Homeಮುಖಪುಟ’2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ’; ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟಾಪ್...

’2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ’; ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟಾಪ್ ಥಿಂಕರ್-2020 ಗೌರವ

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಈ ಪಟ್ಟಿಯಲ್ಲಿ 2 ನೇ ಸ್ಥಾನಿ ಹಾಗೂ 3 ನೇ ಸ್ಥಾನಿಯಾಗಿ ಬಾಂಗ್ಲಾದೇಶದ ವಾಸ್ತುಶಿಲ್ಪಿ ಮರೀನಾ ತಬಸ್ಸುಮ್ ಇದ್ದಾರೆ.

- Advertisement -
- Advertisement -

ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಅವರನ್ನು ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ವಿಶ್ವದ ‘ಟಾಪ್ ಥಿಂಕರ್-2020’ ಎಂದು ಗೌರವಿಸಿದೆ.

ಪ್ರಾಸ್ಪೆಕ್ಟ್ ನಿಯತಕಾಲಿಕವು ತತ್ವಜ್ಞಾನಿಗಳು, ಬುದ್ಧಿಜೀವಿಗಳು, ಕಲಾವಿದರು, ವಿಜ್ಞಾನಿಗಳು ಮತ್ತು ಬರಹಗಾರರನ್ನು ಒಳಗೊಂಡಂತೆ ‘ಟಾಪ್ 50 ಚಿಂತಕರು-2020’ ಅನ್ನು ಓದುಗರ ಮತದಾನ, ತಜ್ಞರು ಮತ್ತು ಸಂಪಾದಕರ ಸಮಿತಿಯ ಅಭಿಪ್ರಾಯದ ಆಧಾರದ ಮೇಲೆ ಆಯ್ಕೆ ಮಾಡಿತ್ತು.

ಇದೀಗ ಸಚಿವೆ ಕೆ.ಕೆ. ಶೈಲಜ ಮೊದಲ ಸ್ಥಾನಿಯಾಗಿದ್ದು, ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಈ ಪಟ್ಟಿಯಲ್ಲಿ 2 ನೇ ಸ್ಥಾನಿ ಹಾಗೂ ಮೂರನೇ ಸ್ಥಾನಿಯಾಗಿ ಬಾಂಗ್ಲಾದೇಶದ ವಾಸ್ತುಶಿಲ್ಪಿ ಮರೀನಾ ತಬಸ್ಸುಮ್ ಇದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ವಿಶೇಷವೆಂದರೆ, ಇದರ ಅಗ್ರ 50 ರ ಪಟ್ಟಿಯಲ್ಲಿ ಒಟ್ಟು 26 ಮಹಿಳೆಯರು ಸ್ಥಾನ ಪಡೆದಿದ್ದಾರೆ, ಶೈಲಾಜಾ ಅದರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.

“2018 ರ ಮಾರಣಾಂತಿಕ ನಿಪಾ ಕಾಯಿಲೆ ನಿಭಾಯಿಸಲು ತೋರಿದ ಚತುರತೆಯನ್ನು ’ವೈರಸ್’ ಸಿನಿಮಾದಲ್ಲಿ ಸ್ಮರಿಸಲಾಯಿತು” ಎಂದು ಪತ್ರಿಕೆ ಕೇರಳ ಆರೋಗ್ಯ ಸಚಿವರನ್ನು ಹೊಗಳಿದೆ.

ಕೇರಳ ಆರೋಗ್ಯ ಮಂತ್ರಿ ಕೆ.ಕೆ ಶೈಲಜಾ

ಪ್ರಾಸ್ಪೆಕ್ಟ್ ಪ್ರಕಾರ, “ಶೈಲಾಜಾ ಟೀಚರ್‌ 2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ, ಜನವರಿಯಲ್ಲಿ ಕೊರೊನಾ ಇನ್ನೂ ಚೀನಾದಲ್ಲಿದ್ದಾಗ ಅದರ ಅನಿವಾರ್ಯ ಆಗಮನವನ್ನು ನಿಖರವಾಗಿ ಮುನ್ಸೂಚನೆ ನೀಡಿದ್ದಲ್ಲದೆ, ಅದರ ಪರಿಣಾಮಗಳನ್ನು ಸಂಪೂರ್ಣವಾಗಿ ಗ್ರಹಿಸಿದ್ದರು. ಅವರು ಶೀಘ್ರವಾಗಿ ವಿಶ್ವ ಆರೋಗ್ಯ ಸಂಸ್ಥೆಯ “ಪರೀಕ್ಷೆ, ಜಾಡು ಮತ್ತು ಪ್ರತ್ಯೇಕಿಸುವ” ಕಾರ್ಯಕ್ರಮವನ್ನು ರಾಜ್ಯದಲ್ಲಿ ಜಾರಿಗೆ ತಂದರು. ಮತ್ತು ವಿಮಾನ ನಿಲ್ದಾಣಗಳಲ್ಲಿ ಹಿಡಿತ ಸಾಧಿಸುವ ಮೂಲಕ ನಿರ್ಣಾಯಕ ಸಮಯವನ್ನು ಪಡೆದರು” ಎಂದು ಅದು ಹೇಳಿದೆ.

ಇದನ್ನೂ ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!

ಸಾಂಕ್ರಮಿಕವು ಆರಂಭಿಕ ಹಂತದಲ್ಲಿರುವಾಗ ಕೆ.ಕೆ.ಶೈಲಜಾ ರಾಜ್ಯದಲ್ಲಿ ಕೊರೊನಾ ವೈರಸನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಲ್ಲದೆ, ವೈರಸ್ ಹರಡುವ ರೇಖೆಯನ್ನು ಚಪ್ಪಟೆಗೊಳಿಸುವುದಕ್ಕೆ ಜಾಗತಿಕ ಮನ್ನಣೆ ಪಡೆದರು. ಯುಕೆ ಪತ್ರಿಕೆ ‘ದಿ ಗಾರ್ಡಿಯನ್’ ತನ್ನ ಲೇಖನದಲ್ಲಿ ಸಚಿವರನ್ನು ‘ಕೊರೊನಾ ವೈರಸ್ ಸ್ಲೇಯರ್’ ಮತ್ತು ’ರಾಕ್ ಸ್ಟಾರ್ ಆರೋಗ್ಯ ಮಂತ್ರಿ ’ಎಂದು ಶ್ಲಾಘಿಸಿದೆ.

ಕೊರೊನಾ ಸಾಂಕ್ರಾಮಿಕ ವಿರುದ್ದ ಹೋರಾಡುತ್ತಿರುವ ಸಾರ್ವಜನಿಕ ಸೇವಕರನ್ನು ಗೌರವಿಸಲು ಆಯೋಜಿಸಲಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಲು ವಿಶ್ವಸಂಸ್ಥೆಯು ಶೈಲಾಜಾ ಅವರನ್ನು ಆಹ್ವಾನಿಸಿ ಗೌರವಿಸಿತ್ತು.

ಫ್ರೆಂಚ್ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಎಸ್ತರ್ ಡುಫ್ಲೋ, ಬರಹಗಾರ ಮತ್ತು ಬುಕರ್ ಪ್ರಶಸ್ತಿ ವಿಜೇತ ಹಿಲರಿ ಮಾಂಟೆಲ್ ಮತ್ತು ಪರಿಸರವಾದಿ ಡೇವಿಡ್ ಅಟೆನ್‌ಬರೋ ಈ ಪಟ್ಟಿಯಲ್ಲಿರುವ ಇತರ ಕೆಲವು ಹೆಸರುಗಳು.


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...