Homeಕರ್ನಾಟಕಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

"ಪ್ರಗತಿಪರ ಹೋರಾಟಗಳಿಂದಲೇ ಸಂವಿಧಾನದ ಕನಸನ್ನು ಸಾಕಾರಗೊಳಿಸುವ, ಎಲ್ಲರಿಗೂ ಎಲ್ಲ ರೀತಿಯ ಸಮಾನತೆ ದೊರಕಿಸುವ ಕೆಲಸ ಆಗಬೇಕಿದೆ"

- Advertisement -
- Advertisement -

“ಸ್ವಾತಂತ್ರ್ಯ ನಂತರ ದೇಶ ಯಾವ ರೀತಿ, ಸಮಾಜ ಯಾವ ರೀತಿ ಇರಬೇಕು ಅನ್ನುವ ಕನಸನ್ನು ಸಂವಿಧಾನ ಕಟ್ಟಿಕೊಟ್ಟಿತು. ನಮ್ಮ ಕನಸಿನ ಗುರಿಗೆ ಒಂದು ರೀತಿಯ ರೋಡ್ ಮ್ಯಾಪ್ ನಮ್ಮ ಸಂವಿಧಾನ. ನಾವಿನ್ನೂ ಗುರಿಯನ್ನು ಮುಟ್ಟಿಲ್ಲ. ಸಮಾನತೆ ಎಲ್ಲರಿಗೂ ಸಿಕ್ಕಿಲ್ಲ” ಎಂದು ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ ವಿಷಾದಿಸಿದರು.

ಜನ ಪ್ರಕಾಶನ, ಪರ್ಯಾಯ ಕಾನೂನು ವೇದಿಕೆ ಹಾಗೂ ಮಾರ್ಗ ಸಂಸ್ಥೆಯ ಸಹಯೋಗದಲ್ಲಿ ಬೆಂಗಳೂರಿನ ರಾಜೇಂದ್ರನಗರದ ಡಾ.ಅಂಬೇಡ್ಕರ್‌ ಸಮುದಾಯಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ಸಂವಿಧಾನ ಪೀಠಿಕೆ ಒಂದು ಪುಟ್ಟ ಮುನ್ನುಡಿ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ಆ ಆದರ್ಶಮಯ ಸಮಾಜ ಸಿಗದೆ ಇರುವುದಕ್ಕೆ ನಾವೇ ಕಾರಣ. ಆ ರೋಡ್ ಮ್ಯಾಪ್, ಆ ಬ್ಲೂಪ್ರಿಂಟ್ ನಮ್ಮ ಬಳಿ ಇದೆ. ನಾವು ಇನ್ನು ಕೂಡ ಹೋರಾಟದಿಂದಲೇ ಮುನ್ನಡೆಯಬೇಕಿದೆ. ಪ್ರಗತಿಪರ ಹೋರಾಟಗಳಿಂದಲೇ ಸಂವಿಧಾನದ ಕನಸನ್ನು ಸಾಕಾರಗೊಳಿಸುವ, ಎಲ್ಲರಿಗೂ ಎಲ್ಲ ರೀತಿಯ ಸಮಾನತೆ ದೊರಕಿಸುವ ಕೆಲಸ ಆಗಬೇಕಿದೆ. ಹೋರಾಟಗಳಿಂದ, ಅರಿವಿನಿಂದ, ಸಂವಿಧಾನ ಓದುವುದರಿಂದ, ನಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಗುರಿ ಮುಟ್ಟಬಹುದಾಗಿದೆ” ಎಂದು ಅಭಿಪ್ರಾಯಪಟ್ಟರು.

