Homeಮುಖಪುಟಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

'ಹಿಂದೂ-ಮುಸ್ಲಿಮ್ ಗಲಭೆ ನಡೆದರೆ ಎಬಿವಿಪಿ ಆ ಸ್ಥಳಕ್ಕೆ ಹಾಜರಾಗುತ್ತಿತ್ತು. ಆದರೆ ದಲಿತರ ಮೇಲೆ ಮೇಲುಜಾತಿಯ ಹಿಂದೂಗಳು ದೌರ್ಜನ್ಯ ನಡೆಸಿದರೆ ಎಬಿವಿಪಿ ಅಲ್ಲಿಗೆ ಬರುತ್ತಲೇ ಇರಲಿಲ್ಲ’ ಎನ್ನುತ್ತಾರೆ ಚಂದ್ರಶೇಖರ್.

- Advertisement -
- Advertisement -

ಈಗ ಎಲ್ಲೆಡೆ ಚಂದ್ರಶೇಖರ್ ಆಜಾದ್ ಎಂಬ ಯುವಕನದ್ದೇ ಸದ್ದು. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಏರಿ ಮೂರು ತಿಂಗಳೂ ಆಗಿಲ್ಲ; ಆಗಲೇ ಅಲ್ಲಿನ ಮುಖ್ಯಮಂತ್ರಿಗೆ ಮುಖಭಂಗ ಮಾಡಿರುವ ಚಂದ್ರಶೇಖರ್ ಯೋಗಿಯ ನಿದ್ದೆಕೆಡಿಸುತ್ತಿದ್ದಾರೆ. ಅಷ್ಟೇ ಅಲ್ಲ, ದೇಶದಾದ್ಯಂತ ಪ್ರಗತಿಪರರಲ್ಲಿ ಸಂಚಲನ ಮೂಡಿಸಿರುವ ಚಂದ್ರಶೇಖರ್ ಯುವಜನತೆಯಲ್ಲಿ ರೋಮಾಂಚನ ಸೃಷ್ಟಿಸಿದ್ದಾರೆ.

ತನ್ನ ಯೌವನವನ್ನು ಡೆಹರಾಡೂನ್‌ನಲ್ಲಿ ಕಳೆದ ಚಂದ್ರಶೇಖರ್ 2013ರ ಹೊತ್ತಿಗೆ ಕಾನೂನು ಪದವಿ ಪಡೆದು ವಕೀಲನಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ ಅದೇ ಹೊತ್ತಿಗೆ ಅವರ ತಂದೆ ಗೋವರ್ಧನ್ ದಾಸ್ ಅವರಲ್ಲಿ ಕ್ಯಾನ್ಸರ್ ರೋಗ ಕಾಣಿಸಿಕೊಂಡಿತು. ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ದಾಸ್ ಅವರು ತಮ್ಮ ವೃತ್ತಿಯ ನಿಮಿತ್ತ ಬೇರೆಬೇರೆ ಕಡೆ ಸೇವೆ ಸಲ್ಲಿಸಿದ್ದರಿಂದ ಅವರ ಅರಿವಿಗೆ ಬಾರದಂತೆ ತಂದೆ ಮತ್ತು ಮಗನ ನಡುವೆ ಅಂತರ ಬೆಳೆದಿತ್ತು. ಆದರೆ ಕ್ಯಾನ್ಸರ್‌ಗೆ ಚಿಕಿತ್ಸೆ ಕೊಡಿಸುವಾಗ ಅವರಿಬ್ಬರೂ ಹತ್ತಿರವಾದರು. ದಲಿತರಾದ ದಾಸ್ ಅವರು ಜಾತಿಕಾರಣಕ್ಕೆ ತಮಗಾದ ಅವಮಾನಗಳನ್ನು ತಮ್ಮ ಪುತ್ರನಿಗೆ ವಿವರಿಸಿದರು. ಅವರು ಶಾಲೆಯ ಮುಖ್ಯಸ್ಥರಾಗಿದ್ದರೂ ಶಾಲಾ ಸಿಬ್ಬಂದಿ ಅವರಿಗೆ ಪ್ರತ್ಯೇಕವಾಗಿ ಕುಡಿಯುವ ನೀರು ಇಡುತ್ತಿದ್ದರು. ಸಭೆಗಳಲ್ಲಿ ಅವಮಾನ ಮಾಡುತ್ತಿದ್ದರು. ಇಂತಹ ನೂರಾರು ಪ್ರಕರಣಗಳನ್ನು ಅವರು ನೆನಪು ಮಾಡಿಕೊಂಡರು. ಚಂದ್ರಶೇಖರ್ ಅವರಿಗೆ ಇಂತಹ ಅವಮಾನಗಳು ಆಗಿರದಿದ್ದರೂ ತಂದೆಯ ಬದುಕು ಅವರ ಕಣ್ಣು ತೆರೆಸಿತು. ದಾಸ್ ಅವರು ತೀರಿಕೊಂಡ ನಂತರ ತನ್ನ ಜನರಿಗೆ ಏನನ್ನಾದರೂ ಮಾಡಬೇಕು ಎಂದು ನಿರ್ಧರಿಸಿದ ಚಂದ್ರಶೇಖರ್ ಶಹರನಪುರ್ ಜಿಲ್ಲೆಯಲ್ಲಿರುವ ತನ್ನ ಮೂಲ ಊರಾದ ಚುತ್ಮಲಪುರಕ್ಕೆ ಹಿಂದಿರುಗಿದರು. ಚುತ್ಮಲಪುರ್ ಹೆಚ್ಚಾಗಿ ದಲಿತರು ಮತ್ತು ಮುಸಲ್ಮಾನರು ಇರುವ ಊರು. ಅಲ್ಲಿ ತನ್ನ ಹಲವು ದಲಿತ ಮಿತ್ರರನ್ನು ಜೊತೆಹಾಕಿಕೊಂಡ ಚಂದ್ರಶೇಖರ್ ಎರಡು ವರ್ಷಗಳ ಹಿಂದೆ ‘ಭೀಮ್‌ಆರ್ಮಿ ಎಂಬ ಸಂಘಟನೆಯನ್ನು ಹುಟ್ಟುಹಾಕಿದರು. ಇದರ ಉದ್ದೇಶ ಜಾತಿ ದೌರ್ಜನ್ಯವನ್ನು ವಿರೋಧಿಸುವುದು.

