Homeಮುಖಪುಟಹರಿಯಾಣ ಉಪಮುಖ್ಯಮಂತ್ರಿಯ ರಾಜೀನಾಮೆ ನನ್ನ ಕಿಸೆಯಲ್ಲಿದೆ: ಜೆಜೆಪಿ ನಾಯಕ ಅಜಯ್ ಚೌಟಾಲ

ಹರಿಯಾಣ ಉಪಮುಖ್ಯಮಂತ್ರಿಯ ರಾಜೀನಾಮೆ ನನ್ನ ಕಿಸೆಯಲ್ಲಿದೆ: ಜೆಜೆಪಿ ನಾಯಕ ಅಜಯ್ ಚೌಟಾಲ

ರೈತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಹರಿಯಾಣ ಮೈತ್ರಿ ಸರ್ಕಾರದಲ್ಲಿ ಮಿತ್ರಪಕ್ಷವಾಗಿರುವ ಜೆಜೆಪಿಗೆ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಾಸು ಪಡೆಯುವಂತೆ ಒತ್ತಡ ಹೆಚ್ಚಾಗುತ್ತಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ದ ರೈತರು ಹೋರಾಟ ನಡೆಸುತ್ತಿರುವ ನಡುವೆಯೆ, ಹರಿಯಾಣದ ಮೈತ್ರಿ ಸರ್ಕಾರದಲ್ಲಿ ಮಿತ್ರಪಕ್ಷವಾಗಿರುವ ಜೆಜೆಪಿ ಮೇಲೆ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಾಸು ಪಡೆಯಬೇಕು ಎಂಬ ಒತ್ತಡ ಹೆಚ್ಚಾಗುತ್ತಿದೆ. ಈ ಬಗ್ಗೆ ಜೆಜೆಪಿ ನಾಯಕ ಅಜಯ್ ಚೌಟಾಲಾ ಶನಿವಾರ ಮಾತನಾಡಿದ್ದು “ಉಪಮುಖ್ಯಮಂತ್ರಿ ದುಶ್ಯಂತ್ ಅವರ ರಾಜೀನಾಮೆ ನನ್ನ ಕಿಸೆಯಲ್ಲಿದ್ದು, ಉದ್ದೇಶಗಳು ಪೂರೈಸುವುದಿದ್ದರೆ ತಕ್ಷಣವೆ ರಾಜೀನಾಮೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ದುಶ್ಯಂತ್ ಅವರ ತಂದೆ ಅಜಯ್ ಚೌಟಾಲಾ ಪ್ರಸ್ತುತ ನವದೆಹಲಿಯ ತಿಹಾರ್ ಜೈಲಿನಿಂದ ಪೆರೋಲ್‌‌‌ನಲ್ಲಿ ಹೊರಗಿದ್ದಾರೆ, ಅವರು ಶಿಕ್ಷಕರ ನೇಮಕಾತಿ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಜಯ್ ಚೌಟಾಲಾ, “ದುಶ್ಯಂತ್ ಅವರ ರಾಜೀನಾಮೆ ನನ್ನ ಜೇಬಿನಲ್ಲಿದೆ. ಉದ್ದೇಶಗಳು ಪೂರೈಸುವುದಿದ್ದರೆ ನಾನು ತಕ್ಷಣ ಅದನ್ನು ನೀಡಬಲ್ಲೆ. ಈ ಕಾನೂನನ್ನು ಕೇಂದ್ರ ಸರ್ಕಾರ ಮಾಡಿದೆ. ಒಂದೋ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಬೇಕು ಅಥವಾ ಹರಿಯಾಣದ ಎಲ್ಲಾ 10 ಲೋಕಸಭಾ ಸಂಸದರು ರಾಜೀನಾಮೆ ನೀಡಬೇಕು ಅಥವಾ ಈ ಕಾನೂನುಗಳನ್ನು ಅನುಮೋದಿಸಿದ ರಾಜ್ಯಸಭೆಯ ಎಲ್ಲಾ ಐವರು ಸದಸ್ಯರು ರಾಜೀನಾಮೆ ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ – ಗ್ರೌಂಡ್ ರಿಪೋರ್ಟ್

“ಉಪಮುಖ್ಯಮಂತ್ರಿ ದುಶ್ಯಂತ್ ಅವರ ರಾಜೀನಾಮೆಯಿಂದಲೋ ಅಥವಾ ಯಾವುದೇ ಸಚಿವರ ರಾಜೀನಾಮೆಯೊಂದಿಗೆ, ಉದ್ದೇಶಗಳು ಪೂರೈಸುವುದಾದರೆ, ಉಪ ಮುಖ್ಯಮಂತ್ರಿಯ ರಾಜೀನಾಮೆ ನನ್ನ ಜೇಬಿನಲ್ಲಿದೆ. ನಾನು ಒಂದು ನಿಮಿಷ ತೆಗೆದುಕೊಳ್ಳುವುದಿಲ್ಲ ಎಂದು ನಾನು ಮೊದಲೇ ಹೇಳಿದ್ದೆ. ಆದರೆ,  ವಿರೋಧ ಪಕ್ಷಗಳು ಮೊದಲು ಸಟ್ಲೇಜ್ ಯಮುನಾ ಲಿಂಕ್ ನೀರಿನ ಸಮಸ್ಯೆಯನ್ನು ಸಹ ಪಡೆಯುತ್ತಾರೆಯೆ ಎಂದು ಹೇಳಬೇಕು” ಎಂದು ಹೇಳಿದ್ದಾರೆ. ಹರಿಯಾಣಕ್ಕೆ ಸಟ್ಲೇಜ್ ಯಮುನಾ ಲಿಂಕ್‌ ನೀರಿನ ಆಧಾರವಾಗಿದೆ.

