Homeಮುಖಪುಟಕೊರೊನಾ ಲಾಕ್‍ಡೌನ್ ಎದುರಾಗಿ ಆನ್‍ಲೈನ್ ಶಿಕ್ಷಣದ ಅಪಾಯ ಮತ್ತು ಸಮಸ್ಯೆಗಳು

ಕೊರೊನಾ ಲಾಕ್‍ಡೌನ್ ಎದುರಾಗಿ ಆನ್‍ಲೈನ್ ಶಿಕ್ಷಣದ ಅಪಾಯ ಮತ್ತು ಸಮಸ್ಯೆಗಳು

- Advertisement -
- Advertisement -

ಭಾರತದ ಶಿಕ್ಷಣ ವ್ಯವಸ್ಥೆಯ ಎದುರು ಈ ವರ್ಷ ಕೋವಿಡ್-19 ಸಾಂಕ್ರಾಮಿಕ ರೋಗ ಬಹುದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಿ, ಪರಿಹಾರವಿಲ್ಲದ ಸಮಸ್ಯೆಯಾಗಿ ಬೆಳೆದು ನಿಂತಿದೆ. ಸೋಂಕಿನ ಭಯದಿಂದ ಬಹುತೇಕ ರಾಜ್ಯಗಳಲ್ಲಿ ಏಪ್ರಿಲ್—ಮೇ ತಿಂಗಳಲ್ಲೇ ನಡೆಯಬೇಕಿದ್ದ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಗಳನ್ನೇ ರದ್ದು ಮಾಡಲಾಗಿದೆ. ದೇಶದ ಶೈಕ್ಷಣಿಕ ಚಟುವಟಿಕೆಗಳು ಬಹುತೇಕ ಸ್ಥಗಿತವಾಗಿದೆ. ಈ ಸಾಲಿನ ಶೈಕ್ಷಣಿಕ ವರ್ಷವೂ ಆರಂಭವಾಗಿದ್ದು, ಸದ್ಯಕ್ಕಂತೂ ಶಾಲಾ-ಕಾಲೇಜುಗಳು ಆರಂಭವಾಗುವ ಸಾಧ್ಯತೆಗಳು ಕಾಣುತ್ತಿಲ್ಲ. ಹಾಗಾದರೆ ಮುಂದೇನು? ಭವಿಷ್ಯದ ಒಂದು ವರ್ಷದ ಅವಧಿಯ ಶಿಕ್ಷಣದ ಕಥೆ ಏನು ಎಂಬ ಪ್ರಶ್ನೆ ಸಾಮಾನ್ಯವಾಗಿ ಎಲ್ಲೆಡೆ ಕಾಡುತ್ತಿದೆ.

ಆದರೆ, ಈ ಪ್ರಶ್ನೆಗೆ ಈಗ ಕಂಡುಕೊಂಡಿರುವ ಏಕೈಕ ಉತ್ತರ ಆನ್‍ಲೈನ್ ಶಿಕ್ಷಣ ವ್ಯವಸ್ಥೆ. ಕೊರೊನಾ ಮಹಾಮಾರಿ ಆರಂಭವಾದ ದಿನದಿಂದ ಆನ್‍ಲೈನ್ ಶಿಕ್ಷಣದ ಸಾಧ್ಯತೆಗಳನ್ನು ಪರ್ಯಾಯವಾಗಿ ನಮ್ಮ ಮುಂದೆ ಇಡಲಾಗುತ್ತಿದೆ. ಈ ಸಾಧ್ಯತೆಯನ್ನು ಸಮಾಜದ ಎದುರು ಇಡಲಾಗುತ್ತಿದೆ ಎನ್ನುವುದಕ್ಕಿಂತ ಒತ್ತಾಯಪೂರ್ವಕವಾಗಿ ಈ ಕಡೆಗೆ ನೂಕಲಾಗುತ್ತಿದೆ ಎಂದರೆ ಸೂಕ್ತವಾದೀತು. ಇದರ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಯನ್ನು ಅಲ್ಲಗೆಳೆಯುವಂತಿಲ್ಲ.

