Homeಮುಖಪುಟಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

ಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

- Advertisement -
- Advertisement -

ರಾಜ್ಯದಲ್ಲಿ ಬಂಡಾಯ ಸಾಹಿತ್ಯ ಚಳವಳಿ ಉಚ್ರಾಯ ಸ್ಥಿತಿಯಲ್ಲಿದ್ದಾಗ ತುಮಕೂರು ಜಿಲ್ಲೆಯ ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಾಲಕರಾಗಿ ಮುನ್ನಡೆಸಿದ್ದ ಡಾ.ಸೋ.ಮು.ಭಾಸ್ಕರಾಚಾರ್ ನಿಧನರಾಗಿದ್ದಾರೆ. ಎಲ್.ಎನ್. ಮುಕುಂದರಾಜ್ ಅವರಂಥ ಹಲವು ಮಂದಿ ಸಾಹಿತಿಗಳಿಗೆ ಗುರುಗಳಾಗಿದ್ದ ಭಾಸ್ಕರಾಚಾರ್ ಉತ್ತಮ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ ಹೆಗ್ಗಳಿಕೆ ಅವರದ್ದು.

ತೊಂಬತ್ತರ ದಶಕದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯು ನಡೆಸಿದ ವಿಜ್ಞಾನ ಚಳವಳಿಯಲ್ಲಿ ಭಾಗವಹಿಸಿ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಮನೋಭಾವವನ್ನು ಮೂಡಿಸುವಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. ಸದಾ ಹೆಗಲಲ್ಲಿ ಒಂದು ಚೀಲ ಇರುತ್ತಿತ್ತು. ಅದರಲ್ಲಿ ಕೆಲವು ಪುಸ್ತಕಗಳು ಇರುತ್ತಿದ್ದವು. ವಿದ್ಯಾರ್ಥಿಗಳು ಮತ್ತು ಸ್ನೇಹಿತರನ್ನು ಬಹುವಾಗಿ ಪ್ರೀತಿಸುತ್ತಿದ್ದ ಭಾಸ್ಕರಾಚಾರ್ ತುಮಕೂರು ಜಿಲ್ಲೆಯ ಪ್ರಮುಖ ಕವಿಯಾಗಿ ಗುರುತಿಸಿಕೊಂಡಿದ್ದರು.

ತುಮಕೂರು ಜಿಲ್ಲೆಯಲ್ಲಿ ಬಂಡಾಯ ಸಾಹಿತ್ಯ ಚಳವಳಿಯನ್ನು ಮುನ್ನಡಿಸಿದ ಪ್ರಮುಖರಲ್ಲಿ ಭಾಸ್ಕರಾಚಾರ್ ಕೂಡ ಒಬ್ಬರು. ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ ಹಲವು ಸಭೆ, ಸಮಾರಂಭಗಳನ್ನು ಸಂಘಟಿಸಿದ್ದರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿ ಜನಮುಖಿ ಹೋರಾಟಗಳಲ್ಲಿ ಜೀವಿತದ ಕೊನೆಯವರೆಗೂ ತಮ್ಮನ್ನು ತೊಡಿಸಿಕೊಂಡಿದ್ದರು. ವಿಚಾರಸಂಕಿರಣ, ಕಾರ್ಯಾಗಾರಗಳನ್ನು ಸಂಘಟಿಸಿ ಬಂಡಾಯ ಸಾಹಿತ್ಯಕ್ಕೆ ತಮ್ಮ ದನಿಯನ್ನೂ ಕೂಡಿಸಿದವರು.