ಭೀಮಸೇನೆ ಎಲ್ಲರ ಗಮನಕ್ಕೆ ಬಂದದ್ದು ಹೋದ ವರ್ಷ. ಶಹರನಪುರ್ ಹತ್ತಿರದಲ್ಲೇ ಇರುವ ಘರ್ಕೊಲಿ ಎಂಬ ಹಳ್ಳಿಯಲ್ಲಿ ದಲಿತ ಯುವಕರು ಅಂಬೇಡ್ಕರ್ ಪ್ರತಿಮೆಯ ಹತ್ತಿರ ‘ದಿ ಗ್ರೇಟ್ ಚಮ್ಮಾರ್ ಡಾ. ಭೀಮ್‌ರಾವ್ ಅಂಬೇಡ್ಕರ್ ಗ್ರಾಮ ಘರ್ಕೊಲಿ’ ಎಂಬ ಬೋರ್ಡ್ ಹಾಕಿದರು. ಇದು ಅದೇ ಹಳ್ಳಿಯ ಥಾಕೂರರನ್ನು ಕೆರಳಿಸಿತು. “ಚಮ್ಮಾರನೊಬ್ಬ ಅದು ಹೇಗೆ ‘ಗ್ರೇಟ್ ಆಗಲು ಸಾಧ್ಯ’ ಎಂದು ವಾದಿಸಿದ ಥಾಕೂರರು ಮೊದಲು ಆ ಬೋರ್ಡ್ ಕಿತ್ತುಹಾಕಬೇಕೆಂದು ತಾಕೀತು ಮಾಡಿದರು. ಅದಕ್ಕೆ ಬಗ್ಗದ ದಲಿತ ಯುವಕರು “ನಾವು ಅದನ್ನು ನಮಗೆ ಸೇರಿರುವ ಖಾಸಗಿ ಭೂಮಿಯಲ್ಲಿ ಹಾಕಿಕೊಂಡಿದ್ದೇವೆ. ನಿಮ್ಮದೇನು ರಗಳೆ” ಎಂದರು. ಥಾಕೂರರು ಪೊಲೀಸರಿಗೆ ದೂರು ಸಲ್ಲಿಸಿದರು. ಈ ಪ್ರಕರಣದ ಇತ್ಯರ್ಥಕ್ಕೆ ಡಿವೈಎಸ್ಪಿ ಆನಂದ್ ಪಾಂಡೆ ಬಂದ. ಆತ ಬ್ರಾಹ್ಮಣ. ಥಾಕೂರರ ಜೊತೆ ಕೈಜೋಡಿಸಿದ ಪೊಲೀಸಪ್ಪ ಆ ಬೋರ್ಡ್‌ಗೆ ಕಪ್ಪು ಬಣ್ಣ ಬಳಿಸಿದ. ಅದಾದ ಕೆಲ ಗಂಟೆಗಳಲ್ಲಿ ಅದ್ಯಾರೋ ಅಂಬೇಡ್ಕರ್ ಅವರ ಪ್ರತಿಮೆಗೂ ಕಪ್ಪು ಬಣ್ಣ ಬಳಿದರು. ಇದು ದಲಿತರನ್ನು ಕೆರಳಿಸಿತು. ಅವರಲ್ಲಿ ಒಬ್ಬ ಭೀಮಸೇನೆಗೆ ಫೋನ್ ಮಾಡಿದ. ತಮ್ಮ ಪಂಚಾಯತಿಯನ್ನು ವಿರೋಧಿಸಿದ ದಲಿತರನ್ನು ಬಡಿಯಲು ಪೊಲೀಸರು ಸಜ್ಜಾಗುತ್ತಿದ್ದಂತೆ ಹತ್ತಾರು ಮೋಟಾರ್ ಬೈಕ್‌ಗಳನ್ನೇರಿ ದೊಡ್ಡ ಗುಂಪೊಂದು “ಜೈ ಭೀಮ್’ ಎಂದು ಕೂಗುತ್ತಾ ಹಾಜರಾಯಿತು. ಅದರ ನೇತೃತ್ವ ವಹಿಸಿದ್ದವ ಬಿಳಿ ಶರ್ಟ್, ಕಪ್ಪು ಪ್ಯಾಂಟ್, ಕೊರಳ ಸುತ್ತ ನೀಲಿ ಸ್ಕಾರ್ಫ್ ಕಟ್ಟಿಕೊಂಡಿದ್ದ ಅಂದವಾದ ಯುವಕ. ಅವರೇ ಚಂದ್ರಶೇಖರ್ ಆಜಾದ್. ಅವತ್ತು ದಲಿತರ ಮತ್ತು ಪೊಲೀಸರ ನಡುವೆ ನಡೆದ ಚಕಮಕಿಯಲ್ಲಿ ಡಿವೈಎಸ್ಪಿ ಸಾಹೇಬನಿಗೂ ಲಾತಾ ಬಿದ್ದು ಪೊಲೀಸರೆಲ್ಲ ಓಡಿಹೋದರು.