ಒಂದನೇ ತರಗತಿಯಿಂದ ಪದವಿ ಶಿಕ್ಷಣದವರೆಗೆ ಆನ್‍ಲೈನ್‍ನಲ್ಲೇ ಶಿಕ್ಷಣ ನೀಡುವುದು ಮತ್ತು ಪರೀಕ್ಷೆ ನಡೆಸುವ ಕುರಿತ ಚರ್ಚೆಗಳು ಈಗಾಗಲೇ ಆರಂಭವಾಗಿವೆ. ಹಾಗಾದರೆ ಭಾರತದಂತಹ ಇನ್ನೂ ಮುಂದುವರೆಯುತ್ತಿರುವ ರಾಷ್ಟ್ರದಲ್ಲಿ ಆನ್‍ಲೈನ್ ಶಿಕ್ಷಣ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯವೇ? ಈ ವ್ಯವಸ್ಥೆಯಲ್ಲಿನ ತೊಡಕುಗಳೇನು? ಇದಕ್ಕಿರುವ ಪರಿಹಾರ ಮತ್ತು ಪರ್ಯಾಯಗಳೇನು?

ಭಾರತದಲ್ಲಿ ಆನ್‍ಲೈನ್ ಶಿಕ್ಷಣ ಸಾಧ್ಯವೇ?

ತಾಂತ್ರಿಕವಾಗಿ ದೇಶಗಳಿ ಮುಂದುವರೆದಂತೆಲ್ಲಾ ಕಳೆದ ಒಂದು ದಶಕದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಗ್ರಪಂಕ್ತಿಯ ಅಭಿವೃದ್ಧಿ ರಾಷ್ಟ್ರಗಳಲ್ಲಿ ಆನ್‍ಲೈನ್ ಶಿಕ್ಷಣ ಭವಿಷ್ಯದ ಪರ್ಯಾಯವಾಗಿ ಬೆಳೆಯುತ್ತಿದೆ.

ಅಮೆರಿಕದಂತಹ ತಂತ್ರಜ್ಞಾನದಲ್ಲಿ ಹೆಚ್ಚು ಮುಂದುವರೆದ ರಾಷ್ಟ್ರದಲ್ಲಿ ಖರ್ಚು ಮತ್ತು ಸಮಯವನ್ನು ಉಳಿಸುವ ಸಲುವಾಗಿ ಆನ್‍ಲೈನ್ ಶಿಕ್ಷಣ ಹೆಚ್ಚು ಜನಪ್ರಿಯ. ಆನ್‍ಲೈನ್ ಮೂಲಕವೇ ಪದವಿಗಳಿಸುವುದು ಈ ರಾಷ್ಟ್ರಗಳಲ್ಲಿ ಸಾಧ್ಯ. ಅಲ್ಲಿನ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಎಂಬುದು ದೊಡ್ಡ ಮಾತೇನಲ್ಲ. ಏಕೆಂದರೆ ಅದಕ್ಕೆ ಬೇಕಾದ ವ್ಯವಸ್ಥೆಗಳು ಅಲ್ಲಿ ಸಾಕಷ್ಟು ಅಭಿವೃದ್ಧಿಗೊಂಡಿವೆ. ಆದರೆ, ಭಾರತದ ಮಟ್ಟಿಗೆ, ಇಲ್ಲಿನ ಎಷ್ಟೋ ಮಕ್ಕಳಿಗೆ ಆನ್‍ಲೈನ್ ತರಗತಿ ಎಂದರೆ ಈವರೆಗೆ ಕಂಡುಕೇಳರಿಯದ ಹೊಸ ವಿಚಾರ.

ಈವರೆಗೆ ಸಮೂಹ ಶಿಕ್ಷಣ ಪದ್ಧತಿಯಲ್ಲಿ ಶಾಲಾ ಗೆಳೆಯರ ಜೊತೆಯಲ್ಲಿ ಒಂದೇ ಕೊಠಡಿಯಲ್ಲಿ ಕುಳಿತು, ಶಾಲಾ ಆವರಣದಲ್ಲಿ ಆಡಾಡುತಲೇ ಶಿಕ್ಷಣದ ಜೊತೆಗೆ ಬದಕನ್ನೂ ಕಲಿತ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಒಗ್ಗಲು ಸಾಧ್ಯವೇ ಎಂಬುದು ಮೊದಲ ಪ್ರಶ್ನೆ. ಶಿಕ್ಷಣದ ಮೊದಲ ಗುರಿ ಸಾಮಾಜೀಕರಣ ಎಂಬ ಮಾತೂ ಇದೆ. ನಮ್ಮ ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜೊತೆಗೆ ದಿನನಿತ್ಯದ ವ್ಯವಹಾರವನ್ನೂ ಕಲಿಸುತ್ತಿದ್ದವು. ಇದು ಆನ್‍ಲೈನ್ ಶಿಕ್ಷಣದಲ್ಲಿ ಸಾಧ್ಯವೇ ಎಂಬುದು ಮತ್ತೊಂದು ಬಹುದೊಡ್ಡ ಪ್ರಶ್ನೆ. ಆದರೆ, ಇದರ ನಡುವೆ ಕಾಡುವ ಮತ್ತೊಂದು ಪ್ರಶ್ನೆ – ಮಕ್ಕಳು ಇಂತಹ ಶಿಕ್ಷಣ ವ್ಯವಸ್ಥೆಗೆ ಒಗ್ಗುವುದಿರಲಿ ಭಾರತದಂತಹ ರಾಷ್ಟ್ರದಲ್ಲಿ ಮನೆಮಾಡಿರುವ ಅಸಮಾನತೆಗಳ ನಡುವೆ ಈ ಪರ್ಯಾಯ ಶಿಕ್ಷಣವನ್ನು ಯಶಸ್ವಿಗೊಳಿಸುವುದು ಸಾಧ್ಯವೇ?

