Homeಮುಖಪುಟಕನ್ನಡ ಸತಿಗೆ, ಮರಾಠಾ ಪತಿ! - ಡಿ.ಎಸ್ ಚೌಗಲೆ

ಕನ್ನಡ ಸತಿಗೆ, ಮರಾಠಾ ಪತಿ! – ಡಿ.ಎಸ್ ಚೌಗಲೆ

ಕನ್ನಡ ಮತ್ತು ಮರಾಠಿಯ ಸಂಬಂಧಕ್ಕೆ ಶತಮಾನಗಳ ಇತಿಹಾಸವಿದೆ. ಕಲೆ, ಸಂಗೀತ, ವಿಚಾರಗಳನ್ನು ಹಂಚಿಕೊಂಡ ಎರಡು ಭಾಷಿಕ ಸಮುದಾಯಗಳು ಬಹುಕಾಲದವರೆಗೆ ಪರಸ್ಪರ ಪ್ರಭಾವಕ್ಕೆ ಒಳಗಾಗಿ ಬೆಳೆದಿರುವ ಬಗೆಯ ಒಂದು ಝಲಕ್‍ಅನ್ನು ಈ ಲೇಖನ ನೀಡುತ್ತದೆ

- Advertisement -
- Advertisement -

ಸುಮಾರು ಹನ್ನೊಂದು ಹನ್ನೆರಡನೆಯ ಶತಮಾನದಿಂದಲೇ ಕನ್ನಡ ಮತ್ತು ಮರಾಠಿ, ಅಷ್ಟೇ ಏಕೆ ಆಂಧ್ರದ ಜನರ ಸಮಾಜ, ಸಂಸ್ಕೃತಿಯೊಂದಿಗೆ ಕೊಡುಕೊಳ್ಳುವಿಕೆ ಇದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾಗಿ 50 ವರ್ಷಗಳಾಗಿರಬಹುದು. ಆದರೆ ಈ ಸಂಬಂಧಗಳು- ಮಾನವೀಯವಾದ ಸಂಬಂಧಗಳು ಏನಿವೆ-ಕನ್ನಡಿಗರ ನಡುವೆ, ಮರಾಠಿಗರ ನಡುವೆ, ತೆಲುಗಿನವರ ನಡುವೆ- ಇವುಗಳಿಗೆ ಒಂದು ಏಳೆಂಟು ನೂರು ವರ್ಷಗಳ ಇತಿಹಾಸವಿದೆ. ಇದನ್ನು ಅಷ್ಟು ಸುಲಭವಾಗಿ ಒಡೆದುಹಾಕಲು ಆಗುವುದಿಲ್ಲ. ಯಾವುದೇ ರಾಜಕೀಯ ಶಕ್ತಿಗೂ ಇದು ಸಾಧ್ಯವಿಲ್ಲ.

ತುಕಾರಾಮ, ಮಹಾರಾಷ್ಟ್ರದ ಮರಾಠಿ ಜನರ ಮನೆಮಾತಾಗಿರುವ ಒಬ್ಬ ಬಂಡಾಯ ಕವಿ. ತುಕಾರಾಮನನ್ನು ವೈದಿಕರು ತಮ್ಮವನನ್ನಾಗಿ ಮಾಡಿಕೊಳ್ಳುವ ಹುನ್ನಾರ ಮಾಡುತ್ತಲೇ ಬಂದಿದ್ದಾರೆ. ಇಂಥ ಪ್ರಯತ್ನಗಳು ಎಲ್ಲ ಕಾಲಕ್ಕೂ ನಡೆದಿರುವಂತಹವೆ. ತುಕಾರಾಮ ಮೂಲತಃ ಜನಸಮುದಾಯವನ್ನು ಜಾಗರ ಮಾಡುವ ಕವಿ. ಅಭಂಗಕಾರ. ನಮಗೆ ಬಸವಣ್ಣ ಹೇಗೊ ಹಾಗೇಯೇ ಮರಾಠಿಗರ ತುಕಾರಾಮ, ಒಬ್ಬ ಸುಧಾರಕನಾಗಿ ಕೆಲಸ ಮಾಡಿದ್ದಾನೆ.