ಆನಂತರ ಚಂದ್ರಶೇಖರರನ್ನು ಪೊಲೀಸರು ಬಂಧಿಸಿದರಲ್ಲದೆ ಅವರ ವಿರುದ್ಧ ರಾಷ್ಟ್ರೀಯ ರಕ್ಷಣಾ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲು ಮುಂದಾದರು. ದಲಿತರ ಪರ ಹೋರಾಡಿದ್ದಕ್ಕೆ ರಾಷ್ಟ್ರೀಯ ರಕ್ಷಣಾ ಕಾಯ್ದೆಯಡಿ ಕ್ರಮವೇ ಎಂದು ವಿರೋಧಿಸಿದ ಪ್ರಜ್ಞಾವಂತರು ಚಂದ್ರಶೇಖರ್ ಪರವಾಗಿ ದೊಡ್ಡ ರ್‍ಯಾಲಿಯನ್ನು ನಡೆಸಿದರು. ಪೊಲೀಸರು ತೆಪ್ಪಗಾಗಿ ಚಂದ್ರಶೇಖರ ಅವರನ್ನು ಬಿಡುಗಡೆ ಮಾಡಿದರು. ಈ ಪ್ರಕರಣದ ನಂತರ ಭೀಮ ಸೇನೆ ಇನ್ನೂ ದೊಡ್ಡದಾಯಿತು. ಚಂದ್ರಶೇಖರ್ ಪ್ರಕಾರ ಇವತ್ತು ಭೀಮಸೇನೆಯಲ್ಲಿ 40,000 ಯುವಕರು ಇದ್ದಾರಲ್ಲದೆ, ಇತರೆ ಏಳು ರಾಜ್ಯಗಳಲ್ಲಿ ಅದರ ವಿಭಾಗಗಳಿವೆ. ಎಲ್ಲಕ್ಕಿಂತ ಮಿಗಿಲಾಗಿ ಭೀಮ ಸೇನೆಯು ಇಂದು ದಲಿತರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತಿದ್ದು ತಮ್ಮ ಮೇಲೆ ದೌರ್ಜನ್ಯ ಎಸಗುವವರನ್ನು ವಿರೋಧಿಸುವ ಛಲ ಸೃಷ್ಟಿ ಮಾಡಿದೆ.