ಅಸಮಾನತೆಯ ದೇಶದಲ್ಲಿ ಆನ್‍ಲೈನ್ ಶಿಕ್ಷಣ

ಆನ್‍ಲೈನ್ ಶಿಕ್ಷಣ ಎಂಬುದು ಹಗಳಿರುಳು ಕಳೆಯುವುದರ ಒಳಗಾಗಿ ಸಾಧ್ಯವಾಗಿಬಿಡುವ ಜುಮ್ಲಾ ಅಲ್ಲ. ಬದಲಾಗಿ ಅದಕ್ಕೆ ವ್ಯವಸ್ಥಿತ ಸಿದ್ಧತೆ ಬೇಕು. ಎಲ್ಲೆಡೆ 24 ಗಂಟೆ ವಿದ್ಯುತ್ ವ್ಯವಸ್ಥೆ ಇರಬೇಕು. ಉತ್ತಮ ಗುಣಮಟ್ಟದ ಇಂಟರ್ನೆಟ್ ಸೇವೆ ಆಭಾದಿತವಾಗಿರಬೇಕು, ಮೊಬೈಲ್ ಅಥವಾ ಟ್ಯಾಬ್ಲಾಯ್ಡ್ ಕಡ್ಡಾಯ ಇರಬೇಕು, ಬಹುಮುಖ್ಯವಾಗಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಮನೆಯಲ್ಲಿರಬೇಕು.

ಆದರೆ, ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಜನರೇ ಹೆಚ್ಚಿರುವ ಇನ್ನೂ ನಗರ ಭಾಗದಲ್ಲಿ ಇಕ್ಕಟ್ಟಿನ ಮನೆಗಳಲ್ಲಿ ವಾಸಿಸುವ ಮಕ್ಕಳಿಗೆ ಮನೆಯಲ್ಲಿ ಪೂರಕ ಕಲಿಕೆಯ ವಾತಾವರಣ ಇರುತ್ತದೆ ಎಂದು ಊಹಿಸುವುದೇ ಭಾರತ ಮಟ್ಟಿಗೆ ಅಪರಾಧವಾದೀತಲ್ಲವೇ?

ಪೂರಕ ವಾತಾವರಣ ಬಿಡಿ ಆನ್‍ಲೈನ್ ಶಿಕ್ಷಣಕ್ಕೆ ಅಗತ್ಯವಾದ ಉಳಿದ ಸವಲತ್ತುಗಳಾದರೂ ಭಾರತದಲ್ಲಿ ಇವೆಯೇ ಎಂದು ಒಮ್ಮೆ ಗಮನಿಸಿದರೆ..

1) ಭಾರತದ ಕೇವಲ ಶೇ.47ರಷ್ಟು ಕುಟುಂಬಗಳು ಮಾತ್ರ 12 ಗಂಟೆಗಿಂತ ಹೆಚ್ಚಿನ ವಿದ್ಯುತ್ ಪಡೆಯುತ್ತಿದ್ದಾರೆ ಎಂದು ಸ್ವತಃ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಾಹಿತಿ ನೀಡಿದೆ.

