Homeಮುಖಪುಟಸಂಜೆ ವೇಳೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡುವಂತೆ ಶಿವಮೊಗ್ಗದ ವರ್ತಕರ ಮನವಿ

ಸಂಜೆ ವೇಳೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡುವಂತೆ ಶಿವಮೊಗ್ಗದ ವರ್ತಕರ ಮನವಿ

- Advertisement -
- Advertisement -

ಶಿವಮೊಗ್ಗದಲ್ಲಿ ಸಂಜೆ ಬಳಿಕ ವ್ಯಾಪಾರ ವಹಿವಾಟಿನ ಮೇಲೆ ಹೇರಲಾಗಿರುವ ನಿರ್ಬಂಧವನ್ನು ಹಿಂಪಡೆದು ವ್ಯಾಪಾರಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳು ಜಿಲ್ಲಾಧಿಕಾರಿ ಡಾ. ಆರ್‌ ಸೆಲ್ವಾಮಣಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸ್ವಾತಂತ್ರ್ಯ ದಿನದಂದು ಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಹಾಗಾಗಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ವ್ಯಾಪಾರ ವಹಿವಾಟನ್ನು ನಿರ್ಬಂಧಿಸಲಾಗಿತ್ತು.

ಸದ್ಯದ ನಿರ್ಬಂಧದಿಂದಾಗಿ ಸರಿಯಾಗಿ ವ್ಯಾಪಾರ ನಡೆಯುತ್ತಿಲ್ಲ. ಬಹಳಷ್ಟು ವ್ಯಾಪಾರಸ್ಥರಿಗೆ ನಷ್ಟ ಉಂಟಾಗಿದೆ. ದಯವಿಟ್ಟು ಪೂರ್ಣ ಪ್ರಮಾಣದಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ಸಂಘವು ಮನವಿ ಮಾಡಿದೆ.

“ಪ್ರಸ್ತುತ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಹಾಗಾಗಿ, ಇನ್ನು ಮುಂದೆ ಸಂಜೆ ನಂತರವೂ ವ್ಯಾಪಾರ ವಹಿವಾಟಿಗೆ ನಿಯಮಾನುಸಾರ ಅನುಮತಿ ನೀಡಬೇಕು” ಎಂದು  ಸಂಘದ ಅಧ್ಯಕ್ಷ ಎನ್‌. ಗೋಪಿನಾಥ್, ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹಕಾರ್ಯದರ್ಶಿ ಜಿ.ವಿಜಯಕುಮಾರ್ ಒತ್ತಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಿಟಿ ಸೆಂಟರ್ ಮಾಲ್‌‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮಧ್ಯದಲ್ಲಿದ್ದ ವಿ.ಡಿ.ಸಾವರ್ಕರ್‌ ಫೋಟೋವನ್ನು ಜನರೇ ತೆರವು ಮಾಡಿಸಿದ್ದರು. “ಬ್ರಿಟಿಷರ ಬೂಟು ನೆಕ್ಕಿ, ಕ್ಷಮಾಪಣೆ ಭಿಕ್ಷೆ ಕೇಳಿದ್ದ ಸಾವರ್ಕರ್ ಭಾವಚಿತ್ರವನ್ನು ತೆಗೆದು ಹಾಕಬೇಕು” ಎಂದು ಆಗ್ರಹಿಸುತ್ತಿರುವ ಯುವಕನಿಗೆ ಇನ್ನಿತರರು ಸಾಥ್ ನೀಡಿರುವುದು ವಿಡಿಯೊದಲ್ಲಿ ದಾಖಲಾಗಿತ್ತು.

ಅದಾದ ನಂತರ ಗಾಂಧಿ ಬಜಾರ್‌ನ ತರಕಾರಿ ಮಾರ್ಕೆಟ್ ಬಳಿಯೂ ಸಾವರ್ಕರ್ ಫೋಟೊ ಹಾಕಲಾಗಿತ್ತು. ಈ ಕುರಿತು ಗಲಾಟೆ ಆರಂಭವಾಗಿ ಪ್ರೇಮ್ ಸಿಂಗ್ ಎಂಬಾತನಿಗೆ ಚೂರಿಯಿಂದ ಇರಿಯಲಾಗಿತ್ತು. ಆದರ ಆರೋಪಿಗಳಲ್ಲಿ ಒಬ್ಬನಾದ ಮಹಮ್ಮದ್ ಜಬಿ ಎಂಬಾತನನ್ನು ಬಂಧಿಸುವ ವೇಳೆ ಪರಾರಿಯಾಗಲು ಯತ್ನಿಸಿದ ಎಂಬ ಆರೋಪ ಮೇಲೆ ಆತನ ಕಾಲಿಗೆ ಗುಂಡು ಹಾರಿಸಲಾಗಿತ್ತು. ಈ ಎಲ್ಲ ಘಟನೆಗಳಿಂದ ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ್ದು, ಸಂಜೆ ವೇಳೆ ವ್ಯಾಪಾರ ವಹಿವಾಟನ್ನು ನಿಷೇಧಿಸಲಾಗಿತ್ತು. ಇದರಿಂದಾಗಿ ಅಂದಿನ ದುಡಿಮೆಯನ್ನು ನಂಬಿ ಬದುಕುತ್ತಿದ್ದ ಬಡವರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: ಶಿವಮೊಗ್ಗ: ಸಾವರ್ಕರ್‌ ಫೋಟೋ ತೆರವು ಮಾಡಿಸಿದ ಜನತೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...