Homeಮುಖಪುಟಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ಸಿಖ್ ಧರ್ಮದ ಮೂರನೇ ಗುರುಗಳಾದ ಗುರು ಅಮರ್ ದಾಸ್, ಜನರ ಹಸಿವನ್ನು ನೀಗಿಸುವ ಲಂಗರ್‌ಗಳಿಗೆ ಒಂದು ಸಂಘಟಿತ ರೂಪ ನೀಡಿದರು.

- Advertisement -
- Advertisement -

ಲಂಗರ್… ರೈತ ಹೋರಾಟ ಶುರುವಾದಾಗಿನಿಂದ ಎಲ್ಲರ ಬಾಯಲ್ಲಿ ಬರುತ್ತಿರುವ ಮತ್ತು ಹೆಚ್ಚು ಪ್ರಚುರಗೊಳ್ಳುತ್ತಿರುವ ಪದ. ಲಂಗರ್ ಎಂದರೆ ಅಡುಗೆಮನೆ ಎಂಬ ಅರ್ಥ ಇದೆ. ಇದು ಸಿಖ್ ಸಮುದಾಯದ ಜನರು ಒಂದಾಗಿ, ಒಕ್ಕೂಟದ ರೀತಿಯಲ್ಲಿ ಅಡುಗೆ ಮಾಡಿ, ಗುರುದ್ವಾರಗಳಲ್ಲಿ ನೀಡುವ ಉಚಿತ ಊಟದ ಸೇವೆಯಾಗಿದೆ.

ಲಂಗರ್‌ಗಳಲ್ಲಿ ಯಾವುದೇ ಜಾತಿ, ಧರ್ಮ, ಲಿಂಗ, ಸಾಮಾಜಿಕ ಸ್ಥಾನಮಾನ, ಆರ್ಥಿಕ ಸ್ಥಿತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಇಲ್ಲಿ ಎಲ್ಲರು ಸಮಾನರು. ಎಲ್ಲರು ಜೊತೆಯಲ್ಲಿ ಕುಳಿತು ಊಟ ಮಾಡಬೇಕು. ಯಾರೊಬ್ಬರು ಹಸಿವಿನಿಂದ ಬಳಲಬಾರದು ಎಂಬುದು ಲಂಗರ್‌ಗಳ ಆಶಯ. ಲಂಗರ್‌ಗಳು ಸಸ್ಯಹಾರವನ್ನು ಒದಗಿಸುತ್ತವೆ. ಸಿಖ್ ಸಮುದಾಯದ ಸ್ವಯಂ ಸೇವಕರು ಲಂಗರ್‌ಗಳಲ್ಲಿ ಸೇವೆ ಸಲ್ಲಿಸುತ್ತಾರೆ.

ಲಂಗರ್‌ಗಳ ಇತಿಹಾಸ

ಲಂಗರ್‌ಗಳಿಗೆ 1500 ವರ್ಷಗಳ ಇತಿಹಾಸವಿದೆ. ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ಅವರ ಕಾಲದಿಂದಲು ಲಂಗರ್‌ಗಳು ಸೇವೆ ನೀಡುತ್ತಿವೆ. ಪಂಜಾಬ್‌ನಲ್ಲಿ ಈ ಲಂಗರ್‌ಗಳ ಆರಂಭವಾಯಿತು ಎಂದು ಪ್ರತಿಭಟನಾ ನಿರತ ಪಂಜಾಬ್‌ನ ರೈತರು ತಿಳಿಸುತ್ತಾರೆ.

ಸಿಖ್ ಧರ್ಮದ ಎರಡನೇ ಗುರುಗಳಾದ ಗುರು ಅಂಗದ್ ಅವರು ಗುರುದ್ವಾರಗಳಲ್ಲಿ ಈ ಲಂಗರ್‌ಗಳಿಗೆ ನಿಯಮಬದ್ಧವಾಗಿ ಚಾಲನೆ ನೀಡಿದವರು. ಸಿಖ್ ಧರ್ಮದ ಮೂರನೇ ಗುರುಗಳಾದ ಗುರು ಅಮರ್ ದಾಸ್, ಜನರ ಹಸಿವನ್ನು ನೀಗಿಸುವ ಲಂಗರ್‌ಗಳಿಗೆ ಒಂದು ಸಂಘಟಿತ ರೂಪ ನೀಡಿದರು. ಗುರುದ್ವಾರಗಳಿಂದ ಹೊರಭಾಗದಲ್ಲೂ ಹಸಿವಿನಿಂದ ಬಳಲುವವರಿಗೆ ಊಟ ಸಿಗಬೇಕು ಎಂದು ಪ್ರತಿಪಾದಿಸಿದರು. ತಮ್ಮನ್ನು ಭೇಟಿಯಾಗಲು ಬರುವವರು ಮೊದಲು ಊಟ ಮಾಡಿ ನಂತರ ಭೇಟಿಯಾಗಬೇಕು ಎಂಬ ಹವ್ಯಾಸವನ್ನು ಬೆಳೆಸಿದರು. ಇದು ಈಗಲೂ ಸಿಖ್ ಸಮುದಾಯದಲ್ಲಿ ಜಾರಿಯಿದೆ.