2) ಸೆಪ್ಟೆಂಬರ್ 2019 ರಲ್ಲಿ ಖಿಖಂI ಸಂಸ್ಥೆ ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ, ಭಾರತದಲ್ಲಿ ಸುಮಾರು ಶೇ.52ರಷ್ಟು ಜನ ಮಾತ್ರ ಇಂಟರ್ನೆಟ್ ಬಳಕೆದಾರರು. ಇದು ಇಂಟರ್ನೆಟ್ ಬಳಕೆಯಲ್ಲಿ ಭಾರತ ಎಷ್ಟು ಹಿಂದುಳಿದಿದೆ ಎಂಬುದು ಸ್ಪಷ್ಟವಾಗುತ್ತದೆ.

3) ಭಾರತದಲ್ಲಿ ಕೇವಲ ಶೇ.24ರಷ್ಟು ಜನ ಮಾತ್ರ ಸ್ಮಾರ್ಟ್‍ಫೋನ್ ಹೊಂದಿದ್ದಾರೆ. ಕೇವಲ ಶೇ.11ರಷ್ಟು ಜನ ಮಾತ್ರ ಕಂಪ್ಯೂಟರ್ ಅಥವಾ ಟ್ಯಾಬ್ಲೆಟ್ ಹೊಂದಿದ್ದಾರೆ. ದೇಶದ ಶೇ.20 ರಷ್ಟು ಕುಟುಂಬಗಳ ಪೈಕಿ ಕೇವಲ ಶೇ.8.9 ರಷ್ಟು ಜನ ಮಾತ್ರ ಇಂಟರ್ನೆಟ್ ಸವಲತ್ತು ಹೊಂದಿದ್ದಾರೆ. ದೇಶದ ರಾಜಧಾನಿ ದೆಹಲಿಯಲ್ಲಿ ಶೇ.35ರಷ್ಟು ಕುಟುಂಬಗಳು ಕಂಪ್ಯೂಟರ್ ಹೊಂದಿದ್ದರೆ, ಬಿಹಾರದಲ್ಲಿ ಈ ಸಂಖ್ಯೆ ಕೇವಲ ಶೇ.4.6 ಎಂಬುದು ಉಲ್ಲೇಖಾರ್ಹ.

“ಭಾರತದಲ್ಲಿ ಅಸಮಾನ ಶಿಕ್ಷಣ ವ್ಯವಸ್ಥೆಗೆ ಆಡಳಿತ-ಅಧಿಕಾರಿ ವರ್ಗ ದಾರಿಮಾಡಿಕೊಟ್ಟು ದಶಕಗಳೇ ಕಳೆದಿದೆ. ಖಾಸಗಿ ಶಾಲೆಯಲ್ಲಿ ಓದುವ ಶ್ರೀಮಂತ ಮತ್ತು ಸರ್ಕಾರಿ ಶಾಲೆಯಲ್ಲಿ ಓದುವ ಬಡ ಮಕ್ಕಳ ನಡುವೆ ವ್ಯವಸ್ಥೆ ಈಗಾಗಲೇ ಬಹುದೊಡ್ಡ ಅಸಮಾನತೆಯ ಕಂದಕವನ್ನು ಸೃಷ್ಟಿಸಿದೆ. ಇಂತಹ ಪರಿಸ್ಥಿತಿಯಲ್ಲಿ ನಿಂತು ನಾವು ಆನ್‍ಲೈನ್ ಶಿಕ್ಷಣದ ಕುರಿತು ಚಿಂತನೆ ನಡೆಸುವುದೇ ಬಹುದೊಡ್ಡ ಅಪರಾಧ. ಅವಕಾಶ ಇದ್ದವರು ಆನ್‍ಲೈನ್ ಶಿಕ್ಷಣ ಪಡೆಯಲಿ, ಸಾಧ್ಯತೆ ಇಲ್ಲದವರಿಗೆ ಶಿಕ್ಷಣ ಬೇಡ ಎಂಬುದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ತಲುಪಬೇಕು ಎಂಬ ಪ್ರಜಾಪ್ರಭುತ್ವದ ಆಶಯಕ್ಕೇ ಮಾರಕ” ಎನ್ನುತ್ತಾರೆ ತಮಿಳುನಾಡಿನ ಶಿಕ್ಷಣ ತಜ್ಞ ಮತ್ತು ಮಕ್ಕಳ ಶಿಕ್ಷಣ ಹಕ್ಕು ಹೋರಾಟಗಾರ ಗಜೇಂದ್ರ ಬಾಬು.

ಪರ್ಯಾಯ ಅಥವಾ ಪರಿಹಾರವೇನು?

