Homeಮುಖಪುಟಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

'ಹಿಂದೂ-ಮುಸ್ಲಿಮ್ ಗಲಭೆ ನಡೆದರೆ ಎಬಿವಿಪಿ ಆ ಸ್ಥಳಕ್ಕೆ ಹಾಜರಾಗುತ್ತಿತ್ತು. ಆದರೆ ದಲಿತರ ಮೇಲೆ ಮೇಲುಜಾತಿಯ ಹಿಂದೂಗಳು ದೌರ್ಜನ್ಯ ನಡೆಸಿದರೆ ಎಬಿವಿಪಿ ಅಲ್ಲಿಗೆ ಬರುತ್ತಲೇ ಇರಲಿಲ್ಲ’ ಎನ್ನುತ್ತಾರೆ ಚಂದ್ರಶೇಖರ್.

- Advertisement -
- Advertisement -

ಈಗ ಎಲ್ಲೆಡೆ ಚಂದ್ರಶೇಖರ್ ಆಜಾದ್ ಎಂಬ ಯುವಕನದ್ದೇ ಸದ್ದು. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಏರಿ ಮೂರು ತಿಂಗಳೂ ಆಗಿಲ್ಲ; ಆಗಲೇ ಅಲ್ಲಿನ ಮುಖ್ಯಮಂತ್ರಿಗೆ ಮುಖಭಂಗ ಮಾಡಿರುವ ಚಂದ್ರಶೇಖರ್ ಯೋಗಿಯ ನಿದ್ದೆಕೆಡಿಸುತ್ತಿದ್ದಾರೆ. ಅಷ್ಟೇ ಅಲ್ಲ, ದೇಶದಾದ್ಯಂತ ಪ್ರಗತಿಪರರಲ್ಲಿ ಸಂಚಲನ ಮೂಡಿಸಿರುವ ಚಂದ್ರಶೇಖರ್ ಯುವಜನತೆಯಲ್ಲಿ ರೋಮಾಂಚನ ಸೃಷ್ಟಿಸಿದ್ದಾರೆ.

ತನ್ನ ಯೌವನವನ್ನು ಡೆಹರಾಡೂನ್‌ನಲ್ಲಿ ಕಳೆದ ಚಂದ್ರಶೇಖರ್ 2013ರ ಹೊತ್ತಿಗೆ ಕಾನೂನು ಪದವಿ ಪಡೆದು ವಕೀಲನಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ ಅದೇ ಹೊತ್ತಿಗೆ ಅವರ ತಂದೆ ಗೋವರ್ಧನ್ ದಾಸ್ ಅವರಲ್ಲಿ ಕ್ಯಾನ್ಸರ್ ರೋಗ ಕಾಣಿಸಿಕೊಂಡಿತು. ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ದಾಸ್ ಅವರು ತಮ್ಮ ವೃತ್ತಿಯ ನಿಮಿತ್ತ ಬೇರೆಬೇರೆ ಕಡೆ ಸೇವೆ ಸಲ್ಲಿಸಿದ್ದರಿಂದ ಅವರ ಅರಿವಿಗೆ ಬಾರದಂತೆ ತಂದೆ ಮತ್ತು ಮಗನ ನಡುವೆ ಅಂತರ ಬೆಳೆದಿತ್ತು. ಆದರೆ ಕ್ಯಾನ್ಸರ್‌ಗೆ ಚಿಕಿತ್ಸೆ ಕೊಡಿಸುವಾಗ ಅವರಿಬ್ಬರೂ ಹತ್ತಿರವಾದರು. ದಲಿತರಾದ ದಾಸ್ ಅವರು ಜಾತಿಕಾರಣಕ್ಕೆ ತಮಗಾದ ಅವಮಾನಗಳನ್ನು ತಮ್ಮ ಪುತ್ರನಿಗೆ ವಿವರಿಸಿದರು. ಅವರು ಶಾಲೆಯ ಮುಖ್ಯಸ್ಥರಾಗಿದ್ದರೂ ಶಾಲಾ ಸಿಬ್ಬಂದಿ ಅವರಿಗೆ ಪ್ರತ್ಯೇಕವಾಗಿ ಕುಡಿಯುವ ನೀರು ಇಡುತ್ತಿದ್ದರು. ಸಭೆಗಳಲ್ಲಿ ಅವಮಾನ ಮಾಡುತ್ತಿದ್ದರು. ಇಂತಹ ನೂರಾರು ಪ್ರಕರಣಗಳನ್ನು ಅವರು ನೆನಪು ಮಾಡಿಕೊಂಡರು. ಚಂದ್ರಶೇಖರ್ ಅವರಿಗೆ ಇಂತಹ ಅವಮಾನಗಳು ಆಗಿರದಿದ್ದರೂ ತಂದೆಯ ಬದುಕು ಅವರ ಕಣ್ಣು ತೆರೆಸಿತು. ದಾಸ್ ಅವರು ತೀರಿಕೊಂಡ ನಂತರ ತನ್ನ ಜನರಿಗೆ ಏನನ್ನಾದರೂ ಮಾಡಬೇಕು ಎಂದು ನಿರ್ಧರಿಸಿದ ಚಂದ್ರಶೇಖರ್ ಶಹರನಪುರ್ ಜಿಲ್ಲೆಯಲ್ಲಿರುವ ತನ್ನ ಮೂಲ ಊರಾದ ಚುತ್ಮಲಪುರಕ್ಕೆ ಹಿಂದಿರುಗಿದರು. ಚುತ್ಮಲಪುರ್ ಹೆಚ್ಚಾಗಿ ದಲಿತರು ಮತ್ತು ಮುಸಲ್ಮಾನರು ಇರುವ ಊರು. ಅಲ್ಲಿ ತನ್ನ ಹಲವು ದಲಿತ ಮಿತ್ರರನ್ನು ಜೊತೆಹಾಕಿಕೊಂಡ ಚಂದ್ರಶೇಖರ್ ಎರಡು ವರ್ಷಗಳ ಹಿಂದೆ ‘ಭೀಮ್‌ಆರ್ಮಿ ಎಂಬ ಸಂಘಟನೆಯನ್ನು ಹುಟ್ಟುಹಾಕಿದರು. ಇದರ ಉದ್ದೇಶ ಜಾತಿ ದೌರ್ಜನ್ಯವನ್ನು ವಿರೋಧಿಸುವುದು.

