Homeಮುಖಪುಟಹರಿಯಾಣ ಉಪಮುಖ್ಯಮಂತ್ರಿಯ ರಾಜೀನಾಮೆ ನನ್ನ ಕಿಸೆಯಲ್ಲಿದೆ: ಜೆಜೆಪಿ ನಾಯಕ ಅಜಯ್ ಚೌಟಾಲ

ಹರಿಯಾಣ ಉಪಮುಖ್ಯಮಂತ್ರಿಯ ರಾಜೀನಾಮೆ ನನ್ನ ಕಿಸೆಯಲ್ಲಿದೆ: ಜೆಜೆಪಿ ನಾಯಕ ಅಜಯ್ ಚೌಟಾಲ

ರೈತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಹರಿಯಾಣ ಮೈತ್ರಿ ಸರ್ಕಾರದಲ್ಲಿ ಮಿತ್ರಪಕ್ಷವಾಗಿರುವ ಜೆಜೆಪಿಗೆ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಾಸು ಪಡೆಯುವಂತೆ ಒತ್ತಡ ಹೆಚ್ಚಾಗುತ್ತಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ದ ರೈತರು ಹೋರಾಟ ನಡೆಸುತ್ತಿರುವ ನಡುವೆಯೆ, ಹರಿಯಾಣದ ಮೈತ್ರಿ ಸರ್ಕಾರದಲ್ಲಿ ಮಿತ್ರಪಕ್ಷವಾಗಿರುವ ಜೆಜೆಪಿ ಮೇಲೆ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಾಸು ಪಡೆಯಬೇಕು ಎಂಬ ಒತ್ತಡ ಹೆಚ್ಚಾಗುತ್ತಿದೆ. ಈ ಬಗ್ಗೆ ಜೆಜೆಪಿ ನಾಯಕ ಅಜಯ್ ಚೌಟಾಲಾ ಶನಿವಾರ ಮಾತನಾಡಿದ್ದು “ಉಪಮುಖ್ಯಮಂತ್ರಿ ದುಶ್ಯಂತ್ ಅವರ ರಾಜೀನಾಮೆ ನನ್ನ ಕಿಸೆಯಲ್ಲಿದ್ದು, ಉದ್ದೇಶಗಳು ಪೂರೈಸುವುದಿದ್ದರೆ ತಕ್ಷಣವೆ ರಾಜೀನಾಮೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ದುಶ್ಯಂತ್ ಅವರ ತಂದೆ ಅಜಯ್ ಚೌಟಾಲಾ ಪ್ರಸ್ತುತ ನವದೆಹಲಿಯ ತಿಹಾರ್ ಜೈಲಿನಿಂದ ಪೆರೋಲ್‌‌‌ನಲ್ಲಿ ಹೊರಗಿದ್ದಾರೆ, ಅವರು ಶಿಕ್ಷಕರ ನೇಮಕಾತಿ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಜಯ್ ಚೌಟಾಲಾ, “ದುಶ್ಯಂತ್ ಅವರ ರಾಜೀನಾಮೆ ನನ್ನ ಜೇಬಿನಲ್ಲಿದೆ. ಉದ್ದೇಶಗಳು ಪೂರೈಸುವುದಿದ್ದರೆ ನಾನು ತಕ್ಷಣ ಅದನ್ನು ನೀಡಬಲ್ಲೆ. ಈ ಕಾನೂನನ್ನು ಕೇಂದ್ರ ಸರ್ಕಾರ ಮಾಡಿದೆ. ಒಂದೋ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಬೇಕು ಅಥವಾ ಹರಿಯಾಣದ ಎಲ್ಲಾ 10 ಲೋಕಸಭಾ ಸಂಸದರು ರಾಜೀನಾಮೆ ನೀಡಬೇಕು ಅಥವಾ ಈ ಕಾನೂನುಗಳನ್ನು ಅನುಮೋದಿಸಿದ ರಾಜ್ಯಸಭೆಯ ಎಲ್ಲಾ ಐವರು ಸದಸ್ಯರು ರಾಜೀನಾಮೆ ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ – ಗ್ರೌಂಡ್ ರಿಪೋರ್ಟ್

“ಉಪಮುಖ್ಯಮಂತ್ರಿ ದುಶ್ಯಂತ್ ಅವರ ರಾಜೀನಾಮೆಯಿಂದಲೋ ಅಥವಾ ಯಾವುದೇ ಸಚಿವರ ರಾಜೀನಾಮೆಯೊಂದಿಗೆ, ಉದ್ದೇಶಗಳು ಪೂರೈಸುವುದಾದರೆ, ಉಪ ಮುಖ್ಯಮಂತ್ರಿಯ ರಾಜೀನಾಮೆ ನನ್ನ ಜೇಬಿನಲ್ಲಿದೆ. ನಾನು ಒಂದು ನಿಮಿಷ ತೆಗೆದುಕೊಳ್ಳುವುದಿಲ್ಲ ಎಂದು ನಾನು ಮೊದಲೇ ಹೇಳಿದ್ದೆ. ಆದರೆ,  ವಿರೋಧ ಪಕ್ಷಗಳು ಮೊದಲು ಸಟ್ಲೇಜ್ ಯಮುನಾ ಲಿಂಕ್ ನೀರಿನ ಸಮಸ್ಯೆಯನ್ನು ಸಹ ಪಡೆಯುತ್ತಾರೆಯೆ ಎಂದು ಹೇಳಬೇಕು” ಎಂದು ಹೇಳಿದ್ದಾರೆ. ಹರಿಯಾಣಕ್ಕೆ ಸಟ್ಲೇಜ್ ಯಮುನಾ ಲಿಂಕ್‌ ನೀರಿನ ಆಧಾರವಾಗಿದೆ.

