Homeಮುಖಪುಟಕೊರೊನಾ ಲಾಕ್‍ಡೌನ್ ಎದುರಾಗಿ ಆನ್‍ಲೈನ್ ಶಿಕ್ಷಣದ ಅಪಾಯ ಮತ್ತು ಸಮಸ್ಯೆಗಳು

ಕೊರೊನಾ ಲಾಕ್‍ಡೌನ್ ಎದುರಾಗಿ ಆನ್‍ಲೈನ್ ಶಿಕ್ಷಣದ ಅಪಾಯ ಮತ್ತು ಸಮಸ್ಯೆಗಳು

- Advertisement -
- Advertisement -

ಭಾರತದ ಶಿಕ್ಷಣ ವ್ಯವಸ್ಥೆಯ ಎದುರು ಈ ವರ್ಷ ಕೋವಿಡ್-19 ಸಾಂಕ್ರಾಮಿಕ ರೋಗ ಬಹುದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಿ, ಪರಿಹಾರವಿಲ್ಲದ ಸಮಸ್ಯೆಯಾಗಿ ಬೆಳೆದು ನಿಂತಿದೆ. ಸೋಂಕಿನ ಭಯದಿಂದ ಬಹುತೇಕ ರಾಜ್ಯಗಳಲ್ಲಿ ಏಪ್ರಿಲ್—ಮೇ ತಿಂಗಳಲ್ಲೇ ನಡೆಯಬೇಕಿದ್ದ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಗಳನ್ನೇ ರದ್ದು ಮಾಡಲಾಗಿದೆ. ದೇಶದ ಶೈಕ್ಷಣಿಕ ಚಟುವಟಿಕೆಗಳು ಬಹುತೇಕ ಸ್ಥಗಿತವಾಗಿದೆ. ಈ ಸಾಲಿನ ಶೈಕ್ಷಣಿಕ ವರ್ಷವೂ ಆರಂಭವಾಗಿದ್ದು, ಸದ್ಯಕ್ಕಂತೂ ಶಾಲಾ-ಕಾಲೇಜುಗಳು ಆರಂಭವಾಗುವ ಸಾಧ್ಯತೆಗಳು ಕಾಣುತ್ತಿಲ್ಲ. ಹಾಗಾದರೆ ಮುಂದೇನು? ಭವಿಷ್ಯದ ಒಂದು ವರ್ಷದ ಅವಧಿಯ ಶಿಕ್ಷಣದ ಕಥೆ ಏನು ಎಂಬ ಪ್ರಶ್ನೆ ಸಾಮಾನ್ಯವಾಗಿ ಎಲ್ಲೆಡೆ ಕಾಡುತ್ತಿದೆ.

ಆದರೆ, ಈ ಪ್ರಶ್ನೆಗೆ ಈಗ ಕಂಡುಕೊಂಡಿರುವ ಏಕೈಕ ಉತ್ತರ ಆನ್‍ಲೈನ್ ಶಿಕ್ಷಣ ವ್ಯವಸ್ಥೆ. ಕೊರೊನಾ ಮಹಾಮಾರಿ ಆರಂಭವಾದ ದಿನದಿಂದ ಆನ್‍ಲೈನ್ ಶಿಕ್ಷಣದ ಸಾಧ್ಯತೆಗಳನ್ನು ಪರ್ಯಾಯವಾಗಿ ನಮ್ಮ ಮುಂದೆ ಇಡಲಾಗುತ್ತಿದೆ. ಈ ಸಾಧ್ಯತೆಯನ್ನು ಸಮಾಜದ ಎದುರು ಇಡಲಾಗುತ್ತಿದೆ ಎನ್ನುವುದಕ್ಕಿಂತ ಒತ್ತಾಯಪೂರ್ವಕವಾಗಿ ಈ ಕಡೆಗೆ ನೂಕಲಾಗುತ್ತಿದೆ ಎಂದರೆ ಸೂಕ್ತವಾದೀತು. ಇದರ ಹಿಂದೆ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಯನ್ನು ಅಲ್ಲಗೆಳೆಯುವಂತಿಲ್ಲ.