ಭೀಮಸೇನೆ ಎಲ್ಲರ ಗಮನಕ್ಕೆ ಬಂದದ್ದು ಹೋದ ವರ್ಷ. ಶಹರನಪುರ್ ಹತ್ತಿರದಲ್ಲೇ ಇರುವ ಘರ್ಕೊಲಿ ಎಂಬ ಹಳ್ಳಿಯಲ್ಲಿ ದಲಿತ ಯುವಕರು ಅಂಬೇಡ್ಕರ್ ಪ್ರತಿಮೆಯ ಹತ್ತಿರ ‘ದಿ ಗ್ರೇಟ್ ಚಮ್ಮಾರ್ ಡಾ. ಭೀಮ್‌ರಾವ್ ಅಂಬೇಡ್ಕರ್ ಗ್ರಾಮ ಘರ್ಕೊಲಿ’ ಎಂಬ ಬೋರ್ಡ್ ಹಾಕಿದರು. ಇದು ಅದೇ ಹಳ್ಳಿಯ ಥಾಕೂರರನ್ನು ಕೆರಳಿಸಿತು. “ಚಮ್ಮಾರನೊಬ್ಬ ಅದು ಹೇಗೆ ‘ಗ್ರೇಟ್ ಆಗಲು ಸಾಧ್ಯ’ ಎಂದು ವಾದಿಸಿದ ಥಾಕೂರರು ಮೊದಲು ಆ ಬೋರ್ಡ್ ಕಿತ್ತುಹಾಕಬೇಕೆಂದು ತಾಕೀತು ಮಾಡಿದರು. ಅದಕ್ಕೆ ಬಗ್ಗದ ದಲಿತ ಯುವಕರು “ನಾವು ಅದನ್ನು ನಮಗೆ ಸೇರಿರುವ ಖಾಸಗಿ ಭೂಮಿಯಲ್ಲಿ ಹಾಕಿಕೊಂಡಿದ್ದೇವೆ. ನಿಮ್ಮದೇನು ರಗಳೆ” ಎಂದರು. ಥಾಕೂರರು ಪೊಲೀಸರಿಗೆ ದೂರು ಸಲ್ಲಿಸಿದರು. ಈ ಪ್ರಕರಣದ ಇತ್ಯರ್ಥಕ್ಕೆ ಡಿವೈಎಸ್ಪಿ ಆನಂದ್ ಪಾಂಡೆ ಬಂದ. ಆತ ಬ್ರಾಹ್ಮಣ. ಥಾಕೂರರ ಜೊತೆ ಕೈಜೋಡಿಸಿದ ಪೊಲೀಸಪ್ಪ ಆ ಬೋರ್ಡ್‌ಗೆ ಕಪ್ಪು ಬಣ್ಣ ಬಳಿಸಿದ. ಅದಾದ ಕೆಲ ಗಂಟೆಗಳಲ್ಲಿ ಅದ್ಯಾರೋ ಅಂಬೇಡ್ಕರ್ ಅವರ ಪ್ರತಿಮೆಗೂ ಕಪ್ಪು ಬಣ್ಣ ಬಳಿದರು. ಇದು ದಲಿತರನ್ನು ಕೆರಳಿಸಿತು. ಅವರಲ್ಲಿ ಒಬ್ಬ ಭೀಮಸೇನೆಗೆ ಫೋನ್ ಮಾಡಿದ. ತಮ್ಮ ಪಂಚಾಯತಿಯನ್ನು ವಿರೋಧಿಸಿದ ದಲಿತರನ್ನು ಬಡಿಯಲು ಪೊಲೀಸರು ಸಜ್ಜಾಗುತ್ತಿದ್ದಂತೆ ಹತ್ತಾರು ಮೋಟಾರ್ ಬೈಕ್‌ಗಳನ್ನೇರಿ ದೊಡ್ಡ ಗುಂಪೊಂದು “ಜೈ ಭೀಮ್’ ಎಂದು ಕೂಗುತ್ತಾ ಹಾಜರಾಯಿತು. ಅದರ ನೇತೃತ್ವ ವಹಿಸಿದ್ದವ ಬಿಳಿ ಶರ್ಟ್, ಕಪ್ಪು ಪ್ಯಾಂಟ್, ಕೊರಳ ಸುತ್ತ ನೀಲಿ ಸ್ಕಾರ್ಫ್ ಕಟ್ಟಿಕೊಂಡಿದ್ದ ಅಂದವಾದ ಯುವಕ. ಅವರೇ ಚಂದ್ರಶೇಖರ್ ಆಜಾದ್. ಅವತ್ತು ದಲಿತರ ಮತ್ತು ಪೊಲೀಸರ ನಡುವೆ ನಡೆದ ಚಕಮಕಿಯಲ್ಲಿ ಡಿವೈಎಸ್ಪಿ ಸಾಹೇಬನಿಗೂ ಲಾತಾ ಬಿದ್ದು ಪೊಲೀಸರೆಲ್ಲ ಓಡಿಹೋದರು.

