Homeಮುಖಪುಟಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

ಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

- Advertisement -
- Advertisement -

ರಾಜ್ಯದಲ್ಲಿ ಬಂಡಾಯ ಸಾಹಿತ್ಯ ಚಳವಳಿ ಉಚ್ರಾಯ ಸ್ಥಿತಿಯಲ್ಲಿದ್ದಾಗ ತುಮಕೂರು ಜಿಲ್ಲೆಯ ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಾಲಕರಾಗಿ ಮುನ್ನಡೆಸಿದ್ದ ಡಾ.ಸೋ.ಮು.ಭಾಸ್ಕರಾಚಾರ್ ನಿಧನರಾಗಿದ್ದಾರೆ. ಎಲ್.ಎನ್. ಮುಕುಂದರಾಜ್ ಅವರಂಥ ಹಲವು ಮಂದಿ ಸಾಹಿತಿಗಳಿಗೆ ಗುರುಗಳಾಗಿದ್ದ ಭಾಸ್ಕರಾಚಾರ್ ಉತ್ತಮ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ ಹೆಗ್ಗಳಿಕೆ ಅವರದ್ದು.

ತೊಂಬತ್ತರ ದಶಕದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯು ನಡೆಸಿದ ವಿಜ್ಞಾನ ಚಳವಳಿಯಲ್ಲಿ ಭಾಗವಹಿಸಿ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಮನೋಭಾವವನ್ನು ಮೂಡಿಸುವಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. ಸದಾ ಹೆಗಲಲ್ಲಿ ಒಂದು ಚೀಲ ಇರುತ್ತಿತ್ತು. ಅದರಲ್ಲಿ ಕೆಲವು ಪುಸ್ತಕಗಳು ಇರುತ್ತಿದ್ದವು. ವಿದ್ಯಾರ್ಥಿಗಳು ಮತ್ತು ಸ್ನೇಹಿತರನ್ನು ಬಹುವಾಗಿ ಪ್ರೀತಿಸುತ್ತಿದ್ದ ಭಾಸ್ಕರಾಚಾರ್ ತುಮಕೂರು ಜಿಲ್ಲೆಯ ಪ್ರಮುಖ ಕವಿಯಾಗಿ ಗುರುತಿಸಿಕೊಂಡಿದ್ದರು.

ತುಮಕೂರು ಜಿಲ್ಲೆಯಲ್ಲಿ ಬಂಡಾಯ ಸಾಹಿತ್ಯ ಚಳವಳಿಯನ್ನು ಮುನ್ನಡಿಸಿದ ಪ್ರಮುಖರಲ್ಲಿ ಭಾಸ್ಕರಾಚಾರ್ ಕೂಡ ಒಬ್ಬರು. ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ ಹಲವು ಸಭೆ, ಸಮಾರಂಭಗಳನ್ನು ಸಂಘಟಿಸಿದ್ದರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿ ಜನಮುಖಿ ಹೋರಾಟಗಳಲ್ಲಿ ಜೀವಿತದ ಕೊನೆಯವರೆಗೂ ತಮ್ಮನ್ನು ತೊಡಿಸಿಕೊಂಡಿದ್ದರು. ವಿಚಾರಸಂಕಿರಣ, ಕಾರ್ಯಾಗಾರಗಳನ್ನು ಸಂಘಟಿಸಿ ಬಂಡಾಯ ಸಾಹಿತ್ಯಕ್ಕೆ ತಮ್ಮ ದನಿಯನ್ನೂ ಕೂಡಿಸಿದವರು.

