Homeಮುಖಪುಟಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

ಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

- Advertisement -
- Advertisement -

ರಾಜ್ಯದಲ್ಲಿ ಬಂಡಾಯ ಸಾಹಿತ್ಯ ಚಳವಳಿ ಉಚ್ರಾಯ ಸ್ಥಿತಿಯಲ್ಲಿದ್ದಾಗ ತುಮಕೂರು ಜಿಲ್ಲೆಯ ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಾಲಕರಾಗಿ ಮುನ್ನಡೆಸಿದ್ದ ಡಾ.ಸೋ.ಮು.ಭಾಸ್ಕರಾಚಾರ್ ನಿಧನರಾಗಿದ್ದಾರೆ. ಎಲ್.ಎನ್. ಮುಕುಂದರಾಜ್ ಅವರಂಥ ಹಲವು ಮಂದಿ ಸಾಹಿತಿಗಳಿಗೆ ಗುರುಗಳಾಗಿದ್ದ ಭಾಸ್ಕರಾಚಾರ್ ಉತ್ತಮ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ ಹೆಗ್ಗಳಿಕೆ ಅವರದ್ದು.

ತೊಂಬತ್ತರ ದಶಕದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯು ನಡೆಸಿದ ವಿಜ್ಞಾನ ಚಳವಳಿಯಲ್ಲಿ ಭಾಗವಹಿಸಿ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಮನೋಭಾವವನ್ನು ಮೂಡಿಸುವಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. ಸದಾ ಹೆಗಲಲ್ಲಿ ಒಂದು ಚೀಲ ಇರುತ್ತಿತ್ತು. ಅದರಲ್ಲಿ ಕೆಲವು ಪುಸ್ತಕಗಳು ಇರುತ್ತಿದ್ದವು. ವಿದ್ಯಾರ್ಥಿಗಳು ಮತ್ತು ಸ್ನೇಹಿತರನ್ನು ಬಹುವಾಗಿ ಪ್ರೀತಿಸುತ್ತಿದ್ದ ಭಾಸ್ಕರಾಚಾರ್ ತುಮಕೂರು ಜಿಲ್ಲೆಯ ಪ್ರಮುಖ ಕವಿಯಾಗಿ ಗುರುತಿಸಿಕೊಂಡಿದ್ದರು.

ತುಮಕೂರು ಜಿಲ್ಲೆಯಲ್ಲಿ ಬಂಡಾಯ ಸಾಹಿತ್ಯ ಚಳವಳಿಯನ್ನು ಮುನ್ನಡಿಸಿದ ಪ್ರಮುಖರಲ್ಲಿ ಭಾಸ್ಕರಾಚಾರ್ ಕೂಡ ಒಬ್ಬರು. ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ ಹಲವು ಸಭೆ, ಸಮಾರಂಭಗಳನ್ನು ಸಂಘಟಿಸಿದ್ದರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿ ಜನಮುಖಿ ಹೋರಾಟಗಳಲ್ಲಿ ಜೀವಿತದ ಕೊನೆಯವರೆಗೂ ತಮ್ಮನ್ನು ತೊಡಿಸಿಕೊಂಡಿದ್ದರು. ವಿಚಾರಸಂಕಿರಣ, ಕಾರ್ಯಾಗಾರಗಳನ್ನು ಸಂಘಟಿಸಿ ಬಂಡಾಯ ಸಾಹಿತ್ಯಕ್ಕೆ ತಮ್ಮ ದನಿಯನ್ನೂ ಕೂಡಿಸಿದವರು.

