Homeಮುಖಪುಟಸರಕಾರದ ಬೇಜವಾಬ್ದಾರಿಯ ಸಾವುಗಳು ಕೊರೊನಾ ಸಾವುಗಳಿಗಿಂತಲೂ ಭೀಕರ: ಪಿ.ಸಾಯಿನಾಥ್

ಸರಕಾರದ ಬೇಜವಾಬ್ದಾರಿಯ ಸಾವುಗಳು ಕೊರೊನಾ ಸಾವುಗಳಿಗಿಂತಲೂ ಭೀಕರ: ಪಿ.ಸಾಯಿನಾಥ್

ಪ್ರತೀವರ್ಷ ಹತ್ತಿರಹತ್ತಿರ ಎರಡೂವರೆ ಲಕ್ಷ ಭಾರತೀಯರು ಕ್ಷಯರೋಗದಿಂದ ಸಾಯುತ್ತಿದ್ದರೆಂಬ ಕುರಿತು ನಮಗೆ ಒಂದು ರಾಷ್ಟ್ರವಾಗಿ ಏನೂ ಅನಿಸುವಂತೆ ಕಾಣುವುದಿಲ್ಲ..

- Advertisement -
- Advertisement -

ಪಿ. ಸಾಯಿನಾಥ್

ಅನುವಾದ: ನಿಖಿಲ್ ಕೋಲ್ಪೆ


“ಕೊರೋನಾ ಸಂಬಂಧಿ ಸಮಸ್ಯೆಗಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸದೇ ಇದ್ದಲ್ಲಿ, ಬಹಳ ಕಾಲದಿಂದಲೂ ಹೆಚ್ಚಾಗಿ ಬಡವರನ್ನೇ ಬಾಧಿಸುತ್ತಾ ಬಂದಿರುವ ಇತರ ರೋಗಗಳಿಂದ ಸಂಭವಿಸುವ ಸಾವಿನ ಸಂಖ್ಯೆಯು ಕೊರೋನಾ ವೈರಸ್‌ನಿಂದ ಸಾಯುವವರ ಸಂಖ್ಯೆಗಿಂತ ಹೆಚ್ಚಾಗಬಹುದು.” ಮ್ಯಾಗ್ಸೇಸೆ ಪ್ರಶಸ್ತಿ ವಿಜೇತ ಜಗತ್ಪ್ರಸಿದ್ಧ ಪತ್ರಕರ್ತ ಪಿ. ಸಾಯಿನಾಥ್ ಅವರ ಮನೋಜ್ಞ ಲೇಖನದ ಎರಡನೆಯ ಭಾಗ ಇಲ್ಲಿದೆ.


ಕೊರೋನಾ ಬಿಕ್ಕಟ್ಟಿನಿಂದ ಉಲ್ಭಣಿಸುತ್ತಿರುವ ಆರ್ಥಿಕ ಸಂಕಷ್ಟವು ಕೆಲಸ ಮಾಡುವ ಮತ್ತು ಯುವ ಸಮುದಾಯದಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಸಾವಿಗೆ ಕಾರಣವಾಗಲಿದೆ. ಪೀಪಲ್ಸ್ ಹೆಲ್ತ್ ಮೂವ್‌ಮೆಂಟ್ ಸಂಘಟನೆಯ ಜಾಗತಿಕ ನಿರ್ದೇಶಕರಾದ ಪ್ರೊಫೆಸರ್ ಡಾ. ಟಿ. ಸುಂದರರಾಮನ್ ಅವರು “ಪರಿ” (PARI)ಗೆ ತಿಳಿಸಿದಂತೆ, ನಮ್ಮ ಆರೋಗ್ಯ ಸೇವೆಗಳು ಮತ್ತು ಆರ್ಥಿಕ ಬಿಕ್ಕಟ್ಟು ಜೊತೆಸೇರಿ (ನಾವು ತಪ್ಪಿಸಬಹುದಾದ) ಕೊರೋನ ವೈರಸ್ ಸಾವುಗಳಿಗೆ ಬದಲಾಗಿ ಅವುಗಳ ಜಾಗದಲ್ಲಿ ಬೇರೆ ರೋಗಗಳಿಂದ ಸಂಭವಿಸುವ ಸಾವುಗಳಿಗೆ ಕಾರಣವಾಗಬಹುದು.

