Homeಮುಖಪುಟಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

'ಹಿಂದೂ-ಮುಸ್ಲಿಮ್ ಗಲಭೆ ನಡೆದರೆ ಎಬಿವಿಪಿ ಆ ಸ್ಥಳಕ್ಕೆ ಹಾಜರಾಗುತ್ತಿತ್ತು. ಆದರೆ ದಲಿತರ ಮೇಲೆ ಮೇಲುಜಾತಿಯ ಹಿಂದೂಗಳು ದೌರ್ಜನ್ಯ ನಡೆಸಿದರೆ ಎಬಿವಿಪಿ ಅಲ್ಲಿಗೆ ಬರುತ್ತಲೇ ಇರಲಿಲ್ಲ’ ಎನ್ನುತ್ತಾರೆ ಚಂದ್ರಶೇಖರ್.

- Advertisement -
- Advertisement -

ಈಗ ಎಲ್ಲೆಡೆ ಚಂದ್ರಶೇಖರ್ ಆಜಾದ್ ಎಂಬ ಯುವಕನದ್ದೇ ಸದ್ದು. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಏರಿ ಮೂರು ತಿಂಗಳೂ ಆಗಿಲ್ಲ; ಆಗಲೇ ಅಲ್ಲಿನ ಮುಖ್ಯಮಂತ್ರಿಗೆ ಮುಖಭಂಗ ಮಾಡಿರುವ ಚಂದ್ರಶೇಖರ್ ಯೋಗಿಯ ನಿದ್ದೆಕೆಡಿಸುತ್ತಿದ್ದಾರೆ. ಅಷ್ಟೇ ಅಲ್ಲ, ದೇಶದಾದ್ಯಂತ ಪ್ರಗತಿಪರರಲ್ಲಿ ಸಂಚಲನ ಮೂಡಿಸಿರುವ ಚಂದ್ರಶೇಖರ್ ಯುವಜನತೆಯಲ್ಲಿ ರೋಮಾಂಚನ ಸೃಷ್ಟಿಸಿದ್ದಾರೆ.

ತನ್ನ ಯೌವನವನ್ನು ಡೆಹರಾಡೂನ್‌ನಲ್ಲಿ ಕಳೆದ ಚಂದ್ರಶೇಖರ್ 2013ರ ಹೊತ್ತಿಗೆ ಕಾನೂನು ಪದವಿ ಪಡೆದು ವಕೀಲನಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ ಅದೇ ಹೊತ್ತಿಗೆ ಅವರ ತಂದೆ ಗೋವರ್ಧನ್ ದಾಸ್ ಅವರಲ್ಲಿ ಕ್ಯಾನ್ಸರ್ ರೋಗ ಕಾಣಿಸಿಕೊಂಡಿತು. ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ದಾಸ್ ಅವರು ತಮ್ಮ ವೃತ್ತಿಯ ನಿಮಿತ್ತ ಬೇರೆಬೇರೆ ಕಡೆ ಸೇವೆ ಸಲ್ಲಿಸಿದ್ದರಿಂದ ಅವರ ಅರಿವಿಗೆ ಬಾರದಂತೆ ತಂದೆ ಮತ್ತು ಮಗನ ನಡುವೆ ಅಂತರ ಬೆಳೆದಿತ್ತು. ಆದರೆ ಕ್ಯಾನ್ಸರ್‌ಗೆ ಚಿಕಿತ್ಸೆ ಕೊಡಿಸುವಾಗ ಅವರಿಬ್ಬರೂ ಹತ್ತಿರವಾದರು. ದಲಿತರಾದ ದಾಸ್ ಅವರು ಜಾತಿಕಾರಣಕ್ಕೆ ತಮಗಾದ ಅವಮಾನಗಳನ್ನು ತಮ್ಮ ಪುತ್ರನಿಗೆ ವಿವರಿಸಿದರು. ಅವರು ಶಾಲೆಯ ಮುಖ್ಯಸ್ಥರಾಗಿದ್ದರೂ ಶಾಲಾ ಸಿಬ್ಬಂದಿ ಅವರಿಗೆ ಪ್ರತ್ಯೇಕವಾಗಿ ಕುಡಿಯುವ ನೀರು ಇಡುತ್ತಿದ್ದರು. ಸಭೆಗಳಲ್ಲಿ ಅವಮಾನ ಮಾಡುತ್ತಿದ್ದರು. ಇಂತಹ ನೂರಾರು ಪ್ರಕರಣಗಳನ್ನು ಅವರು ನೆನಪು ಮಾಡಿಕೊಂಡರು. ಚಂದ್ರಶೇಖರ್ ಅವರಿಗೆ ಇಂತಹ ಅವಮಾನಗಳು ಆಗಿರದಿದ್ದರೂ ತಂದೆಯ ಬದುಕು ಅವರ ಕಣ್ಣು ತೆರೆಸಿತು. ದಾಸ್ ಅವರು ತೀರಿಕೊಂಡ ನಂತರ ತನ್ನ ಜನರಿಗೆ ಏನನ್ನಾದರೂ ಮಾಡಬೇಕು ಎಂದು ನಿರ್ಧರಿಸಿದ ಚಂದ್ರಶೇಖರ್ ಶಹರನಪುರ್ ಜಿಲ್ಲೆಯಲ್ಲಿರುವ ತನ್ನ ಮೂಲ ಊರಾದ ಚುತ್ಮಲಪುರಕ್ಕೆ ಹಿಂದಿರುಗಿದರು. ಚುತ್ಮಲಪುರ್ ಹೆಚ್ಚಾಗಿ ದಲಿತರು ಮತ್ತು ಮುಸಲ್ಮಾನರು ಇರುವ ಊರು. ಅಲ್ಲಿ ತನ್ನ ಹಲವು ದಲಿತ ಮಿತ್ರರನ್ನು ಜೊತೆಹಾಕಿಕೊಂಡ ಚಂದ್ರಶೇಖರ್ ಎರಡು ವರ್ಷಗಳ ಹಿಂದೆ ‘ಭೀಮ್‌ಆರ್ಮಿ ಎಂಬ ಸಂಘಟನೆಯನ್ನು ಹುಟ್ಟುಹಾಕಿದರು. ಇದರ ಉದ್ದೇಶ ಜಾತಿ ದೌರ್ಜನ್ಯವನ್ನು ವಿರೋಧಿಸುವುದು.