ಒಳತೋಟಿ (ಕಥಾ ಸಂಕಲನ), ಸುತ್ತಾಟದ ಸುಳಿಯಲ್ಲಿ, ಅಂಟುಮಣ್ಣಿನ ನಂಟು (ಕಾದಂಬರಿ), ಆಲ್ಬರ್ಟ್ ಐನ್ ಸ್ಟೀನ್ (ವ್ಯಕ್ತಿಚಿತ್ರಣ), ಸರ್ದಾರ್ ಭಗತ್ ಸಿಂಗ್ (ಜೀವನ ಚಿತ್ರಣ), ಗಾಂಧೀ ತಾ…ತಾ..(ಕವನ ಸಂಕಲನ), ದವನದಂಡ (ಹೋರಾಟಗಾರ ಕೆ.ಆರ್.ನಾಯಕ್, ಪ್ರಬಂಧಕಾರ ಎಚ್.ಜಿ.ಸಣ್ಣಗುಡ್ಡಯ್ಯ, ಹಿರಿಯ ಜೀವ ಪ್ರೊ. ಜಿ.ಎಂ.ಶ್ರೀನಿವಾಸಯ್ಯ, ಚಿಂತಕ ಕೆ.ದೊರೈರಾಜ್ ಹೀಗೆ ಹಲವರ ಕುರಿತ ಬರಹಗಳು ) ವ್ಯಕ್ತಿಚಿತ್ರಗಳು, ಬಾಳಪುಟದ ಕೊನೆಗಾಲದಲ್ಲಿ ಕನ್ನಡ ಸಾಹಿತ್ಯದಲ್ಲಿ ತಾಯಿ ಕುರಿತು ಮಹಾಪ್ರಬಂಧವನ್ನು ಬಿ.ಎಂ.ಪುಟ್ಟಯ್ಯ ಮಾರ್ಗದರ್ಶನದಲ್ಲಿ ಮಂಡಿಸಿ ಹಂಪಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು. ಹತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದರೂ ವಿಮರ್ಶಾ ಕ್ಷೇತ್ರ ಭಾಸ್ಕರಾಚಾರ್ ಅವರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಹಾಗೂ ಲೇಖಕಿ ಬಾ.ಹ.ರಮಾಕುಮಾರಿ ಹೇಳುವಂತೆ, ಭಾಸ್ಕರಾಚಾರ್ ಬಿ.ಎ.ಓದುತ್ತಿದ್ದಾಗ ನನ್ನ ಕ್ಲಾಸ್ ಮೇಟ್ ಆಗಿದ್ದರು. ಸದಾ ಚಟುವಟಿಕೆಯಿಂದ ಇರುತ್ತಿದ್ದರು. ಮೊದಲು ಅವರಿಗೆ ಕೆಜಿಐಡಿ ಇಲಾಖೆಯಲ್ಲಿ ಗುಮಾಸ್ತರಾಗಿ ಕೆಲಸ ಸಿಕ್ಕಿತು. ಅದನ್ನು ತೊರೆದು ಬಂದರು. ವಿದ್ಯಾವಾಹಿನಿ ಕಾಲೇಜಿ ನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದರು. ಜಿಲ್ಲಾ ಕಸಾಪ ಅಧ್ಯಕ್ಷರಾಗಿ, ವಿಜ್ಞಾನ ಕೇಂದ್ರದ ಕಾರ್ಯದರ್ಶಿಯಾಗಿ, ಕಸಾಪ ಕಾರ್ಯದರ್ಶಿಯಾಗಿ, ಕನ್ನಡ ಉಪನ್ಯಾಸಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಟರು, ಕಥಾಕೀರ್ತನಕಾರರೂ ಕೂಡ ಆಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಕವಿ ಭಾಸ್ಕರಾಚಾರ್ ಹಿಂದುಳಿದ ವರ್ಗಕ್ಕೆ ಸೇರಿದವರು. ಆದ್ದರಿಂದಲೇ ಏನೋ ಅವರ ಸಾಹಿತ್ಯವನ್ನು ವಿಮರ್ಶಕರು ಗುರುತಿಸುವ ಗೋಜಿಗೆ ಹೋಗಲಿಲ್ಲ. ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಆಡಳಿತದಲ್ಲಿ ಕನ್ನಡ ಭಾಷೆ ವಿಷಯ ಕುರಿತ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲೆಯಿಂದ ಸಾಹಿತಿಗಳಾದ ಡಾ.ಸೋ.ಮು.ಭಾಸ್ಕರಾಚಾರ್ ಮತ್ತು ಎನ್.ನಾಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...