ತಮ್ಮ 60 ಅಥವಾ ಅದಕ್ಕಿಂತ ಹೆಚ್ಚಿನ ವಯೋವರ್ಗದಲ್ಲಿರುವ ಎಂಟು ಶೇಕಡಾ ಜನಸಂಖ್ಯೆ ಕೊರೋನಾ ವೈರಸ್‌ನಿಂದ ಅತ್ಯಂತ ಹೆಚ್ಚು ಅಪಾಯ ಎದುರಿಸುತ್ತಿದೆ. ಆರೋಗ್ಯ ಸೇವೆಗಳು ಕೈಗೆಟಕದಿರುವುದು ಮತ್ತು ಇತರ ಆರೋಗ್ಯ ಸೇವೆಗಳ ಕಡಿತದ ಜೊತೆಗೆ ಇತರ ರೋಗಗಳು ತಲೆಎತ್ತಿದಲ್ಲಿ ಕೆಲಸ ಮಾಡುವ ಮತ್ತು ಯುವ ಜನಸಮುದಾಯವು ಭಾರೀ ಹೊಡೆತ ಅನುಭವಿಸಬೇಕಾಗಿಬರಬಹುದು.


ಇದನ್ನೂ ಓದಿ: ಮೋದಿಯ ಕೊರೋನ “ಪ್ಯಾಕೇಜ್” : ಕಲ್ಲೆದೆ ಮತ್ತು ಅಜ್ಞಾನಗಳ ಮಿಶ್ರಣ – ಪಿ. ಸಾಯಿನಾಥ್ 


ರಾಷ್ಟ್ರೀಯ ಆರೋಗ್ಯ ವ್ಯವಸ್ಥೆಗಳ ಸಂಪನ್ಮೂಲ ಕೇಂದ್ರ (ಎನ್‌ಎಚ್‌ಎಸ್‌ಆರ್‌ಸಿ)ದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಡಾ. ಸುಂದರರಾಮನ್, “ಹಿಮ್ಮುಖ ವಲಸೆ ಮತ್ತು ಜೀವನೋಪಾಯಗಳ ನಷ್ಟವನ್ನು ಗುರುತಿಸಿ, ಕಾರ್ಯಾಚರಿಸಬೇಕಾದ ಅತ್ಯಂತ ತುರ್ತು ಅಗತ್ಯವಿದೆ” ಎಂದು ಒತ್ತಿ ಹೇಳುತ್ತಾರೆ.

“ಇಲ್ಲದೇಹೋದಲ್ಲಿ, ಬಹಳ ಕಾಲದಿಂದಲೂ ಹೆಚ್ಚಾಗಿ ಬಡವರನ್ನೇ ಬಾಧಿಸುತ್ತಾ ಬಂದಿರುವ ಇತರ ರೋಗಗಳಿಂದ ಸಂಭವಿಸುವ ಸಾವಿನ ಸಂಖ್ಯೆಯು ಕೊರೋನ ವೈರಸ್‌ನಿಂದ ಸಾಯುವವರ ಸಂಖ್ಯೆಗಿಂತ ಹೆಚ್ಚಾಗಬಹುದು” ಎಂದೂ ಅವರು ಹೇಳುತ್ತಾರೆ. ನಿರ್ದಿಷ್ಟವಾಗಿ, ಹಿಮ್ಮುಖ ವಲಸೆ ಹೆಚ್ಚಾಗಿ, ನಗರಗಳಲ್ಲಿರುವ ವಲಸೆ ಕಾರ್ಮಿಕರಿಗೆ ಅವರು ಪಡೆಯುತ್ತಿರುವ ಜುಜುಬಿ ಸಂಬಳವೂ ಸಿಗದೇ ಹೋದಲ್ಲಿ ಇದು ಸಂಭವಿಸಬಹುದು.

