Homeಮುಖಪುಟಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

ಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

- Advertisement -
- Advertisement -

ರಾಜ್ಯದಲ್ಲಿ ಬಂಡಾಯ ಸಾಹಿತ್ಯ ಚಳವಳಿ ಉಚ್ರಾಯ ಸ್ಥಿತಿಯಲ್ಲಿದ್ದಾಗ ತುಮಕೂರು ಜಿಲ್ಲೆಯ ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಾಲಕರಾಗಿ ಮುನ್ನಡೆಸಿದ್ದ ಡಾ.ಸೋ.ಮು.ಭಾಸ್ಕರಾಚಾರ್ ನಿಧನರಾಗಿದ್ದಾರೆ. ಎಲ್.ಎನ್. ಮುಕುಂದರಾಜ್ ಅವರಂಥ ಹಲವು ಮಂದಿ ಸಾಹಿತಿಗಳಿಗೆ ಗುರುಗಳಾಗಿದ್ದ ಭಾಸ್ಕರಾಚಾರ್ ಉತ್ತಮ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ ಹೆಗ್ಗಳಿಕೆ ಅವರದ್ದು.

ತೊಂಬತ್ತರ ದಶಕದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯು ನಡೆಸಿದ ವಿಜ್ಞಾನ ಚಳವಳಿಯಲ್ಲಿ ಭಾಗವಹಿಸಿ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಮನೋಭಾವವನ್ನು ಮೂಡಿಸುವಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. ಸದಾ ಹೆಗಲಲ್ಲಿ ಒಂದು ಚೀಲ ಇರುತ್ತಿತ್ತು. ಅದರಲ್ಲಿ ಕೆಲವು ಪುಸ್ತಕಗಳು ಇರುತ್ತಿದ್ದವು. ವಿದ್ಯಾರ್ಥಿಗಳು ಮತ್ತು ಸ್ನೇಹಿತರನ್ನು ಬಹುವಾಗಿ ಪ್ರೀತಿಸುತ್ತಿದ್ದ ಭಾಸ್ಕರಾಚಾರ್ ತುಮಕೂರು ಜಿಲ್ಲೆಯ ಪ್ರಮುಖ ಕವಿಯಾಗಿ ಗುರುತಿಸಿಕೊಂಡಿದ್ದರು.

ತುಮಕೂರು ಜಿಲ್ಲೆಯಲ್ಲಿ ಬಂಡಾಯ ಸಾಹಿತ್ಯ ಚಳವಳಿಯನ್ನು ಮುನ್ನಡಿಸಿದ ಪ್ರಮುಖರಲ್ಲಿ ಭಾಸ್ಕರಾಚಾರ್ ಕೂಡ ಒಬ್ಬರು. ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ ಹಲವು ಸಭೆ, ಸಮಾರಂಭಗಳನ್ನು ಸಂಘಟಿಸಿದ್ದರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿ ಜನಮುಖಿ ಹೋರಾಟಗಳಲ್ಲಿ ಜೀವಿತದ ಕೊನೆಯವರೆಗೂ ತಮ್ಮನ್ನು ತೊಡಿಸಿಕೊಂಡಿದ್ದರು. ವಿಚಾರಸಂಕಿರಣ, ಕಾರ್ಯಾಗಾರಗಳನ್ನು ಸಂಘಟಿಸಿ ಬಂಡಾಯ ಸಾಹಿತ್ಯಕ್ಕೆ ತಮ್ಮ ದನಿಯನ್ನೂ ಕೂಡಿಸಿದವರು.

