Homeಮುಖಪುಟಸಂಜೆ ವೇಳೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡುವಂತೆ ಶಿವಮೊಗ್ಗದ ವರ್ತಕರ ಮನವಿ

ಸಂಜೆ ವೇಳೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡುವಂತೆ ಶಿವಮೊಗ್ಗದ ವರ್ತಕರ ಮನವಿ

- Advertisement -
- Advertisement -

ಶಿವಮೊಗ್ಗದಲ್ಲಿ ಸಂಜೆ ಬಳಿಕ ವ್ಯಾಪಾರ ವಹಿವಾಟಿನ ಮೇಲೆ ಹೇರಲಾಗಿರುವ ನಿರ್ಬಂಧವನ್ನು ಹಿಂಪಡೆದು ವ್ಯಾಪಾರಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳು ಜಿಲ್ಲಾಧಿಕಾರಿ ಡಾ. ಆರ್‌ ಸೆಲ್ವಾಮಣಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸ್ವಾತಂತ್ರ್ಯ ದಿನದಂದು ಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಹಾಗಾಗಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ವ್ಯಾಪಾರ ವಹಿವಾಟನ್ನು ನಿರ್ಬಂಧಿಸಲಾಗಿತ್ತು.

ಸದ್ಯದ ನಿರ್ಬಂಧದಿಂದಾಗಿ ಸರಿಯಾಗಿ ವ್ಯಾಪಾರ ನಡೆಯುತ್ತಿಲ್ಲ. ಬಹಳಷ್ಟು ವ್ಯಾಪಾರಸ್ಥರಿಗೆ ನಷ್ಟ ಉಂಟಾಗಿದೆ. ದಯವಿಟ್ಟು ಪೂರ್ಣ ಪ್ರಮಾಣದಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ಸಂಘವು ಮನವಿ ಮಾಡಿದೆ.

“ಪ್ರಸ್ತುತ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಹಾಗಾಗಿ, ಇನ್ನು ಮುಂದೆ ಸಂಜೆ ನಂತರವೂ ವ್ಯಾಪಾರ ವಹಿವಾಟಿಗೆ ನಿಯಮಾನುಸಾರ ಅನುಮತಿ ನೀಡಬೇಕು” ಎಂದು  ಸಂಘದ ಅಧ್ಯಕ್ಷ ಎನ್‌. ಗೋಪಿನಾಥ್, ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹಕಾರ್ಯದರ್ಶಿ ಜಿ.ವಿಜಯಕುಮಾರ್ ಒತ್ತಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಿಟಿ ಸೆಂಟರ್ ಮಾಲ್‌‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮಧ್ಯದಲ್ಲಿದ್ದ ವಿ.ಡಿ.ಸಾವರ್ಕರ್‌ ಫೋಟೋವನ್ನು ಜನರೇ ತೆರವು ಮಾಡಿಸಿದ್ದರು. “ಬ್ರಿಟಿಷರ ಬೂಟು ನೆಕ್ಕಿ, ಕ್ಷಮಾಪಣೆ ಭಿಕ್ಷೆ ಕೇಳಿದ್ದ ಸಾವರ್ಕರ್ ಭಾವಚಿತ್ರವನ್ನು ತೆಗೆದು ಹಾಕಬೇಕು” ಎಂದು ಆಗ್ರಹಿಸುತ್ತಿರುವ ಯುವಕನಿಗೆ ಇನ್ನಿತರರು ಸಾಥ್ ನೀಡಿರುವುದು ವಿಡಿಯೊದಲ್ಲಿ ದಾಖಲಾಗಿತ್ತು.

ಅದಾದ ನಂತರ ಗಾಂಧಿ ಬಜಾರ್‌ನ ತರಕಾರಿ ಮಾರ್ಕೆಟ್ ಬಳಿಯೂ ಸಾವರ್ಕರ್ ಫೋಟೊ ಹಾಕಲಾಗಿತ್ತು. ಈ ಕುರಿತು ಗಲಾಟೆ ಆರಂಭವಾಗಿ ಪ್ರೇಮ್ ಸಿಂಗ್ ಎಂಬಾತನಿಗೆ ಚೂರಿಯಿಂದ ಇರಿಯಲಾಗಿತ್ತು. ಆದರ ಆರೋಪಿಗಳಲ್ಲಿ ಒಬ್ಬನಾದ ಮಹಮ್ಮದ್ ಜಬಿ ಎಂಬಾತನನ್ನು ಬಂಧಿಸುವ ವೇಳೆ ಪರಾರಿಯಾಗಲು ಯತ್ನಿಸಿದ ಎಂಬ ಆರೋಪ ಮೇಲೆ ಆತನ ಕಾಲಿಗೆ ಗುಂಡು ಹಾರಿಸಲಾಗಿತ್ತು. ಈ ಎಲ್ಲ ಘಟನೆಗಳಿಂದ ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ್ದು, ಸಂಜೆ ವೇಳೆ ವ್ಯಾಪಾರ ವಹಿವಾಟನ್ನು ನಿಷೇಧಿಸಲಾಗಿತ್ತು. ಇದರಿಂದಾಗಿ ಅಂದಿನ ದುಡಿಮೆಯನ್ನು ನಂಬಿ ಬದುಕುತ್ತಿದ್ದ ಬಡವರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: ಶಿವಮೊಗ್ಗ: ಸಾವರ್ಕರ್‌ ಫೋಟೋ ತೆರವು ಮಾಡಿಸಿದ ಜನತೆ; ವಿಡಿಯೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...