Homeಮುಖಪುಟಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

ಬಂಡಾಯ ಕವಿ, ಕಾದಂಬರಿಕಾರ ಭಾಸ್ಕರಾಚಾರ್ ಇನ್ನಿಲ್ಲ

- Advertisement -
- Advertisement -

ರಾಜ್ಯದಲ್ಲಿ ಬಂಡಾಯ ಸಾಹಿತ್ಯ ಚಳವಳಿ ಉಚ್ರಾಯ ಸ್ಥಿತಿಯಲ್ಲಿದ್ದಾಗ ತುಮಕೂರು ಜಿಲ್ಲೆಯ ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಾಲಕರಾಗಿ ಮುನ್ನಡೆಸಿದ್ದ ಡಾ.ಸೋ.ಮು.ಭಾಸ್ಕರಾಚಾರ್ ನಿಧನರಾಗಿದ್ದಾರೆ. ಎಲ್.ಎನ್. ಮುಕುಂದರಾಜ್ ಅವರಂಥ ಹಲವು ಮಂದಿ ಸಾಹಿತಿಗಳಿಗೆ ಗುರುಗಳಾಗಿದ್ದ ಭಾಸ್ಕರಾಚಾರ್ ಉತ್ತಮ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ ಹೆಗ್ಗಳಿಕೆ ಅವರದ್ದು.

ತೊಂಬತ್ತರ ದಶಕದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯು ನಡೆಸಿದ ವಿಜ್ಞಾನ ಚಳವಳಿಯಲ್ಲಿ ಭಾಗವಹಿಸಿ ಜನರಲ್ಲಿ ವೈಜ್ಞಾನಿಕ, ವೈಚಾರಿಕ ಮನೋಭಾವವನ್ನು ಮೂಡಿಸುವಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು. ಸದಾ ಹೆಗಲಲ್ಲಿ ಒಂದು ಚೀಲ ಇರುತ್ತಿತ್ತು. ಅದರಲ್ಲಿ ಕೆಲವು ಪುಸ್ತಕಗಳು ಇರುತ್ತಿದ್ದವು. ವಿದ್ಯಾರ್ಥಿಗಳು ಮತ್ತು ಸ್ನೇಹಿತರನ್ನು ಬಹುವಾಗಿ ಪ್ರೀತಿಸುತ್ತಿದ್ದ ಭಾಸ್ಕರಾಚಾರ್ ತುಮಕೂರು ಜಿಲ್ಲೆಯ ಪ್ರಮುಖ ಕವಿಯಾಗಿ ಗುರುತಿಸಿಕೊಂಡಿದ್ದರು.

ತುಮಕೂರು ಜಿಲ್ಲೆಯಲ್ಲಿ ಬಂಡಾಯ ಸಾಹಿತ್ಯ ಚಳವಳಿಯನ್ನು ಮುನ್ನಡಿಸಿದ ಪ್ರಮುಖರಲ್ಲಿ ಭಾಸ್ಕರಾಚಾರ್ ಕೂಡ ಒಬ್ಬರು. ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ ಹಲವು ಸಭೆ, ಸಮಾರಂಭಗಳನ್ನು ಸಂಘಟಿಸಿದ್ದರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಯಾಗಿ ಜನಮುಖಿ ಹೋರಾಟಗಳಲ್ಲಿ ಜೀವಿತದ ಕೊನೆಯವರೆಗೂ ತಮ್ಮನ್ನು ತೊಡಿಸಿಕೊಂಡಿದ್ದರು. ವಿಚಾರಸಂಕಿರಣ, ಕಾರ್ಯಾಗಾರಗಳನ್ನು ಸಂಘಟಿಸಿ ಬಂಡಾಯ ಸಾಹಿತ್ಯಕ್ಕೆ ತಮ್ಮ ದನಿಯನ್ನೂ ಕೂಡಿಸಿದವರು.

