Homeಮುಖಪುಟಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಎರಡು ಅರ್ಜಿಗಳಲ್ಲಿ ಒಂದನ್ನು ವಜಾಗೊಳಿಸಲಾಗಿದೆ

- Advertisement -
- Advertisement -

2002ರ ಕೋಮು ಹಿಂಸಾಚಾರದ ಸಂದರ್ಭದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಕುಟುಂಬದ ಹಲವು ಸದಸ್ಯರನ್ನು ಕೊಂದ 11 ಮಂದಿಯ ಬಿಡುಗಡೆಯ ವಿರುದ್ಧ ಸಂತ್ರಸ್ತೆ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಎರಡು ಅರ್ಜಿಗಳಲ್ಲಿ ಒಂದನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈಗ ವಜಾಗೊಳಿಸಲಾಗಿರುವ ಅರ್ಜಿಯಲ್ಲಿ- ಬಿಡುಗಡೆಯ ಮನವಿಯನ್ನು ಪರಿಗಣಿಸಲು ಗುಜರಾತ್ ಸರ್ಕಾರಕ್ಕೆ ತಿಳಿಸಿದ ಮೇ 2022ರ ಆದೇಶವನ್ನು ಪರಿಶೀಲಿಸುವಂತೆ ಬಿಲ್ಕಿಸ್‌ ಬಾನೋ ಅವರು ನ್ಯಾಯಾಲಯವನ್ನು ಕೋರಿದ್ದರು. “ಬಿಡುಗಡೆಯ ಆಧಾರದ ಮೇಲೆ ಸವಾಲು ಹಾಕಿರುವ ಬಿಲ್ಕಿಸ್ ಅವರ ಇನ್ನೊಂದು ಪ್ರಕರಣ, ಈ ನಿರ್ಧಾರದಿಂದ ತಕ್ಷಣವೇ ಪರಿಣಾಮ ಬೀರುವುದಿಲ್ಲ, ವಿವರವಾದ ಆದೇಶ ಇನ್ನೂ ಲಭ್ಯವಿಲ್ಲ” ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ 11 ಅಪರಾಧಿಗಳನ್ನು ಆಗಸ್ಟ್ 15ರಂದು ಜೈಲಿನಿಂದ ಹೊರಗೆ ಬಿಡಲಾಯಿತು. ಅವರಿಗೆ ಅವಧಿಪೂರ್ವ ಬಿಡುಗಡೆಯನ್ನು ನೀಡಲಾಯಿತು. ‘ಉತ್ತಮ ನಡವಳಿಕೆ’ ಕಾರಣವನ್ನು ನೀಡಲಾಗಿತ್ತು. ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆಯೊಂದಿಗೆ ಗುಜರಾತ್‌ನ ಬಿಜೆಪಿ ಸರ್ಕಾರವು 1992ರ ನೀತಿಯ ಅಡಿಯಲ್ಲಿ ಬಿಡುಗಡೆಗೆ ಅನುಮತಿ ನೀಡಿತ್ತು.

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳನ್ನು ಮುಂಚಿತವಾಗಿ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಇತ್ತಿಚಿನ ನೀತಿಯು ಹೇಳುತ್ತದೆ. ಆದರೆ ಅಂತಹ ಯಾವುದೇ ವಿನಾಯಿತಿಯನ್ನು ಹೊಂದಿರದ 1992ರ ನೀತಿಯು ಈ ಅಪರಾಧಿಗಳಿಗೆ ಅನ್ವಯಿಸುತ್ತದೆ ಎಂಬ ವಾದವನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. 2008ರಲ್ಲಿ ಈ ಅಪರಾಧಿಗಳಿಗೆ ಶಿಕ್ಷೆಯಾದಾಗ 1992ರ ನೀತಿಯು ಜಾರಿಯಲ್ಲಿತ್ತು.