ಒಂದನೇ ತರಗತಿಯಿಂದ ಪದವಿ ಶಿಕ್ಷಣದವರೆಗೆ ಆನ್‍ಲೈನ್‍ನಲ್ಲೇ ಶಿಕ್ಷಣ ನೀಡುವುದು ಮತ್ತು ಪರೀಕ್ಷೆ ನಡೆಸುವ ಕುರಿತ ಚರ್ಚೆಗಳು ಈಗಾಗಲೇ ಆರಂಭವಾಗಿವೆ. ಹಾಗಾದರೆ ಭಾರತದಂತಹ ಇನ್ನೂ ಮುಂದುವರೆಯುತ್ತಿರುವ ರಾಷ್ಟ್ರದಲ್ಲಿ ಆನ್‍ಲೈನ್ ಶಿಕ್ಷಣ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯವೇ? ಈ ವ್ಯವಸ್ಥೆಯಲ್ಲಿನ ತೊಡಕುಗಳೇನು? ಇದಕ್ಕಿರುವ ಪರಿಹಾರ ಮತ್ತು ಪರ್ಯಾಯಗಳೇನು?

ಭಾರತದಲ್ಲಿ ಆನ್‍ಲೈನ್ ಶಿಕ್ಷಣ ಸಾಧ್ಯವೇ?

ತಾಂತ್ರಿಕವಾಗಿ ದೇಶಗಳಿ ಮುಂದುವರೆದಂತೆಲ್ಲಾ ಕಳೆದ ಒಂದು ದಶಕದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಗ್ರಪಂಕ್ತಿಯ ಅಭಿವೃದ್ಧಿ ರಾಷ್ಟ್ರಗಳಲ್ಲಿ ಆನ್‍ಲೈನ್ ಶಿಕ್ಷಣ ಭವಿಷ್ಯದ ಪರ್ಯಾಯವಾಗಿ ಬೆಳೆಯುತ್ತಿದೆ.

ಅಮೆರಿಕದಂತಹ ತಂತ್ರಜ್ಞಾನದಲ್ಲಿ ಹೆಚ್ಚು ಮುಂದುವರೆದ ರಾಷ್ಟ್ರದಲ್ಲಿ ಖರ್ಚು ಮತ್ತು ಸಮಯವನ್ನು ಉಳಿಸುವ ಸಲುವಾಗಿ ಆನ್‍ಲೈನ್ ಶಿಕ್ಷಣ ಹೆಚ್ಚು ಜನಪ್ರಿಯ. ಆನ್‍ಲೈನ್ ಮೂಲಕವೇ ಪದವಿಗಳಿಸುವುದು ಈ ರಾಷ್ಟ್ರಗಳಲ್ಲಿ ಸಾಧ್ಯ. ಅಲ್ಲಿನ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಎಂಬುದು ದೊಡ್ಡ ಮಾತೇನಲ್ಲ. ಏಕೆಂದರೆ ಅದಕ್ಕೆ ಬೇಕಾದ ವ್ಯವಸ್ಥೆಗಳು ಅಲ್ಲಿ ಸಾಕಷ್ಟು ಅಭಿವೃದ್ಧಿಗೊಂಡಿವೆ. ಆದರೆ, ಭಾರತದ ಮಟ್ಟಿಗೆ, ಇಲ್ಲಿನ ಎಷ್ಟೋ ಮಕ್ಕಳಿಗೆ ಆನ್‍ಲೈನ್ ತರಗತಿ ಎಂದರೆ ಈವರೆಗೆ ಕಂಡುಕೇಳರಿಯದ ಹೊಸ ವಿಚಾರ.

ಈವರೆಗೆ ಸಮೂಹ ಶಿಕ್ಷಣ ಪದ್ಧತಿಯಲ್ಲಿ ಶಾಲಾ ಗೆಳೆಯರ ಜೊತೆಯಲ್ಲಿ ಒಂದೇ ಕೊಠಡಿಯಲ್ಲಿ ಕುಳಿತು, ಶಾಲಾ ಆವರಣದಲ್ಲಿ ಆಡಾಡುತಲೇ ಶಿಕ್ಷಣದ ಜೊತೆಗೆ ಬದಕನ್ನೂ ಕಲಿತ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಒಗ್ಗಲು ಸಾಧ್ಯವೇ ಎಂಬುದು ಮೊದಲ ಪ್ರಶ್ನೆ. ಶಿಕ್ಷಣದ ಮೊದಲ ಗುರಿ ಸಾಮಾಜೀಕರಣ ಎಂಬ ಮಾತೂ ಇದೆ. ನಮ್ಮ ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜೊತೆಗೆ ದಿನನಿತ್ಯದ ವ್ಯವಹಾರವನ್ನೂ ಕಲಿಸುತ್ತಿದ್ದವು. ಇದು ಆನ್‍ಲೈನ್ ಶಿಕ್ಷಣದಲ್ಲಿ ಸಾಧ್ಯವೇ ಎಂಬುದು ಮತ್ತೊಂದು ಬಹುದೊಡ್ಡ ಪ್ರಶ್ನೆ. ಆದರೆ, ಇದರ ನಡುವೆ ಕಾಡುವ ಮತ್ತೊಂದು ಪ್ರಶ್ನೆ – ಮಕ್ಕಳು ಇಂತಹ ಶಿಕ್ಷಣ ವ್ಯವಸ್ಥೆಗೆ ಒಗ್ಗುವುದಿರಲಿ ಭಾರತದಂತಹ ರಾಷ್ಟ್ರದಲ್ಲಿ ಮನೆಮಾಡಿರುವ ಅಸಮಾನತೆಗಳ ನಡುವೆ ಈ ಪರ್ಯಾಯ ಶಿಕ್ಷಣವನ್ನು ಯಶಸ್ವಿಗೊಳಿಸುವುದು ಸಾಧ್ಯವೇ?