ಗಡಿಗಳಲ್ಲಿ ಲಂಗ್‌ರ್‌ಗಳು ತಲೆಎತ್ತಿದ ಬಗೆ

ಕಳೆದ 5 ತಿಂಗಳಿನಿಂದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ನಡೆಯುತ್ತಿರುವ ರೈತ ಹೋರಾಟದಲ್ಲಿ ಈ ಲಂಗರ್‌ಗಳ ಪಾತ್ರ ಪ್ರಮುಖವಾಗಿದೆ. ವಿಶ್ವದಾದ್ಯಂತ ಹಬ್ಬಿಕೊಂಡಿರುವ ಲಂಗರ್‌ಗಳು ಈ ಹೋರಾಟದಲ್ಲಿ ಚಾರಿತ್ರಿಕ ಕೊಡುಗೆ ನೀಡುತ್ತಿವೆ. ಪ್ರತಿಭಟನೆಗೆ ಬರುವವರಿಗೆ ಮೊದಲು ಲಂಗರ್‌ಗಳ ದಾರಿ ತಿಳಿಸಲಾಗುತ್ತದೆ. ಮೊದ ಮೊದಲು ಸಾಮಾನ್ಯ ಊಟಕ್ಕೆ ಮಾತ್ರ ಸೀಮಿತವಾಗಿದ್ದ ಲಂಗರ್‌ಗಳು ಈಗ ಜನರ ಜೀವನ ಶೈಲಿ ಜೊತೆಗೆ ಸಾಕಾಷ್ಟು ಬದಲಾವಣೆ ಹೊಂದಿವೆ.

ನವೆಂಬರ್ 26 ರಂದು ಪಂಜಾಬ್ ರೈತರು ಆಂಭಿಸಿದ ದೆಹಲಿ ಚಲೋ ಜೊತೆಗೆ ಲಂಗರ್‌ಗಳು ರೈತರ ಬೆನ್ನು ಹತ್ತಿದ್ದವು. ರೈತರು ತಮ್ಮ ಪ್ರತಿಭಟನಾ ಸ್ಥಳಗಳನ್ನು ಗುರುತಿಸಿ ಟ್ರ್ಯಾಲಿಗಳನ್ನು ನಿಲ್ಲಿಸಿದ ಕೂಡಲೇ ಲಂಗರ್‌ಗಳು ಕೂಡ ಕಾರ್ಯನಿರ್ವಹಿಸಲು ಆರಂಭಿಸಿದ್ದವು. ದೆಹಲಿಯ ಗಡಿಭಾಗಗಳಾದ ಸಿಂಘು ಬಾರ್ಡರ್, ಟಿಕ್ರಿ ಬಾರ್ಡರ್, ಶಹಾಜಾನ್ಪುರ, ಗಾಝಿಪುರ್, ಚಿಲ್ಲಾ, ಪಲ್ವಲ್ ಬಾರ್ಡರ್, ಇಂದ್ರಪ್ರಸ್ಥ ಬಾರ್ಡರ್‌ಗಳು ಸೇರಿದಂತೆ ಲಕ್ಷಾಂತರ ಜನ ಪ್ರತಿಭಟನಾಕಾರರು ಇರುವಲ್ಲಿಯೇ ಸಾವಿರಾರು ಲಂಗರ್‌ಗಳು ತಲೆ ಎತ್ತಿದವು.