“ನಮ್ಮದು ಬಹುದೊಡ್ಡ ಪ್ರಜಾಪ್ರಭುತ್ವ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಈ ಪ್ರಜಾಪ್ರಭುತ್ವದಲ್ಲಿ ಕೆಲವು ಕೊರತೆಗಳಿವೆ. ಆದರೆ ಅದರತ್ತಲೇ ನಾವು ನಡೆದುಕೊಂಡು ಹೋಗುವುದನ್ನು ಬಿಟ್ಟು ಪ್ರಜಾಪ್ರಭುತ್ವವನ್ನು ಗಟ್ಟಿಯಾಗಿಸಬೇಕಿರುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಆ ಜವಾಬ್ದಾರಿಯನ್ನು ಪೂರೈಸುವ ನಿಟ್ಟಿನಲ್ಲಿ ನಮ್ಮ ಸಂವಿಧಾನವನ್ನು ನಾವು ಓದಬೇಕು. ನಮ್ಮ ಹಕ್ಕುಗಳನ್ನು, ಕನಸುಗಳನ್ನು ಅರ್ಥಮಾಡಿಕೊಂಡರೆ ಗುರಿ ಸ್ಪಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ನಾನು ಕೂಡ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು.

ಸಮಾಜ, ಸಂಸ್ಕೃತಿಯ ದ್ವಿಮುಖ ನೀತಿ ತೆರದಿಟ್ಟ ಅಕ್ಕಯ್ ಪದ್ಮಶಾಲಿಯವರ ಭಾಷಣ

‘ಒಂದೆಡೆ ಸಂಸ್ಥೆ’ಯ ಸಂಸ್ಥಾಪಕಿಯಾಗಿರುವ ಅಕ್ಕಯ್ ಪದ್ಮಶಾಲಿಯವರು ಲಿಂಗತ್ವ ಅಲ್ಪಸಂಖ್ಯಾತರ ದಿಟ್ಟದನಿ. ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಸಮಾಜಕ್ಕಿರುವ ತಾತ್ಸಾರದ ವಿರುದ್ಧ ಅಕ್ಕಯ್‌ ಪದ್ಮಶಾಲಿಯವರು ಮಾತನಾಡಲು ನಿಂತರೆಂದರೆ ಇಡೀ ಸಮಾಜಕ್ಕೆ ಕನ್ನಡಿ ಹಿಡಿದಂತೆ ಭಾಸವಾಗುತ್ತದೆ. ಸಮಾರಂಭದಲ್ಲಿ ಪಾಲ್ಗೊಂಡು ಅವರಾಡಿದ ಮಾತುಗಳು ಸಮಾಜದ ದ್ವಿಮುಖ ನೀತಿಗಳನ್ನು ತೆರದಿಟ್ಟವು.

“ಪ್ರಕೃತಿ ಉದ್ಭವವಾದಾಗಿನಿಂದ ನಾವು (ಲಿಂಗತ್ವ ಅಲ್ಪಸಂಖ್ಯಾತರು) ಇದ್ದೇವೆ ಎನ್ನಲಾಗುತ್ತದೆ. ಹರಿ-ಹರನ ಪುತ್ರನಾಗಿ ಅಯ್ಯಪ್ಪ ಹುಟ್ಟಲು ಹೇಗೆ ಸಾಧ್ಯ? ಹರಿ ಒಬ್ಬ ಗಂಡು, ಹರ ಒಬ್ಬ ಗಂಡು- ಇಬ್ಬರು ಗಂಡಸರ ಮಧ್ಯೆ ಸೆಕ್ಸ್‌ ಮಾಡಿದರೆ ಮಕ್ಕಳಾಗಲು ಸಾಧ್ಯವಾಗುತ್ತದಾ? ಇಬ್ಬರಲ್ಲಿ ಒಬ್ಬರಿಗೆ ಯೋನಿ ಇರಬೇಕಾಗುತ್ತದೆ. ಶಿವನನ್ನು ಅರ್ಧನಾರೀಶ್ವರ ಎನ್ನುತ್ತಾರೆ. ಅಯ್ಯೋ, ನನಗೆ ಎಷ್ಟು ಗೌರವ ಸಿಗುತ್ತದೋ? ಸಾಂಸ್ಕೃತಿಕವಾಗಿ ನೀವು ನಮ್ಮನ್ನು ಒಪ್ಪಿಕೊಳ್ಳುತ್ತೀರಿ. ಸಾಮಾಜಿಕವಾಗಿ ಯಾಕೆ ನಮ್ಮನ್ನು ನೀವು ಒಪ್ಪಿಕೊಂಡಿಲ್ಲ” ಎಂದು ಅಕ್ಕಯ್ ಪದ್ಮಶಾಲಿ ಪ್ರಶ್ನಿಸಿದರು.