ಅಸಮಾನತೆಯ ದೇಶದಲ್ಲಿ ಆನ್‍ಲೈನ್ ಶಿಕ್ಷಣ

ಆನ್‍ಲೈನ್ ಶಿಕ್ಷಣ ಎಂಬುದು ಹಗಳಿರುಳು ಕಳೆಯುವುದರ ಒಳಗಾಗಿ ಸಾಧ್ಯವಾಗಿಬಿಡುವ ಜುಮ್ಲಾ ಅಲ್ಲ. ಬದಲಾಗಿ ಅದಕ್ಕೆ ವ್ಯವಸ್ಥಿತ ಸಿದ್ಧತೆ ಬೇಕು. ಎಲ್ಲೆಡೆ 24 ಗಂಟೆ ವಿದ್ಯುತ್ ವ್ಯವಸ್ಥೆ ಇರಬೇಕು. ಉತ್ತಮ ಗುಣಮಟ್ಟದ ಇಂಟರ್ನೆಟ್ ಸೇವೆ ಆಭಾದಿತವಾಗಿರಬೇಕು, ಮೊಬೈಲ್ ಅಥವಾ ಟ್ಯಾಬ್ಲಾಯ್ಡ್ ಕಡ್ಡಾಯ ಇರಬೇಕು, ಬಹುಮುಖ್ಯವಾಗಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಮನೆಯಲ್ಲಿರಬೇಕು.

ಆದರೆ, ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಜನರೇ ಹೆಚ್ಚಿರುವ ಇನ್ನೂ ನಗರ ಭಾಗದಲ್ಲಿ ಇಕ್ಕಟ್ಟಿನ ಮನೆಗಳಲ್ಲಿ ವಾಸಿಸುವ ಮಕ್ಕಳಿಗೆ ಮನೆಯಲ್ಲಿ ಪೂರಕ ಕಲಿಕೆಯ ವಾತಾವರಣ ಇರುತ್ತದೆ ಎಂದು ಊಹಿಸುವುದೇ ಭಾರತ ಮಟ್ಟಿಗೆ ಅಪರಾಧವಾದೀತಲ್ಲವೇ?

ಪೂರಕ ವಾತಾವರಣ ಬಿಡಿ ಆನ್‍ಲೈನ್ ಶಿಕ್ಷಣಕ್ಕೆ ಅಗತ್ಯವಾದ ಉಳಿದ ಸವಲತ್ತುಗಳಾದರೂ ಭಾರತದಲ್ಲಿ ಇವೆಯೇ ಎಂದು ಒಮ್ಮೆ ಗಮನಿಸಿದರೆ..

1) ಭಾರತದ ಕೇವಲ ಶೇ.47ರಷ್ಟು ಕುಟುಂಬಗಳು ಮಾತ್ರ 12 ಗಂಟೆಗಿಂತ ಹೆಚ್ಚಿನ ವಿದ್ಯುತ್ ಪಡೆಯುತ್ತಿದ್ದಾರೆ ಎಂದು ಸ್ವತಃ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಾಹಿತಿ ನೀಡಿದೆ.

