Homeಮುಖಪುಟಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಎರಡು ಅರ್ಜಿಗಳಲ್ಲಿ ಒಂದನ್ನು ವಜಾಗೊಳಿಸಲಾಗಿದೆ

- Advertisement -
- Advertisement -

2002ರ ಕೋಮು ಹಿಂಸಾಚಾರದ ಸಂದರ್ಭದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಕುಟುಂಬದ ಹಲವು ಸದಸ್ಯರನ್ನು ಕೊಂದ 11 ಮಂದಿಯ ಬಿಡುಗಡೆಯ ವಿರುದ್ಧ ಸಂತ್ರಸ್ತೆ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಎರಡು ಅರ್ಜಿಗಳಲ್ಲಿ ಒಂದನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈಗ ವಜಾಗೊಳಿಸಲಾಗಿರುವ ಅರ್ಜಿಯಲ್ಲಿ- ಬಿಡುಗಡೆಯ ಮನವಿಯನ್ನು ಪರಿಗಣಿಸಲು ಗುಜರಾತ್ ಸರ್ಕಾರಕ್ಕೆ ತಿಳಿಸಿದ ಮೇ 2022ರ ಆದೇಶವನ್ನು ಪರಿಶೀಲಿಸುವಂತೆ ಬಿಲ್ಕಿಸ್‌ ಬಾನೋ ಅವರು ನ್ಯಾಯಾಲಯವನ್ನು ಕೋರಿದ್ದರು. “ಬಿಡುಗಡೆಯ ಆಧಾರದ ಮೇಲೆ ಸವಾಲು ಹಾಕಿರುವ ಬಿಲ್ಕಿಸ್ ಅವರ ಇನ್ನೊಂದು ಪ್ರಕರಣ, ಈ ನಿರ್ಧಾರದಿಂದ ತಕ್ಷಣವೇ ಪರಿಣಾಮ ಬೀರುವುದಿಲ್ಲ, ವಿವರವಾದ ಆದೇಶ ಇನ್ನೂ ಲಭ್ಯವಿಲ್ಲ” ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ 11 ಅಪರಾಧಿಗಳನ್ನು ಆಗಸ್ಟ್ 15ರಂದು ಜೈಲಿನಿಂದ ಹೊರಗೆ ಬಿಡಲಾಯಿತು. ಅವರಿಗೆ ಅವಧಿಪೂರ್ವ ಬಿಡುಗಡೆಯನ್ನು ನೀಡಲಾಯಿತು. ‘ಉತ್ತಮ ನಡವಳಿಕೆ’ ಕಾರಣವನ್ನು ನೀಡಲಾಗಿತ್ತು. ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆಯೊಂದಿಗೆ ಗುಜರಾತ್‌ನ ಬಿಜೆಪಿ ಸರ್ಕಾರವು 1992ರ ನೀತಿಯ ಅಡಿಯಲ್ಲಿ ಬಿಡುಗಡೆಗೆ ಅನುಮತಿ ನೀಡಿತ್ತು.

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳನ್ನು ಮುಂಚಿತವಾಗಿ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಇತ್ತಿಚಿನ ನೀತಿಯು ಹೇಳುತ್ತದೆ. ಆದರೆ ಅಂತಹ ಯಾವುದೇ ವಿನಾಯಿತಿಯನ್ನು ಹೊಂದಿರದ 1992ರ ನೀತಿಯು ಈ ಅಪರಾಧಿಗಳಿಗೆ ಅನ್ವಯಿಸುತ್ತದೆ ಎಂಬ ವಾದವನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. 2008ರಲ್ಲಿ ಈ ಅಪರಾಧಿಗಳಿಗೆ ಶಿಕ್ಷೆಯಾದಾಗ 1992ರ ನೀತಿಯು ಜಾರಿಯಲ್ಲಿತ್ತು.

