Homeಮುಖಪುಟಹರಿಯಾಣ ಉಪಮುಖ್ಯಮಂತ್ರಿಯ ರಾಜೀನಾಮೆ ನನ್ನ ಕಿಸೆಯಲ್ಲಿದೆ: ಜೆಜೆಪಿ ನಾಯಕ ಅಜಯ್ ಚೌಟಾಲ

ಹರಿಯಾಣ ಉಪಮುಖ್ಯಮಂತ್ರಿಯ ರಾಜೀನಾಮೆ ನನ್ನ ಕಿಸೆಯಲ್ಲಿದೆ: ಜೆಜೆಪಿ ನಾಯಕ ಅಜಯ್ ಚೌಟಾಲ

ರೈತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಹರಿಯಾಣ ಮೈತ್ರಿ ಸರ್ಕಾರದಲ್ಲಿ ಮಿತ್ರಪಕ್ಷವಾಗಿರುವ ಜೆಜೆಪಿಗೆ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಾಸು ಪಡೆಯುವಂತೆ ಒತ್ತಡ ಹೆಚ್ಚಾಗುತ್ತಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ದ ರೈತರು ಹೋರಾಟ ನಡೆಸುತ್ತಿರುವ ನಡುವೆಯೆ, ಹರಿಯಾಣದ ಮೈತ್ರಿ ಸರ್ಕಾರದಲ್ಲಿ ಮಿತ್ರಪಕ್ಷವಾಗಿರುವ ಜೆಜೆಪಿ ಮೇಲೆ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಾಸು ಪಡೆಯಬೇಕು ಎಂಬ ಒತ್ತಡ ಹೆಚ್ಚಾಗುತ್ತಿದೆ. ಈ ಬಗ್ಗೆ ಜೆಜೆಪಿ ನಾಯಕ ಅಜಯ್ ಚೌಟಾಲಾ ಶನಿವಾರ ಮಾತನಾಡಿದ್ದು “ಉಪಮುಖ್ಯಮಂತ್ರಿ ದುಶ್ಯಂತ್ ಅವರ ರಾಜೀನಾಮೆ ನನ್ನ ಕಿಸೆಯಲ್ಲಿದ್ದು, ಉದ್ದೇಶಗಳು ಪೂರೈಸುವುದಿದ್ದರೆ ತಕ್ಷಣವೆ ರಾಜೀನಾಮೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿ ದುಶ್ಯಂತ್ ಅವರ ತಂದೆ ಅಜಯ್ ಚೌಟಾಲಾ ಪ್ರಸ್ತುತ ನವದೆಹಲಿಯ ತಿಹಾರ್ ಜೈಲಿನಿಂದ ಪೆರೋಲ್‌‌‌ನಲ್ಲಿ ಹೊರಗಿದ್ದಾರೆ, ಅವರು ಶಿಕ್ಷಕರ ನೇಮಕಾತಿ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಜಯ್ ಚೌಟಾಲಾ, “ದುಶ್ಯಂತ್ ಅವರ ರಾಜೀನಾಮೆ ನನ್ನ ಜೇಬಿನಲ್ಲಿದೆ. ಉದ್ದೇಶಗಳು ಪೂರೈಸುವುದಿದ್ದರೆ ನಾನು ತಕ್ಷಣ ಅದನ್ನು ನೀಡಬಲ್ಲೆ. ಈ ಕಾನೂನನ್ನು ಕೇಂದ್ರ ಸರ್ಕಾರ ಮಾಡಿದೆ. ಒಂದೋ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಬೇಕು ಅಥವಾ ಹರಿಯಾಣದ ಎಲ್ಲಾ 10 ಲೋಕಸಭಾ ಸಂಸದರು ರಾಜೀನಾಮೆ ನೀಡಬೇಕು ಅಥವಾ ಈ ಕಾನೂನುಗಳನ್ನು ಅನುಮೋದಿಸಿದ ರಾಜ್ಯಸಭೆಯ ಎಲ್ಲಾ ಐವರು ಸದಸ್ಯರು ರಾಜೀನಾಮೆ ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ – ಗ್ರೌಂಡ್ ರಿಪೋರ್ಟ್

“ಉಪಮುಖ್ಯಮಂತ್ರಿ ದುಶ್ಯಂತ್ ಅವರ ರಾಜೀನಾಮೆಯಿಂದಲೋ ಅಥವಾ ಯಾವುದೇ ಸಚಿವರ ರಾಜೀನಾಮೆಯೊಂದಿಗೆ, ಉದ್ದೇಶಗಳು ಪೂರೈಸುವುದಾದರೆ, ಉಪ ಮುಖ್ಯಮಂತ್ರಿಯ ರಾಜೀನಾಮೆ ನನ್ನ ಜೇಬಿನಲ್ಲಿದೆ. ನಾನು ಒಂದು ನಿಮಿಷ ತೆಗೆದುಕೊಳ್ಳುವುದಿಲ್ಲ ಎಂದು ನಾನು ಮೊದಲೇ ಹೇಳಿದ್ದೆ. ಆದರೆ,  ವಿರೋಧ ಪಕ್ಷಗಳು ಮೊದಲು ಸಟ್ಲೇಜ್ ಯಮುನಾ ಲಿಂಕ್ ನೀರಿನ ಸಮಸ್ಯೆಯನ್ನು ಸಹ ಪಡೆಯುತ್ತಾರೆಯೆ ಎಂದು ಹೇಳಬೇಕು” ಎಂದು ಹೇಳಿದ್ದಾರೆ. ಹರಿಯಾಣಕ್ಕೆ ಸಟ್ಲೇಜ್ ಯಮುನಾ ಲಿಂಕ್‌ ನೀರಿನ ಆಧಾರವಾಗಿದೆ.