ಐಎನ್‌ಎಲ್‌ಡಿಯ ಏಕೈಕ ಶಾಸಕ ಮತ್ತು ಅವರ ಹಿರಿಯ ಸಹೋದರ ಅಭಯ್ ಸಿಂಗ್ ಚೌಟಾಲಾ ಅವರು ಎಲ್ಲೆನಾಬಾದ್ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅಜಯ್ ಚೌಟಾಲಾ, “ಅವರ ರಾಜೀನಾಮೆಯೊಂದಿಗೆ ಯಾವುದೇ ಉದ್ದೇಶಗಳು ಪೂರೈಸಲಾಗಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಹರಿಯಾಣದಲ್ಲಿ ಮತ್ತೊಂದು ಮಹಾಪಂಚಾಯತ್ – 50,000 ಜನ ಸೇರುವ ನಿರೀಕ್ಷೆ!

ನಡೆಯುತ್ತಿರುವ ಹೋರಾಟದ ಬಗ್ಗೆ ಮತ್ತಷ್ಟು ಮಾತನಾಡಿದ, ಅಜಯ್ ಚೌಟಾಲಾ, “ಚರ್ಚೆಯ ಮೂಲಕ ಮಾತ್ರ ಸಮಸ್ಯೆಯನ್ನು ಪರಿಹರಿಸಬಹುದು ಎಂದು ನಾನು ಮೊದಲ ದಿನದಿಂದಲೇ ಹೇಳುತ್ತಿದ್ದೆ. ಮಾತುಕತೆ ನಡೆಸಿದರೆ,ಎರಡೂ ಕಡೆಯವರು ಒಂದು ಹೆಜ್ಜೆ ಹಿಂದಕ್ಕೆ ಇಟ್ಟರೆ ಮಾತ್ರ ನಿರ್ಣಯವನ್ನು ಸಾಧಿಸಬಹುದು” ಎಂದು ಹೇಳಿದ್ದಾರೆ.

“ರೈತರು ಕೆಲವು ವಿಷಯಗಳೊಂದಿಗೆ ಹೋರಾಟ ಪ್ರಾರಂಭಿಸಿದ್ದರು, ಕೃಷಿ ಸಚಿವರು ಸ್ಪಷ್ಟೀಕರಣಗಳನ್ನು ನೀಡಿದ್ದರು. ಪ್ರಧಾನ ಮಂತ್ರಿ, ಉಭಯ ಸದನಗಳಲ್ಲಿ ನಿರ್ದಿಷ್ಟವಾಗಿ ಯಾವ ವಿಷಯಗಳ ಬಗ್ಗೆ ಆಕ್ಷೇಪಣೆಗಳಿವೆ ಅದನ್ನು ಪರಿಹರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು. ಆದರೂ, ಜನರು ತೃಪ್ತರಾಗದಿದ್ದರೆ, ಏನು ಮಾಡಬಹುದು. ಅವರು ಹೋಗಿ ಸರ್ಕಾರದೊಂದಿಗೆ ಚರ್ಚೆ ನಡೆಸಬೇಕು. ಎರಡೂ ಕಡೆಯಿಂದ ಸ್ವಲ್ಪ ಬಾಗಿದಾಗ ಮಾತ್ರ ಪರಿಹಾರವಾಗಲಿದೆ” ಎಂದು ಹೇಳಿದ್ದಾರೆ.

ಕಳೆದ ಕೆಲವು ವಾರಗಳಿಂದ, ಉಪಮುಖ್ಯಮಂತ್ರಿ ದುಶ್ಯಂತ್ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ವಿವಿಧ ಹಿರಿಯ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ಎದುರಿಸುತ್ತಿದ್ದಾರೆ. ಅವರು ನಡೆಸಲು ಉದ್ದೇಶಿಸಿ ಸ್ಥಳಗಳಲ್ಲಿ ಹಿಂಸಾಚಾರ ಮತ್ತು ಪ್ರತಿಭಟನೆಗಳಿಂದಾಗಿ ಅವರಿಗೆ ಯಾವುದೇ ಸಾರ್ವಜನಿಕ ಸಮಾರಂಭವನ್ನು ನಡೆಸಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...