Homeಮುಖಪುಟಕನ್ನಡ ಸತಿಗೆ, ಮರಾಠಾ ಪತಿ! - ಡಿ.ಎಸ್ ಚೌಗಲೆ

ಕನ್ನಡ ಸತಿಗೆ, ಮರಾಠಾ ಪತಿ! – ಡಿ.ಎಸ್ ಚೌಗಲೆ

ಕನ್ನಡ ಮತ್ತು ಮರಾಠಿಯ ಸಂಬಂಧಕ್ಕೆ ಶತಮಾನಗಳ ಇತಿಹಾಸವಿದೆ. ಕಲೆ, ಸಂಗೀತ, ವಿಚಾರಗಳನ್ನು ಹಂಚಿಕೊಂಡ ಎರಡು ಭಾಷಿಕ ಸಮುದಾಯಗಳು ಬಹುಕಾಲದವರೆಗೆ ಪರಸ್ಪರ ಪ್ರಭಾವಕ್ಕೆ ಒಳಗಾಗಿ ಬೆಳೆದಿರುವ ಬಗೆಯ ಒಂದು ಝಲಕ್‍ಅನ್ನು ಈ ಲೇಖನ ನೀಡುತ್ತದೆ

- Advertisement -
- Advertisement -

ಸುಮಾರು ಹನ್ನೊಂದು ಹನ್ನೆರಡನೆಯ ಶತಮಾನದಿಂದಲೇ ಕನ್ನಡ ಮತ್ತು ಮರಾಠಿ, ಅಷ್ಟೇ ಏಕೆ ಆಂಧ್ರದ ಜನರ ಸಮಾಜ, ಸಂಸ್ಕೃತಿಯೊಂದಿಗೆ ಕೊಡುಕೊಳ್ಳುವಿಕೆ ಇದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾಗಿ 50 ವರ್ಷಗಳಾಗಿರಬಹುದು. ಆದರೆ ಈ ಸಂಬಂಧಗಳು- ಮಾನವೀಯವಾದ ಸಂಬಂಧಗಳು ಏನಿವೆ-ಕನ್ನಡಿಗರ ನಡುವೆ, ಮರಾಠಿಗರ ನಡುವೆ, ತೆಲುಗಿನವರ ನಡುವೆ- ಇವುಗಳಿಗೆ ಒಂದು ಏಳೆಂಟು ನೂರು ವರ್ಷಗಳ ಇತಿಹಾಸವಿದೆ. ಇದನ್ನು ಅಷ್ಟು ಸುಲಭವಾಗಿ ಒಡೆದುಹಾಕಲು ಆಗುವುದಿಲ್ಲ. ಯಾವುದೇ ರಾಜಕೀಯ ಶಕ್ತಿಗೂ ಇದು ಸಾಧ್ಯವಿಲ್ಲ.

ತುಕಾರಾಮ, ಮಹಾರಾಷ್ಟ್ರದ ಮರಾಠಿ ಜನರ ಮನೆಮಾತಾಗಿರುವ ಒಬ್ಬ ಬಂಡಾಯ ಕವಿ. ತುಕಾರಾಮನನ್ನು ವೈದಿಕರು ತಮ್ಮವನನ್ನಾಗಿ ಮಾಡಿಕೊಳ್ಳುವ ಹುನ್ನಾರ ಮಾಡುತ್ತಲೇ ಬಂದಿದ್ದಾರೆ. ಇಂಥ ಪ್ರಯತ್ನಗಳು ಎಲ್ಲ ಕಾಲಕ್ಕೂ ನಡೆದಿರುವಂತಹವೆ. ತುಕಾರಾಮ ಮೂಲತಃ ಜನಸಮುದಾಯವನ್ನು ಜಾಗರ ಮಾಡುವ ಕವಿ. ಅಭಂಗಕಾರ. ನಮಗೆ ಬಸವಣ್ಣ ಹೇಗೊ ಹಾಗೇಯೇ ಮರಾಠಿಗರ ತುಕಾರಾಮ, ಒಬ್ಬ ಸುಧಾರಕನಾಗಿ ಕೆಲಸ ಮಾಡಿದ್ದಾನೆ.

