Homeಅಂತರಾಷ್ಟ್ರೀಯಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಯೂರೋಪಿಯನ್ ಒಕ್ಕೂಟ ನಿಯೋಗ ಹೇಳಿದ್ದೇನು?

- Advertisement -
- Advertisement -

‘ನಾವು ಕಣಿವೆಯಲ್ಲಿನ ವಸ್ತುಸ್ಥಿತಿ ಮತ್ತು ನೈಜ ಸಂಗತಿಗಳನ್ನು ತಿಳಿದುಕೊಳ್ಳಲು ಬಂದಿದ್ದೇವೆಯೇ ಹೊರತು, ಭಾರತದ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಲು ಅಲ್ಲ’ ಎಂದು ಯೂರೋಪಿಯನ್ ಒಕ್ಕೂಟ ನಿಯೋಗ ಸ್ಪಷ್ಟನೆ ನೀಡಿದೆ. 23 ಮಂದಿಯನ್ನೊಳಗೊಂಡ ನಿಯೋಗ ಕಾಶ್ಮೀರ ಭೇಟಿಗೆ ಬಂದಿದೆ. ಯೂರೋಪಿಯನ್ ಒಕ್ಕೂಟ ನಿಯೋಗಕ್ಕೆ ಅನುಮತಿ ನೀಡಿರುವ ಕ್ರಮಕ್ಕೆ ವಿಪಕ್ಷಗಳು ಕೆಂಡಕಾರುತ್ತಿವೆ. ಹೀಗಾಗಿ ಕಾಶ್ಮೀರ ಭೇಟಿಗೆ ಬಂದಿರುವ ನಿಯೋಗ ತಮ್ಮ ನಿಲುವು ಹಾಗೂ ತಮ್ಮ ಉದ್ದೇಶವನ್ನು ಸ್ಪಷ್ಟಪಡಿಸಿದೆ.

ಕಾಶ್ಮೀರದ ಕುಲ್ಗಾಂ ನಲ್ಲಿ 6ಮಂದಿ ಕಾರ್ಮಿಕರನ್ನು ಹತ್ಯೆಗೈದಿರುವ ಕ್ರಮವನ್ನು ನಿಯೋಗ ಖಂಡಿಸಿದೆ. ಅಲ್ಲದೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನಾವು ನಿಮ್ಮ ಸ್ನೇಹಿತರು. ಇಲ್ಲಿನ ಸತ್ಯಾಸತ್ಯತೆ ತಿಳಿದು ವರದಿ ನೀಡಲು ಬಂದಿದ್ದೇವೆ ಎಂದು ಹೇಳಿದೆ. ಸಾರ್ವಜನಿಕರನ್ನು ಭೇಟಿ ಮಾಡಿ, ಶಾಲೆ-ಕಾಲೇಜುಗಳು ಆರಂಭಗೊಳ್ಳುವುದು, ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆ ನಡೆಸುವುದಾಗಿ ತಿಳಿಸಿತು.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಿಯೋಗ, ಭಯೋತ್ಪಾದನೆ ಎನ್ನುವುದು ಫ್ರಾನ್ಸ್, ಯೂರೋಪ್ ನಲ್ಲೂ ಇದೆ. ಕಾಶ್ಮೀರ ಮತ್ತೊಂದು ಅಫ್ಘಾನಿಸ್ತಾನ ಆಗುವುದು ಬೇಡ. ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೇವಲ ಭಾರತದ ಸಮಸ್ಯೆ ಅಲ್ಲ. ಇದು ಅಂತಾರಾಷ್ಟ್ರೀಯ ಸಮುದಾಯದ ಸಮಸ್ಯೆ. ಉಗ್ರರ ವಿರುದ್ಧ ಭಾರತ ತೆಗೆದುಕೊಳ್ಳುವ ಪರಿಹಾರ ಕ್ರಮಗಳಿಗೆ ನಿಯೋಗ ಬೆಂಬಲ ಸೂಚಿಸಲಿದೆ ಎಂದು ಹೇಳಿದರು. ಕಾಶ್ಮೀರದ ಸ್ಥಿತಿ ಉತ್ತಮವಾಗಿದೆ. ಮುಂದಿನ ಬಾರಿ ಇನ್ನಷ್ಟು ನಾಗರಿಕರನ್ನು ಭೇಟಿ ಮಾಡುತ್ತೇವೆ ಎಂದರು.

ಇನ್ನು ಕಾಶ್ಮೀರಕ್ಕೆ ಭೇಟಿ ನೀಡಿರುವ ಯೂರೋಪಿಯನ್ ಒಕ್ಕೂಟ ನಿಯೋಗದ ಕಾರ್ಯಕ್ರಮಗಳು ಲೈವ್ ಅಲ್ಲ. ರೆಕಾರ್ಡ್ ಮಾಡಿರುವ ಕಾರ್ಯಕ್ರಮವನ್ನು ಬಿತ್ತರಿಸಲಾಗುತ್ತಿದೆ. ಕೆಲ ಮಾಧ್ಯಮಗಳಿಗೆ ಮಾತ್ರ ವರದಿಗೆ ಅವಕಾಶ ನೀಡಲಾಗಿದೆ. ಸ್ಥಳೀಯ ಕಾಶ್ಮೀರ ಮಾಧ್ಯಮದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ವರದಿಗೆ ಅವಕಾಶ ನೀಡಿಲ್ಲ ಎಂದು ಖ್ಯಾತ ಪತ್ರಕರ್ತೆ ನಿಧಿ ರಾಜದನ್ ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 5ರಂದು 370 ಆರ್ಟಿಕಲ್ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ. ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ನಂತರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಶಾಲೆ, ಕಾಲೇಜು, ವ್ಯಾಪಾರ-ವಹಿವಾಟು, ಇಂಟರ್ನೆಟ್ ಬಂದ್ ಮಾಡಲಾಗಿತ್ತು. ಮತ್ತು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಬಂಧ ಹೇರಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...