‘ಕನ್ನಡ ಸತಿಗೆ, ಮರಾಠಾ ಪತಿ’ (ಮರಾಠಾ ಎಂದರೆ ಮರಾಠಿ ಮಾತನಾಡುವ ಮರಾಠಾ ಸಮುದಾಯ), ಅವರಿಬ್ಬರ ಸಂಸಾರ ಹೇಗಿರುತ್ತದೆ ಎಂಬುದನ್ನು ಹೀಗೆ ಹೇಳುತ್ತಾನೆ;

ನೀಡೆನಗೆ ಸಜ್ಜನರ ಸಹವಾಸವನು
ಅವಳು ಕರೆದಳು `ಬಾ ಇಲ್ಲಿ’ ಎಂದು
ಅವನು ನೀಡಿದನು ಸವಟು ತಂದು
ತುಕಾರಾಮನೆಂಬ ಪರಸ್ಪರ ಭೇದವಿದ್ದಲ್ಲಿ
ಸುಖದ ಬದಲಿಗೆ ದುಃಖವೇ ಬೆಳೆಯುವುದಲ್ಲಿ.

ಗೋದಾವರಿ ನದಿ ತಟದವರೆಗಿತ್ತು ಕರುನಾಡು ವಿಸ್ತರಿಸಿಕೊಂಡಿತ್ತು. ಸಹಜವಾಗಿಯೇ ತುಕಾರಾಮ ಅವರಿಗೆ ಕನ್ನಡವೂ ಗೊತ್ತಿರಬಹುದು ಎಂಬುದಕ್ಕೆ ಇದೊಂದು ಉದಾಹರಣೆ.

ಬಸವಣ್ಣನ ಕಾರ್ಯಕ್ಷೇತ್ರ ಸಹ ಮಂಗಳವೇಢೆ ತನಕ ಇತ್ತು. ಅವರ ವಚನಗಳಲ್ಲಿ `ಬತ್ತೀಸರಾಗ’ ಮತ್ತು ವಿಶೇಷ
ರೂಪದಲ್ಲಿ `ಛಪ್ಪನ್ನಐವತ್ತಾರು’ ದ್ವಿರುಕ್ತಿಯ ಮರಾಠಿ ಸಂಖ್ಯಾವಾಚಿ ಪದಗಳು ಬಳಕೆಯಾಗಿವೆ. ಅವು ಭಾಷೆಯ ಭ್ರಾತೃತ್ವವನ್ನೇ ಸಾರುತ್ತವೆ. ಛಪ್ಪನ್ ಅಂದರೇನೆ ಐವತ್ತಾರು!

ಮರಾಠಿ ಜನರ ಸಾಕ್ಷಿ ಪ್ರಜ್ಞೆಯಾಗಿದ್ದ ಜ್ಞಾನೇಶ್ವರನಿಗೆ ಕನ್ನಡ ಗೊತ್ತಿತ್ತು. ಜ್ಞಾನೇಶ್ವರಿಯ ಕನ್ನಡ ಅನುವಾದಗಳು ಬಂದವು. ಅವು ಮತ್ತು ಪಂಢರಾಪುರದ ವಿಠಲನ ವಾರಕರಿ ಸಂಪ್ರದಾಯವು ಭಾಷಿಕ ಬಂಧುತ್ವದ ಬಹುದೊಡ್ಡ ಕೊಂಡಿ ಆಗಿವೆ.