ಇದನ್ನು ಪ್ರಶ್ನಿಸಿದ್ದ ಬಿಲ್ಕಿಸ್ ಬಾನೊ, ನೆರೆಯ ಮಹಾರಾಷ್ಟ್ರದಲ್ಲಿ ವಿಚಾರಣೆ ನಡೆದಿರುವುದರಿಂದ ನಿರ್ಧಾರ ಕೈಗೊಳ್ಳಲು ಗುಜರಾತ್ ಸೂಕ್ತ ರಾಜ್ಯವಲ್ಲ ಎಂದು ವಾದಿಸಿದ್ದರು. ಗುಜರಾತ್‌ನಲ್ಲಿ ನ್ಯಾಯಸಮ್ಮತ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಬಾನೊ ಅವರು 2004ರಲ್ಲಿ ತಿಳಿಸಿದ್ದ ಬಳಿಕ ಸುಪ್ರೀಂ ಕೋರ್ಟ್‌ನ ಸೂಚನೆ ಮೇರೆಗೆ ವಿಚಾರಣೆಯನ್ನು ಮುಂಬೈಗೆ ಸ್ಥಳಾಂತರಿಸಲಾಗಿತ್ತು.

ಅಪರಾಧಿಗಳು ಸುಮಾರು 15 ವರ್ಷಗಳ ಕಾಲ ಜೈಲಿನಲ್ಲಿದ್ದರು. ಅವರಲ್ಲಿ ಒಬ್ಬಾತ ‘ಜೀವಾವಧಿ ಕೈದಿಗಳ ನೀತಿ’ಯ ಪ್ರಕಾರ ಅವಧಿಪೂರ್ವ ಬಿಡುಗಡೆಗೆ ಪರಿಗಣಿಸಬೇಕೆಂದು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದನು. ಆ ವಿವಾದವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿಗಳನ್ನು ಪರಿಶೀಲಿಸಿ ಕ್ರಮ ಜರುಗಿಸುವಂತೆ ಈ ವರ್ಷದ ಮೇನಲ್ಲಿ ಗುಜರಾತ್ ಸರ್ಕಾರಕ್ಕೆ ಕೋರ್ಟ್ ಸೂಚಿಸಿತ್ತು.

ಮೂರು ತಿಂಗಳ ನಂತರ ಅಪರಾಧಿಗಳನ್ನು ಬಿಡುಗಡೆ ಮಾಡಲಾಯಿತು. ಅವರಲ್ಲಿ ಒಬ್ಬರು ಇತ್ತೀಚೆಗೆ ನಡೆದ ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಶಾಸಕರಾಗಿರುವ ತಮ್ಮ ಮಗಳ ಪರವಾಗಿ ಪ್ರಚಾರ ಮಾಡಿದ್ದರು.

ನರೇಂದ್ರ ಮೋದಿಯವರು ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿದ್ದ 2002ರ ಅವಧಿಯಲ್ಲಿ ಕೋಮು ಗಲಭೆಗಳು ನಡೆದಿದ್ದವು. ಆ ಸಮಯದಲ್ಲಿ ನಡೆದಿದ್ದ ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರ ಈ ಬಿಡುಗಡೆಯನ್ನು ಸಮರ್ಥಿಸಿದೆ. ಬಿಜೆಪಿಯ ನಾಯಕರು ಅಪರಾಧಿಗಳನ್ನು ಬಣ್ಣಿಸಿದ್ದು,  ‘ಸಂಸ್ಕೃತಿ (ಸಂಸ್ಕೃತಿ) ಬ್ರಾಹ್ಮಣರು’ ಎಂದಿದ್ದಾರೆ.

ಬಿಡುಗಡೆಗೆ ಶಿಫಾರಸು ಮಾಡಿದ ಸಮಿತಿಯಲ್ಲಿ ಬಿಜೆಪಿ ನಾಯಕರು ಇದ್ದರು, ಇದನ್ನು ಅಮಿತ್ ಶಾ ನೇತೃತ್ವದ ಕೇಂದ್ರ ಗೃಹ ಸಚಿವಾಲಯವು ಅನುಮೋದಿಸಿದೆ.

ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ ಬಿಲ್ಕಿಸ್‌ ಬಾನೋ ಅವರ ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಾಧೀಶರಲ್ಲಿ ಒಬ್ಬರಾದ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಪ್ರಕರಣದಿಂದ ಹಿಂದೆ ಸರಿದಿದ್ದರು. ಹೀಗಾಗಿ ಅರ್ಜಿ ವಿಚಾರಣೆಯನ್ನು ಕಳೆದ ವಾರ ಮುಂದೂಡಲಾಗಿತ್ತು. ಹಿಂದೆ ಸರಿದಿದ್ದಕ್ಕೆ ಕಾರಣವನ್ನು ನ್ಯಾಯಾಧೀಶರು ನೀಡಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...