ಐಎನ್‌ಎಲ್‌ಡಿಯ ಏಕೈಕ ಶಾಸಕ ಮತ್ತು ಅವರ ಹಿರಿಯ ಸಹೋದರ ಅಭಯ್ ಸಿಂಗ್ ಚೌಟಾಲಾ ಅವರು ಎಲ್ಲೆನಾಬಾದ್ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅಜಯ್ ಚೌಟಾಲಾ, “ಅವರ ರಾಜೀನಾಮೆಯೊಂದಿಗೆ ಯಾವುದೇ ಉದ್ದೇಶಗಳು ಪೂರೈಸಲಾಗಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಹರಿಯಾಣದಲ್ಲಿ ಮತ್ತೊಂದು ಮಹಾಪಂಚಾಯತ್ – 50,000 ಜನ ಸೇರುವ ನಿರೀಕ್ಷೆ!

ನಡೆಯುತ್ತಿರುವ ಹೋರಾಟದ ಬಗ್ಗೆ ಮತ್ತಷ್ಟು ಮಾತನಾಡಿದ, ಅಜಯ್ ಚೌಟಾಲಾ, “ಚರ್ಚೆಯ ಮೂಲಕ ಮಾತ್ರ ಸಮಸ್ಯೆಯನ್ನು ಪರಿಹರಿಸಬಹುದು ಎಂದು ನಾನು ಮೊದಲ ದಿನದಿಂದಲೇ ಹೇಳುತ್ತಿದ್ದೆ. ಮಾತುಕತೆ ನಡೆಸಿದರೆ,ಎರಡೂ ಕಡೆಯವರು ಒಂದು ಹೆಜ್ಜೆ ಹಿಂದಕ್ಕೆ ಇಟ್ಟರೆ ಮಾತ್ರ ನಿರ್ಣಯವನ್ನು ಸಾಧಿಸಬಹುದು” ಎಂದು ಹೇಳಿದ್ದಾರೆ.

“ರೈತರು ಕೆಲವು ವಿಷಯಗಳೊಂದಿಗೆ ಹೋರಾಟ ಪ್ರಾರಂಭಿಸಿದ್ದರು, ಕೃಷಿ ಸಚಿವರು ಸ್ಪಷ್ಟೀಕರಣಗಳನ್ನು ನೀಡಿದ್ದರು. ಪ್ರಧಾನ ಮಂತ್ರಿ, ಉಭಯ ಸದನಗಳಲ್ಲಿ ನಿರ್ದಿಷ್ಟವಾಗಿ ಯಾವ ವಿಷಯಗಳ ಬಗ್ಗೆ ಆಕ್ಷೇಪಣೆಗಳಿವೆ ಅದನ್ನು ಪರಿಹರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು. ಆದರೂ, ಜನರು ತೃಪ್ತರಾಗದಿದ್ದರೆ, ಏನು ಮಾಡಬಹುದು. ಅವರು ಹೋಗಿ ಸರ್ಕಾರದೊಂದಿಗೆ ಚರ್ಚೆ ನಡೆಸಬೇಕು. ಎರಡೂ ಕಡೆಯಿಂದ ಸ್ವಲ್ಪ ಬಾಗಿದಾಗ ಮಾತ್ರ ಪರಿಹಾರವಾಗಲಿದೆ” ಎಂದು ಹೇಳಿದ್ದಾರೆ.

ಕಳೆದ ಕೆಲವು ವಾರಗಳಿಂದ, ಉಪಮುಖ್ಯಮಂತ್ರಿ ದುಶ್ಯಂತ್ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ವಿವಿಧ ಹಿರಿಯ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ಎದುರಿಸುತ್ತಿದ್ದಾರೆ. ಅವರು ನಡೆಸಲು ಉದ್ದೇಶಿಸಿ ಸ್ಥಳಗಳಲ್ಲಿ ಹಿಂಸಾಚಾರ ಮತ್ತು ಪ್ರತಿಭಟನೆಗಳಿಂದಾಗಿ ಅವರಿಗೆ ಯಾವುದೇ ಸಾರ್ವಜನಿಕ ಸಮಾರಂಭವನ್ನು ನಡೆಸಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...