ಒಳತೋಟಿ (ಕಥಾ ಸಂಕಲನ), ಸುತ್ತಾಟದ ಸುಳಿಯಲ್ಲಿ, ಅಂಟುಮಣ್ಣಿನ ನಂಟು (ಕಾದಂಬರಿ), ಆಲ್ಬರ್ಟ್ ಐನ್ ಸ್ಟೀನ್ (ವ್ಯಕ್ತಿಚಿತ್ರಣ), ಸರ್ದಾರ್ ಭಗತ್ ಸಿಂಗ್ (ಜೀವನ ಚಿತ್ರಣ), ಗಾಂಧೀ ತಾ…ತಾ..(ಕವನ ಸಂಕಲನ), ದವನದಂಡ (ಹೋರಾಟಗಾರ ಕೆ.ಆರ್.ನಾಯಕ್, ಪ್ರಬಂಧಕಾರ ಎಚ್.ಜಿ.ಸಣ್ಣಗುಡ್ಡಯ್ಯ, ಹಿರಿಯ ಜೀವ ಪ್ರೊ. ಜಿ.ಎಂ.ಶ್ರೀನಿವಾಸಯ್ಯ, ಚಿಂತಕ ಕೆ.ದೊರೈರಾಜ್ ಹೀಗೆ ಹಲವರ ಕುರಿತ ಬರಹಗಳು ) ವ್ಯಕ್ತಿಚಿತ್ರಗಳು, ಬಾಳಪುಟದ ಕೊನೆಗಾಲದಲ್ಲಿ ಕನ್ನಡ ಸಾಹಿತ್ಯದಲ್ಲಿ ತಾಯಿ ಕುರಿತು ಮಹಾಪ್ರಬಂಧವನ್ನು ಬಿ.ಎಂ.ಪುಟ್ಟಯ್ಯ ಮಾರ್ಗದರ್ಶನದಲ್ಲಿ ಮಂಡಿಸಿ ಹಂಪಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು. ಹತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದರೂ ವಿಮರ್ಶಾ ಕ್ಷೇತ್ರ ಭಾಸ್ಕರಾಚಾರ್ ಅವರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಹಾಗೂ ಲೇಖಕಿ ಬಾ.ಹ.ರಮಾಕುಮಾರಿ ಹೇಳುವಂತೆ, ಭಾಸ್ಕರಾಚಾರ್ ಬಿ.ಎ.ಓದುತ್ತಿದ್ದಾಗ ನನ್ನ ಕ್ಲಾಸ್ ಮೇಟ್ ಆಗಿದ್ದರು. ಸದಾ ಚಟುವಟಿಕೆಯಿಂದ ಇರುತ್ತಿದ್ದರು. ಮೊದಲು ಅವರಿಗೆ ಕೆಜಿಐಡಿ ಇಲಾಖೆಯಲ್ಲಿ ಗುಮಾಸ್ತರಾಗಿ ಕೆಲಸ ಸಿಕ್ಕಿತು. ಅದನ್ನು ತೊರೆದು ಬಂದರು. ವಿದ್ಯಾವಾಹಿನಿ ಕಾಲೇಜಿ ನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದರು. ಜಿಲ್ಲಾ ಕಸಾಪ ಅಧ್ಯಕ್ಷರಾಗಿ, ವಿಜ್ಞಾನ ಕೇಂದ್ರದ ಕಾರ್ಯದರ್ಶಿಯಾಗಿ, ಕಸಾಪ ಕಾರ್ಯದರ್ಶಿಯಾಗಿ, ಕನ್ನಡ ಉಪನ್ಯಾಸಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಟರು, ಕಥಾಕೀರ್ತನಕಾರರೂ ಕೂಡ ಆಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಕವಿ ಭಾಸ್ಕರಾಚಾರ್ ಹಿಂದುಳಿದ ವರ್ಗಕ್ಕೆ ಸೇರಿದವರು. ಆದ್ದರಿಂದಲೇ ಏನೋ ಅವರ ಸಾಹಿತ್ಯವನ್ನು ವಿಮರ್ಶಕರು ಗುರುತಿಸುವ ಗೋಜಿಗೆ ಹೋಗಲಿಲ್ಲ. ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಆಡಳಿತದಲ್ಲಿ ಕನ್ನಡ ಭಾಷೆ ವಿಷಯ ಕುರಿತ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲೆಯಿಂದ ಸಾಹಿತಿಗಳಾದ ಡಾ.ಸೋ.ಮು.ಭಾಸ್ಕರಾಚಾರ್ ಮತ್ತು ಎನ್.ನಾಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...