ಅಸಮಾನತೆಯ ಹೊರತಾಗಿಯೂ ಆನ್‍ಲೈನ್ ಶಿಕ್ಷಣಕ್ಕೆ ಬೇಕಾದ ಯಾವ ಮೂಲಭೂತ ಸೌಲಭ್ಯವೂ ಭಾರತದಲ್ಲಿ ಇಲ್ಲ. ಹೀಗಾಗಿ ಆನ್‍ಲೈನ್ ಶಿಕ್ಷಣ ಬೇಡ ಎಂಬುದಾದರೆ ಪರ್ಯಾಯವೇನು? ಈ ವರ್ಷದ ಮಕ್ಕಳ ಕಲಿಕೆ ಹೇಗೆ? ಶಾಲೆ ಕಲಿಕೆ ಇಲ್ಲದಿದ್ದರೆ ಮಕ್ಕಳ ಮಾನಸಿಕ ಆರೋಗ್ಯದ ಮೇಲಾಗುವ ಪರಿಣಾಮವೇನು? ಎಂಬ ಪ್ರಶ್ನೆಗಳೂ ಏಳುತ್ತವೆ. ಅದಕ್ಕೂ ಪರ್ಯಾಯವನ್ನು ಮುಂದಿಡುತ್ತಾರೆ ಶಿಕ್ಷಣ ತಜ್ಞರು.

“ಭಾರತದಲ್ಲಿ ಮಕ್ಕಳಿಗೆ ಶಾಲಾ ಮಟ್ಟದಿಂದಲೇ ಆನ್‍ಲೈನ್ ಶಿಕ್ಷಣದ ಕಡೆಗೆ ವಾಲಿಸುವುದಕ್ಕಿಂತ ಮನೆಯಲ್ಲಿ ಅನೌಪಚಾರಿಕ ಶಿಕ್ಷಣ ನೀಡುವುದೇ ಲೇಸು” ಎಂದು ವ್ಯಾಖ್ಯಾನಿಸುತ್ತಾರೆ ಗಜೇಂದ್ರ ಬಾಬು.

ಗಜೇಂದ್ರ ಬಾಬು ಅವರ ಪ್ರಕಾರ, “ಭಾರತದಲ್ಲಿ PUಅ ವರೆಗಿನ ಶಿಕ್ಷಣವನ್ನು 10+2 ಎಂದು ಪರಿಗಣಿಸಲಾಗುತ್ತದೆ. ಆದರೆ, ಈ ವರ್ಷ ಶಿಕ್ಷಣಕ್ಕೆ ದೀರ್ಘ ರಜೆ ನೀಡಿ 11+2 ಎಂದು ಬದಲಿಸಿದರೆ ಇದರಿಂದ ಯಾವುದೇ ನಷ್ಟವಿಲ್ಲ. ಹೀಗಾಗಿ ಈ ವರ್ಷ ಮಕ್ಕಳನ್ನು ಶಾಲೆಗೆ ಕಳಿಸುವ ಅಗತ್ಯವೂ ಇಲ್ಲ, ಆನ್‍ಲೈನ್ ಶಿಕ್ಷಣವೂ ಬೇಕಾಗಿಲ್ಲ.

“ಅದರ ಬದಲಾಗಿ ಮಕ್ಕಳಿಗೆ ಅನೌಪಚಾರಿಕ ಶಿಕ್ಷಣ ನೀಡಬೇಕು. ಪ್ರತಿದಿನ ಸುದ್ದಿ ಪತ್ರಿಕೆಗಳನ್ನು ಓದುವ ಅವಕಾಶ ನೀಡಬೇಕು. ವಿಶ್ವದ ವಿದ್ಯಮಾನಗಳನ್ನು ತಿಳಿಸಬೇಕು. ಪ್ರಸ್ತುತ ಸಮಾಜದಲ್ಲಿ ಆವರಿಸಿರುವ ಕೊರೊನಾ ಎಂಬ ವಿಚಾರವೇ ಬಹುದೊಡ್ಡ ಪಾಠ. ಹೀಗಾಗಿ ಮಕ್ಕಳಿಗೆ ಕೊರೋನಾ ಸೇರಿದಂತೆ ಎಲ್ಲಾ ಸಾಮೂಹಿಕ ರೋಗಗಳ ಬಗ್ಗೆ ಮನೆಯಲ್ಲೇ ಹಿರಿಯರು ಪೋಷಕರು ಪಾಠ ಮಾಡಬಹುದು. ಈ ಮೂಲಕ ಪೋಷಕರು ಸಾಕಷ್ಟು ವಿಚಾರಗಳನ್ನು ಕಲಿಯಬಹುದು.