ಹೆಚ್ಚಿನ ವಲಸೆ ಕಾರ್ಮಿಕರು ತಮ್ಮ ಕೆಲಸದ ಸ್ಥಳಗಳಲ್ಲಿಯೇ ವಾಸಿಸುತ್ತಾರೆ. ಕೆಲಸದ ಸ್ಥಳವನ್ನು ಮುಚ್ಚಿ, ಹೊರಗೆ ಹೋಗಿ ಎಂದರೆ- ಅವರು ಹೋಗುವುದಾದರೂ ಎಲ್ಲಿಗೆ? ಅವರಲ್ಲಿ ಎಲ್ಲರೂ ಉಹಿಸಲಾಗದಷ್ಟು ಭಾರೀ ದೂರದ ಊರುಗಳಿಗೆ ನಡೆಯಲು ಶಕ್ತರಲ್ಲ. ಅವರಿಗೆ ಪಡಿತರ ಚೀಟಿಗಳೂ ಇಲ್ಲ. ಹೀಗಿರುವಾಗ, ನೀವು ಅವರಿಗೆ ಹೇಗೆ ಆಹಾರ ತಲುಪಿಸುತ್ತೀರಿ?

ಆಂಧ್ರಪ್ರದೇಶದ ಅನಂತಪುರದಿಂದ ಕೇರಳದ ಕೊಚ್ಚಿ ನಡುವೆ ವಾರಕ್ಕೊಮ್ಮೆ ಓಡಾಡುತ್ತಿದ್ದ ವಲಸೆ ಕಾರ್ಮಿಕರು.

ಆರ್ಥಿಕ ಸಂಕಷ್ಟವು ಈಗಾಗಲೇ ವೇಗ ಪಡೆದುಕೊಳ್ಳುತ್ತಿದೆ. ವಸತಿ ಸಂಕೀರ್ಣಗಳು ಈ ಸಮಸ್ಯೆಗೆ “ಅವರೇ” ಕಾರಣವೆಂದು ನಂಬಿರುವುದರಿಂದ, ವಲಸೆ ಕಾರ್ಮಿಕರು, ಕೊಳೆಗೇರಿ ನಿವಾಸಿಗಳು, ಮನೆಗೆಲಸದವರು ಮತ್ತು ಇತರ ಬಡವರನ್ನು ದೆವ್ವ ಅಥವಾ ರಾಕ್ಷಸರಂತೆ ಕಾಣುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.

ಸತ್ಯ ಏನೆಂದರೆ, ಕೋವಿಡ್-19 ವೈರಸ್ ಮತ್ತು ಅದಕ್ಕಿಂತ ಮೊದಲು ಸಾರ್ಸ್ ವೈರಸನ್ನು ಹರಡಿದವರು ಬಡವರಲ್ಲ; ವಿಮಾನಗಳಲ್ಲಿ ಓಡಾಡುವ ಶ್ರೀಮಂತರು. ಇದನ್ನು ಗುರುತಿಸಿ ಒಪ್ಪಿಕೊಳ್ಳುವ ಬದಲು ನಾವು ಈ “ಅನಪೇಕ್ಷಣೀಯ” ಜನರನ್ನು ಹೊರದಬ್ಬಿ, ನಗರಗಳನ್ನು ಸ್ವಚ್ಛಗೊಳಿಸಲು ಯತ್ನಿಸುತ್ತಿದ್ದೇವೆ. ಇದನ್ನು ಪರಿಗಣಿಸಿ: ಒಂದುವೇಳೆ ವಿಮಾನದಲ್ಲಿ ಹಾರಾಡುವ ಈ ಶ್ರೀಮಂತರು ಊರಿಗೆ ಮರಳುವ ಈ ವಲಸೆ ಕಾರ್ಮಿಕರಿಗೆ ವೈರಸನ್ನು ಹರಡಿದ್ದರೆ, ಅವರು ತಮ್ಮ ಹಳ್ಳಿ ತಲುಪಿದಾಗ ಪರಿಣಾಮ ಏನಾಗಬಹುದು?