ಭೀಮಸೇನೆ ಎಲ್ಲರ ಗಮನಕ್ಕೆ ಬಂದದ್ದು ಹೋದ ವರ್ಷ. ಶಹರನಪುರ್ ಹತ್ತಿರದಲ್ಲೇ ಇರುವ ಘರ್ಕೊಲಿ ಎಂಬ ಹಳ್ಳಿಯಲ್ಲಿ ದಲಿತ ಯುವಕರು ಅಂಬೇಡ್ಕರ್ ಪ್ರತಿಮೆಯ ಹತ್ತಿರ ‘ದಿ ಗ್ರೇಟ್ ಚಮ್ಮಾರ್ ಡಾ. ಭೀಮ್‌ರಾವ್ ಅಂಬೇಡ್ಕರ್ ಗ್ರಾಮ ಘರ್ಕೊಲಿ’ ಎಂಬ ಬೋರ್ಡ್ ಹಾಕಿದರು. ಇದು ಅದೇ ಹಳ್ಳಿಯ ಥಾಕೂರರನ್ನು ಕೆರಳಿಸಿತು. “ಚಮ್ಮಾರನೊಬ್ಬ ಅದು ಹೇಗೆ ‘ಗ್ರೇಟ್ ಆಗಲು ಸಾಧ್ಯ’ ಎಂದು ವಾದಿಸಿದ ಥಾಕೂರರು ಮೊದಲು ಆ ಬೋರ್ಡ್ ಕಿತ್ತುಹಾಕಬೇಕೆಂದು ತಾಕೀತು ಮಾಡಿದರು. ಅದಕ್ಕೆ ಬಗ್ಗದ ದಲಿತ ಯುವಕರು “ನಾವು ಅದನ್ನು ನಮಗೆ ಸೇರಿರುವ ಖಾಸಗಿ ಭೂಮಿಯಲ್ಲಿ ಹಾಕಿಕೊಂಡಿದ್ದೇವೆ. ನಿಮ್ಮದೇನು ರಗಳೆ” ಎಂದರು. ಥಾಕೂರರು ಪೊಲೀಸರಿಗೆ ದೂರು ಸಲ್ಲಿಸಿದರು. ಈ ಪ್ರಕರಣದ ಇತ್ಯರ್ಥಕ್ಕೆ ಡಿವೈಎಸ್ಪಿ ಆನಂದ್ ಪಾಂಡೆ ಬಂದ. ಆತ ಬ್ರಾಹ್ಮಣ. ಥಾಕೂರರ ಜೊತೆ ಕೈಜೋಡಿಸಿದ ಪೊಲೀಸಪ್ಪ ಆ ಬೋರ್ಡ್‌ಗೆ ಕಪ್ಪು ಬಣ್ಣ ಬಳಿಸಿದ. ಅದಾದ ಕೆಲ ಗಂಟೆಗಳಲ್ಲಿ ಅದ್ಯಾರೋ ಅಂಬೇಡ್ಕರ್ ಅವರ ಪ್ರತಿಮೆಗೂ ಕಪ್ಪು ಬಣ್ಣ ಬಳಿದರು. ಇದು ದಲಿತರನ್ನು ಕೆರಳಿಸಿತು. ಅವರಲ್ಲಿ ಒಬ್ಬ ಭೀಮಸೇನೆಗೆ ಫೋನ್ ಮಾಡಿದ. ತಮ್ಮ ಪಂಚಾಯತಿಯನ್ನು ವಿರೋಧಿಸಿದ ದಲಿತರನ್ನು ಬಡಿಯಲು ಪೊಲೀಸರು ಸಜ್ಜಾಗುತ್ತಿದ್ದಂತೆ ಹತ್ತಾರು ಮೋಟಾರ್ ಬೈಕ್‌ಗಳನ್ನೇರಿ ದೊಡ್ಡ ಗುಂಪೊಂದು “ಜೈ ಭೀಮ್’ ಎಂದು ಕೂಗುತ್ತಾ ಹಾಜರಾಯಿತು. ಅದರ ನೇತೃತ್ವ ವಹಿಸಿದ್ದವ ಬಿಳಿ ಶರ್ಟ್, ಕಪ್ಪು ಪ್ಯಾಂಟ್, ಕೊರಳ ಸುತ್ತ ನೀಲಿ ಸ್ಕಾರ್ಫ್ ಕಟ್ಟಿಕೊಂಡಿದ್ದ ಅಂದವಾದ ಯುವಕ. ಅವರೇ ಚಂದ್ರಶೇಖರ್ ಆಜಾದ್. ಅವತ್ತು ದಲಿತರ ಮತ್ತು ಪೊಲೀಸರ ನಡುವೆ ನಡೆದ ಚಕಮಕಿಯಲ್ಲಿ ಡಿವೈಎಸ್ಪಿ ಸಾಹೇಬನಿಗೂ ಲಾತಾ ಬಿದ್ದು ಪೊಲೀಸರೆಲ್ಲ ಓಡಿಹೋದರು.