“ಈ ಸಮಾಜದಲ್ಲಿ ಜಾತಿ, ಧರ್ಮ, ಪ್ರಾಂತ್ಯ, ಬಟ್ಟೆ, ಊಟ ಎಲ್ಲ ವಿಚಾರಗಳಲ್ಲೂ ಸಮಸ್ಯೆಗಳನ್ನು ಕಾಣುತ್ತಿದ್ದೇವೆ. ನಾನು ಮದುವೆಯಾದರೂ ಕಷ್ಟ, ಇಲ್ಲದಿದ್ದರೂ ಕಷ್ಟ. ಬೆಳ್ಳಿಗೆ ಇದ್ದರೂ ಕಷ್ಟ, ಕಪ್ಪಗಿದ್ದರೂ ಕಷ್ಟ. ಮೊಲೆಗಳು ದಪ್ಪ ಇದ್ದರೂ ಕಷ್ಟ, ಸಣ್ಣ ಇದ್ದರೂ ಕಷ್ಟ. ಹಾಗಿದ್ದರೆ ನಾವು ಯಾವ ಸಮಾಜವನ್ನು ಸಮಾಧಾನ ಮಾಡಲು ಹೊರಟ್ಟಿದ್ದೇವೆ? ನೀವು ನಮ್ಮನ್ನು ಕೇಳಿದರೆ ನಾನು ಸಮಾಜಕ್ಕೆ ಸಮಾಧಾನ ಮಾಡಲು ಖಂಡಿತ ಇಲ್ಲ, ನನಗೆ ನಾನು ಸಮಾಧಾನ ಮಾಡಿಕೊಳ್ಳಲು ಇದ್ದೇನೆ ಎನ್ನುತ್ತೇನೆ. ನೈಸರ್ಗಿಕವಾಗಿ ಲಿಂಗತ್ವ ಬದಲಾವಣೆ ಆಗಿರಬೇಕಾದರೆ, ರಾಮ, ಅಲ್ಲಾ, ಜೀಸಸ್ ಬಂದು ಲಿಂಗತ್ವ ಬದಲಾವಣೆ ತಪ್ಪು ಎಂದು ಹೇಳಿಲ್ಲ. ಧರ್ಮಗ್ರಂಥಗಳನ್ನು ವಿಶ್ಲೇಷಿಸುವ ಕಳ್ಳರು ತಪ್ಪು ಎನ್ನುತ್ತಾರೆ. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಭಗವದ್ಗೀತೆಯೇ ದೇಶದ ಸಂವಿಧಾನ ಎಂದು ಮಾತನಾಡುವಾಗ ಹೆಣ್ಣು ಮಕ್ಕಳಿಗೆ ಅವಕಾಶ ಕೊಡುತ್ತಾರೆ?” ಎಂದು ಕೇಳಿದರು.


