Homeಮುಖಪುಟ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿ #FarmersProtest ಹ್ಯಾಷ್‌ಟ್ಯಾಗ್ ಬಳಸಿದ್ದು ಕುತೂಹಲಕರವಾಗಿದೆ ಮತ್ತು ಇದು ನಮ್ಮ ವಿದೇಶಾಂಗ ಇಲಾಖೆಗೆ ಇನ್ನಷ್ಟು ಚಡಪಡಿಕೆ ಉಂಟು ಮಾಡುವ ಸಾಧ್ಯತೆಯಿದೆ.

- Advertisement -
- Advertisement -

ಅಧಿಕಾರಸ್ಥರು ಪ್ರತಿಭಟನಾಕಾರರ ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿಯ ಹಕ್ಕುಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ರಕ್ಷಿಸಬೇಕು, ಗೌರವಿಸಬೇಕು ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ (ಒಎಚ್‌ಸಿಎಚ್‌ಆರ್) ಕಚೇರಿ ತಿಳಿಸಿದೆ.

ಭಾರತದಲ್ಲಿ 73ನೆ ದಿನಕ್ಕೆ ಕಾಲಿಟ್ಟಿರುವ ರೈತರ ಪ್ರತಿಭಟನೆಯು ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು, ಅಪಾರ ಬೆಂಬಲವೂ ವ್ಯಕ್ತವಾಗುತ್ತಿದೆ. ಈ ನಡುವೆ, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಅಥವಾ ಒಎಚ್‌ಸಿಎಚ್‌ಆರ್ ಕಚೇರಿ ಶುಕ್ರವಾರ ಸರ್ಕಾರ ಮತ್ತು ಪ್ರತಿಭಟನಾಕಾರರಿಗೆ ಗರಿಷ್ಠ ಸಂಯಮವನ್ನು ತೋರುವಂತೆ ಕರೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿ, #FarmersProtest ಹ್ಯಾಷ್‌ಟ್ಯಾಗ್ ಬಳಸಿದ್ದು ಕುತೂಹಲಕರವಾಗಿದೆ ಮತ್ತು ಇದು ನಮ್ಮ ವಿದೇಶಾಂಗ ಇಲಾಖೆಗೆ ಇನ್ನಷ್ಟು ಚಡಪಡಿಕೆ ಉಂಟು ಮಾಡುವ ಸಾಧ್ಯತೆಯಿದೆ.

“ಈಗ ನಡೆಯುತ್ತಿರುವ #FarmersProtest ನಲ್ಲಿ ಅಧಿಕಾರಸ್ಥರು ಮತ್ತು ಪ್ರತಿಭಟನಾಕಾರರು ಗರಿಷ್ಠ ಸಂಯಮವನ್ನು ಕಾಪಾಡಿಕೊಳ್ಳಲು ನಾವು ಕೇಳುತ್ತಿದ್ದೇವೆ. ಶಾಂತಿಯುತ ಪ್ರತಿಭಟನೆಯ ಮತ್ತು ಅಭಿವ್ಯಕ್ತಿಯ ಹಕ್ಕುಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ರಕ್ಷಿಸಬೇಕು. ಎಲ್ಲರಿಗೂ ಒಪ್ಪಿಗೆಯಾಗುವ ಎಲ್ಲರಿಗೂ #HumanRights ಎಂಬ ನೀತಿಯಡಿ ಸಮನಾದ ಪರಿಹಾರಗಳನ್ನು ಕಂಡುಹಿಡಿಯುವುದು ಬಹಳ ಮುಖ್ಯ,” ಎಂದು ಅದು ಟ್ವೀಟ್ ಮಾಡಿದೆ.

ಪ್ರತಿಭಟನೆಗೆ ಸರ್ಕಾರ ನೀಡುತ್ತಿರುವ ಕಿರಿಕಿರಿ ವಿಷಯ ಈಗ ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕು ವಿಷಯದ ಚರ್ಚೆಯಾಗಿ ಸಂಭವಿಸಿದೆ. ಪಾಪ್ ತಾರೆ ರಿಹಾನ್ನಾ ಮತ್ತು ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಗಣ್ಯರು ರೈತರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಂಸತ್ತಿನಲ್ಲಿ ಶುಕ್ರವಾರ, ಕಾನೂನುಗಳಲ್ಲಿ ಲೋಪವೇ ಇಲ್ಲ, ವಿಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ ಎಮದಿರುವುದೂ ಕೂಡ ವಿವಾದಾತ್ಮಕ ಎನಿಸಿದೆ.

ಕಳೆದ ತಿಂಗಳು ನಡೆದ ಹಿಂಸಾಚಾರದ ನಂತರ, ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರ ವಕ್ತಾರರು, ಶಾಂತಿಯುತ ಪ್ರತಿಭಟನೆ, ಸಭೆ ಸೇರುವ ಸ್ವಾತಂತ್ರ‍್ಯ ಮತ್ತು ಅಹಿಂಸೆಯನ್ನು ಗೌರವಿಸುವುದು ಮುಖ್ಯ ಎಂದು ಹೇಳಿದ್ದರು. ಡಿಸೆಂಬರ್‌ನಲ್ಲಿ ಅವರ ಕಚೇರಿ ಜನರಿಗೆ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದೆ ಮತ್ತು ಅಧಿಕಾರಿಸ್ಥರು ಹಾಗೆ ಮಾಡಲು ಅವಕಾಶ ನೀಡಬೇಕು ಎಂದು ಹೇಳಿತ್ತು.


ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...