ವಿಚಿತ್ರವೆಂದರೆ ಚಂದ್ರಶೇಖರ್ ವಿದ್ಯಾರ್ಥಿಯಾಗಿದ್ದಾಗ ಸಂಘ ಪರಿವಾರದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆಯಲ್ಲಿದ್ದವರು. ಆಗ ಅವರಿಗೆ ಆರೆಸ್ಸೆಸ್‌ನ ಅಸಲಿಯತ್ತು ಅರ್ಥವಾಯಿತು. “ಹಿಂದೂ-ಮುಸ್ಲಿಮ್ ಗಲಭೆ ನಡೆದರೆ ಎಬಿವಿಪಿ ಆ ಸ್ಥಳಕ್ಕೆ ಹಾಜರಾಗುತ್ತಿತ್ತು. ಆದರೆ ದಲಿತರ ಮೇಲೆ ಮೇಲುಜಾತಿಯ ಹಿಂದೂಗಳು ದೌರ್ಜನ್ಯ ನಡೆಸಿದರೆ ಎಬಿವಿಪಿ ಅಲ್ಲಿಗೆ ಬರುತ್ತಲೇ ಇರಲಿಲ್ಲ’ ಎನ್ನುತ್ತಾರೆ ಚಂದ್ರಶೇಖರ್. ಆಗ ಅಂಬೇಡ್ಕರ್ ಬರಹಗಳನ್ನು ಓದಲಾರಂಭಿಸಿದ ಚಂದ್ರಶೇಖರ್ ಭೀಮ ಸೇನೆ ಸ್ಥಾಪಿಸಿ ತನ್ನ ಸಮುದಾಯದ ಏಳಿಗೆಗೆ ದುಡಿಯಲು ನಿರ್ಧರಿಸಿದರು. ಅವರ ಭೀಮಸೇನೆ ಇವತ್ತು ಶಹರನಪುರದಲ್ಲಿ ಹಲವಾರು ‘ಶಾಲೆ’ಗಳನ್ನು ನಡೆಸುತ್ತದೆ. ಅದಕ್ಕೆ ಭೀಮ್ ಪಾಠಾಶಾಲಾ ಎಂದು ಕರೆಯಲಾಗುತ್ತದೆ. ಅಲ್ಲಿ ಕಾಲೇಜು ಮುಗಿಸಿರುವ ದಲಿತ ಯುವಕರು ಶಾಲೆಗಳಲ್ಲಿ ಓದುತ್ತಿರುವ ದಲಿತ ಮಕ್ಕಳಿಗೆ ಪ್ರತಿದಿನ ಪಾಠ ಹೇಳಿಕೊಡುತ್ತಾರೆ. ಹಾಗೆಯೇ ಹಿರಿಯ ದಲಿತ ಅಧಿಕಾರಿಗಳು ಯುವ ದಲಿತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಕೊಡುತ್ತಾರೆ.

ನೀಲಿ ಆಗಸದಲ್ಲಿ ಚಂದ್ರಶೇಖರ್ ಆಜಾದ್ ಎಂಬ ಇನ್ನೊಂದು ನಕ್ಷತ್ರ ಪ್ರಜ್ವಲಿಸಲಾರಂಭಿಸಿದೆ. ರೋಹಿತ್ ವೇಮುಲ, ಕನ್ಹಯ್ಯ ಕುಮಾರ್, ಉಮರ್‌ ಖಾಲಿದ್, ಶೆಹ್ಲಾ ರಶೀದ್ ಮತ್ತು ಚಂದ್ರಶೇಖರ್ ಎಂಬ ಈ ನಕ್ಷತ್ರಗಳು ಎಲ್ಲರಲ್ಲಿ ಭರವಸೆ ಮೂಡಿಸುತ್ತಿವೆ.

  • ಗೌರಿ ಲಂಕೇಶ್

ಮೇ, 31 2017.


ಇದನ್ನೂ ಓದಿ: ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...