ಇದನ್ನು ಪ್ರಶ್ನಿಸಿದ್ದ ಬಿಲ್ಕಿಸ್ ಬಾನೊ, ನೆರೆಯ ಮಹಾರಾಷ್ಟ್ರದಲ್ಲಿ ವಿಚಾರಣೆ ನಡೆದಿರುವುದರಿಂದ ನಿರ್ಧಾರ ಕೈಗೊಳ್ಳಲು ಗುಜರಾತ್ ಸೂಕ್ತ ರಾಜ್ಯವಲ್ಲ ಎಂದು ವಾದಿಸಿದ್ದರು. ಗುಜರಾತ್‌ನಲ್ಲಿ ನ್ಯಾಯಸಮ್ಮತ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಬಾನೊ ಅವರು 2004ರಲ್ಲಿ ತಿಳಿಸಿದ್ದ ಬಳಿಕ ಸುಪ್ರೀಂ ಕೋರ್ಟ್‌ನ ಸೂಚನೆ ಮೇರೆಗೆ ವಿಚಾರಣೆಯನ್ನು ಮುಂಬೈಗೆ ಸ್ಥಳಾಂತರಿಸಲಾಗಿತ್ತು.

ಅಪರಾಧಿಗಳು ಸುಮಾರು 15 ವರ್ಷಗಳ ಕಾಲ ಜೈಲಿನಲ್ಲಿದ್ದರು. ಅವರಲ್ಲಿ ಒಬ್ಬಾತ ‘ಜೀವಾವಧಿ ಕೈದಿಗಳ ನೀತಿ’ಯ ಪ್ರಕಾರ ಅವಧಿಪೂರ್ವ ಬಿಡುಗಡೆಗೆ ಪರಿಗಣಿಸಬೇಕೆಂದು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದನು. ಆ ವಿವಾದವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿಗಳನ್ನು ಪರಿಶೀಲಿಸಿ ಕ್ರಮ ಜರುಗಿಸುವಂತೆ ಈ ವರ್ಷದ ಮೇನಲ್ಲಿ ಗುಜರಾತ್ ಸರ್ಕಾರಕ್ಕೆ ಕೋರ್ಟ್ ಸೂಚಿಸಿತ್ತು.

ಮೂರು ತಿಂಗಳ ನಂತರ ಅಪರಾಧಿಗಳನ್ನು ಬಿಡುಗಡೆ ಮಾಡಲಾಯಿತು. ಅವರಲ್ಲಿ ಒಬ್ಬರು ಇತ್ತೀಚೆಗೆ ನಡೆದ ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಶಾಸಕರಾಗಿರುವ ತಮ್ಮ ಮಗಳ ಪರವಾಗಿ ಪ್ರಚಾರ ಮಾಡಿದ್ದರು.

ನರೇಂದ್ರ ಮೋದಿಯವರು ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿದ್ದ 2002ರ ಅವಧಿಯಲ್ಲಿ ಕೋಮು ಗಲಭೆಗಳು ನಡೆದಿದ್ದವು. ಆ ಸಮಯದಲ್ಲಿ ನಡೆದಿದ್ದ ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರ ಈ ಬಿಡುಗಡೆಯನ್ನು ಸಮರ್ಥಿಸಿದೆ. ಬಿಜೆಪಿಯ ನಾಯಕರು ಅಪರಾಧಿಗಳನ್ನು ಬಣ್ಣಿಸಿದ್ದು,  ‘ಸಂಸ್ಕೃತಿ (ಸಂಸ್ಕೃತಿ) ಬ್ರಾಹ್ಮಣರು’ ಎಂದಿದ್ದಾರೆ.

ಬಿಡುಗಡೆಗೆ ಶಿಫಾರಸು ಮಾಡಿದ ಸಮಿತಿಯಲ್ಲಿ ಬಿಜೆಪಿ ನಾಯಕರು ಇದ್ದರು, ಇದನ್ನು ಅಮಿತ್ ಶಾ ನೇತೃತ್ವದ ಕೇಂದ್ರ ಗೃಹ ಸಚಿವಾಲಯವು ಅನುಮೋದಿಸಿದೆ.

ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ ಬಿಲ್ಕಿಸ್‌ ಬಾನೋ ಅವರ ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಾಧೀಶರಲ್ಲಿ ಒಬ್ಬರಾದ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಪ್ರಕರಣದಿಂದ ಹಿಂದೆ ಸರಿದಿದ್ದರು. ಹೀಗಾಗಿ ಅರ್ಜಿ ವಿಚಾರಣೆಯನ್ನು ಕಳೆದ ವಾರ ಮುಂದೂಡಲಾಗಿತ್ತು. ಹಿಂದೆ ಸರಿದಿದ್ದಕ್ಕೆ ಕಾರಣವನ್ನು ನ್ಯಾಯಾಧೀಶರು ನೀಡಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...