ಆನಂತರ ಚಂದ್ರಶೇಖರರನ್ನು ಪೊಲೀಸರು ಬಂಧಿಸಿದರಲ್ಲದೆ ಅವರ ವಿರುದ್ಧ ರಾಷ್ಟ್ರೀಯ ರಕ್ಷಣಾ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲು ಮುಂದಾದರು. ದಲಿತರ ಪರ ಹೋರಾಡಿದ್ದಕ್ಕೆ ರಾಷ್ಟ್ರೀಯ ರಕ್ಷಣಾ ಕಾಯ್ದೆಯಡಿ ಕ್ರಮವೇ ಎಂದು ವಿರೋಧಿಸಿದ ಪ್ರಜ್ಞಾವಂತರು ಚಂದ್ರಶೇಖರ್ ಪರವಾಗಿ ದೊಡ್ಡ ರ್‍ಯಾಲಿಯನ್ನು ನಡೆಸಿದರು. ಪೊಲೀಸರು ತೆಪ್ಪಗಾಗಿ ಚಂದ್ರಶೇಖರ ಅವರನ್ನು ಬಿಡುಗಡೆ ಮಾಡಿದರು. ಈ ಪ್ರಕರಣದ ನಂತರ ಭೀಮ ಸೇನೆ ಇನ್ನೂ ದೊಡ್ಡದಾಯಿತು. ಚಂದ್ರಶೇಖರ್ ಪ್ರಕಾರ ಇವತ್ತು ಭೀಮಸೇನೆಯಲ್ಲಿ 40,000 ಯುವಕರು ಇದ್ದಾರಲ್ಲದೆ, ಇತರೆ ಏಳು ರಾಜ್ಯಗಳಲ್ಲಿ ಅದರ ವಿಭಾಗಗಳಿವೆ. ಎಲ್ಲಕ್ಕಿಂತ ಮಿಗಿಲಾಗಿ ಭೀಮ ಸೇನೆಯು ಇಂದು ದಲಿತರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತಿದ್ದು ತಮ್ಮ ಮೇಲೆ ದೌರ್ಜನ್ಯ ಎಸಗುವವರನ್ನು ವಿರೋಧಿಸುವ ಛಲ ಸೃಷ್ಟಿ ಮಾಡಿದೆ.