‘ಕನ್ನಡ ಸತಿಗೆ, ಮರಾಠಾ ಪತಿ’ (ಮರಾಠಾ ಎಂದರೆ ಮರಾಠಿ ಮಾತನಾಡುವ ಮರಾಠಾ ಸಮುದಾಯ), ಅವರಿಬ್ಬರ ಸಂಸಾರ ಹೇಗಿರುತ್ತದೆ ಎಂಬುದನ್ನು ಹೀಗೆ ಹೇಳುತ್ತಾನೆ;

ನೀಡೆನಗೆ ಸಜ್ಜನರ ಸಹವಾಸವನು
ಅವಳು ಕರೆದಳು `ಬಾ ಇಲ್ಲಿ’ ಎಂದು
ಅವನು ನೀಡಿದನು ಸವಟು ತಂದು
ತುಕಾರಾಮನೆಂಬ ಪರಸ್ಪರ ಭೇದವಿದ್ದಲ್ಲಿ
ಸುಖದ ಬದಲಿಗೆ ದುಃಖವೇ ಬೆಳೆಯುವುದಲ್ಲಿ.

ಗೋದಾವರಿ ನದಿ ತಟದವರೆಗಿತ್ತು ಕರುನಾಡು ವಿಸ್ತರಿಸಿಕೊಂಡಿತ್ತು. ಸಹಜವಾಗಿಯೇ ತುಕಾರಾಮ ಅವರಿಗೆ ಕನ್ನಡವೂ ಗೊತ್ತಿರಬಹುದು ಎಂಬುದಕ್ಕೆ ಇದೊಂದು ಉದಾಹರಣೆ.

ಬಸವಣ್ಣನ ಕಾರ್ಯಕ್ಷೇತ್ರ ಸಹ ಮಂಗಳವೇಢೆ ತನಕ ಇತ್ತು. ಅವರ ವಚನಗಳಲ್ಲಿ `ಬತ್ತೀಸರಾಗ’ ಮತ್ತು ವಿಶೇಷ
ರೂಪದಲ್ಲಿ `ಛಪ್ಪನ್ನಐವತ್ತಾರು’ ದ್ವಿರುಕ್ತಿಯ ಮರಾಠಿ ಸಂಖ್ಯಾವಾಚಿ ಪದಗಳು ಬಳಕೆಯಾಗಿವೆ. ಅವು ಭಾಷೆಯ ಭ್ರಾತೃತ್ವವನ್ನೇ ಸಾರುತ್ತವೆ. ಛಪ್ಪನ್ ಅಂದರೇನೆ ಐವತ್ತಾರು!

ಮರಾಠಿ ಜನರ ಸಾಕ್ಷಿ ಪ್ರಜ್ಞೆಯಾಗಿದ್ದ ಜ್ಞಾನೇಶ್ವರನಿಗೆ ಕನ್ನಡ ಗೊತ್ತಿತ್ತು. ಜ್ಞಾನೇಶ್ವರಿಯ ಕನ್ನಡ ಅನುವಾದಗಳು ಬಂದವು. ಅವು ಮತ್ತು ಪಂಢರಾಪುರದ ವಿಠಲನ ವಾರಕರಿ ಸಂಪ್ರದಾಯವು ಭಾಷಿಕ ಬಂಧುತ್ವದ ಬಹುದೊಡ್ಡ ಕೊಂಡಿ ಆಗಿವೆ.