2) ಸೆಪ್ಟೆಂಬರ್ 2019 ರಲ್ಲಿ ಖಿಖಂI ಸಂಸ್ಥೆ ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ, ಭಾರತದಲ್ಲಿ ಸುಮಾರು ಶೇ.52ರಷ್ಟು ಜನ ಮಾತ್ರ ಇಂಟರ್ನೆಟ್ ಬಳಕೆದಾರರು. ಇದು ಇಂಟರ್ನೆಟ್ ಬಳಕೆಯಲ್ಲಿ ಭಾರತ ಎಷ್ಟು ಹಿಂದುಳಿದಿದೆ ಎಂಬುದು ಸ್ಪಷ್ಟವಾಗುತ್ತದೆ.

3) ಭಾರತದಲ್ಲಿ ಕೇವಲ ಶೇ.24ರಷ್ಟು ಜನ ಮಾತ್ರ ಸ್ಮಾರ್ಟ್‍ಫೋನ್ ಹೊಂದಿದ್ದಾರೆ. ಕೇವಲ ಶೇ.11ರಷ್ಟು ಜನ ಮಾತ್ರ ಕಂಪ್ಯೂಟರ್ ಅಥವಾ ಟ್ಯಾಬ್ಲೆಟ್ ಹೊಂದಿದ್ದಾರೆ. ದೇಶದ ಶೇ.20 ರಷ್ಟು ಕುಟುಂಬಗಳ ಪೈಕಿ ಕೇವಲ ಶೇ.8.9 ರಷ್ಟು ಜನ ಮಾತ್ರ ಇಂಟರ್ನೆಟ್ ಸವಲತ್ತು ಹೊಂದಿದ್ದಾರೆ. ದೇಶದ ರಾಜಧಾನಿ ದೆಹಲಿಯಲ್ಲಿ ಶೇ.35ರಷ್ಟು ಕುಟುಂಬಗಳು ಕಂಪ್ಯೂಟರ್ ಹೊಂದಿದ್ದರೆ, ಬಿಹಾರದಲ್ಲಿ ಈ ಸಂಖ್ಯೆ ಕೇವಲ ಶೇ.4.6 ಎಂಬುದು ಉಲ್ಲೇಖಾರ್ಹ.

“ಭಾರತದಲ್ಲಿ ಅಸಮಾನ ಶಿಕ್ಷಣ ವ್ಯವಸ್ಥೆಗೆ ಆಡಳಿತ-ಅಧಿಕಾರಿ ವರ್ಗ ದಾರಿಮಾಡಿಕೊಟ್ಟು ದಶಕಗಳೇ ಕಳೆದಿದೆ. ಖಾಸಗಿ ಶಾಲೆಯಲ್ಲಿ ಓದುವ ಶ್ರೀಮಂತ ಮತ್ತು ಸರ್ಕಾರಿ ಶಾಲೆಯಲ್ಲಿ ಓದುವ ಬಡ ಮಕ್ಕಳ ನಡುವೆ ವ್ಯವಸ್ಥೆ ಈಗಾಗಲೇ ಬಹುದೊಡ್ಡ ಅಸಮಾನತೆಯ ಕಂದಕವನ್ನು ಸೃಷ್ಟಿಸಿದೆ. ಇಂತಹ ಪರಿಸ್ಥಿತಿಯಲ್ಲಿ ನಿಂತು ನಾವು ಆನ್‍ಲೈನ್ ಶಿಕ್ಷಣದ ಕುರಿತು ಚಿಂತನೆ ನಡೆಸುವುದೇ ಬಹುದೊಡ್ಡ ಅಪರಾಧ. ಅವಕಾಶ ಇದ್ದವರು ಆನ್‍ಲೈನ್ ಶಿಕ್ಷಣ ಪಡೆಯಲಿ, ಸಾಧ್ಯತೆ ಇಲ್ಲದವರಿಗೆ ಶಿಕ್ಷಣ ಬೇಡ ಎಂಬುದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ತಲುಪಬೇಕು ಎಂಬ ಪ್ರಜಾಪ್ರಭುತ್ವದ ಆಶಯಕ್ಕೇ ಮಾರಕ” ಎನ್ನುತ್ತಾರೆ ತಮಿಳುನಾಡಿನ ಶಿಕ್ಷಣ ತಜ್ಞ ಮತ್ತು ಮಕ್ಕಳ ಶಿಕ್ಷಣ ಹಕ್ಕು ಹೋರಾಟಗಾರ ಗಜೇಂದ್ರ ಬಾಬು.

ಪರ್ಯಾಯ ಅಥವಾ ಪರಿಹಾರವೇನು?