ಇದನ್ನೂ ಓದಿರಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ


“ನಮಗೆ ಸ್ಮಶಾನವೇ ಇಲ್ಲ. 2009ರಲ್ಲಿ ಸತ್ತ ನಾಯಿಗಳಿಗೆ ಮಣ್ಣು ಮಾಡಲು ಸ್ಮಶಾನವನ್ನು ಕೊಡುತ್ತೇವೆ ಎಂದು ಬಿಜೆಪಿ ಸರ್ಕಾರ ಹೇಳಿತು. ನಮಗೆ ಇರಲು ಮನೆಯೂ ಇಲ್ಲ. ಅಂದರೆ ನಾವು ಪ್ರಾಣಿಗಳಿಗಿಂತ ಕಡೆಯವರಾ ಎಂಬ ಪ್ರಶ್ನೆ ಮೂಡುತ್ತದೆ. 1860ನೇ ಇಸವಿಯಿಂದ ಇತ್ತೀಚಿನ ವರ್ಷಗಳವರೆಗೆ ನಾವು ಕಾನೂನಿನ ಕಣ್ಣಿನಲ್ಲಿ ಕ್ರಿಮಿನಲ್‌ ಆಗಿದ್ದವು. ಯೋನಿ ಮತ್ತು ಶಿಶ್ನದ ಆಧಾರದಲ್ಲಿ ಆಗುವ ಸೆಕ್ಸ್‌ನಿಂದ ಸಂತಾನೋತ್ಪತಿ ಆಗುತ್ತದೆ. ಹಾಗಿದ್ದರೆ ಮಾತ್ರ ಅದು ಸೆಕ್ಸ್‌ ಎಂದು ಮೆಕಾಲೆ ಕಾನೂನು ಹೇಳಿತ್ತು. ಮಕ್ಕಳು ಹುಟ್ಟಿಸಲು ಮಾತ್ರವೇ ಸೆಕ್ಸ್ ಮಾಡುತ್ತಾರಾ? ನಾನು ಕಾನೂನು ವ್ಯವಸ್ಥೆಗೆ ಧನ್ಯವಾದ ಹೇಳುತ್ತೇನೆ. ಸಂವಿಧಾನದ ಮುಂದೆ ಸಮಾನ ಪ್ರಜೆಗಳಾಗಿ ತೃತೀಯ ಲಿಂಗಿಗಳನ್ನು ಕಾಣಬೇಕು ಎಂದು ಸುಪ್ರೀಂ ಕೋರ್ಟ್ 2014ರಲ್ಲಿ ಹೇಳಿತು” ಎಂದು ಧನ್ಯತೆ ಅರ್ಪಿಸಿದರು.

“ಮೂಲಭೂತವಾದಿಗಳು ಗೊತ್ತಾ? ಈ ಬಾಬಾ ರಾಮ್‌ ದೇವ್‌. ಅದೇ ಪತಂಜಲಿ. ಅಯ್ಯೋ ದೇವರೆ, ಅವರ ಜೊತೆಗೆ ಕೆಲವು ಜನ ಸೇರಿಸಿಕೊಂಡು ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ದಾವೆಯನ್ನು ಹೂಡಿದರು. ಭಾರತಕ್ಕೆ ಅಂಟು ರೋಗಬಂದಿದೆ, ಮುಟ್ಟಿದ ತಕ್ಷಣ ಸಲಿಂಗ ಕಾಮಿಗಳಾಗುತ್ತಾರೆ, ಲೆಸ್ಬಿಯನ್ ಆಗುತ್ತಾರೆ ಎಂದು ಆರೋಪಿಸಿದರು. ನಾವು ಇದನ್ನು ಒಪ್ಪಲಿಲ್ಲ. ಹೋರಾಟ ಮಾಡಿದೆವು. ಶಾಲೆ, ಕಾಲೇಜಿಗಳಿಗೆ ಬಂದೆವು, ಎಲ್ಲ ಚಳವಳಿಗಳ ಜೊತೆ ಕೂತೆವು. ಆಮೇಲೆ ಕಾನೂನು ಹೋರಾಟ ಮಾಡಿದೆವು. ನಮ್ಮನ್ನು ಅಪರಾಧಿಗಳನ್ನಾಗಿ ಮಾಡುವ ಪ್ರಕ್ರಿಯೆ ನಡೆಯುತ್ತಲೇ ಬಂದಿತ್ತು. ಅಂತಿಮವಾಗಿ ನಾವು ಅಪರಾಧಿಗಳಲ್ಲ ಎಂದು ತೀರ್ಪು ಹೊರಬಂತು” ಎಂದು ತಮ್ಮ ಹೋರಾಟದ ಕ್ಷಣಗಳನ್ನು ಮೆಲುಕು ಹಾಕಿದರು ಅಕ್ಕಯ್‌ ಪದ್ಮಶಾಲಿ.

‘ಸಂವಿಧಾನ ಪೀಠಿಕೆ’ ಒಂದು ಪುಟ್ಟ ಮುನ್ನುಡಿ ಕೃತಿಯನ್ನು ಜಸ್ಟೀಸ್ ಎಚ್.ಎನ್.ನಾಗಮೋಹನ ದಾಸ್‌ ಬಿಡುಗಡೆ ಮಾಡಿದರು.