ದಿಲ್ಲಿ ಮತ್ತು ನೊಯಿಡಾದಿಂ ಉತ್ತರ ಪ್ರದೇಶ ಮತ್ತಿತರ ರಾಜ್ಯಗಳಿಗೆ ಕಾಲ್ನಡಿಗೆಯಲ್ಲಿ ಹೋಗುತ್ತಿರುವ ವಲಸೆ ಕಾರ್ಮಿಕರ ಕುರಿತು ಕಲಾವಿದೆ ಲಬಾನಿ ಜಾಂಗಿ ಅವರ ವರ್ಣಚಿತ್ರ

ಕೆಲವರು ತಮ್ಮ ಊರಿಗೆ- ಅದು ತಮ್ಮದೇ ರಾಜ್ಯದಲ್ಲಿರಲಿ, ನೆರೆಯ ಅಥವಾ ಬೇರೆ ರಾಜ್ಯದಲ್ಲೇ ಇರಲಿ- ನಡೆದುಕೊಂಡೇ ಮನೆಗೆ ಮರಳುವುದು ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಸಾಂಪ್ರದಾಯಿಕ ವಿಧಾನವೆಂದರೆ ದಾರಿಯಲ್ಲಿ ಸಿಗುವ ಚಹಾದಂಗಡಿಗಳು, ದಾಬಾಗಳು ಮುಂತಾದ ಕಡೆ ಅದೂಇದೂ ಕೆಲಸ ಮಾಡಿ, ದಿನದ ಊಟ ಗಳಿಸಿ, ರಾತ್ರಿ ಮಲಗಲು ಅಲ್ಲಿಯೇ ನೆಲೆಕಂಡುಕೊಂಡು ಮುಂದುವರಿಯುವುದು. ಈಗ ಇವುಗಳಲ್ಲಿ ಹೆಚ್ಚಿನವು ಮುಚ್ಚಿರುವುದರಿಂದ ಏನಾಗಲಿದೆ?

ಆದರೆ, ತಾವು ಮನೆಯಲ್ಲಿ ಉಳಿದರೆ ಮತ್ತು ದೈಹಿಕ ಅಂತರ ಕಾಪಾಡಿಕೊಂಡು ಬಂದರೆ ಎಲ್ಲವೂ ಸರಿಯಾಗುತ್ತದೆ ಎಂದು ಸಾಕಷ್ಟು ಸ್ಥಿತಿವಂತರು, ಮತ್ತು ಮಧ್ಯಮ ವರ್ಗದವರು ನಂಬಿದಂತಿದೆ. ಹೌದು; ಅದು ಕನಿಷ್ಟ ಪಕ್ಷ ನಮ್ಮನ್ನು ಸುರಕ್ಷಿತವಾಗಿ ಇಡುತ್ತದೆ. ಆದರೆ, ಆರ್ಥಿಕ ಸಂಕಷ್ಟವು ತಮ್ಮನ್ನು ಹೇಗೆ ಬಾಧಿಸಲಿದೆ ಎಂಬ ಅರಿವು ಅವರಿಗೆ ಇದ್ದಂತಿಲ್ಲ. ಕೆಲವರಿಗೆ ಈ “ಸಾಮಾಜಿಕ ಅಂತರ”ವು ಬೇರೆಯೇ ಅರ್ಥ ಕೊಡುತ್ತದೆ. ನಾವು ಎರಡು ಸಹಸ್ರಮಾನಗಳಿಂದಲೂ ಅತ್ಯಂತ ಪ್ರಬಲವಾದ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬರುತ್ತಿದ್ದೇವೆ. ಅದೆಂದರೆ- ಜಾತಿ. ಜಾತಿ ಮತ್ತು ವರ್ಗ ಸಂಬಂಧಿ ಅಂಶಗಳು ನಮ್ಮ ಇಂದಿನ ಲಾಕ್‌ಡೌನ್ ಪ್ರಕ್ರಿಯೆಯಲ್ಲಿಯೂ ಅಡಕವಾಗಿವೆ.