ಐಎನ್‌ಎಲ್‌ಡಿಯ ಏಕೈಕ ಶಾಸಕ ಮತ್ತು ಅವರ ಹಿರಿಯ ಸಹೋದರ ಅಭಯ್ ಸಿಂಗ್ ಚೌಟಾಲಾ ಅವರು ಎಲ್ಲೆನಾಬಾದ್ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅಜಯ್ ಚೌಟಾಲಾ, “ಅವರ ರಾಜೀನಾಮೆಯೊಂದಿಗೆ ಯಾವುದೇ ಉದ್ದೇಶಗಳು ಪೂರೈಸಲಾಗಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಹರಿಯಾಣದಲ್ಲಿ ಮತ್ತೊಂದು ಮಹಾಪಂಚಾಯತ್ – 50,000 ಜನ ಸೇರುವ ನಿರೀಕ್ಷೆ!

ನಡೆಯುತ್ತಿರುವ ಹೋರಾಟದ ಬಗ್ಗೆ ಮತ್ತಷ್ಟು ಮಾತನಾಡಿದ, ಅಜಯ್ ಚೌಟಾಲಾ, “ಚರ್ಚೆಯ ಮೂಲಕ ಮಾತ್ರ ಸಮಸ್ಯೆಯನ್ನು ಪರಿಹರಿಸಬಹುದು ಎಂದು ನಾನು ಮೊದಲ ದಿನದಿಂದಲೇ ಹೇಳುತ್ತಿದ್ದೆ. ಮಾತುಕತೆ ನಡೆಸಿದರೆ,ಎರಡೂ ಕಡೆಯವರು ಒಂದು ಹೆಜ್ಜೆ ಹಿಂದಕ್ಕೆ ಇಟ್ಟರೆ ಮಾತ್ರ ನಿರ್ಣಯವನ್ನು ಸಾಧಿಸಬಹುದು” ಎಂದು ಹೇಳಿದ್ದಾರೆ.

“ರೈತರು ಕೆಲವು ವಿಷಯಗಳೊಂದಿಗೆ ಹೋರಾಟ ಪ್ರಾರಂಭಿಸಿದ್ದರು, ಕೃಷಿ ಸಚಿವರು ಸ್ಪಷ್ಟೀಕರಣಗಳನ್ನು ನೀಡಿದ್ದರು. ಪ್ರಧಾನ ಮಂತ್ರಿ, ಉಭಯ ಸದನಗಳಲ್ಲಿ ನಿರ್ದಿಷ್ಟವಾಗಿ ಯಾವ ವಿಷಯಗಳ ಬಗ್ಗೆ ಆಕ್ಷೇಪಣೆಗಳಿವೆ ಅದನ್ನು ಪರಿಹರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು. ಆದರೂ, ಜನರು ತೃಪ್ತರಾಗದಿದ್ದರೆ, ಏನು ಮಾಡಬಹುದು. ಅವರು ಹೋಗಿ ಸರ್ಕಾರದೊಂದಿಗೆ ಚರ್ಚೆ ನಡೆಸಬೇಕು. ಎರಡೂ ಕಡೆಯಿಂದ ಸ್ವಲ್ಪ ಬಾಗಿದಾಗ ಮಾತ್ರ ಪರಿಹಾರವಾಗಲಿದೆ” ಎಂದು ಹೇಳಿದ್ದಾರೆ.

ಕಳೆದ ಕೆಲವು ವಾರಗಳಿಂದ, ಉಪಮುಖ್ಯಮಂತ್ರಿ ದುಶ್ಯಂತ್ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ವಿವಿಧ ಹಿರಿಯ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ಎದುರಿಸುತ್ತಿದ್ದಾರೆ. ಅವರು ನಡೆಸಲು ಉದ್ದೇಶಿಸಿ ಸ್ಥಳಗಳಲ್ಲಿ ಹಿಂಸಾಚಾರ ಮತ್ತು ಪ್ರತಿಭಟನೆಗಳಿಂದಾಗಿ ಅವರಿಗೆ ಯಾವುದೇ ಸಾರ್ವಜನಿಕ ಸಮಾರಂಭವನ್ನು ನಡೆಸಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...