ಉತ್ತರ ಕರ್ನಾಟಕದ ಬಹುತೇಕ ಬ್ರಾಹ್ಮಣರು ಕನ್ನಡ ಮಾತಾಡಿದರೂ ಅವರೊಳಗೆ ಪುಣೆಯ ಪೇಶ್ವಾಯಿ ಪ್ರಭಾವದಿಂದ ಮರಾಠಿ ಪ್ರೀತಿ ಒಳಗೊಳಗೆ ಇದೆ. ರೊಟ್ಟಿಗೆ ಅವರು ಭಕ್ರಿ ಅನ್ನುವುದು. ಮರಾಠಿಯ ಭಾಕರಿ ಪದದ ಅಪಭ್ರಂಶ ರೂಪ. ಚಿತ್ಪಾವನ ಬ್ರಾಹ್ಮಣರು ಮರಾಠಿ ಮಾತಾಡುವರು. ಕೊಂಕಣಿ, ಸಾರಸ್ವತ ಬ್ರಾಹ್ಮಣರಲ್ಲಿ ಹಲವರು ಮರಾಠಿ ಭಾಷಿಕರಾಗಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳು ಕರ್ನಾಟಕ ಏಕೀಕರಣಕ್ಕಿಂತ ಮುಂಚೆ ಮುಂಬಯಿ ಪ್ರಾಂತ್ಯದಲ್ಲಿ ಇದ್ದವು ಹೀಗಾಗಿ ಸಹಜವಾಗಿ ಮರಾಠಿ ಪ್ರಭಾವವಿದೆ. ಅದೇ ರೀತಿ ಕಲಬುರಗಿ, ರಾಯಚೂರುಗಳಲ್ಲಿ ಉರ್ದು ಹಿಂದಿ ಪ್ರಭಾವ ಇದೆ. ಹಳೆಯ ಮೈಸೂರು ಭಾಗದವರು ಮೈಸೂರು ರಾಜರ ಆಡಳಿತಕ್ಕೊಳಪಟ್ಟಿದ್ದರೂ ಅಲ್ಲೂ ಬೆಂಗಳೂರಿನಂಥ ನಗರಗಳಲ್ಲಿ ತಮಿಳು ಪ್ರಭಾವವಿದೆಯಲ್ಲ, ಹಾಗೆ.

ಕುರ್ತಕೋಟಿ ಅವರ ಲೇಖನವೊಂದರ ಪ್ರಕಾರ, ಅಚ್ಚಕನ್ನಡ ನೆಲವಾದ ಧಾರವಾಡದಲ್ಲಿ 19ನೆಯ ಶತಮಾನದ ಮಧ್ಯಭಾಗದಲ್ಲಿ ಕನ್ನಡ ಶಾಲೆಗಳಿರಲಿಲ್ಲ. ಮರಾಠಿ ಶಾಲೆಗಳೇ ಇದ್ದವು ಎಂಬ ಉಲ್ಲೇಖವಿದೆ. ಕಾಲಾಂತರದಲ್ಲಿ ಡೆಪ್ಯುಟಿ ಚನ್ನಬಸಪ್ಪರವರು ಕನ್ನಡ ಶಾಲೆ ತೆರೆದರು ಎಂಬ ಮಾಹಿತಿ ಇದೆ. ಇಂದಿಗೂ ಉತ್ತರ ಕರ್ನಾಟಕದ ಗಡಿ ಭಾಗದ ಮಹಿಳೆಯರ ಉಡುಗೆತೊಡುಗೆಯಲ್ಲಿ ಪೇಶ್ವೆಗಳ ಜೀವನಶೈಲಿಯ ಪ್ರಭಾವ ಕಾಣಿಸುತ್ತದೆ.