ಅಕ್ರಮ ವಲಸಿಗರಲ್ಲ ಇವರು! ಊರಿಗೆ ಮರಳಲು ಹಂಬಲಿಸುತ್ತಿರುವ ವಲಸೆ ಕಾರ್ಮಿಕರು.

ಪ್ರತೀವರ್ಷ ಹತ್ತಿರಹತ್ತಿರ ಎರಡೂವರೆ ಲಕ್ಷ ಭಾರತೀಯರು ಕ್ಷಯರೋಗದಿಂದ ಸಾಯುತ್ತಿದ್ದರೆಂಬ ಕುರಿತು ನಮಗೆ ಒಂದು ರಾಷ್ಟ್ರವಾಗಿ ಏನೂ ಅನಿಸುವಂತೆ ಕಾಣುವುದಿಲ್ಲ. ಅಥವಾ ವಾರ್ಷಿಕವಾಗಿ ಅತಿಸಾರ (Diahorea) ಒಂದು ಲಕ್ಷದಷ್ಟು ಮಕ್ಕಳನ್ನು ಬಲಿತೆಗೆದುಕೊಳ್ಳುತ್ತಿದೆ ಎಂಬುದೂ ನಮ್ಮನ್ನು ಕಾಡುವುದಿಲ್ಲ. ಅವರು ನಾವಲ್ಲ!

ಸುಂದರ ಜನರಿಗೆ- ಕೆಲವು ಮಾರಕ ರೋಗಗಳನ್ನು ಎದುರಿಸುವ ಶಕ್ತಿ ತಮಗಿಲ್ಲ ಎಂದು ತಿಳಿದಾಗ- ತೀರಾ ಭಯ ಹುಟ್ಟುತ್ತದೆ. ಸಾರ್ಸ್ ವೇಳೆ ಆದುದು ಹಾಗೆಯೇ. 1994ರಲ್ಲಿ ಸೂರತ್‌ನಲ್ಲಿ ಪ್ಲೇಗ್ ಕಾಣಿಸಿಕೊಂಡಾಗಲೂ ಹಾಗೆಯೇ ಆಗಿತ್ತು. ಎರಡೂ ಭಯಾನಕ ರೋಗಗಳು. ಆದರೆ, ಅವು ಭಾರತದಲ್ಲಿ ಕೊಲ್ಲಲು ಸಾಧ್ಯವಿರುವುದಕ್ಕಿಂತ ಕಡಿಮೆ ಜನರನ್ನು ಕೊಂದವು. ಆದರೆ, ಅವು ಬಹಳಷ್ಟು ಗಮನವನ್ನು ಸೆಳೆದವು. ಸೂರತ್ ಕುರಿತು ನಾನು ಆಗ ಹೀಗೆ ಬರೆದಿದ್ದೆ: “ಪ್ಲೇಗಿನ ಕೀಟಾಣುಗಳು ವರ್ಗಬೇಧವನ್ನು ಅನುಸರಿಸದೇ ಇರುವುದಕ್ಕಾಗಿ ಕುಖ್ಯಾತವಾಗಿವೆ… ಇದಕ್ಕಿಂತಲೂ ಕೆಟ್ಟ ವಿಷಯ ಎಂದರೆ…ಅವು ವಿಮಾನ ಹತ್ತಿ ಕ್ಲಬ್‌ ಕ್ಲಾಸ್‌ನಲ್ಲಿ ಹಾರಿ ನ್ಯೂಯಾರ್ಕ್ ತಲಪಬಲ್ಲವು.”

ಕೃಪೆ: “ಪರಿ”

ಇದನ್ನೂ ಓದಿ: ಚಿಪ್ಪುಹಂದಿಗಳಿಂದ ಕೊರೊನಾ ವೈರಸ್ ಹರಡಿರಬಹುದು… 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...