ಅಸಮಾನತೆಯ ಹೊರತಾಗಿಯೂ ಆನ್‍ಲೈನ್ ಶಿಕ್ಷಣಕ್ಕೆ ಬೇಕಾದ ಯಾವ ಮೂಲಭೂತ ಸೌಲಭ್ಯವೂ ಭಾರತದಲ್ಲಿ ಇಲ್ಲ. ಹೀಗಾಗಿ ಆನ್‍ಲೈನ್ ಶಿಕ್ಷಣ ಬೇಡ ಎಂಬುದಾದರೆ ಪರ್ಯಾಯವೇನು? ಈ ವರ್ಷದ ಮಕ್ಕಳ ಕಲಿಕೆ ಹೇಗೆ? ಶಾಲೆ ಕಲಿಕೆ ಇಲ್ಲದಿದ್ದರೆ ಮಕ್ಕಳ ಮಾನಸಿಕ ಆರೋಗ್ಯದ ಮೇಲಾಗುವ ಪರಿಣಾಮವೇನು? ಎಂಬ ಪ್ರಶ್ನೆಗಳೂ ಏಳುತ್ತವೆ. ಅದಕ್ಕೂ ಪರ್ಯಾಯವನ್ನು ಮುಂದಿಡುತ್ತಾರೆ ಶಿಕ್ಷಣ ತಜ್ಞರು.

“ಭಾರತದಲ್ಲಿ ಮಕ್ಕಳಿಗೆ ಶಾಲಾ ಮಟ್ಟದಿಂದಲೇ ಆನ್‍ಲೈನ್ ಶಿಕ್ಷಣದ ಕಡೆಗೆ ವಾಲಿಸುವುದಕ್ಕಿಂತ ಮನೆಯಲ್ಲಿ ಅನೌಪಚಾರಿಕ ಶಿಕ್ಷಣ ನೀಡುವುದೇ ಲೇಸು” ಎಂದು ವ್ಯಾಖ್ಯಾನಿಸುತ್ತಾರೆ ಗಜೇಂದ್ರ ಬಾಬು.

ಗಜೇಂದ್ರ ಬಾಬು ಅವರ ಪ್ರಕಾರ, “ಭಾರತದಲ್ಲಿ PUಅ ವರೆಗಿನ ಶಿಕ್ಷಣವನ್ನು 10+2 ಎಂದು ಪರಿಗಣಿಸಲಾಗುತ್ತದೆ. ಆದರೆ, ಈ ವರ್ಷ ಶಿಕ್ಷಣಕ್ಕೆ ದೀರ್ಘ ರಜೆ ನೀಡಿ 11+2 ಎಂದು ಬದಲಿಸಿದರೆ ಇದರಿಂದ ಯಾವುದೇ ನಷ್ಟವಿಲ್ಲ. ಹೀಗಾಗಿ ಈ ವರ್ಷ ಮಕ್ಕಳನ್ನು ಶಾಲೆಗೆ ಕಳಿಸುವ ಅಗತ್ಯವೂ ಇಲ್ಲ, ಆನ್‍ಲೈನ್ ಶಿಕ್ಷಣವೂ ಬೇಕಾಗಿಲ್ಲ.

“ಅದರ ಬದಲಾಗಿ ಮಕ್ಕಳಿಗೆ ಅನೌಪಚಾರಿಕ ಶಿಕ್ಷಣ ನೀಡಬೇಕು. ಪ್ರತಿದಿನ ಸುದ್ದಿ ಪತ್ರಿಕೆಗಳನ್ನು ಓದುವ ಅವಕಾಶ ನೀಡಬೇಕು. ವಿಶ್ವದ ವಿದ್ಯಮಾನಗಳನ್ನು ತಿಳಿಸಬೇಕು. ಪ್ರಸ್ತುತ ಸಮಾಜದಲ್ಲಿ ಆವರಿಸಿರುವ ಕೊರೊನಾ ಎಂಬ ವಿಚಾರವೇ ಬಹುದೊಡ್ಡ ಪಾಠ. ಹೀಗಾಗಿ ಮಕ್ಕಳಿಗೆ ಕೊರೋನಾ ಸೇರಿದಂತೆ ಎಲ್ಲಾ ಸಾಮೂಹಿಕ ರೋಗಗಳ ಬಗ್ಗೆ ಮನೆಯಲ್ಲೇ ಹಿರಿಯರು ಪೋಷಕರು ಪಾಠ ಮಾಡಬಹುದು. ಈ ಮೂಲಕ ಪೋಷಕರು ಸಾಕಷ್ಟು ವಿಚಾರಗಳನ್ನು ಕಲಿಯಬಹುದು.