ಮರಾಠಿಯೊಂದಿಗೆ ಬಾಂಧವ್ಯ ರಂಗಭೂಮಿ ಮತ್ತು ಸಂಗೀತದಲ್ಲಿ ಢಾಳಾಗಿ ಕಾಣಿಸುತ್ತದೆ. ಇವುಗಳ ನಡುವೆ ಒಂದು ಅನೂಹ್ಯ, ಅನನ್ಯವಾದ ಬೆಸುಗೆ ಇದೆ. ಅಷ್ಟೇ ಯಾಕೆ, ಕಲೆಗಳ ಪಟ್ಟುಗಳ ಕೊಡುಕೊಳುವಿಕೆಯೂ ಮಹತ್ವದ್ದು. 1843ರ ನವೆಂಬರ್ 5ರಂದು ಮರಾಠಿಯ ಮೊದಲ ನಾಟಕವು ಪ್ರಯೋಗ ಕಂಡಿತು. ಸಾಂಗಲಿಯ ಸಾಮಂತರಸ ಪಟವರ್ಧನರ ಪ್ರೋತ್ಸಾಹದಿಂದ ವಿಷ್ಣುದಾಸ ಭಾವೆ ಅವರು `ಸೀತಾ ಸ್ವಯಂವರ’ ರಚಿಸಿ ಪ್ರಯೋಗಿಸಿದರು. ಈ ನಾಟಕಕ್ಕೆ ಪ್ರೇರಣೆಯು ಉತ್ತರ ಕನ್ನಡ ಜಿಲ್ಲೆಯ ಕರ್ಕಿ ಮೇಳದ ಯಕ್ಷಗಾನ. 1880ರ ಆಸುಪಾಸಿನಲ್ಲಿ `ಸಂಗೀತ ಸೌಭದ್ರ’, `ಸಂಗೀತ ಶಾಕುಂತಲ’ ನಾಟಕಗಳಿಗೆ ಬೆಳಗಾವಿ ಜಿಲ್ಲೆಯ `ಶ್ರೀಕೃಷ್ಣ ಪಾರಿಜಾತ’ದ ಸಂಗೀತದ ಅಳವಡಿಕೆಯಾಗಿತ್ತು. ಅದರ ಕರ್ತೃ ಅಣ್ಣಾಸಾಹೇಬ ಕಿರ್ಲೋಸ್ಕರರು. ಇವರು ಮರಾಠಿ ಸಂಗೀತ ನಾಟಕದ ಪಿತಾಮಹ. ಅವರು ಹುಟ್ಟಿದ್ದು ಕರ್ನಾಟಕದ ಗುರ್ಲಹೊಸೂರಲ್ಲಿ. ಹಿಂದೂಸ್ತಾನಿ ಸಂಗೀತದ ಮೇರು ಗಾಯಕರಾದ ಕುಮಾರ ಗಂಧರ್ವ, ಮಲ್ಲಿಕಾರ್ಜುನ ಮನ್ಸೂರ, ಭೀಮಸೇನ ಜೋಶಿ ಅವರನ್ನು ಮರಾಠಿ ಜನ ತಲೆ ಮೇಲೆ ಹೊತ್ತು ಮೆರೆಸಿದವರು. ಇಂಥ ಮಧುರ ಬಾಂಧವ್ಯ ನಮ್ಮಲ್ಲಿ ಹಾಸುಹೊಕ್ಕಾಗಿರುವಾಗ ಯಾವ ರಾಜಕೀಯ ಹುನ್ನಾರಗಳೂ ಕಳ್ಳುಬಳ್ಳಿಯ ಸಂಬಂಧವನ್ನು ಕೆಡಿಸಲಾರವು. ಈ ಚಿಂತನೆಯನ್ನು ಜನಮಾನಸದಲ್ಲಿ ಹೆಚ್ಚಾಗಿ ಬಿತ್ತಬೇಕಿದೆ.

ಒಕ್ಕೂಟ ವ್ಯವಸ್ಥೆಯಲ್ಲಿ ಕಿಡಿ, ಬೆಳಕು ನೀಡಬೇಕೇ ಹೊರತು ಬೆಂಕಿಯನ್ನಲ್ಲ. ಈ ನೆಲದ ಮೂಲವಾದ ಬಹುತ್ವವು ಬದುಕಿದರೆ ಮಾತ್ರ ಸಕಲರಿಗೂ ಲೇಸುಂಟು ಎಂಬುದನ್ನು ಭಾಷಾ ರಾಜಕಾರಣ ಮಾಡುವವರು ಅರಿಯಬೇಕು.

ಡಿ ಎಸ್ ಚೌಗಲೆ

ಸಮಕಾಲೀನ ಕನ್ನಡ ನಾಟಕಕಾರರಲ್ಲಿ ಡಿ. ಎಸ್. ಚೌಗಲೆ ಪ್ರಮುಖರು. ಸದ್ಯ ಬೆಳಗಾವಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ-ಮರಾಠಿ ಭಾಷೆಯ ಮಧ್ಯೆ ಅನುಸಂಧಾನವೊಂದನ್ನು ಸೃಷ್ಟಿಸಿರುವ ಇವರು ಎರಡೂ ಭಾಷೆಯ ಮೇಲೆ ಪ್ರಭುತ್ವ ಹೊಂದಿದವರು.


ಇದನ್ನೂ ಓದಿ: ಯುದ್ಧವಿರೋಧಿ ಜನ ಪ್ರತಿರೋಧವನ್ನು ಸಂವೇದನೆಯಿಂದ ಅವಲೋಕಿಸುವ ಚಿತ್ರ – ‘ದ ಟ್ರಯಲ್ ಆಫ್ ದ ಶಿಕಾಗೊ 7’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...