ಆನಂತರ ಚಂದ್ರಶೇಖರರನ್ನು ಪೊಲೀಸರು ಬಂಧಿಸಿದರಲ್ಲದೆ ಅವರ ವಿರುದ್ಧ ರಾಷ್ಟ್ರೀಯ ರಕ್ಷಣಾ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲು ಮುಂದಾದರು. ದಲಿತರ ಪರ ಹೋರಾಡಿದ್ದಕ್ಕೆ ರಾಷ್ಟ್ರೀಯ ರಕ್ಷಣಾ ಕಾಯ್ದೆಯಡಿ ಕ್ರಮವೇ ಎಂದು ವಿರೋಧಿಸಿದ ಪ್ರಜ್ಞಾವಂತರು ಚಂದ್ರಶೇಖರ್ ಪರವಾಗಿ ದೊಡ್ಡ ರ್‍ಯಾಲಿಯನ್ನು ನಡೆಸಿದರು. ಪೊಲೀಸರು ತೆಪ್ಪಗಾಗಿ ಚಂದ್ರಶೇಖರ ಅವರನ್ನು ಬಿಡುಗಡೆ ಮಾಡಿದರು. ಈ ಪ್ರಕರಣದ ನಂತರ ಭೀಮ ಸೇನೆ ಇನ್ನೂ ದೊಡ್ಡದಾಯಿತು. ಚಂದ್ರಶೇಖರ್ ಪ್ರಕಾರ ಇವತ್ತು ಭೀಮಸೇನೆಯಲ್ಲಿ 40,000 ಯುವಕರು ಇದ್ದಾರಲ್ಲದೆ, ಇತರೆ ಏಳು ರಾಜ್ಯಗಳಲ್ಲಿ ಅದರ ವಿಭಾಗಗಳಿವೆ. ಎಲ್ಲಕ್ಕಿಂತ ಮಿಗಿಲಾಗಿ ಭೀಮ ಸೇನೆಯು ಇಂದು ದಲಿತರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತಿದ್ದು ತಮ್ಮ ಮೇಲೆ ದೌರ್ಜನ್ಯ ಎಸಗುವವರನ್ನು ವಿರೋಧಿಸುವ ಛಲ ಸೃಷ್ಟಿ ಮಾಡಿದೆ.

