ್ಥಿತಿ ಉತ್ತಮವಾಗಿದೆ. ಮುಂದಿನ ಬಾರಿ ಇನ್ನಷ್ಟು ನಾಗರಿಕರನ್ನು ಭೇಟಿ ಮಾಡುತ್ತೇವೆ ಎಂದರು.

ಇನ್ನು ಕಾಶ್ಮೀರಕ್ಕೆ ಭೇಟಿ ನೀಡಿರುವ ಯೂರೋಪಿಯನ್ ಒಕ್ಕೂಟ ನಿಯೋಗದ ಕಾರ್ಯಕ್ರಮಗಳು ಲೈವ್ ಅಲ್ಲ. ರೆಕಾರ್ಡ್ ಮಾಡಿರುವ ಕಾರ್ಯಕ್ರಮವನ್ನು ಬಿತ್ತರಿಸಲಾಗುತ್ತಿದೆ. ಕೆಲ ಮಾಧ್ಯಮಗಳಿಗೆ ಮಾತ್ರ ವರದಿಗೆ ಅವಕಾಶ ನೀಡಲಾಗಿದೆ. ಸ್ಥಳೀಯ ಕಾಶ್ಮೀರ ಮಾಧ್ಯಮದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ವರದಿಗೆ ಅವಕಾಶ ನೀಡಿಲ್ಲ ಎಂದು ಖ್ಯಾತ ಪತ್ರಕರ್ತೆ ನಿಧಿ ರಾಜದನ್ ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 5ರಂದು 370 ಆರ್ಟಿಕಲ್ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ. ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ನಂತರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಶಾಲೆ, ಕಾಲೇಜು, ವ್ಯಾಪಾರ-ವಹಿವಾಟು, ಇಂಟರ್ನೆಟ್ ಬಂದ್ ಮಾಡಲಾಗಿತ್ತು. ಮತ್ತು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಬಂಧ ಹೇರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...