ಸಂವಿಧಾನದಿಂದಾಗಿ ಸಾಧನೆಗಳಾಗಿವೆ: ಜಸ್ಟೀಸ್ ದಾಸ್‌

ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌, “ಸಂವಿಧಾನ ಜಾರಿಯಾಗಿ 73 ವರ್ಷಗಳ ಈ ಅವಧಿಯಲ್ಲಿ ಏನೂ ಸಾಧನೆಯಾಗಿಲ್ಲ ಎಂದು ಹೇಳಲಾಗದು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 1947ರಲ್ಲಿ 600 ಜನ ರಾಜ ಮಹಾರಾಜರು ಇದ್ದರು. ಎಲ್ಲರನ್ನು ಒಂದುಗೂಡಿಸಿ, ಭಾರತ ರಚನೆಯಾಗಿದ್ದು, ಸಂವಿಧಾನದಿಂದ. ಪಾಳೇಗಾರಿಕೆ ತೊಲಗಿಸಿ, ಪ್ರಜಾಪ್ರಭುತ್ವವನ್ನು ಕಟ್ಟಿದ್ದೇವೆ. ಈ ಪ್ರಜಾಪ್ರಭುತ್ವದಲ್ಲಿ ಎಲ್ಲ ಜನರೂ ಪಾಲ್ಗೊಳ್ಳುತ್ತಿರುವುದಕ್ಕೆ ಕಾರಣ ಸಂವಿಧಾನ” ಎಂದರು.

“ಆಹಾರದಲ್ಲಿ ಸ್ವಾವಲಂಬನೆ ಸಾಧಿಸಿದ್ದೇವೆ. ಶೇ. 80ರಷ್ಟು ಸಾಕ್ಷರತೆ ಸಾಧಿಸಿದ್ದೇವೆ. ಬಡತನ ರೇಖೆಯನ್ನು ಶೇ. 21ಕ್ಕೆ ಇಳಿಸಿದ್ದೇವೆ. ಒಂದಿಷ್ಟು ಮೂಲಸೌಕರ್ಯವನ್ನು ಪಡೆದುಕೊಂಡಿದ್ದೇವೆ. ಸಂವಿಧಾನದಿಂದಾಗಿ ಮಹಿಳೆಯೊಬ್ಬರು ಪ್ರಧಾನಿಯಾದರು. ದಲಿತರೊಬ್ಬರು ರಾಷ್ಟ್ರಪತಿಯಾದರು. ಐಎಎಸ್‌, ಐಪಿಎಸ್, ಐಆರ್‌ಎಸ್‌ಗಳಾಗಿ ಮಹಿಳೆಯರು, ದಲಿತರು ಅಧಿಕಾರ ಹಿಡಿದರು. ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು, ದಲಿತರು ಪ್ರವೇಶಿಸಿದ್ದಾರೆ. ಇದಕ್ಕೆ ಕಾರಣ ಭಾರತದ ಸಂವಿಧಾನ” ಎಂದು ಬಣ್ಣಿಸಿದರು.

ದಸಂಸ ರಾಜ್ಯ ಮುಖಂಡರಾದ ಎನ್‌.ವೆಂಕಟೇಶ್, ಸೇಂಟ್ ಜೋಸೆಫ್ ಕಾಲೇಜಿನ ನಿರ್ದೇಶಕರಾದ ಫಾದರ್ ಜೆರಾಲ್ಡ್ ಡಿ’ಸೌಜ ಎಸ್.ಜೆ., ಪ್ರಕಾಶಕರಾದ ರಾಜಶೇಖರ್‌‌, ಮುಖಂಡರಾದ ಪ್ರಭಾಕರ್‌ ಹಾಜರಿದ್ದರು. ಕಾನೂನು ವಿದ್ಯಾರ್ಥಿ ಪೂರ್ಣಾ ಕಾರ್ಯಕ್ರಮವನ್ನು ನಿರೂಪಿಸಿದರು.


ಇದನ್ನೂ ಓದಿರಿ: ಸಮಾಜವನ್ನು ಬದಲಾಯಿಸುವ ಮುನ್ನ ಯುವಜನರು ತಮ್ಮನ್ನು ಬದಲಾಯಿಸಿಕೊಳ್ಳಬೇಕು- ಕಾಮ್ರೇಡ್ ಪ್ರತಿಭಾ ನಾಯಕ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...