“ಇದಲ್ಲದೆ ಎಲ್ಲಾ ಗ್ರಾಮಗಳಲ್ಲಿ ಶಾಲಾ ಮಕ್ಕಳನ್ನು ಒಟ್ಟಾಗಿ ಸೇರಿಸಿ ಶಾಲಾ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಅವರಿಗೆ ಕೆಲವು ಅಗತ್ಯ ವಿಚಾರಗಳನ್ನು ಬೋಧಿಸಬಹುದು. ಪೌಷ್ಠಿಕ ಆಹಾರದ ಮಾಹಿತಿಯ ಜೊತೆಗೆ ವಿಜ್ಞಾನ, ಸಮಾಜ ವಿಜ್ಞಾನವನ್ನು ಪ್ರಾಯೋಗಿಕವಾಗಿ ಬೋಧಿಸಬಹುದು. ಆಟಗಳಲ್ಲೂ ತೊಡಗಿಸಬಹುದು. ಇದರಿಂದ ಮಕ್ಕಳು ಗಡಿಬಿಡಿ ಶಿಕ್ಷಣದಿಂದ ದೊರೆತ ಈ ಒಂದು ವರ್ಷದ ಅವಧಿಯನ್ನು ಬಳಸಿಕೊಂಡು ಮತ್ತಷ್ಟು ಕ್ರಿಯಾಶೀಲರಾಗುತ್ತಾರೆ” ಎನ್ನುತ್ತಾರೆ ಶಿಕ್ಷಣ ತಜ್ಞ ಗಜೇಂದ್ರ ಬಾಬು.

ಒಟ್ಟಾರೆ ಭಾರತದಂತಹ ರಾಷ್ಟ್ರದಲ್ಲಿ ಆನ್‍ಲೈನ್ ಶಿಕ್ಷಣ ಯಶಸ್ವಿಯಾಗುವುದು ಸಾಧ್ಯವಿಲ್ಲ ಎಂಬುದು ಸರ್ಕಾರಕ್ಕೂ ತಿಳಿಯದ ವಿಚಾರವೇನಲ್ಲ. ಆದರೆ, ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದಿರುವ ಸರ್ಕಾರ ಒತ್ತಾಯಪೂರ್ವಕವಾಗಿ ಆನ್‍ಲೈನ್ ಶಿಕ್ಷಣದ ಕಡೆಗೆ ವಿದ್ಯಾರ್ಥಿಗಳನ್ನು ದೂಡುತ್ತಿರುವುದು ಸ್ಪಷ್ಟವಾಗಿದೆ. ಈ ವರ್ಷದ ಶಿಕ್ಷಣ ಶುಲ್ಕ ವಸೂಲಿ ಮಾಡುವ ನಿಟ್ಟಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯವರು ನಡೆಸುತ್ತಿರುವ ಈ ನಾಟಕವೂ ತಿಳಿಯದ ವಿಚಾರವೇನಲ್ಲ.

ಭಾರತದಲ್ಲಿ ಶಿಕ್ಷಣ ವ್ಯವಸ್ಥೆ ಖಾಸಗೀಕರಣವಾಗಿರುವ ಪರಿಣಾಮವಾಗಿಯೇ ಸರ್ಕಾರಗಳು ಸತತವಾಗಿ ಶಿಕ್ಷಣ ಬಜೆಟ್ ಗಾತ್ರವನ್ನು ಕಡಿಮೆ ಮಾಡುತ್ತಿವೆ ಎಂದರೂ ತಪ್ಪಾಗಲಾರದು. ಈ ನಡುವೆ ಆನ್‍ಲೈನ್ ಶಿಕ್ಷಣ ಎಂಬ ಹೊಸ ಮಾದರಿ ಹುಟ್ಟಿಕೊಂಡಿರುವುದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಲಾಭವಾಗಬಹುದೇನೋ? ಆದರೆ, ಇದರಿಂದ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಯಾವುದೇ ಲಾಭ ಇಲ್ಲ ಎಂಬುದು ಮಾತ್ರ ಸ್ಪಷ್ಟ.


ಇದನ್ನು ಓದಿ: ರಾಮ ರಾಜ್ಯದ ಭರವಸೆ ನೀಡಿ ಗೂಂಡಾ ರಾಜ್ಯ ನೀಡಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...