ಸಿಖ್ ಧರ್ಮ ರೂಪುಗೊಂಡಿರುವುದೆ ಒಂದು ಸಂಘಟನೆಯ ಮಾದರಿಯಲ್ಲಿ. ಇಲ್ಲಿ ಎಲ್ಲರೂ ನಿಯಮಗಳಿಗೆ ಬದ್ಧರಾಗಿರಬೇಕು. ತಾವು ಸಂಪಾದಿಸಿದ ಸಂಪತ್ತಿನಲ್ಲಿ ಶೇಕಡಾ 10 ರಷ್ಟನ್ನು ಲಂಗರ್‌ಗಳಿಗೆ ಪ್ರತಿಯೊಬ್ಬರು ದೇಣಿಗೆ ನೀಡಲೇಬೇಕು. ಇದರಿಂದಲೇ ಲಂಗರ್‌ಗಳಿಗೆ ಬೇಕಾದ ದೇಣಿಗೆ ಸಂಗ್ರಹವಾಗುತ್ತದೆ.

ದಿನವೀಡಿ ಸೇವೆ

ಪ್ರತಿಭಟನಾ ಸ್ಥಳಗಳಲ್ಲಿ ತಲೆ ಎತ್ತಿರುವ ಲಂಗರ್‌ಗಳು 24 ಗಂಟೆಗಳು ಪ್ರತಿಭಟನಾ ನಿರತರ ಹಸಿವನ್ನು ಇಂಗಿಸುತ್ತಿವೆ. ಬೆಳಗ್ಗೆ 4 ಗಂಟೆಯಿಂದ ಕಾರ್ಯ ನಿರ್ವಹಿಸಲು ಆರಂಭಿಸುವ ಇವುಗಳ ಕೆಲಸ ರಾತ್ರಿ 10 ಗಂಟೆಯವರೆಗೂ ಸಾಗುತ್ತಲೇ ಇರುತ್ತದೆ. ನಂತರವೂ ಯಾರಾದರೂ ಊಟಕ್ಕೆ ಬಂದರೇ ಇಲ್ಲ ಎನ್ನುವುದಿಲ್ಲ. ರೈತ ಹೋರಾಟದಲ್ಲಿರುವ ಲಂಗರ್‌ಗಳು ಬೆಳಗ್ಗೆ ಚಹಾ ನೀಡುವ ಮೂಲಕ ಆರಂಭವಾಗುತ್ತವೆ. ರಾತ್ರಿ ಹಾಲು ನೀಡುವ ಮೂಲಕ ಕೊನೆಗೊಳ್ಳುತ್ತವೆ.

ಸಾಮಾನ್ಯ ಊಟ ಉಪಚಾರಕ್ಕೆ ಮೀಸಲಾಗಿದ್ದ ಇವುಗಳಲ್ಲಿ ಈಗ ಹಲವಾರು ಬದಲಾವಣೆಗಳು ಕಂಡು ಬಂದಿವೆ. ಹಲವು ವಿಭಿನ್ನ ಲಂಗರ್‌ಗಳು ಪ್ರತಿಭಟನಾ ಸ್ಥಳಗಳಲ್ಲಿ ತಲೆ ಎತ್ತಿವೆ. ಚಹಾದ ಲಂಗರ್, ಕೀರ್ ಕಿ ಲಂಗರ್, ಬೆಳಗಿನ ತಿಂಡಿ ಲಂಗರ್, ಊಟದ ಲಂಗರ್, ಸಂಜೆ ಸ್ಯಾಕ್ಸ್ ಲಂಗರ್, ಬರ್ಗರ್ ಲಂಗರ್, ಪಿಜ್ಜಾ ಲಂಗರ್, ಪಿಂಡಿ (ಸಿಹಿ ಉಂಡೆಗಳು) ಕಾ ಲಂಗರ್, ಹಲ್ವಾ ಮತ್ತು ಜಿಲೇಬಿ ಲಂಗರ್‌ಗಳೆಂಬ ಹಲವು ರೀತಿಯಲ್ಲಿ ಬದಲಾಗಿವೆ.

ದೇಶ-ವಿದೇಶಗಳ ಹಲವು ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲಂಗರ್‌ಗಳ ಒಂದು ಭಾಗಗಳು ಈ ಪ್ರತಿಭಟನಾ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ದೇಶ ವಿದೇಶಗಳ ಸಾವಿರಾರು ಸ್ವಯಂ ಸೇವಕರು ಲಂಗರ್‌ಗಳಲ್ಲಿ ಅಡುಗೆ ಮಾಡುವುದು, ಸ್ವಚ್ಛತೆ, ಬಡಿಸುವುದು ಸೇರಿದಂತೆ ಎಲ್ಲಾ ಕೆಲಸಗಳನ್ನು ನೋಡಿಕೊಳ್ಳುತ್ತಾರೆ.