ಒಳತೋಟಿ (ಕಥಾ ಸಂಕಲನ), ಸುತ್ತಾಟದ ಸುಳಿಯಲ್ಲಿ, ಅಂಟುಮಣ್ಣಿನ ನಂಟು (ಕಾದಂಬರಿ), ಆಲ್ಬರ್ಟ್ ಐನ್ ಸ್ಟೀನ್ (ವ್ಯಕ್ತಿಚಿತ್ರಣ), ಸರ್ದಾರ್ ಭಗತ್ ಸಿಂಗ್ (ಜೀವನ ಚಿತ್ರಣ), ಗಾಂಧೀ ತಾ…ತಾ..(ಕವನ ಸಂಕಲನ), ದವನದಂಡ (ಹೋರಾಟಗಾರ ಕೆ.ಆರ್.ನಾಯಕ್, ಪ್ರಬಂಧಕಾರ ಎಚ್.ಜಿ.ಸಣ್ಣಗುಡ್ಡಯ್ಯ, ಹಿರಿಯ ಜೀವ ಪ್ರೊ. ಜಿ.ಎಂ.ಶ್ರೀನಿವಾಸಯ್ಯ, ಚಿಂತಕ ಕೆ.ದೊರೈರಾಜ್ ಹೀಗೆ ಹಲವರ ಕುರಿತ ಬರಹಗಳು ) ವ್ಯಕ್ತಿಚಿತ್ರಗಳು, ಬಾಳಪುಟದ ಕೊನೆಗಾಲದಲ್ಲಿ ಕನ್ನಡ ಸಾಹಿತ್ಯದಲ್ಲಿ ತಾಯಿ ಕುರಿತು ಮಹಾಪ್ರಬಂಧವನ್ನು ಬಿ.ಎಂ.ಪುಟ್ಟಯ್ಯ ಮಾರ್ಗದರ್ಶನದಲ್ಲಿ ಮಂಡಿಸಿ ಹಂಪಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು. ಹತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದರೂ ವಿಮರ್ಶಾ ಕ್ಷೇತ್ರ ಭಾಸ್ಕರಾಚಾರ್ ಅವರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಹಾಗೂ ಲೇಖಕಿ ಬಾ.ಹ.ರಮಾಕುಮಾರಿ ಹೇಳುವಂತೆ, ಭಾಸ್ಕರಾಚಾರ್ ಬಿ.ಎ.ಓದುತ್ತಿದ್ದಾಗ ನನ್ನ ಕ್ಲಾಸ್ ಮೇಟ್ ಆಗಿದ್ದರು. ಸದಾ ಚಟುವಟಿಕೆಯಿಂದ ಇರುತ್ತಿದ್ದರು. ಮೊದಲು ಅವರಿಗೆ ಕೆಜಿಐಡಿ ಇಲಾಖೆಯಲ್ಲಿ ಗುಮಾಸ್ತರಾಗಿ ಕೆಲಸ ಸಿಕ್ಕಿತು. ಅದನ್ನು ತೊರೆದು ಬಂದರು. ವಿದ್ಯಾವಾಹಿನಿ ಕಾಲೇಜಿ ನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದರು. ಜಿಲ್ಲಾ ಕಸಾಪ ಅಧ್ಯಕ್ಷರಾಗಿ, ವಿಜ್ಞಾನ ಕೇಂದ್ರದ ಕಾರ್ಯದರ್ಶಿಯಾಗಿ, ಕಸಾಪ ಕಾರ್ಯದರ್ಶಿಯಾಗಿ, ಕನ್ನಡ ಉಪನ್ಯಾಸಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಟರು, ಕಥಾಕೀರ್ತನಕಾರರೂ ಕೂಡ ಆಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಕವಿ ಭಾಸ್ಕರಾಚಾರ್ ಹಿಂದುಳಿದ ವರ್ಗಕ್ಕೆ ಸೇರಿದವರು. ಆದ್ದರಿಂದಲೇ ಏನೋ ಅವರ ಸಾಹಿತ್ಯವನ್ನು ವಿಮರ್ಶಕರು ಗುರುತಿಸುವ ಗೋಜಿಗೆ ಹೋಗಲಿಲ್ಲ. ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಆಡಳಿತದಲ್ಲಿ ಕನ್ನಡ ಭಾಷೆ ವಿಷಯ ಕುರಿತ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲೆಯಿಂದ ಸಾಹಿತಿಗಳಾದ ಡಾ.ಸೋ.ಮು.ಭಾಸ್ಕರಾಚಾರ್ ಮತ್ತು ಎನ್.ನಾಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...