ಉತ್ತರ ಕರ್ನಾಟಕದ ಬಹುತೇಕ ಬ್ರಾಹ್ಮಣರು ಕನ್ನಡ ಮಾತಾಡಿದರೂ ಅವರೊಳಗೆ ಪುಣೆಯ ಪೇಶ್ವಾಯಿ ಪ್ರಭಾವದಿಂದ ಮರಾಠಿ ಪ್ರೀತಿ ಒಳಗೊಳಗೆ ಇದೆ. ರೊಟ್ಟಿಗೆ ಅವರು ಭಕ್ರಿ ಅನ್ನುವುದು. ಮರಾಠಿಯ ಭಾಕರಿ ಪದದ ಅಪಭ್ರಂಶ ರೂಪ. ಚಿತ್ಪಾವನ ಬ್ರಾಹ್ಮಣರು ಮರಾಠಿ ಮಾತಾಡುವರು. ಕೊಂಕಣಿ, ಸಾರಸ್ವತ ಬ್ರಾಹ್ಮಣರಲ್ಲಿ ಹಲವರು ಮರಾಠಿ ಭಾಷಿಕರಾಗಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳು ಕರ್ನಾಟಕ ಏಕೀಕರಣಕ್ಕಿಂತ ಮುಂಚೆ ಮುಂಬಯಿ ಪ್ರಾಂತ್ಯದಲ್ಲಿ ಇದ್ದವು ಹೀಗಾಗಿ ಸಹಜವಾಗಿ ಮರಾಠಿ ಪ್ರಭಾವವಿದೆ. ಅದೇ ರೀತಿ ಕಲಬುರಗಿ, ರಾಯಚೂರುಗಳಲ್ಲಿ ಉರ್ದು ಹಿಂದಿ ಪ್ರಭಾವ ಇದೆ. ಹಳೆಯ ಮೈಸೂರು ಭಾಗದವರು ಮೈಸೂರು ರಾಜರ ಆಡಳಿತಕ್ಕೊಳಪಟ್ಟಿದ್ದರೂ ಅಲ್ಲೂ ಬೆಂಗಳೂರಿನಂಥ ನಗರಗಳಲ್ಲಿ ತಮಿಳು ಪ್ರಭಾವವಿದೆಯಲ್ಲ, ಹಾಗೆ.

ಕುರ್ತಕೋಟಿ ಅವರ ಲೇಖನವೊಂದರ ಪ್ರಕಾರ, ಅಚ್ಚಕನ್ನಡ ನೆಲವಾದ ಧಾರವಾಡದಲ್ಲಿ 19ನೆಯ ಶತಮಾನದ ಮಧ್ಯಭಾಗದಲ್ಲಿ ಕನ್ನಡ ಶಾಲೆಗಳಿರಲಿಲ್ಲ. ಮರಾಠಿ ಶಾಲೆಗಳೇ ಇದ್ದವು ಎಂಬ ಉಲ್ಲೇಖವಿದೆ. ಕಾಲಾಂತರದಲ್ಲಿ ಡೆಪ್ಯುಟಿ ಚನ್ನಬಸಪ್ಪರವರು ಕನ್ನಡ ಶಾಲೆ ತೆರೆದರು ಎಂಬ ಮಾಹಿತಿ ಇದೆ. ಇಂದಿಗೂ ಉತ್ತರ ಕರ್ನಾಟಕದ ಗಡಿ ಭಾಗದ ಮಹಿಳೆಯರ ಉಡುಗೆತೊಡುಗೆಯಲ್ಲಿ ಪೇಶ್ವೆಗಳ ಜೀವನಶೈಲಿಯ ಪ್ರಭಾವ ಕಾಣಿಸುತ್ತದೆ.