ವಿಚಿತ್ರವೆಂದರೆ ಚಂದ್ರಶೇಖರ್ ವಿದ್ಯಾರ್ಥಿಯಾಗಿದ್ದಾಗ ಸಂಘ ಪರಿವಾರದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆಯಲ್ಲಿದ್ದವರು. ಆಗ ಅವರಿಗೆ ಆರೆಸ್ಸೆಸ್‌ನ ಅಸಲಿಯತ್ತು ಅರ್ಥವಾಯಿತು. “ಹಿಂದೂ-ಮುಸ್ಲಿಮ್ ಗಲಭೆ ನಡೆದರೆ ಎಬಿವಿಪಿ ಆ ಸ್ಥಳಕ್ಕೆ ಹಾಜರಾಗುತ್ತಿತ್ತು. ಆದರೆ ದಲಿತರ ಮೇಲೆ ಮೇಲುಜಾತಿಯ ಹಿಂದೂಗಳು ದೌರ್ಜನ್ಯ ನಡೆಸಿದರೆ ಎಬಿವಿಪಿ ಅಲ್ಲಿಗೆ ಬರುತ್ತಲೇ ಇರಲಿಲ್ಲ’ ಎನ್ನುತ್ತಾರೆ ಚಂದ್ರಶೇಖರ್. ಆಗ ಅಂಬೇಡ್ಕರ್ ಬರಹಗಳನ್ನು ಓದಲಾರಂಭಿಸಿದ ಚಂದ್ರಶೇಖರ್ ಭೀಮ ಸೇನೆ ಸ್ಥಾಪಿಸಿ ತನ್ನ ಸಮುದಾಯದ ಏಳಿಗೆಗೆ ದುಡಿಯಲು ನಿರ್ಧರಿಸಿದರು. ಅವರ ಭೀಮಸೇನೆ ಇವತ್ತು ಶಹರನಪುರದಲ್ಲಿ ಹಲವಾರು ‘ಶಾಲೆ’ಗಳನ್ನು ನಡೆಸುತ್ತದೆ. ಅದಕ್ಕೆ ಭೀಮ್ ಪಾಠಾಶಾಲಾ ಎಂದು ಕರೆಯಲಾಗುತ್ತದೆ. ಅಲ್ಲಿ ಕಾಲೇಜು ಮುಗಿಸಿರುವ ದಲಿತ ಯುವಕರು ಶಾಲೆಗಳಲ್ಲಿ ಓದುತ್ತಿರುವ ದಲಿತ ಮಕ್ಕಳಿಗೆ ಪ್ರತಿದಿನ ಪಾಠ ಹೇಳಿಕೊಡುತ್ತಾರೆ. ಹಾಗೆಯೇ ಹಿರಿಯ ದಲಿತ ಅಧಿಕಾರಿಗಳು ಯುವ ದಲಿತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಕೊಡುತ್ತಾರೆ.

ನೀಲಿ ಆಗಸದಲ್ಲಿ ಚಂದ್ರಶೇಖರ್ ಆಜಾದ್ ಎಂಬ ಇನ್ನೊಂದು ನಕ್ಷತ್ರ ಪ್ರಜ್ವಲಿಸಲಾರಂಭಿಸಿದೆ. ರೋಹಿತ್ ವೇಮುಲ, ಕನ್ಹಯ್ಯ ಕುಮಾರ್, ಉಮರ್‌ ಖಾಲಿದ್, ಶೆಹ್ಲಾ ರಶೀದ್ ಮತ್ತು ಚಂದ್ರಶೇಖರ್ ಎಂಬ ಈ ನಕ್ಷತ್ರಗಳು ಎಲ್ಲರಲ್ಲಿ ಭರವಸೆ ಮೂಡಿಸುತ್ತಿವೆ.

  • ಗೌರಿ ಲಂಕೇಶ್

ಮೇ, 31 2017.


ಇದನ್ನೂ ಓದಿ: ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...