ಒಳತೋಟಿ (ಕಥಾ ಸಂಕಲನ), ಸುತ್ತಾಟದ ಸುಳಿಯಲ್ಲಿ, ಅಂಟುಮಣ್ಣಿನ ನಂಟು (ಕಾದಂಬರಿ), ಆಲ್ಬರ್ಟ್ ಐನ್ ಸ್ಟೀನ್ (ವ್ಯಕ್ತಿಚಿತ್ರಣ), ಸರ್ದಾರ್ ಭಗತ್ ಸಿಂಗ್ (ಜೀವನ ಚಿತ್ರಣ), ಗಾಂಧೀ ತಾ…ತಾ..(ಕವನ ಸಂಕಲನ), ದವನದಂಡ (ಹೋರಾಟಗಾರ ಕೆ.ಆರ್.ನಾಯಕ್, ಪ್ರಬಂಧಕಾರ ಎಚ್.ಜಿ.ಸಣ್ಣಗುಡ್ಡಯ್ಯ, ಹಿರಿಯ ಜೀವ ಪ್ರೊ. ಜಿ.ಎಂ.ಶ್ರೀನಿವಾಸಯ್ಯ, ಚಿಂತಕ ಕೆ.ದೊರೈರಾಜ್ ಹೀಗೆ ಹಲವರ ಕುರಿತ ಬರಹಗಳು ) ವ್ಯಕ್ತಿಚಿತ್ರಗಳು, ಬಾಳಪುಟದ ಕೊನೆಗಾಲದಲ್ಲಿ ಕನ್ನಡ ಸಾಹಿತ್ಯದಲ್ಲಿ ತಾಯಿ ಕುರಿತು ಮಹಾಪ್ರಬಂಧವನ್ನು ಬಿ.ಎಂ.ಪುಟ್ಟಯ್ಯ ಮಾರ್ಗದರ್ಶನದಲ್ಲಿ ಮಂಡಿಸಿ ಹಂಪಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದರು. ಹತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದರೂ ವಿಮರ್ಶಾ ಕ್ಷೇತ್ರ ಭಾಸ್ಕರಾಚಾರ್ ಅವರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಹಾಗೂ ಲೇಖಕಿ ಬಾ.ಹ.ರಮಾಕುಮಾರಿ ಹೇಳುವಂತೆ, ಭಾಸ್ಕರಾಚಾರ್ ಬಿ.ಎ.ಓದುತ್ತಿದ್ದಾಗ ನನ್ನ ಕ್ಲಾಸ್ ಮೇಟ್ ಆಗಿದ್ದರು. ಸದಾ ಚಟುವಟಿಕೆಯಿಂದ ಇರುತ್ತಿದ್ದರು. ಮೊದಲು ಅವರಿಗೆ ಕೆಜಿಐಡಿ ಇಲಾಖೆಯಲ್ಲಿ ಗುಮಾಸ್ತರಾಗಿ ಕೆಲಸ ಸಿಕ್ಕಿತು. ಅದನ್ನು ತೊರೆದು ಬಂದರು. ವಿದ್ಯಾವಾಹಿನಿ ಕಾಲೇಜಿ ನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದರು. ಜಿಲ್ಲಾ ಕಸಾಪ ಅಧ್ಯಕ್ಷರಾಗಿ, ವಿಜ್ಞಾನ ಕೇಂದ್ರದ ಕಾರ್ಯದರ್ಶಿಯಾಗಿ, ಕಸಾಪ ಕಾರ್ಯದರ್ಶಿಯಾಗಿ, ಕನ್ನಡ ಉಪನ್ಯಾಸಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಟರು, ಕಥಾಕೀರ್ತನಕಾರರೂ ಕೂಡ ಆಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಕವಿ ಭಾಸ್ಕರಾಚಾರ್ ಹಿಂದುಳಿದ ವರ್ಗಕ್ಕೆ ಸೇರಿದವರು. ಆದ್ದರಿಂದಲೇ ಏನೋ ಅವರ ಸಾಹಿತ್ಯವನ್ನು ವಿಮರ್ಶಕರು ಗುರುತಿಸುವ ಗೋಜಿಗೆ ಹೋಗಲಿಲ್ಲ. ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಆಡಳಿತದಲ್ಲಿ ಕನ್ನಡ ಭಾಷೆ ವಿಷಯ ಕುರಿತ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲೆಯಿಂದ ಸಾಹಿತಿಗಳಾದ ಡಾ.ಸೋ.ಮು.ಭಾಸ್ಕರಾಚಾರ್ ಮತ್ತು ಎನ್.ನಾಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...