ಗುರುದ್ವಾರಗಳ ಲಂಗರ್‌ಗಳ ಜೊತೆಗೆ ಪ್ಯಾಮಿಲಿ ಲಂಗರ್‌ಗಳು ಇಲ್ಲಿವೆ. ಹಳ್ಳಿಯ ಎರಡು ಮೂರು ಮನೆಗಳ ಸದಸ್ಯರು ಸೇರಿಯು ಲಂಗರ್‌ಗಳನ್ನು ನಡೆಸುತ್ತಿದ್ದಾರೆ. ಕುಟುಂಬದ ಲಂಗರ್‌ಗಳಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆಗೆ ಹೊರ ಭಾಗಗಳಿಂದ ಬಂದವರಿಗೂ ಆಹಾರ ಒದಗಿಸಲಾಗುತ್ತದೆ. ಇವುಗಳಲ್ಲಿ ಮನೆಯ ಸದಸ್ಯರೇ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಾರೆ.

ರೈತ ಹೋರಾಟದಲ್ಲಿರುವ ಲಂಗರ್‌ಗಳಲ್ಲಿ ಊಟ ಉಪಚಾರದ ಜೊತೆಗೆ ದಿನ ಬಳಕೆಯ ಅಗತ್ಯ ವಸ್ತುಗಳಾದ ಬ್ರಶ್, ಪೇಸ್ಟ್, ಸೋಪ್, ಶೂ, ಚಪ್ಪಲಿ, ಬಟ್ಟೆ, ಚಳಿಗಾಲದ ಕ್ರೀಮ್‌ಗಳು, ಸ್ಯಾನಿಟರಿ ನ್ಯಾಪ್ಕಿನ್ಸ್, ಒಳಉಡುಪುಗಳನ್ನು ಸಹ ನೀಡಲಾಗುತ್ತಿದೆ.

ಲಂಗ್‌ರ್‌ಗಳ ಮಹತ್ವ

70 ದಿನಗಳ ರೈತ ಹೋರಾಟದಲ್ಲಿ ಈ ಲಂಗರ್‌ಗಳ ಪಾತ್ರ ಬಹಳ ಪ್ರಾಮುಖ್ಯತೆ ಪಡೆದಿದೆ. ಹೋರಾಟಗಳು ಹಲವು ಬಾರಿ ಹಣಕಾಸು ಕೊರತೆ, ಊಟದ ವ್ಯವಸ್ಥೆ ಇಲ್ಲದ ಕಾರಣಕ್ಕೆ ಕೊನೆಗೊಂಡ ಉದಾಹರಣೆಗಳಿವೆ. ಲಕ್ಷಾಂತರ ಜನರು ಒಂದೆಡೆ ಇರುವಾಗ ಊಟ-ಉಪಚಾರಗಳು ಸರಿಯಾಗಿ ಇಲ್ಲದಿದ್ದರೇ, ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದರಿಂದ ಹೋರಾಟ ಕೂಡ ಕೊನೆಗೊಳ್ಳಬಹುದು. ಇಂತಹ ಸ್ಥಿತಿಗಳನ್ನು ಈ ಲಂಗರ್‌ಗಳು ಪಾರು ಮಾಡಿವೆ.

ಲಂಗರ್‌ಗಳಲ್ಲಿ ಮೈಕ್‌ಗಳ ಮೂಲಕ ಇಡೀ ದಿನ ಪ್ರತಿಭಟನಾಕಾರರನ್ನು ಊಟಕ್ಕೆ ಕರೆಯಲಾಗುತ್ತಿರುತ್ತದೆ. ಹೋರಾಟಕ್ಕೆ ಶಕ್ತಿ ತುಂಬುವ ವಾಕ್ಯಗಳನ್ನು ಘೋಷಿಸುತ್ತಿರುತ್ತವೆ. ಲಂಗರ್‌ಗಳು ಇಡೀ ದಿನ ಆಹಾರ, ಚಹಾ ನೀಡುವ ಮೂಲಕ ತೀವ್ರ ಚಳಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ಬೆಚ್ಚಗಿನ ಭಾವ ಒದಗಿಸುತ್ತಿವೆ. ಉತ್ತಮ ಆಹಾರ ದೇಹಕ್ಕೆ ಶಕ್ತಿ ನೀಡುವ ಜೊತೆಗೆ ಮನಸ್ಸಿಗೂ ಹೋರಾಟದ ಹುಮ್ಮಸ್ಸು ನೀಡುತ್ತಿದೆ.

  • ಮಮತ ಎಂ

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...