ಒಳತೋಟಿ (ಕಥಾ ಸಂಕಲನ), ಸುತ್ತಾಟದ ಸುಳಿಯಲ್ಲಿ, ಅಂಟುಮಣ್ಣಿನ ನಂಟು (ಕಾದಂಬರಿ), ಆಲ್ಬರ್ಟ್ ಐನ್ ಸ್ಟೀನ್ (ವ್ಯಕ್ತಿಚಿತ್ರಣ), ಸರ್ದಾರ್ ಭಗತ್ ಸಿಂಗ್ (ಜೀವನ ಚಿತ್ರಣ), ಗಾಂಧೀ ತಾ…ತಾ..(ಕವನ ಸಂಕಲನ), ದವನದಂಡ (ಹೋರಾಟಗಾರ ಕೆ.ಆರ್.ನಾಯಕ್, ಪ್ರಬಂಧಕಾರ ಎಚ್.ಜಿ.ಸಣ್ಣಗುಡ್ಡಯ್ಯ, ಹಿರಿಯ ಜೀವ ಪ್ರೊ. ಜಿ.ಎಂ.ಶ್ರೀನಿವಾಸಯ್ಯ, ಚಿಂತಕ ಕೆ.ದೊರೈರಾಜ್ ಹೀಗೆ ಹಲವರ ಕುರಿತ ಬರಹಗಳು ) ವ್ಯಕ್ತಿಚಿತ್ರಗಳು, ಬಾಳಪುಟದ ಕೊನೆಗಾಲದಲ್ಲಿ ಕನ್ನಡ ಸಾಹಿತ್ಯದಲ್ಲಿ ತಾಯಿ ಕುರಿತು ಮಹಾಪ್ರಬಂಧವನ್ನು ಬಿ.ಎಂ.ಪುಟ್ಟಯ್ಯ ಮಾರ್ಗದರ್ಶನದಲ್ಲಿ ಮಂಡಿಸಿ ಹಂಪಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು. ಹತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದರೂ ವಿಮರ್ಶಾ ಕ್ಷೇತ್ರ ಭಾಸ್ಕರಾಚಾರ್ ಅವರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಹಾಗೂ ಲೇಖಕಿ ಬಾ.ಹ.ರಮಾಕುಮಾರಿ ಹೇಳುವಂತೆ, ಭಾಸ್ಕರಾಚಾರ್ ಬಿ.ಎ.ಓದುತ್ತಿದ್ದಾಗ ನನ್ನ ಕ್ಲಾಸ್ ಮೇಟ್ ಆಗಿದ್ದರು. ಸದಾ ಚಟುವಟಿಕೆಯಿಂದ ಇರುತ್ತಿದ್ದರು. ಮೊದಲು ಅವರಿಗೆ ಕೆಜಿಐಡಿ ಇಲಾಖೆಯಲ್ಲಿ ಗುಮಾಸ್ತರಾಗಿ ಕೆಲಸ ಸಿಕ್ಕಿತು. ಅದನ್ನು ತೊರೆದು ಬಂದರು. ವಿದ್ಯಾವಾಹಿನಿ ಕಾಲೇಜಿ ನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದರು. ಜಿಲ್ಲಾ ಕಸಾಪ ಅಧ್ಯಕ್ಷರಾಗಿ, ವಿಜ್ಞಾನ ಕೇಂದ್ರದ ಕಾರ್ಯದರ್ಶಿಯಾಗಿ, ಕಸಾಪ ಕಾರ್ಯದರ್ಶಿಯಾಗಿ, ಕನ್ನಡ ಉಪನ್ಯಾಸಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಟರು, ಕಥಾಕೀರ್ತನಕಾರರೂ ಕೂಡ ಆಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಕವಿ ಭಾಸ್ಕರಾಚಾರ್ ಹಿಂದುಳಿದ ವರ್ಗಕ್ಕೆ ಸೇರಿದವರು. ಆದ್ದರಿಂದಲೇ ಏನೋ ಅವರ ಸಾಹಿತ್ಯವನ್ನು ವಿಮರ್ಶಕರು ಗುರುತಿಸುವ ಗೋಜಿಗೆ ಹೋಗಲಿಲ್ಲ. ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಆಡಳಿತದಲ್ಲಿ ಕನ್ನಡ ಭಾಷೆ ವಿಷಯ ಕುರಿತ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲೆಯಿಂದ ಸಾಹಿತಿಗಳಾದ ಡಾ.ಸೋ.ಮು.ಭಾಸ್ಕರಾಚಾರ್ ಮತ್ತು ಎನ್.ನಾಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...