Homeಮುಖಪುಟಸಂಜೆ ವೇಳೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡುವಂತೆ ಶಿವಮೊಗ್ಗದ ವರ್ತಕರ ಮನವಿ

ಸಂಜೆ ವೇಳೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡುವಂತೆ ಶಿವಮೊಗ್ಗದ ವರ್ತಕರ ಮನವಿ

- Advertisement -
- Advertisement -

ಶಿವಮೊಗ್ಗದಲ್ಲಿ ಸಂಜೆ ಬಳಿಕ ವ್ಯಾಪಾರ ವಹಿವಾಟಿನ ಮೇಲೆ ಹೇರಲಾಗಿರುವ ನಿರ್ಬಂಧವನ್ನು ಹಿಂಪಡೆದು ವ್ಯಾಪಾರಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳು ಜಿಲ್ಲಾಧಿಕಾರಿ ಡಾ. ಆರ್‌ ಸೆಲ್ವಾಮಣಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸ್ವಾತಂತ್ರ್ಯ ದಿನದಂದು ಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಹಾಗಾಗಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ವ್ಯಾಪಾರ ವಹಿವಾಟನ್ನು ನಿರ್ಬಂಧಿಸಲಾಗಿತ್ತು.

ಸದ್ಯದ ನಿರ್ಬಂಧದಿಂದಾಗಿ ಸರಿಯಾಗಿ ವ್ಯಾಪಾರ ನಡೆಯುತ್ತಿಲ್ಲ. ಬಹಳಷ್ಟು ವ್ಯಾಪಾರಸ್ಥರಿಗೆ ನಷ್ಟ ಉಂಟಾಗಿದೆ. ದಯವಿಟ್ಟು ಪೂರ್ಣ ಪ್ರಮಾಣದಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ಸಂಘವು ಮನವಿ ಮಾಡಿದೆ.

“ಪ್ರಸ್ತುತ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಹಾಗಾಗಿ, ಇನ್ನು ಮುಂದೆ ಸಂಜೆ ನಂತರವೂ ವ್ಯಾಪಾರ ವಹಿವಾಟಿಗೆ ನಿಯಮಾನುಸಾರ ಅನುಮತಿ ನೀಡಬೇಕು” ಎಂದು  ಸಂಘದ ಅಧ್ಯಕ್ಷ ಎನ್‌. ಗೋಪಿನಾಥ್, ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹಕಾರ್ಯದರ್ಶಿ ಜಿ.ವಿಜಯಕುಮಾರ್ ಒತ್ತಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಿಟಿ ಸೆಂಟರ್ ಮಾಲ್‌‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮಧ್ಯದಲ್ಲಿದ್ದ ವಿ.ಡಿ.ಸಾವರ್ಕರ್‌ ಫೋಟೋವನ್ನು ಜನರೇ ತೆರವು ಮಾಡಿಸಿದ್ದರು. “ಬ್ರಿಟಿಷರ ಬೂಟು ನೆಕ್ಕಿ, ಕ್ಷಮಾಪಣೆ ಭಿಕ್ಷೆ ಕೇಳಿದ್ದ ಸಾವರ್ಕರ್ ಭಾವಚಿತ್ರವನ್ನು ತೆಗೆದು ಹಾಕಬೇಕು” ಎಂದು ಆಗ್ರಹಿಸುತ್ತಿರುವ ಯುವಕನಿಗೆ ಇನ್ನಿತರರು ಸಾಥ್ ನೀಡಿರುವುದು ವಿಡಿಯೊದಲ್ಲಿ ದಾಖಲಾಗಿತ್ತು.

ಅದಾದ ನಂತರ ಗಾಂಧಿ ಬಜಾರ್‌ನ ತರಕಾರಿ ಮಾರ್ಕೆಟ್ ಬಳಿಯೂ ಸಾವರ್ಕರ್ ಫೋಟೊ ಹಾಕಲಾಗಿತ್ತು. ಈ ಕುರಿತು ಗಲಾಟೆ ಆರಂಭವಾಗಿ ಪ್ರೇಮ್ ಸಿಂಗ್ ಎಂಬಾತನಿಗೆ ಚೂರಿಯಿಂದ ಇರಿಯಲಾಗಿತ್ತು. ಆದರ ಆರೋಪಿಗಳಲ್ಲಿ ಒಬ್ಬನಾದ ಮಹಮ್ಮದ್ ಜಬಿ ಎಂಬಾತನನ್ನು ಬಂಧಿಸುವ ವೇಳೆ ಪರಾರಿಯಾಗಲು ಯತ್ನಿಸಿದ ಎಂಬ ಆರೋಪ ಮೇಲೆ ಆತನ ಕಾಲಿಗೆ ಗುಂಡು ಹಾರಿಸಲಾಗಿತ್ತು. ಈ ಎಲ್ಲ ಘಟನೆಗಳಿಂದ ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ್ದು, ಸಂಜೆ ವೇಳೆ ವ್ಯಾಪಾರ ವಹಿವಾಟನ್ನು ನಿಷೇಧಿಸಲಾಗಿತ್ತು. ಇದರಿಂದಾಗಿ ಅಂದಿನ ದುಡಿಮೆಯನ್ನು ನಂಬಿ ಬದುಕುತ್ತಿದ್ದ ಬಡವರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: ಶಿವಮೊಗ್ಗ: ಸಾವರ್ಕರ್‌ ಫೋಟೋ ತೆರವು ಮಾಡಿಸಿದ ಜನತೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...