ವಿಚಿತ್ರವೆಂದರೆ ಚಂದ್ರಶೇಖರ್ ವಿದ್ಯಾರ್ಥಿಯಾಗಿದ್ದಾಗ ಸಂಘ ಪರಿವಾರದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆಯಲ್ಲಿದ್ದವರು. ಆಗ ಅವರಿಗೆ ಆರೆಸ್ಸೆಸ್‌ನ ಅಸಲಿಯತ್ತು ಅರ್ಥವಾಯಿತು. “ಹಿಂದೂ-ಮುಸ್ಲಿಮ್ ಗಲಭೆ ನಡೆದರೆ ಎಬಿವಿಪಿ ಆ ಸ್ಥಳಕ್ಕೆ ಹಾಜರಾಗುತ್ತಿತ್ತು. ಆದರೆ ದಲಿತರ ಮೇಲೆ ಮೇಲುಜಾತಿಯ ಹಿಂದೂಗಳು ದೌರ್ಜನ್ಯ ನಡೆಸಿದರೆ ಎಬಿವಿಪಿ ಅಲ್ಲಿಗೆ ಬರುತ್ತಲೇ ಇರಲಿಲ್ಲ’ ಎನ್ನುತ್ತಾರೆ ಚಂದ್ರಶೇಖರ್. ಆಗ ಅಂಬೇಡ್ಕರ್ ಬರಹಗಳನ್ನು ಓದಲಾರಂಭಿಸಿದ ಚಂದ್ರಶೇಖರ್ ಭೀಮ ಸೇನೆ ಸ್ಥಾಪಿಸಿ ತನ್ನ ಸಮುದಾಯದ ಏಳಿಗೆಗೆ ದುಡಿಯಲು ನಿರ್ಧರಿಸಿದರು. ಅವರ ಭೀಮಸೇನೆ ಇವತ್ತು ಶಹರನಪುರದಲ್ಲಿ ಹಲವಾರು ‘ಶಾಲೆ’ಗಳನ್ನು ನಡೆಸುತ್ತದೆ. ಅದಕ್ಕೆ ಭೀಮ್ ಪಾಠಾಶಾಲಾ ಎಂದು ಕರೆಯಲಾಗುತ್ತದೆ. ಅಲ್ಲಿ ಕಾಲೇಜು ಮುಗಿಸಿರುವ ದಲಿತ ಯುವಕರು ಶಾಲೆಗಳಲ್ಲಿ ಓದುತ್ತಿರುವ ದಲಿತ ಮಕ್ಕಳಿಗೆ ಪ್ರತಿದಿನ ಪಾಠ ಹೇಳಿಕೊಡುತ್ತಾರೆ. ಹಾಗೆಯೇ ಹಿರಿಯ ದಲಿತ ಅಧಿಕಾರಿಗಳು ಯುವ ದಲಿತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಕೊಡುತ್ತಾರೆ.

ನೀಲಿ ಆಗಸದಲ್ಲಿ ಚಂದ್ರಶೇಖರ್ ಆಜಾದ್ ಎಂಬ ಇನ್ನೊಂದು ನಕ್ಷತ್ರ ಪ್ರಜ್ವಲಿಸಲಾರಂಭಿಸಿದೆ. ರೋಹಿತ್ ವೇಮುಲ, ಕನ್ಹಯ್ಯ ಕುಮಾರ್, ಉಮರ್‌ ಖಾಲಿದ್, ಶೆಹ್ಲಾ ರಶೀದ್ ಮತ್ತು ಚಂದ್ರಶೇಖರ್ ಎಂಬ ಈ ನಕ್ಷತ್ರಗಳು ಎಲ್ಲರಲ್ಲಿ ಭರವಸೆ ಮೂಡಿಸುತ್ತಿವೆ.

  • ಗೌರಿ ಲಂಕೇಶ್

ಮೇ, 31 2017.


ಇದನ್ನೂ ಓದಿ: ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...