ಮರಾಠಿಯೊಂದಿಗೆ ಬಾಂಧವ್ಯ ರಂಗಭೂಮಿ ಮತ್ತು ಸಂಗೀತದಲ್ಲಿ ಢಾಳಾಗಿ ಕಾಣಿಸುತ್ತದೆ. ಇವುಗಳ ನಡುವೆ ಒಂದು ಅನೂಹ್ಯ, ಅನನ್ಯವಾದ ಬೆಸುಗೆ ಇದೆ. ಅಷ್ಟೇ ಯಾಕೆ, ಕಲೆಗಳ ಪಟ್ಟುಗಳ ಕೊಡುಕೊಳುವಿಕೆಯೂ ಮಹತ್ವದ್ದು. 1843ರ ನವೆಂಬರ್ 5ರಂದು ಮರಾಠಿಯ ಮೊದಲ ನಾಟಕವು ಪ್ರಯೋಗ ಕಂಡಿತು. ಸಾಂಗಲಿಯ ಸಾಮಂತರಸ ಪಟವರ್ಧನರ ಪ್ರೋತ್ಸಾಹದಿಂದ ವಿಷ್ಣುದಾಸ ಭಾವೆ ಅವರು `ಸೀತಾ ಸ್ವಯಂವರ’ ರಚಿಸಿ ಪ್ರಯೋಗಿಸಿದರು. ಈ ನಾಟಕಕ್ಕೆ ಪ್ರೇರಣೆಯು ಉತ್ತರ ಕನ್ನಡ ಜಿಲ್ಲೆಯ ಕರ್ಕಿ ಮೇಳದ ಯಕ್ಷಗಾನ. 1880ರ ಆಸುಪಾಸಿನಲ್ಲಿ `ಸಂಗೀತ ಸೌಭದ್ರ’, `ಸಂಗೀತ ಶಾಕುಂತಲ’ ನಾಟಕಗಳಿಗೆ ಬೆಳಗಾವಿ ಜಿಲ್ಲೆಯ `ಶ್ರೀಕೃಷ್ಣ ಪಾರಿಜಾತ’ದ ಸಂಗೀತದ ಅಳವಡಿಕೆಯಾಗಿತ್ತು. ಅದರ ಕರ್ತೃ ಅಣ್ಣಾಸಾಹೇಬ ಕಿರ್ಲೋಸ್ಕರರು. ಇವರು ಮರಾಠಿ ಸಂಗೀತ ನಾಟಕದ ಪಿತಾಮಹ. ಅವರು ಹುಟ್ಟಿದ್ದು ಕರ್ನಾಟಕದ ಗುರ್ಲಹೊಸೂರಲ್ಲಿ. ಹಿಂದೂಸ್ತಾನಿ ಸಂಗೀತದ ಮೇರು ಗಾಯಕರಾದ ಕುಮಾರ ಗಂಧರ್ವ, ಮಲ್ಲಿಕಾರ್ಜುನ ಮನ್ಸೂರ, ಭೀಮಸೇನ ಜೋಶಿ ಅವರನ್ನು ಮರಾಠಿ ಜನ ತಲೆ ಮೇಲೆ ಹೊತ್ತು ಮೆರೆಸಿದವರು. ಇಂಥ ಮಧುರ ಬಾಂಧವ್ಯ ನಮ್ಮಲ್ಲಿ ಹಾಸುಹೊಕ್ಕಾಗಿರುವಾಗ ಯಾವ ರಾಜಕೀಯ ಹುನ್ನಾರಗಳೂ ಕಳ್ಳುಬಳ್ಳಿಯ ಸಂಬಂಧವನ್ನು ಕೆಡಿಸಲಾರವು. ಈ ಚಿಂತನೆಯನ್ನು ಜನಮಾನಸದಲ್ಲಿ ಹೆಚ್ಚಾಗಿ ಬಿತ್ತಬೇಕಿದೆ.

ಒಕ್ಕೂಟ ವ್ಯವಸ್ಥೆಯಲ್ಲಿ ಕಿಡಿ, ಬೆಳಕು ನೀಡಬೇಕೇ ಹೊರತು ಬೆಂಕಿಯನ್ನಲ್ಲ. ಈ ನೆಲದ ಮೂಲವಾದ ಬಹುತ್ವವು ಬದುಕಿದರೆ ಮಾತ್ರ ಸಕಲರಿಗೂ ಲೇಸುಂಟು ಎಂಬುದನ್ನು ಭಾಷಾ ರಾಜಕಾರಣ ಮಾಡುವವರು ಅರಿಯಬೇಕು.

ಡಿ ಎಸ್ ಚೌಗಲೆ

ಸಮಕಾಲೀನ ಕನ್ನಡ ನಾಟಕಕಾರರಲ್ಲಿ ಡಿ. ಎಸ್. ಚೌಗಲೆ ಪ್ರಮುಖರು. ಸದ್ಯ ಬೆಳಗಾವಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ-ಮರಾಠಿ ಭಾಷೆಯ ಮಧ್ಯೆ ಅನುಸಂಧಾನವೊಂದನ್ನು ಸೃಷ್ಟಿಸಿರುವ ಇವರು ಎರಡೂ ಭಾಷೆಯ ಮೇಲೆ ಪ್ರಭುತ್ವ ಹೊಂದಿದವರು.


ಇದನ್ನೂ ಓದಿ: ಯುದ್ಧವಿರೋಧಿ ಜನ ಪ್ರತಿರೋಧವನ್ನು ಸಂವೇದನೆಯಿಂದ ಅವಲೋಕಿಸುವ ಚಿತ್ರ – ‘ದ ಟ್ರಯಲ್ ಆಫ್ ದ ಶಿಕಾಗೊ 7’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...