“ಇದಲ್ಲದೆ ಎಲ್ಲಾ ಗ್ರಾಮಗಳಲ್ಲಿ ಶಾಲಾ ಮಕ್ಕಳನ್ನು ಒಟ್ಟಾಗಿ ಸೇರಿಸಿ ಶಾಲಾ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಅವರಿಗೆ ಕೆಲವು ಅಗತ್ಯ ವಿಚಾರಗಳನ್ನು ಬೋಧಿಸಬಹುದು. ಪೌಷ್ಠಿಕ ಆಹಾರದ ಮಾಹಿತಿಯ ಜೊತೆಗೆ ವಿಜ್ಞಾನ, ಸಮಾಜ ವಿಜ್ಞಾನವನ್ನು ಪ್ರಾಯೋಗಿಕವಾಗಿ ಬೋಧಿಸಬಹುದು. ಆಟಗಳಲ್ಲೂ ತೊಡಗಿಸಬಹುದು. ಇದರಿಂದ ಮಕ್ಕಳು ಗಡಿಬಿಡಿ ಶಿಕ್ಷಣದಿಂದ ದೊರೆತ ಈ ಒಂದು ವರ್ಷದ ಅವಧಿಯನ್ನು ಬಳಸಿಕೊಂಡು ಮತ್ತಷ್ಟು ಕ್ರಿಯಾಶೀಲರಾಗುತ್ತಾರೆ” ಎನ್ನುತ್ತಾರೆ ಶಿಕ್ಷಣ ತಜ್ಞ ಗಜೇಂದ್ರ ಬಾಬು.

ಒಟ್ಟಾರೆ ಭಾರತದಂತಹ ರಾಷ್ಟ್ರದಲ್ಲಿ ಆನ್‍ಲೈನ್ ಶಿಕ್ಷಣ ಯಶಸ್ವಿಯಾಗುವುದು ಸಾಧ್ಯವಿಲ್ಲ ಎಂಬುದು ಸರ್ಕಾರಕ್ಕೂ ತಿಳಿಯದ ವಿಚಾರವೇನಲ್ಲ. ಆದರೆ, ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದಿರುವ ಸರ್ಕಾರ ಒತ್ತಾಯಪೂರ್ವಕವಾಗಿ ಆನ್‍ಲೈನ್ ಶಿಕ್ಷಣದ ಕಡೆಗೆ ವಿದ್ಯಾರ್ಥಿಗಳನ್ನು ದೂಡುತ್ತಿರುವುದು ಸ್ಪಷ್ಟವಾಗಿದೆ. ಈ ವರ್ಷದ ಶಿಕ್ಷಣ ಶುಲ್ಕ ವಸೂಲಿ ಮಾಡುವ ನಿಟ್ಟಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯವರು ನಡೆಸುತ್ತಿರುವ ಈ ನಾಟಕವೂ ತಿಳಿಯದ ವಿಚಾರವೇನಲ್ಲ.

ಭಾರತದಲ್ಲಿ ಶಿಕ್ಷಣ ವ್ಯವಸ್ಥೆ ಖಾಸಗೀಕರಣವಾಗಿರುವ ಪರಿಣಾಮವಾಗಿಯೇ ಸರ್ಕಾರಗಳು ಸತತವಾಗಿ ಶಿಕ್ಷಣ ಬಜೆಟ್ ಗಾತ್ರವನ್ನು ಕಡಿಮೆ ಮಾಡುತ್ತಿವೆ ಎಂದರೂ ತಪ್ಪಾಗಲಾರದು. ಈ ನಡುವೆ ಆನ್‍ಲೈನ್ ಶಿಕ್ಷಣ ಎಂಬ ಹೊಸ ಮಾದರಿ ಹುಟ್ಟಿಕೊಂಡಿರುವುದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಲಾಭವಾಗಬಹುದೇನೋ? ಆದರೆ, ಇದರಿಂದ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಯಾವುದೇ ಲಾಭ ಇಲ್ಲ ಎಂಬುದು ಮಾತ್ರ ಸ್ಪಷ್ಟ.


ಇದನ್ನು ಓದಿ: ರಾಮ ರಾಜ್ಯದ ಭರವಸೆ ನೀಡಿ ಗೂಂಡಾ ರಾಜ್ಯ ನೀಡಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...